- Kannada News Photo gallery SM Krishna, Sudha Murthy And SL Bhyrappa And Others Total 8 Kannadigas Gets padma award 2023
Padma Award 2023 Winners List: ಎಸ್ಎಂ ಕೃಷ್ಣ, ಎಸ್ಎಲ್ ಭೈರಪ್ಪ, ಸುಧಾಮೂರ್ತಿ ಸೇರಿದಂತೆ 8 ಕನ್ನಡಿಗರಿಗೆ ಪದ್ಮ ಪುರಸ್ಕಾರ
74ನೇ ಗಣರಾಜ್ಯೋತ್ಸವದ ಮುನ್ನಾ ದಿನ ಕೇಂದ್ರ ಸರ್ಕಾರ 2023ನೇ ಸಾಲಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಒಟ್ಟು 106 ಸಾಧಕರಿಗೆ ಪದ್ಮ ಪ್ರಶಸ್ತಿ ಲಭಿಸಿದೆ. ರಾಜಕೀಯ ಮುತ್ಸದಿ ಎಸ್.ಎಂ.ಕೃಷ್ಣ ಸೇರಿ 6 ಸಾಧಕರಿಗೆ ಪದ್ಮವಿಭೂಷಣ ಹಾಗೂ ಸಾಹಿತಿ ಎಸ್ಎಲ್ ಭೈರಪ್ಪ, ಮತ್ತು ಸುಧಾಮೂರ್ತಿ ಸೇರಿದಂತೆ 9 ಸಾಧಕರಿಗೆ ಪದ್ಮಭೂಷಣ ಸಿಕ್ಕಿದೆ. ಇನ್ನು 91 ಸಾಧಕರಿಗೆ ಪದ್ಮ ಶ್ರೀ ಪ್ರಶಸ್ತಿ ಲಭಿಸಿದೆ. 91 ಪದ್ಮ ಶ್ರೀ ಪ್ರಶಸ್ತಿಗೆ ಕರ್ನಾಟಕದ ಐವರು ಆಯ್ಕೆಯಾಗಿದ್ದಾರೆ.
Updated on:Jan 25, 2023 | 10:58 PM

ಇನ್ಫೋಸಿಸ್ (Infosys) ಫೌಂಡೇಶನ್ನ ಸುಧಾಮೂರ್ತಿ (Sudha Murthy) ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಲಭಿಸಿದೆ.

ಸಾಹಿತಿ ಎಸ್.ಎಲ್.ಭೈರಪ್ಪಗೆ ಪದ್ಮಭೂಷಣ ಗೌರವ

ಮಾಜಿ ಸಿಎಂ ಎಸ್.ಎಂ.ಕೃಷ್ಣಗೆ ಪದ್ಮವಿಭೂಷಣ ಗೌರವ

ಇನ್ನು ಜಾನಪದ ಕಲಾವಿದ (ತಮಟೆ ವಾದಕ) ದಲ್ಲಿ 16ನೇ ವಯಸ್ಸಿನಲ್ಲಿಯೇ ತಮಟೆ ವಾದ್ಯ ಶುರುಮಾಡಿದ್ದ ಚಿಕ್ಕಬಳ್ಳಾಪುರದ ಮುನಿವೆಂಕಟಪ್ಪ ಅವರಿಗೆ ಪದ್ಮಶ್ರಿ ಪ್ರಶಸ್ತಿ ದೊರೆತಿದೆ.

ಕೊಡಗಿನ ಉಮ್ಮತ್ತಾಟ್ ಜಾನಪದ ನೃತ್ಯ, ಕಲೆಯ (ಜಾನಪದ ನೃತ್ಯ) ನರ್ತಕಿ ಈ ನೃತ್ಯದ ಮೂಲಕ ಕೊಡವ ಸಂಸ್ಕೃತಿಯನ್ನು ಉಳಿಸಲು ಸಹಾಯ ಮಾಡಿದ ರಾಣಿ ಮಾಚಯ್ಯ ಅವರಿಗೆ ಜನಾಪದ ನೃತ್ಯ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ.

ಖಾದರ್ ವಲ್ಲಿ ದೂದೇಕುಲ(ವಿಜ್ಞಾನ ಮತ್ತು ಇಂಜಿನಿಯರಿಂಗ್), ರಾಣಿ ಮಾಚಯ್ಯ (ಕಲೆ), ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ (ಕಲೆ), ಐ ಶಾ ರಶೀದ್ ಅಹಮದ್ ಕ್ವಾದ್ರಿ (ಕಲೆ), ಶ್ರೀ ಸುಬ್ಬರಾಮನ್ (ಪುರಾತತ್ವ ಶಾಸ್ತ್ರ) ಅವರಿಗೆ ಪದ್ಮ ಪ್ರಶಸ್ತಿ ಲಭಿಸಿದೆ.
Published On - 10:21 pm, Wed, 25 January 23




