AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ವಾಹನ ಬಿಟ್ಟು ಹೊಸ ಐಷಾರಾಮಿ ಕಾರು ಹತ್ತಿಬಂದ ಸಿಎಂ: ಈ ಕಾರಿನ ವಿಶೇಷತೆ, ಬೆಲೆ ಎಷ್ಟು ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಫಾರ್ಚೂನರ್​ ಕಾರಿನಲ್ಲಿ ಸಂಚರಿಸುತ್ತಾರೆ. ಆದ್ರೆ, ಸಿಎಂ ತಮ್ಮ ಕಾರನ್ನು ಬದಲಿಸಿದ್ದಾರೆ. ಸರ್ಕಾದ ಫಾರ್ಚುನರ್ ಕಾರು ಬಿಟ್ಟು ಬೇರೆ ಕಾರು ಏರಿದ್ದಾರೆ. ಮಂಡಿ ನೋವು ಇರುವುದರಿಂದ ಫಾರ್ಚೂನರ್ ಕಾರನ್ನ ಏರಲು ಹಾಗೂ ಇಳಿಯಲು ಸ್ವಲ್ಪ ತ್ರಾಸ್ ಆಗುತ್ತಿದೆ. ಹೀಗಾಗಿ ಅವರು ಸುಲಭವಾಗಿ ಕಾರು ಹತ್ತಿ ಇಳಿಯಲು ಖಾಸಗಿ ಕಾರು ಉಪಯೋಗಿತ್ತಿದ್ದು, ಇಂದು ವಿಧಾನಸೌಧಕ್ಕೆ ಹೊಸ ಕಾರಿನಲ್ಲೇ ಆಗಮಿಸಿದ್ದಾರೆ. ಹಾಗಾದ್ರೆ, ಅ ಕಾರು ಯಾವುದು? ಅದರ ಬೆಲೆ ಎಷ್ಟು ಎನ್ನುವ ವಿವರ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on:Feb 18, 2025 | 7:43 PM

Share
 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಬೆಂಗಳೂರು ಬಿಟ್ಟು ಎಲ್ಲಿ ಹೋಗದೇ ವಿಶ್ರಾಂತಿಯಲ್ಲಿದ್ದಾರೆ. ಆದರೂ ಅನಿವಾರ್ಯವಾಗಿ ಕೆಲ ಪ್ರಮುಖ ಕಾರ್ಯಕ್ರಮಗಳಲ್ಲಿ ಮಾತ್ರ ಭಾಗವಹಿಸುತ್ತಿದ್ದಾರೆ. ಅದು ವ್ಹೀಲ್​ ಚೇರ್​  ಮೂಲಕ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಬೆಂಗಳೂರು ಬಿಟ್ಟು ಎಲ್ಲಿ ಹೋಗದೇ ವಿಶ್ರಾಂತಿಯಲ್ಲಿದ್ದಾರೆ. ಆದರೂ ಅನಿವಾರ್ಯವಾಗಿ ಕೆಲ ಪ್ರಮುಖ ಕಾರ್ಯಕ್ರಮಗಳಲ್ಲಿ ಮಾತ್ರ ಭಾಗವಹಿಸುತ್ತಿದ್ದಾರೆ. ಅದು ವ್ಹೀಲ್​ ಚೇರ್​ ಮೂಲಕ.

1 / 9
 ಮಂಡಿ ನೋವಿನಿಂದ ಬಳಲುತ್ತಿರುವ ಸಿದ್ದರಾಮಯ್ಯನವರಿಗೆ ವೈದ್ಯರು ವಿಶ್ರಾಂತಿ ಹೇಳಿದ್ದಾರೆ. ಆದ್ರೆ, ಆಡಳಿತ, ಕಚೇರಿ,ಕಾರ್ಯಕ್ರಮ ಸೇರಿದಂತೆ ಎಲ್ಲವನ್ನು ಸಿದ್ದರಾಮಯ್ಯ ನಿಭಾಯಿಸಬೇಕಿದೆ. ಪ್ರತಿ ದಿನ ಕಚೇರಿಗೆ ತೆರಳಲು ಕಾರಿನಲ್ಲಿ ಪ್ರಯಾಣ, ಹತ್ತಿ ಇಳಿಯುವುದು ಸಿದ್ದರಾಮಯ್ಯಗೆ ಸವಾಲಾಗುತ್ತಿದೆ.  ಇದರಿಂದ ಇದೀಗ ಸಿಎಂ ಸಿದ್ದರಾಮಯ್ಯನವರು ಕಾರನ್ನೇ ಬದಲಾವಣೆ ಮಾಡಿದ್ದಾರೆ.

ಮಂಡಿ ನೋವಿನಿಂದ ಬಳಲುತ್ತಿರುವ ಸಿದ್ದರಾಮಯ್ಯನವರಿಗೆ ವೈದ್ಯರು ವಿಶ್ರಾಂತಿ ಹೇಳಿದ್ದಾರೆ. ಆದ್ರೆ, ಆಡಳಿತ, ಕಚೇರಿ,ಕಾರ್ಯಕ್ರಮ ಸೇರಿದಂತೆ ಎಲ್ಲವನ್ನು ಸಿದ್ದರಾಮಯ್ಯ ನಿಭಾಯಿಸಬೇಕಿದೆ. ಪ್ರತಿ ದಿನ ಕಚೇರಿಗೆ ತೆರಳಲು ಕಾರಿನಲ್ಲಿ ಪ್ರಯಾಣ, ಹತ್ತಿ ಇಳಿಯುವುದು ಸಿದ್ದರಾಮಯ್ಯಗೆ ಸವಾಲಾಗುತ್ತಿದೆ. ಇದರಿಂದ ಇದೀಗ ಸಿಎಂ ಸಿದ್ದರಾಮಯ್ಯನವರು ಕಾರನ್ನೇ ಬದಲಾವಣೆ ಮಾಡಿದ್ದಾರೆ.

2 / 9
ಮಂಡಿ ನೋವಿನ ಕಾರಣ ಸಿದ್ದರಾಮಯ್ಯಗೆ  ಫಾರ್ಚುನರ್ ಕಾರು ಹತ್ತಿ ಇಳಿಯಲು ಬಹಳ ಕಷ್ಟವಾಗಿದೆ.  ಹೀಗಾಗಿ ಸರ್ಕಾರದ ಫಾರ್ಚುನರ್​ ಕಾರು ಬಿಟ್ಟು ಬೇರೆ ಖಾಸಗಿ ಕಾರು ಉಪಯೋಗಿಸುತ್ತಿದ್ದಾರೆ.  ಸುಲಭವಾಗಿ ಹತ್ತಿ ಇಳಿಯಲು ಹಾಗೂ ಆರಾಮದಾಯಕ ಪ್ರಯಾಣಕ್ಕೆ ಸಿದ್ದರಾಮಯ್ಯ ಟೊಯೋಟಾ ವೆಲ್‌ಫೈರ್ ಕಾರು ಉಪಯೋಗಿಸುತ್ತಿದ್ದು, ಇದೇ ಕಾರಿನಲ್ಲಿ ಇಂದು ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ಮಂಡಿ ನೋವಿನ ಕಾರಣ ಸಿದ್ದರಾಮಯ್ಯಗೆ ಫಾರ್ಚುನರ್ ಕಾರು ಹತ್ತಿ ಇಳಿಯಲು ಬಹಳ ಕಷ್ಟವಾಗಿದೆ. ಹೀಗಾಗಿ ಸರ್ಕಾರದ ಫಾರ್ಚುನರ್​ ಕಾರು ಬಿಟ್ಟು ಬೇರೆ ಖಾಸಗಿ ಕಾರು ಉಪಯೋಗಿಸುತ್ತಿದ್ದಾರೆ. ಸುಲಭವಾಗಿ ಹತ್ತಿ ಇಳಿಯಲು ಹಾಗೂ ಆರಾಮದಾಯಕ ಪ್ರಯಾಣಕ್ಕೆ ಸಿದ್ದರಾಮಯ್ಯ ಟೊಯೋಟಾ ವೆಲ್‌ಫೈರ್ ಕಾರು ಉಪಯೋಗಿಸುತ್ತಿದ್ದು, ಇದೇ ಕಾರಿನಲ್ಲಿ ಇಂದು ವಿಧಾನಸೌಧಕ್ಕೆ ಆಗಮಿಸಿದ್ದಾರೆ.

3 / 9
ಇಂದುನ(ಫೆಬ್ರವರಿ 18) ಸಿಎಂ ಸಿದ್ದರಾಮಯ್ಯನವರು ಸರ್ಕಾರದ ಫಾರ್ಚುನರ್​​ ಕಾರು ಬಿಟ್ಟು ಖಾಸಗಿ ಟೊಯೋಟಾ  ಕಂಪನಿಯ ವೆಲ್‌ಫೈರ್ ಕಾರಿನ ಮೂಲಕ ವಿಧಾನಸೌಧಕ್ಕೆ ಆಗಮಿಸಿದ್ದಾರೆ.  ಟೊಯೋಟಾ ವೆಲ್‌ಫೈರ್ ಕಾರು ಹೆಚ್ಚಿನ ಸ್ಥಳವಕಾಶ ಒದಗಿಸುತ್ತದೆ. ಇನ್ನು ಈ ಕಾರಿನಲ್ಲಿ ಹತ್ತಿ ಇಳಿಯುವುದು ಸುಲಭ ಹಾಗೂ ಪ್ರಯಾಣ ಕೂಡ ಅಷ್ಟೇ ಆನಂದದಾಯಕ.  ಹೀಗಾಗಿ ಸಿದ್ದರಾಮಯ್ಯ ಟೊಯೋಟಾ ವೆಲ್‌ಫೈರ್ ಕಾರು ಉಪಯೋಗಿಸುತ್ತಿದ್ದಾರೆ.

ಇಂದುನ(ಫೆಬ್ರವರಿ 18) ಸಿಎಂ ಸಿದ್ದರಾಮಯ್ಯನವರು ಸರ್ಕಾರದ ಫಾರ್ಚುನರ್​​ ಕಾರು ಬಿಟ್ಟು ಖಾಸಗಿ ಟೊಯೋಟಾ ಕಂಪನಿಯ ವೆಲ್‌ಫೈರ್ ಕಾರಿನ ಮೂಲಕ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಟೊಯೋಟಾ ವೆಲ್‌ಫೈರ್ ಕಾರು ಹೆಚ್ಚಿನ ಸ್ಥಳವಕಾಶ ಒದಗಿಸುತ್ತದೆ. ಇನ್ನು ಈ ಕಾರಿನಲ್ಲಿ ಹತ್ತಿ ಇಳಿಯುವುದು ಸುಲಭ ಹಾಗೂ ಪ್ರಯಾಣ ಕೂಡ ಅಷ್ಟೇ ಆನಂದದಾಯಕ. ಹೀಗಾಗಿ ಸಿದ್ದರಾಮಯ್ಯ ಟೊಯೋಟಾ ವೆಲ್‌ಫೈರ್ ಕಾರು ಉಪಯೋಗಿಸುತ್ತಿದ್ದಾರೆ.

4 / 9
ಈ  ಟೊಯಟಾ ವೆಲ್‌ಫೈರ್ ಕಾರಿನ ಆನ್ ರೋಡ್ ಬೆಲೆ 1.2 ಕೋಟಿಯಿಂದ 1.3 ಕೋಟಿ ರೂಪಾಯಿ. 2487 cc ಎಂಜಿನ್ ಹೊಂದಿರುವ ಈ ಕಾರು 240Nm ಟಾರ್ಕ್ ಹಾಗೂ 190.42bhp ಮ್ಯಾಕ್ಸ್ ಪವರ್ ನೀಡಲಿದೆ. 4 ಸಿಲಿಂಡರ್ ಪೆಟ್ರೋಲ್ ಎಂಜಿನ್ ಕಾರು ಒಂದು ಲೀಟರ್‌ಗೆ 16 ಕಿ.ಮೀ ಮೈಲೇಜ್ ನೀಡಲಿದೆ. 148 ಲೀಟರ್ ಬೂಟ್ ಸ್ಪೇಸ್ ಹೊಂದಿದೆ.

ಈ ಟೊಯಟಾ ವೆಲ್‌ಫೈರ್ ಕಾರಿನ ಆನ್ ರೋಡ್ ಬೆಲೆ 1.2 ಕೋಟಿಯಿಂದ 1.3 ಕೋಟಿ ರೂಪಾಯಿ. 2487 cc ಎಂಜಿನ್ ಹೊಂದಿರುವ ಈ ಕಾರು 240Nm ಟಾರ್ಕ್ ಹಾಗೂ 190.42bhp ಮ್ಯಾಕ್ಸ್ ಪವರ್ ನೀಡಲಿದೆ. 4 ಸಿಲಿಂಡರ್ ಪೆಟ್ರೋಲ್ ಎಂಜಿನ್ ಕಾರು ಒಂದು ಲೀಟರ್‌ಗೆ 16 ಕಿ.ಮೀ ಮೈಲೇಜ್ ನೀಡಲಿದೆ. 148 ಲೀಟರ್ ಬೂಟ್ ಸ್ಪೇಸ್ ಹೊಂದಿದೆ.

5 / 9
ಈ ಟೊಯೋಟಾ ವೆಲ್‌ಫೈರ್ ಕಾರು ರಾಜಕಾರಣಿಗಳು, ಸೆಲೆಬ್ರೆಟಿಗಳು, ಉದ್ಯಮಿಗಳು ಬಳಸುತ್ತಾರೆ. ಈ  ಕಾರಿನ ಒಳಗೆ ಲಾಂಜ್ ರೀತಿಯ ಸ್ಥಳವಕಾಶವಿದೆ. ವಿಶೇಷ ಅಂದರೆ ಮೊದಲ ಸಾಲು ಮಾತ್ರವಲ್ಲ, ಎರಡನೇ ಸಾಲು ಸೀಟುಗಳಲ್ಲಿ ಕುಳಿತುಕೊಂಡರೂ ಅಷ್ಟೇ ಆರಾಮದಾಯಕವಾಗಿರಲಿದೆ.

ಈ ಟೊಯೋಟಾ ವೆಲ್‌ಫೈರ್ ಕಾರು ರಾಜಕಾರಣಿಗಳು, ಸೆಲೆಬ್ರೆಟಿಗಳು, ಉದ್ಯಮಿಗಳು ಬಳಸುತ್ತಾರೆ. ಈ ಕಾರಿನ ಒಳಗೆ ಲಾಂಜ್ ರೀತಿಯ ಸ್ಥಳವಕಾಶವಿದೆ. ವಿಶೇಷ ಅಂದರೆ ಮೊದಲ ಸಾಲು ಮಾತ್ರವಲ್ಲ, ಎರಡನೇ ಸಾಲು ಸೀಟುಗಳಲ್ಲಿ ಕುಳಿತುಕೊಂಡರೂ ಅಷ್ಟೇ ಆರಾಮದಾಯಕವಾಗಿರಲಿದೆ.

6 / 9
ಬೆನ್ನು, ಕತ್ತು, ಕಾಲುಗಳಿಗೆ ಉತ್ತಮ ಸಪೂರ್ಟ್ ಈ ಕಾರಿನಲ್ಲಿದೆ. ಕೈಗಳನ್ನು ಇಡಲು ಆರ್ಮ್‌ರೆಸ್ಟ್, ವಿಐಪಿ ಸ್ಪಾಟ್‌ಲೈಟ್, ಸೀಟುಗಳನ್ನು ಬೇಕಾದ ರೀತಿಯಲ್ಲಿ ಹೊಂದಿಸಲು ರಿಮೂಟ್ ಕಂಟ್ರೋಲ್ ಸಿಸ್ಟಮ್, ಪ್ರಯಾಣಿಕರಿಗೆ ಪ್ರತ್ಯೇಕ ಸ್ಕ್ರೀನ್, ಲಗೇಜ್ ಇಡಲು ಹೆಚ್ಚುವರಿ ಬೂಟ್ ಸ್ಪೇಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಈ ವೆಲ್‌ಫೈರ್ ಕಾರು  ಹೊಂದಿದೆ.

ಬೆನ್ನು, ಕತ್ತು, ಕಾಲುಗಳಿಗೆ ಉತ್ತಮ ಸಪೂರ್ಟ್ ಈ ಕಾರಿನಲ್ಲಿದೆ. ಕೈಗಳನ್ನು ಇಡಲು ಆರ್ಮ್‌ರೆಸ್ಟ್, ವಿಐಪಿ ಸ್ಪಾಟ್‌ಲೈಟ್, ಸೀಟುಗಳನ್ನು ಬೇಕಾದ ರೀತಿಯಲ್ಲಿ ಹೊಂದಿಸಲು ರಿಮೂಟ್ ಕಂಟ್ರೋಲ್ ಸಿಸ್ಟಮ್, ಪ್ರಯಾಣಿಕರಿಗೆ ಪ್ರತ್ಯೇಕ ಸ್ಕ್ರೀನ್, ಲಗೇಜ್ ಇಡಲು ಹೆಚ್ಚುವರಿ ಬೂಟ್ ಸ್ಪೇಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಈ ವೆಲ್‌ಫೈರ್ ಕಾರು ಹೊಂದಿದೆ.

7 / 9
 ಆಟೋಮ್ಯಾಟಿಕ್ ಕ್ಲೈಮ್ಯಾಟ್ ಕಂಟ್ರೋಲ್, ಡ್ರೈವರ್, ಪ್ಯಾಸೆಂಜರ್ ಸೇರಿದಂತೆ ಸಂಪೂರ್ಣ ಏರ್‌ಬ್ಯಾಗ್, ಎಬಿಎಸ್, ಇಬಿಡಿ ಸೇರಿದಂತೆ ಹೆಚ್ಚಿನ ಸುರಕ್ಷತಾ ಫೀಚರ್ಸ್, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ ಸೇರಿದಂತೆ ಅತ್ಯಾಧುನಿಕ ಫೀಚರ್ಸ್ ಈ ಕಾರಿನಲ್ಲಿದೆ.

ಆಟೋಮ್ಯಾಟಿಕ್ ಕ್ಲೈಮ್ಯಾಟ್ ಕಂಟ್ರೋಲ್, ಡ್ರೈವರ್, ಪ್ಯಾಸೆಂಜರ್ ಸೇರಿದಂತೆ ಸಂಪೂರ್ಣ ಏರ್‌ಬ್ಯಾಗ್, ಎಬಿಎಸ್, ಇಬಿಡಿ ಸೇರಿದಂತೆ ಹೆಚ್ಚಿನ ಸುರಕ್ಷತಾ ಫೀಚರ್ಸ್, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ ಸೇರಿದಂತೆ ಅತ್ಯಾಧುನಿಕ ಫೀಚರ್ಸ್ ಈ ಕಾರಿನಲ್ಲಿದೆ.

8 / 9
ಸಿದ್ದರಾಮಯ್ಯನವರು ಸದ್ಯ ಸರ್ಕಾರದ ಫಾರ್ಚುನರ್ ಕಾರು ಬಿಟ್ಟು ಖಾಸಗಿ ವೆಲ್‌ಪೈರ್ ಕಾರು ಹತ್ತಿದ್ದು, ಇದನ್ನು ಹೊಸದಾಗಿ ಖರೀದಿಸಿದ್ದಾರೋ ಇಲ್ವೋ ಎನ್ನುವುದು ಮಾತ್ರ ಗೊತ್ತಾಗಿಲ್ಲ. ಇನ್ನು ಮುಂದೆ ಇದೇ ಕಾರನ್ನೇ ಉಪಯೋಗಿಸುತ್ತಾರೋ ಅಥವಾ ಮಂಡಿ ನೋವು ಕಡಿಮೆಯಾದ ಬಳಿಕ ಸರ್ಕಾರದ ಫಾರ್ಚುನರ್ ಕಾರು ಬಳಸುತ್ತಾರೋ ಕಾದು ನೋಡಬೇಕಿದೆ.

ಸಿದ್ದರಾಮಯ್ಯನವರು ಸದ್ಯ ಸರ್ಕಾರದ ಫಾರ್ಚುನರ್ ಕಾರು ಬಿಟ್ಟು ಖಾಸಗಿ ವೆಲ್‌ಪೈರ್ ಕಾರು ಹತ್ತಿದ್ದು, ಇದನ್ನು ಹೊಸದಾಗಿ ಖರೀದಿಸಿದ್ದಾರೋ ಇಲ್ವೋ ಎನ್ನುವುದು ಮಾತ್ರ ಗೊತ್ತಾಗಿಲ್ಲ. ಇನ್ನು ಮುಂದೆ ಇದೇ ಕಾರನ್ನೇ ಉಪಯೋಗಿಸುತ್ತಾರೋ ಅಥವಾ ಮಂಡಿ ನೋವು ಕಡಿಮೆಯಾದ ಬಳಿಕ ಸರ್ಕಾರದ ಫಾರ್ಚುನರ್ ಕಾರು ಬಳಸುತ್ತಾರೋ ಕಾದು ನೋಡಬೇಕಿದೆ.

9 / 9

Published On - 7:43 pm, Tue, 18 February 25

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ