AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care Tips: ಬೇಸಿಗೆಯಲ್ಲಿ ಚರ್ಮದ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

Health Tips: ಬೇಸಿಗೆಯಲ್ಲಿ ಸುಡು ಬಿಸಿಲಿನಿಂದ ಚರ್ಮದ ಕಾಂತಿ ಮಂದವಾಗುವುದು, ಸನ್​ ಬರ್ನ್ ಸಮಸ್ಯೆ ಎದುರಿಸುವುದು ಸಾಮಾನ್ಯ. ಅವುಗಳನ್ನು ರೋಸ್ ವಾಟರ್, ಐಸ್ ಕ್ಯೂಬ್, ಸೌತೇಕಾಯಿ, ಮುಲ್ತಾನಿ ಮಿಟ್ಟಿ ಮೊದಲಾದವುಗಳ ಸಹಾಯದಿಂದ ನಿಯಂತ್ರಿಸಬಹುದು.

TV9 Web
| Edited By: |

Updated on: Apr 15, 2022 | 8:35 AM

Share
ಬೇಸಿಗೆಯಲ್ಲಿ, ಪ್ರಖರ ಸೂರ್ಯನ ಬೆಳಕಿನಿಂದಾಗಿ ಚರ್ಮದ ಕಾಂತಿ ಮಂದವಾಗುತ್ತದೆ. ಚರ್ಮ ಟ್ಯಾನ್ ಆಗುತ್ತದೆ. ಶಾಖ ಮತ್ತು ತೇವಾಂಶದಿಂದ ಚರ್ಮವನ್ನು ರಕ್ಷಿಸಲು ನೀವು ವಿವಿಧ ನೈಸರ್ಗಿಕ ಪದಾರ್ಥಗಳನ್ನು ಬಳಸಬಹುದು. ಇದು ನಿಮ್ಮ ಚರ್ಮವನ್ನು ತಂಪಾಗಿಸಲು ಹಾಗೂ ಕಾಂತಿಯುತವಾಗಿಸಲು ಸಹಾಯ ಮಾಡುತ್ತದೆ.

1 / 5
ರೋಸ್ ವಾಟರ್: ರೋಸ್ ವಾಟರ್ ನಿಮ್ಮ ಚರ್ಮವನ್ನು ತಂಪಾಗಿಸಲು ಕೆಲಸ ಮಾಡುತ್ತದೆ. ಇದು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ನೀವು ಹತ್ತಿಯನ್ನು ಬಳಸಿ ಚರ್ಮದ ಮೇಲೆ ಇದನ್ನು ಹಚ್ಚಬಹುದು. ಚರ್ಮವನ್ನು ಟೋನ್ ಮಾಡಲು ಇದು ಸಹಾಯ ಮಾಡುತ್ತದೆ. ರಕ್ತ ಪರಿಚಲನೆ ಸುಧಾರಿಸಲು ಕೆಲಸ ಮಾಡುತ್ತದೆ. ನೀವು ಇದನ್ನು ಪ್ರತಿದಿನ ಬಳಸಬಹುದು.

2 / 5
ಮುಲ್ತಾನಿ ಮಿಟ್ಟಿ: ಬೇಸಿಗೆಯಲ್ಲಿ ಚರ್ಮವನ್ನು ರಕ್ಷಿಸಲು ಮುಲ್ತಾನಿ ಮಿಟ್ಟಿ ಬಳಸಬಹುದು. ಒಂದು ಚಮಚ ಮುಲ್ತಾನಿ ಮಿಟ್ಟಿಯಲ್ಲಿ ರೋಸ್ ವಾಟರ್ ಮಿಶ್ರಣ ಮಾಡಿ. ಇದನ್ನು ಚರ್ಮದ ಮೇಲೆ 15 ನಿಮಿಷಗಳ ಕಾಲ ಹಚ್ಚಿ. ನಂತರ ತೊಳೆಯಿರಿ. ಇದು ಚರ್ಮವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆಯ್ಲಿ ಸ್ಕಿನ್ ಹೊಂದಿರುವವರಿಗೆ ಇದು ಹೆಚ್ಚು ಪ್ರಯೋಜನಕಾರಿ.

3 / 5
ಐಸ್ ಕ್ಯೂಬ್ಸ್: ಬೇಸಿಗೆ ಕಾಲದಲ್ಲಿ ತ್ವಚೆಗೆ ಐಸ್ ಕ್ಯೂಬ್‌ಗಳು ತುಂಬಾ ಪ್ರಯೋಜನಕಾರಿ. ತ್ವಚೆಗೆ ಗ್ರೀನ್ ಟೀ ಅಥವಾ ಸೌತೆಕಾಯಿ ರಸದಿಂದ ತಯಾರಿಸಿದ ಐಸ್ ಕ್ಯೂಬ್ ಗಳನ್ನು ಬಳಸಿ. ಅವುಗಳು ಮುಖದಿಂದ ಹೆಚ್ಚುವರಿ ಎಣ್ಣೆಯ ಅಂಶವನ್ನು ತೆಗೆದುಹಾಕಲು ಸಹಾಯ ಮಾಡುತ್ತವೆ. ಇದು ಸನ್ ಬರ್ನ್ ಸಮಸ್ಯೆಯನ್ನೂ ದೂರ ಮಾಡುತ್ತದೆ.

4 / 5
ಸೌತೆಕಾಯಿ: ಬೇಸಿಗೆಯಲ್ಲಿ ಸೌತೆಕಾಯಿಯನ್ನು ಸೇವಿಸುವುದು ನಿಮ್ಮ ಆರೋಗ್ಯಕ್ಕೆ ಮಾತ್ರವಲ್ಲದೆ ನಿಮ್ಮ ಚರ್ಮಕ್ಕೂ ಪ್ರಯೋಜನಕಾರಿ. ಇದು ಕಣ್ಣಿನ ಕೆಳಗಿರುವ ಬ್ಲಾಕ್ ಸರ್ಕಲ್​ಗಳ ಸಮಸ್ಯೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಸೌತೆಕಾಯಿ ರಸವನ್ನು ಚರ್ಮದ ಮೇಲೆ 15 ನಿಮಿಷಗಳ ಕಾಲ ಹಚ್ಚಿ. ನಂತರ ಅದನ್ನು ತೊಳೆಯಿರಿ. ಇದು ಚರ್ಮವನ್ನು ತಂಪಾಗಿಡಲು ಸಹಾಯ ಮಾಡುತ್ತದೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ