AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ಈ ಹೂವಿನ ಗಿಡಗಳನ್ನು ನೆಡಲೇಬೇಕಂತೆ

ಹಚ್ಚ ಹಸಿರಿನ ಗಿಡ ಮರಗಳು ಸುತ್ತಮುತ್ತಲಿನ ಪ್ರದೇಶದಲ್ಲಿ ಸಕಾರಾತ್ಮಕತೆಯ ಜೊತೆಗೆ ಅಲ್ಲಿನ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ. ಸಕಾರಾತ್ಮಕತೆ, ಶುದ್ಧ ಗಾಳಿ ಲಭಿಸುತ್ತದೆ ಎಂದು ಅನೇಕರು ಮನೆಯ ಮುಂದೆ ತರಹೇವಾರಿ ಗಿಡಗಳನ್ನು ನೆಡುತ್ತಾರೆ. ಇನ್ನೂ ಕೆಲವರು ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಸಂತೋಷ ಸಮೃದ್ಧಿ ನೆಲೆಸಲೆಂದು ಬಿದಿರಿನ ಗಿಡ, ಮನಿ ಪ್ಲಾಂಟ್, ಸ್ನೇಕ್‌ ಪ್ಲಾಂಟ್‌, ರಬ್ಬರ್‌ ಪ್ಲಾಂಟ್‌, ಪೀಸ್‌ ಲಿಲಿ, ಅಲೋವೆರಾ ಇತ್ಯಾದಿ ಗಿಡಗಳನ್ನು ನೆಡುತ್ತಾರೆ. ಇದೇ ರೀತಿ ಈ ಒಂದಷ್ಟು ಹೂವಿನ ಗಿಡಗಳನ್ನು ಸಹ ಮನೆಯ ಮುಂಭಾಗದಲ್ಲಿ ನೆಡಬೇಕಂತೆ. ಅವು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಾಲಾಶ್ರೀ ಅಂಚನ್​
|

Updated on: Jul 01, 2025 | 5:32 PM

Share
ಚೆಂಡು ಹೂವು: ಹಿಂದೂ ಸಂಪ್ರದಾಯದಲ್ಲಿ ಚೆಂಡು ಹೂವನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಅಲ್ಲದೆ  ಶಾಸ್ತ್ರಗಳ ಪ್ರಕಾರ ಮಾರಿಗೋಲ್ಡ್‌ ಅಂದರೆ ಚೆಂಡು ಹೂವಿನ ಗಿಡ ಮನೆಗೆ ಧನಾತ್ಮಕ ಶಕ್ತಿಯನ್ನು ತರುತ್ತದೆ. ಹಾಗಾಗಿ ಈ ಹೂವಿನ ಗಿಡವನ್ನು ಮನೆ ಮುಂದೆ ನೆಡಬೇಕು.

ಚೆಂಡು ಹೂವು: ಹಿಂದೂ ಸಂಪ್ರದಾಯದಲ್ಲಿ ಚೆಂಡು ಹೂವನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಅಲ್ಲದೆ ಶಾಸ್ತ್ರಗಳ ಪ್ರಕಾರ ಮಾರಿಗೋಲ್ಡ್‌ ಅಂದರೆ ಚೆಂಡು ಹೂವಿನ ಗಿಡ ಮನೆಗೆ ಧನಾತ್ಮಕ ಶಕ್ತಿಯನ್ನು ತರುತ್ತದೆ. ಹಾಗಾಗಿ ಈ ಹೂವಿನ ಗಿಡವನ್ನು ಮನೆ ಮುಂದೆ ನೆಡಬೇಕು.

1 / 7
ಗುಲಾಬಿ ಗಿಡ: ಗುಲಾಬಿ ಹೂವು ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಇದು ಪ್ರೀತಿ ಮತ್ತು ಸಂತೋಷದ ಸಂಕೇತವಾಗಿದೆ. ಅದೇ ರೀತಿ ಈ ಗುಲಾಬಿ ಗಿಡವನ್ನು ಮನೆಯಲ್ಲಿ ನೆಡುವುದು ಕೂಡಾ ತುಂಬಾನೇ ಒಳ್ಳೆಯದು. ಈ ಗಿಡ ಕುಟುಂಬ ಸದಸ್ಯರ ನಡುವೆ ಪ್ರೀತಿಯನ್ನು ಹೆಚ್ಚಿಸುತ್ತದೆ ಮತ್ತು ಬಿಳಿ ಗುಲಾಬಿ ಹೂವಿನ ಗಿಡ ಮನೆಯಲ್ಲಿ ಶಾಂತಿಯನ್ನು ನೆಲೆಸುವಂತೆ ಮಾಡುತ್ತದೆ ಎಂದು ನಂಬಲಾಗಿದೆ.

ಗುಲಾಬಿ ಗಿಡ: ಗುಲಾಬಿ ಹೂವು ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಇದು ಪ್ರೀತಿ ಮತ್ತು ಸಂತೋಷದ ಸಂಕೇತವಾಗಿದೆ. ಅದೇ ರೀತಿ ಈ ಗುಲಾಬಿ ಗಿಡವನ್ನು ಮನೆಯಲ್ಲಿ ನೆಡುವುದು ಕೂಡಾ ತುಂಬಾನೇ ಒಳ್ಳೆಯದು. ಈ ಗಿಡ ಕುಟುಂಬ ಸದಸ್ಯರ ನಡುವೆ ಪ್ರೀತಿಯನ್ನು ಹೆಚ್ಚಿಸುತ್ತದೆ ಮತ್ತು ಬಿಳಿ ಗುಲಾಬಿ ಹೂವಿನ ಗಿಡ ಮನೆಯಲ್ಲಿ ಶಾಂತಿ ನೆಲೆಸುವಂತೆ ಮಾಡುತ್ತದೆ ಎಂದು ನಂಬಲಾಗಿದೆ.

2 / 7
ದಾಸವಾಳ: ದಾಸವಾಳ ಹೂವಿನ  ಅತ್ಯುತ್ತಮ ವಾಸ್ತು ಸಸ್ಯವಾಗಿದೆ. ಸಾಮಾನ್ಯವಾಗಿ ಈ ಹೂವಿನ ಗಿಡ ಎಲ್ಲರ ಮನೆಯಲ್ಲೂ ಇದ್ದೇ ಇರುತ್ತದೆ. ಇದರ ವಿಶೇಷ ಏನೆಂದರೆ ಇದು ಮನೆ ತುಂಬಾ ಸಕಾರಾತ್ಮಕತೆ ಮತ್ತು ಚೈತನ್ಯಶೀಲ ಶಕ್ತಿಯನ್ನು ಹರಡುತ್ತದೆ. ಅಲ್ಲದೆ ದಾಸವಾಳ ಹೂವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತಿಸುತ್ತದೆ.

ದಾಸವಾಳ: ದಾಸವಾಳ ಹೂವಿನ ಅತ್ಯುತ್ತಮ ವಾಸ್ತು ಸಸ್ಯವಾಗಿದೆ. ಸಾಮಾನ್ಯವಾಗಿ ಈ ಹೂವಿನ ಗಿಡ ಎಲ್ಲರ ಮನೆಯಲ್ಲೂ ಇದ್ದೇ ಇರುತ್ತದೆ. ಇದರ ವಿಶೇಷ ಏನೆಂದರೆ ಇದು ಮನೆ ತುಂಬಾ ಸಕಾರಾತ್ಮಕತೆ ಮತ್ತು ಚೈತನ್ಯಶೀಲ ಶಕ್ತಿಯನ್ನು ಹರಡುತ್ತದೆ. ಅಲ್ಲದೆ ದಾಸವಾಳ ಹೂವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತಿಸುತ್ತದೆ.

3 / 7
ಮಲ್ಲಿಗೆ ಹೂವಿನ ಗಿಡ: ನೀವು ಮನೆಯ ಮುಂಭಾಗದಲ್ಲಿ ಮಲ್ಲಿಗೆ ಹೂವಿನ ಗಿಡವನ್ನು ಸಹ ನೆಡಬಹುದು. ವಿಶೇಷವಾಗಿ ಈ ಹೂವು ಮನಸ್ಸಿಗೆ ಶಾಂತಿ ಮತ್ತು ಮುದವನ್ನು ನೀಡುತ್ತದೆ. ಅಲ್ಲದೆ ಈ ಗಿಡಗಳು ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸುವಂತೆ ಮಾಡುತ್ತದೆ.

ಮಲ್ಲಿಗೆ ಹೂವಿನ ಗಿಡ: ನೀವು ಮನೆಯ ಮುಂಭಾಗದಲ್ಲಿ ಮಲ್ಲಿಗೆ ಹೂವಿನ ಗಿಡವನ್ನು ಸಹ ನೆಡಬಹುದು. ವಿಶೇಷವಾಗಿ ಈ ಹೂವು ಮನಸ್ಸಿಗೆ ಶಾಂತಿ ಮತ್ತು ಮುದವನ್ನು ನೀಡುತ್ತದೆ. ಅಲ್ಲದೆ ಈ ಗಿಡಗಳು ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸುವಂತೆ ಮಾಡುತ್ತದೆ.

4 / 7
ಕಮಲದ ಹೂವು: ಕಮಲದ ಹೂವುಗಳು ಲಕ್ಷ್ಮೀ ದೇವಿಗೆ ಪ್ರಿಯವಾದ ಹೂವಾಗಿದೆ. ಜೊತೆಗೆ  ಈ ವಿಶೇಷ ಹೂವು ಶುದ್ಧತೆ ಮತ್ತು ಸೌಂದರ್ಯದ ಸಂಕೇತವಾಗಿದೆ. ಹೀಗಿರುವಾಗ ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಬೇಕು ಎಂದಾದರೆ ನೀವು ಒಂದು ಕುಂಡದಲ್ಲಿ ಕಮಲದ ಹೂವಿನ ಗಿಡವನ್ನು ನೆಡಿ.

ಕಮಲದ ಹೂವು: ಕಮಲದ ಹೂವುಗಳು ಲಕ್ಷ್ಮೀ ದೇವಿಗೆ ಪ್ರಿಯವಾದ ಹೂವಾಗಿದೆ. ಜೊತೆಗೆ ಈ ವಿಶೇಷ ಹೂವು ಶುದ್ಧತೆ ಮತ್ತು ಸೌಂದರ್ಯದ ಸಂಕೇತವಾಗಿದೆ. ಹೀಗಿರುವಾಗ ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಬೇಕು ಎಂದಾದರೆ ನೀವು ಒಂದು ಕುಂಡದಲ್ಲಿ ಕಮಲದ ಹೂವಿನ ಗಿಡವನ್ನು ನೆಡಿ.

5 / 7
ನಂದಿ ಬಟ್ಟಲು: ನಂದಿ ಬಟ್ಟಲು ಹೂವಿನ ಗಿಡವನ್ನು ಸಹ ಮನೆಯ ಮುಂಭಾಗದಲ್ಲಿ ನೆಟ್ಟರೆ ಒಳ್ಳೆಯದು ಎಂದು ಹೇಳಲಾಗುತ್ತದೆ.  ಹೌದು ಶಾಸ್ತ್ರಗಳ ಪ್ರಕಾರ ಈ ಸಸ್ಯ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಮತ್ತು ಮನೆಯೊಳಗೆ ಸಮೃದ್ಧಿ ನೆಲೆಸುವಂತೆ ಮಾಡುತ್ತದೆ. ಅಲ್ಲದೆ ಈ ಗಿಡ ಗಾಳಿಯನ್ನು ಶುದ್ಧೀಕರಿಸಲು ಸಹ ಸಹಕಾರಿ.

ನಂದಿ ಬಟ್ಟಲು: ನಂದಿ ಬಟ್ಟಲು ಹೂವಿನ ಗಿಡವನ್ನು ಸಹ ಮನೆಯ ಮುಂಭಾಗದಲ್ಲಿ ನೆಟ್ಟರೆ ಒಳ್ಳೆಯದು ಎಂದು ಹೇಳಲಾಗುತ್ತದೆ. ಹೌದು ಶಾಸ್ತ್ರಗಳ ಪ್ರಕಾರ ಈ ಸಸ್ಯ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಮತ್ತು ಮನೆಯೊಳಗೆ ಸಮೃದ್ಧಿ ನೆಲೆಸುವಂತೆ ಮಾಡುತ್ತದೆ. ಅಲ್ಲದೆ ಈ ಗಿಡ ಗಾಳಿಯನ್ನು ಶುದ್ಧೀಕರಿಸಲು ಸಹ ಸಹಕಾರಿ.

6 / 7
ಶಂಖ ಪುಷ್ಪ ಗಿಡ: ಈ ಗಿಡ ಧನಾತ್ಮಕ ಶಕ್ತಿ, ಸಂಪತ್ತು ಮತ್ತು ಸಂತೋಷವನ್ನು ತರುತ್ತದೆ ಎಂದು ನಂಬಲಾಗಿದೆ. ಈ ಗಿಡವನ್ನು ಮನೆ ಮುಂದೆ ನೆಡುವುದರಿಂದ ಮನೆಯಿಂದ ನಕಾರಾತ್ಮಕ ಶಕ್ತಿ ಹೋಗುತ್ತದೆ, ಸಕಾರಾತ್ಮಕತೆ ನೆಲೆಸುತ್ತದೆ ಎಂಬ ನಂಬಿಕೆಯಿದೆ.

ಶಂಖ ಪುಷ್ಪ ಗಿಡ: ಈ ಗಿಡ ಧನಾತ್ಮಕ ಶಕ್ತಿ, ಸಂಪತ್ತು ಮತ್ತು ಸಂತೋಷವನ್ನು ತರುತ್ತದೆ ಎಂದು ನಂಬಲಾಗಿದೆ. ಈ ಗಿಡವನ್ನು ಮನೆ ಮುಂದೆ ನೆಡುವುದರಿಂದ ಮನೆಯಿಂದ ನಕಾರಾತ್ಮಕ ಶಕ್ತಿ ಹೋಗುತ್ತದೆ, ಸಕಾರಾತ್ಮಕತೆ ನೆಲೆಸುತ್ತದೆ ಎಂಬ ನಂಬಿಕೆಯಿದೆ.

7 / 7
Follow Us
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ