AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ವಿಚಿತ್ರ ಘಟನೆ, ಬಾಲಕನಿಗೆ 2 ತಿಂಗಳಲ್ಲಿ 9 ಬಾರಿ ಕಡಿದ ಹಾವು

ಹಾವಿನ ದ್ವೇಷ ಹನ್ನೆರೆಡು ವರ್ಷ ಅಂತಾರೆ. ಕಲಬುರಗಿ ಜಿಲ್ಲೆಯ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಓರ್ವ ಬಾಲಕನಿಗೆ ಹಾವೊಂದು ಬೆಂಬಿಡದೆ ಕಾಡುತ್ತಿದೆ. ಎರಡು ತಿಂಗಳಲ್ಲಿ ಒಂದಲ್ಲ ಎರಡಲ್ಲ ಬರೊಬ್ಬರಿ ಒಂಬತ್ತು ಬಾರಿ ತನಗೆ ಹಾವು ಕಚ್ಚಿದೆ ಎಂದು ಪ್ರಜ್ವಲ್​ ಹೇಳಿದ್ದಾನೆ.

ಸಂಜಯ್ಯಾ ಚಿಕ್ಕಮಠ
| Edited By: ವಿವೇಕ ಬಿರಾದಾರ|

Updated on:Aug 29, 2023 | 7:29 AM

Share
Snake Bite to boy 9 times in two months in Kalaburagi

ಹಾವಿನ ದ್ವೇಷ ಹನ್ನೆರೆಡು ವರ್ಷ ಅಂತಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಓರ್ವ ಬಾಲಕನಿಗೆ ಹಾವೊಂದು ಬೆಂಬಿಡದೆ ಕಾಡುತ್ತಿದೆ.

1 / 7
Snake Bite to boy 9 times in two months in Kalaburagi

ಹಲಕರ್ಟಿ ಗ್ರಾಮದ ವಿಜಯಕುಮಾರ್ ಮತ್ತು ಉಷಾ ದಂಪತಿಯ ಪುತ್ರ ಪ್ರಜ್ವಲ್ (15) ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದಾನೆ. ಈತನಿಗೆ ಎರಡು ತಿಂಗಳಲ್ಲಿ ಒಂದಲ್ಲ ಎರಡಲ್ಲ ಬರೊಬ್ಬರಿ ಒಂಬತ್ತು ಬಾರಿ ತನಗೆ ಹಾವು ಕಚ್ಚಿದೆ ಎಂದು ಪ್ರಜ್ವಲ್​ ಹೇಳಿದ್ದಾನೆ.

2 / 7
Snake Bite to boy 9 times in two months in Kalaburagi

ಪ್ರಜ್ವಲ್​ಗೆ ಹಲಕರ್ಟಿ ಗ್ರಾಮದ ಮನೆಯಲ್ಲಿ ಜುಲೈ 3 ರಂದು ಮೊದಲ ಬಾರಿ ಹಾವು ಕಡಿದಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಹಲಕರ್ಟಿ ಗ್ರಾಮ ಬಿಟ್ಟು ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ವಾಸವಾಗಿದ್ದಾರೆ.

3 / 7
Snake Bite to boy 9 times in two months in Kalaburagi

ವಾಡಿಯಲ್ಲಿ ಮನೆ ಮಾಡಿಕೊಂಡು ವಾಸ ಮಾಡುತ್ತಿರುವ ಸಂದರ್ಭದಲ್ಲೂ ಪ್ರಜ್ವಲ್​​ಗೆ ಮತ್ತೆ ಹಾವು ಕಡಿದಿದೆ. ಆದರೆ ಈ ಹಾವು ಮಾತ್ರ ಪೋಷಕರಿಗೆ, ಕುಟುಂಬಸ್ಥರಿಗೆ ಯಾರಿಗೂ ಕಾಣಿಸಿಕೊಂಡಿಲ್ಲ. ಪ್ರಜ್ವಲ್ ಕಣ್ಣಿಗೆ ಮಾತ್ರ ಕಾಣಿಸಿಕೊಳ್ಳುತ್ತಿದೆ.

4 / 7
Snake Bite to boy 9 times in two months in Kalaburagi

ಹಾವಿನಿಂದ ಒಂಬತ್ತು ಬಾರಿ ಕಡಿತಕ್ಕೆ ಒಳಗಾದಾಗ ಆರು ಬಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಮೂರು ಬಾರಿ ನಾಟಿ ಔಷಧದ ಚಿಕಿತ್ಸೆ ನೀಡಲಾಗಿದೆ.

5 / 7
Snake Bite to boy 9 times in two months in Kalaburagi

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್​​ಚಾರ್ಜ್ ಆದ ಬಳಿಕ ಎರಡ್ಮೂರು ದಿನದಲ್ಲೇ ಹಾವು ಮತ್ತೆ ಕಡೆಯುತ್ತಿದೆ. ಸದ್ಯ ಪ್ರಜ್ವಲ್ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

6 / 7
Snake Bite to boy 9 times in two months in Kalaburagi

ಪ್ರಜ್ವಲ್​​ಗೆ ನಿಜವಾಗಿಯೂ ಹಾವು ಕಡಿಯುತ್ತಿದೆಯಾ ಎಂಬ ಕುತೂಹಲ ಹೆಚ್ಚಾಗಿದೆ. ಇನ್ನು ಪ್ರಜ್ವಲನ ಪೋಷಕರು ಈ ಹಾವಿನಿಂದ ಮುಕ್ತಿ ಕೊಡಿಸು ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

7 / 7

Published On - 7:27 am, Tue, 29 August 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ