RSS ಮುಖ್ಯಸ್ಥ ಮೋಹನ್ ಭಾಗವತ್ಗೆ ರಾಖಿ ಕಟ್ಟಿದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು
ಸಹೋದರ-ಸಹೋದರಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಗ್ಪುರದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಅವರಿಗೆ ರಾಖಿ ಕಟ್ಟಿದರು.
Updated on: Aug 09, 2025 | 2:26 PM

ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್ ಅವರಿಗೆ ರಾಖಿ ಕಟ್ಟಿದರು.

ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್, ವೈಯಿಸ್ ಓವರ್, ಎಡಿಟಿಂಗ್ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.
Read More
