AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಕಟಕಟ’ ಚಿತ್ರತಂಡಕ್ಕೆ ಸೇರ್ಪಡೆಯಾದ ರಂಗಭೂಮಿ ಹಿನ್ನೆಲೆಯ ಕಲಾವಿದೆ ಶ್ವೇತಾ ಶ್ರೀನಿವಾಸ್​

ಶ್ವೇತಾ ಶ್ರೀನಿವಾಸ್ ಅವರು ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರೀಗ ‘ಅಕಟಕಟ’ ಚಿತ್ರದಲ್ಲೊಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

TV9 Web
| Edited By: |

Updated on: May 21, 2022 | 4:59 PM

Share
ನಿರ್ದೇಶಕ ನಾಗರಾಜ್ ಸೋಮಯಾಜಿ ಕಥೆ ಬರೆದು ನಿರ್ದೇಶನ ಮಾಡುತ್ತಿರುವ ‘ಅಕಟಕಟ’ ಸಿನಿಮಾ ತನ್ನ ಪಾತ್ರವರ್ಗದ ಕಾರಣಕ್ಕೆ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ನಟಿ ಶ್ವೇತಾ ಶ್ರೀನಿವಾಸ್​ ನಟಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಚಿತ್ರತಂಡ ಈಗ ಹಂಚಿಕೊಂಡಿದೆ.

Shwetha Shrinivas joins Akatakata Kannada movie team

1 / 5
ನಟಿ ಚೈತ್ರಾ ಆಚಾರ್ ಅವರು ಈ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳ ಹಿಂದಷ್ಟೇ ಕೇಳಿಬಂದಿತ್ತು. ಈಗ ಮತ್ತೊರ್ವ ಪ್ರತಿಭಾನ್ವಿತ ನಟಿ ಶ್ವೇತಾ ಶ್ರೀನಿವಾಸ್ ಕೂಡ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಂಗಭೂಮಿ ಕಲಾವಿದೆಯೂ ಆಗಿರುವ ಅವರ ಆಗಮನದಿಂದ ಚಿತ್ರತಂಡದ ಬಲ ಹೆಚ್ಚಿದೆ.

Shwetha Shrinivas joins Akatakata Kannada movie team

2 / 5
ಶ್ವೇತಾ ಶ್ರೀನಿವಾಸ್ ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಹಲವು ಪ್ರಶಸ್ತಿಗಳನ್ನು ಪಡೆದಿರುವ ಅವರು ‘ಪಂಚರಂಗಿ’, ‘ಟೋನಿ’, ‘ದ್ಯಾವ್ರೇ’, ‘ಬೆಂಕಿಪಟ್ಟಣ’, ‘ಕೃಷ್ಣಲೀಲಾ’, ‘ಸಂತೆ’, ‘ದೊಡ್ಮನೆ ಹುಡ್ಗ’, ‘ವೆನಿಲಾ’, ‘ನಾತಿಚರಾಮಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಶ್ವೇತಾ ಶ್ರೀನಿವಾಸ್ ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಹಲವು ಪ್ರಶಸ್ತಿಗಳನ್ನು ಪಡೆದಿರುವ ಅವರು ‘ಪಂಚರಂಗಿ’, ‘ಟೋನಿ’, ‘ದ್ಯಾವ್ರೇ’, ‘ಬೆಂಕಿಪಟ್ಟಣ’, ‘ಕೃಷ್ಣಲೀಲಾ’, ‘ಸಂತೆ’, ‘ದೊಡ್ಮನೆ ಹುಡ್ಗ’, ‘ವೆನಿಲಾ’, ‘ನಾತಿಚರಾಮಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

3 / 5
ಶ್ವೇತಾ ಅವರು ‘ಅಕಟಕಟ’ ಸಿನಿಮಾದಲ್ಲಿ ವನಜಾ ಎಂಬ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ತಮ್ಮ ಪಾತ್ರದ ಬಗ್ಗೆ ಅವರು ಹೆಚ್ಚು ಮಾಹಿತಿ ಬಿಟ್ಟುಕೊಟ್ಟಿಲ್ಲ. ‘ಪ್ರತಿ ಸಿನಿಮಾದಲ್ಲಿಯೂ ನಾನು ವಿಶೇಷವಾದ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತೇನೆ. ‘ಅಕಟಕಟ’ ಚಿತ್ರದಲ್ಲಿಯೂ ಚಾಲೆಂಜಿಂಗ್ ಪಾತ್ರ ಇದೆ’ ಎಂದಿದ್ದಾರೆ ಶ್ವೇತಾ.

ಶ್ವೇತಾ ಅವರು ‘ಅಕಟಕಟ’ ಸಿನಿಮಾದಲ್ಲಿ ವನಜಾ ಎಂಬ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ತಮ್ಮ ಪಾತ್ರದ ಬಗ್ಗೆ ಅವರು ಹೆಚ್ಚು ಮಾಹಿತಿ ಬಿಟ್ಟುಕೊಟ್ಟಿಲ್ಲ. ‘ಪ್ರತಿ ಸಿನಿಮಾದಲ್ಲಿಯೂ ನಾನು ವಿಶೇಷವಾದ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತೇನೆ. ‘ಅಕಟಕಟ’ ಚಿತ್ರದಲ್ಲಿಯೂ ಚಾಲೆಂಜಿಂಗ್ ಪಾತ್ರ ಇದೆ’ ಎಂದಿದ್ದಾರೆ ಶ್ವೇತಾ.

4 / 5
‘ಇದೊಂದು ಅಪರೂಪದ ಪಾತ್ರವಾಗಿದ್ದು, ನನ್ನನು ನಾನು ಕಂಡುಕೊಳ್ಳಲು ಈ ಪಾತ್ರ ಸಹಕಾರಿಯಾಗಿದೆ. ಪ್ರತಿಯೊಬ್ಬರಿಗೂ ಇದು ಕನೆಕ್ಟ್ ಆಗುತ್ತದೆ’ ಎಂದು ಶ್ವೇತಾ ಶ್ರೀನಿವಾಸ್​ ಹೇಳಿದ್ದಾರೆ. ಸಂಚಾರಿ ವಿಜಯ್‌ ನಟನೆಯ ‘ಪುಕ್ಸಟ್ಟೆ ಲೈಫು’ ಚಿತ್ರವನ್ನು ನಿರ್ಮಾಣ ಮಾಡಿದ್ದ ನಾಗರಾಜ್‌ ಸೋಮಯಾಜಿ ಅವರು ಈಗ ‘ಅಕಟಕಟ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

‘ಇದೊಂದು ಅಪರೂಪದ ಪಾತ್ರವಾಗಿದ್ದು, ನನ್ನನು ನಾನು ಕಂಡುಕೊಳ್ಳಲು ಈ ಪಾತ್ರ ಸಹಕಾರಿಯಾಗಿದೆ. ಪ್ರತಿಯೊಬ್ಬರಿಗೂ ಇದು ಕನೆಕ್ಟ್ ಆಗುತ್ತದೆ’ ಎಂದು ಶ್ವೇತಾ ಶ್ರೀನಿವಾಸ್​ ಹೇಳಿದ್ದಾರೆ. ಸಂಚಾರಿ ವಿಜಯ್‌ ನಟನೆಯ ‘ಪುಕ್ಸಟ್ಟೆ ಲೈಫು’ ಚಿತ್ರವನ್ನು ನಿರ್ಮಾಣ ಮಾಡಿದ್ದ ನಾಗರಾಜ್‌ ಸೋಮಯಾಜಿ ಅವರು ಈಗ ‘ಅಕಟಕಟ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?