AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಜಿಲ್ಲಾಸ್ಪತ್ರೆಗೆ ಬರುವ ನೂರಾರು ಜನರಿಗೆ ಪ್ರತಿ ದಿನ ಅನ್ನಸಂತರ್ಪಣೆ; ತಂದೆಯ ಸ್ಮರಣಾರ್ಥ ಬಡವರ ಹಸಿವು ನೀಗಿಸುತ್ತಿರುವ ಮಗ

ಹಾವೇರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲೆಯ ಹಲವು ಕಡೆಯಿಂದ ರೋಗಿಗಳು ಬರುತ್ತಾರೆ. ಆದರೆ ಅವರ ಜೊತೆಗೆ ಬರುವ ಕುಟುಂಬದವರಿಗೆ ಊಟದ ಸಮಸ್ಯೆ ಆಗುತ್ತಿತ್ತು. ಸದ್ಯ ಈಗ ದಾನಿಯೊಬ್ಬರು ರೋಗಿಗಳ ಸಬ್ಬಂದಿಕರಿಗೆ ಅನ್ನಸಂತರ್ಪಣೆ ಮಾಡಿ ಹೊಟ್ಟೆ ತುಂಬಿಸುತ್ತಿದ್ದಾರೆ.

TV9 Web
| Updated By: ಆಯೇಷಾ ಬಾನು

Updated on: Dec 09, 2023 | 1:33 PM

ಹಾವೇರಿ ಜಿಲ್ಲಾಸ್ಪತ್ರೆ ಹಿಂಭಾಗ ಅನ್ನಸಂತರ್ಪಣೆ ಕೆಂದ್ರ ತೆರೆಯಲಾಗಿದ್ದು ನೂರಾರು ಜನರು ಪ್ರತಿ ದಿನ ಹೊಟ್ಟೆ ತುಂಬ ಊಟ ಮಾಡುವಂತಾಗಿದೆ. ದಾನಿಯೊಬ್ಬರು ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದಾರೆ.

ಹಾವೇರಿ ಜಿಲ್ಲಾಸ್ಪತ್ರೆ ಹಿಂಭಾಗ ಅನ್ನಸಂತರ್ಪಣೆ ಕೆಂದ್ರ ತೆರೆಯಲಾಗಿದ್ದು ನೂರಾರು ಜನರು ಪ್ರತಿ ದಿನ ಹೊಟ್ಟೆ ತುಂಬ ಊಟ ಮಾಡುವಂತಾಗಿದೆ. ದಾನಿಯೊಬ್ಬರು ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದಾರೆ.

1 / 6
ಹಾವೇರಿ ಜಿಲ್ಲಾಸ್ಪತ್ರೆಗೆ ಜಿಲ್ಲೆಯ ನಾನಾ ಕಡೆಗಳಿಂದ ಜನ ಬರುತ್ತಾರೆ ಅದರಲ್ಲಿ ಬಡವರೇ ಹೆಚ್ಚಾಗಿ ಬರುತ್ತಾರೆ. ಇದನ್ನ ಮನಗಂಡ ಉದ್ಯಮಿ ಬಹದ್ದೂರ್ ದೇಸಾಯಿ ತಮ್ಮ ತಂದೆ ಕುಶ ಅವರ ಸ್ಮರಣಾರ್ಥ ಅನ್ನ ಸಂತರ್ಪಣೆ ಮಾಡಲು ಮುಂದಾಗಿದ್ದು  ಪ್ರತಿದಿನ ಕನಿಷ್ಠ ನೂರು ಜನರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ.

ಹಾವೇರಿ ಜಿಲ್ಲಾಸ್ಪತ್ರೆಗೆ ಜಿಲ್ಲೆಯ ನಾನಾ ಕಡೆಗಳಿಂದ ಜನ ಬರುತ್ತಾರೆ ಅದರಲ್ಲಿ ಬಡವರೇ ಹೆಚ್ಚಾಗಿ ಬರುತ್ತಾರೆ. ಇದನ್ನ ಮನಗಂಡ ಉದ್ಯಮಿ ಬಹದ್ದೂರ್ ದೇಸಾಯಿ ತಮ್ಮ ತಂದೆ ಕುಶ ಅವರ ಸ್ಮರಣಾರ್ಥ ಅನ್ನ ಸಂತರ್ಪಣೆ ಮಾಡಲು ಮುಂದಾಗಿದ್ದು ಪ್ರತಿದಿನ ಕನಿಷ್ಠ ನೂರು ಜನರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ.

2 / 6
ಒಂದು ವರ್ಷಗಳ ಕಾಲ ಈ ಅನ್ನಸಂತರ್ಪಣೆ ಮಾಡಲು ಉದ್ದೇಶಿಸಿ ಕಳೆದ ಒಂದು ತಿಂಗಳಿಂದ ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರನ್ನು ಗುರುತಿಸಿ ಅವರಿಗೆ ಪ್ರತಿದಿನ ಹನ್ನೆರಡು ಘಂಟೆಯಿಂದ ಒಂದು ಘಂಟೆಯ ವರೆಗೆ ಊಟ ಬಡಿಸುವ ಕಾರ್ಯ ಮಾಡುತ್ತಿದ್ದಾರೆ.

ಒಂದು ವರ್ಷಗಳ ಕಾಲ ಈ ಅನ್ನಸಂತರ್ಪಣೆ ಮಾಡಲು ಉದ್ದೇಶಿಸಿ ಕಳೆದ ಒಂದು ತಿಂಗಳಿಂದ ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರನ್ನು ಗುರುತಿಸಿ ಅವರಿಗೆ ಪ್ರತಿದಿನ ಹನ್ನೆರಡು ಘಂಟೆಯಿಂದ ಒಂದು ಘಂಟೆಯ ವರೆಗೆ ಊಟ ಬಡಿಸುವ ಕಾರ್ಯ ಮಾಡುತ್ತಿದ್ದಾರೆ.

3 / 6
ಆಸ್ಪತ್ರೆ ಸಿಬ್ಬಂದಿಯೇ ರೋಗಿಗಳ ಕುಟುಂಬಸ್ಥರಿಗೆ ಕೋಪನ್ ನೀಡುತ್ತಿದ್ದು ಆಸ್ಪತ್ರೆ ಹಿಂಭಾಗದಲ್ಲಿರುವ ಅನ್ನಸಂತರ್ಪಣೆ ಕೇಂದ್ರದಲ್ಲಿ ನೂರಕ್ಕೂ ಹೆಚ್ಚು ಜನರು ಪ್ರತಿ ದಿನ ಊಟ ಸೇವಿಸುತ್ತಿದ್ದಾರೆ. ವಾರದಲ್ಲಿ ಮೂರು ದಿನ ಅನ್ನ ಸಾಂಬಾರ್, ಉಪ್ಪಿನಕಾಯಿ, ಎರಡು ದಿನ ಪಲಾವ್, ಒಂದು ದಿನ ಉಪ್ಪಿಟ್ಟು ಕೇಸರಿ ಬಾತ್ ನೀಡುತ್ತಾರೆ.

ಆಸ್ಪತ್ರೆ ಸಿಬ್ಬಂದಿಯೇ ರೋಗಿಗಳ ಕುಟುಂಬಸ್ಥರಿಗೆ ಕೋಪನ್ ನೀಡುತ್ತಿದ್ದು ಆಸ್ಪತ್ರೆ ಹಿಂಭಾಗದಲ್ಲಿರುವ ಅನ್ನಸಂತರ್ಪಣೆ ಕೇಂದ್ರದಲ್ಲಿ ನೂರಕ್ಕೂ ಹೆಚ್ಚು ಜನರು ಪ್ರತಿ ದಿನ ಊಟ ಸೇವಿಸುತ್ತಿದ್ದಾರೆ. ವಾರದಲ್ಲಿ ಮೂರು ದಿನ ಅನ್ನ ಸಾಂಬಾರ್, ಉಪ್ಪಿನಕಾಯಿ, ಎರಡು ದಿನ ಪಲಾವ್, ಒಂದು ದಿನ ಉಪ್ಪಿಟ್ಟು ಕೇಸರಿ ಬಾತ್ ನೀಡುತ್ತಾರೆ.

4 / 6
ಆಸ್ಪತ್ರೆ ಸುತ್ತಲೂ ಇರುವ ಹೋಟೆಲ್​ಗಳಲ್ಲಿ ನೂರಾರು ರೂ ಕೊಟ್ಟು ಊಟ ಮಾಡುವುದಕ್ಕಿಂತ ಇಲ್ಲಿ ನೀಡುವ ಊಟ ರುಚಿಯಾಗಿದ್ದು ಊಟ ಮಾಡುವ ಜನ ಖುಷಿಯಾಗಿ ಊಟ ಮಾಡುತ್ತಿದ್ದಾರೆ. ಹಳ್ಳಿಯಿಂದ ಬರುವ ಬಡ ಜನರೆ ಹೆಚ್ಚಾಗಿ ಜಿಲ್ಲಾಸ್ಪತ್ರೆಗೆ ಬರುವುದರಿಂದ ಅವರಿಗೆ ಇಲ್ಲಿ ಸಿಗುವ ಊಟ ಉಪಯುಕ್ತವಾಗುತ್ತಿದೆ.

ಆಸ್ಪತ್ರೆ ಸುತ್ತಲೂ ಇರುವ ಹೋಟೆಲ್​ಗಳಲ್ಲಿ ನೂರಾರು ರೂ ಕೊಟ್ಟು ಊಟ ಮಾಡುವುದಕ್ಕಿಂತ ಇಲ್ಲಿ ನೀಡುವ ಊಟ ರುಚಿಯಾಗಿದ್ದು ಊಟ ಮಾಡುವ ಜನ ಖುಷಿಯಾಗಿ ಊಟ ಮಾಡುತ್ತಿದ್ದಾರೆ. ಹಳ್ಳಿಯಿಂದ ಬರುವ ಬಡ ಜನರೆ ಹೆಚ್ಚಾಗಿ ಜಿಲ್ಲಾಸ್ಪತ್ರೆಗೆ ಬರುವುದರಿಂದ ಅವರಿಗೆ ಇಲ್ಲಿ ಸಿಗುವ ಊಟ ಉಪಯುಕ್ತವಾಗುತ್ತಿದೆ.

5 / 6
ಪ್ರತಿದಿನ ನೂರಾರು ಜನ ಅನ್ನಸಂತರ್ಪಣೆ ಮಾಡುವವರಿಗೆ ಹರಸಿ ಹೋಗುತ್ತಾರೆ. ಇದರ ಜೊತೆಗೆ ಆಸ್ಪತ್ರೆ ಸಿಬ್ಬಂದಿಯೆ ಮೇಲ್ವಿಚಾರಣೆ ಮಾಡಿ ವ್ಯವಸ್ಥಿತವಾಗಿ ಊಟ ನೀಡುವುದರಿಂದ ಹಸಿದವರು ಹಾಗು ದುರುಪಯೋಗ ಆಗದೆ ಇರುವ ರೀತಿ ಅನ್ನಸಂತರ್ಪಣೆ ನಡೆಯುತ್ತಿದೆ. ಜಿಲ್ಲಾ ಆಸ್ಪತ್ರೆ ಸಹಯೋಗ ಹಾಗು ಬಹದ್ದೂರ್ ದೇಸಾಯಿ, ಅದಮ್ಯ ಚೇತನ ಫೌಂಡೆಶನ್ ಸಹಕಾರದ ಜೊತೆಗೆ ತಂದೆಯ ಸ್ಮರಣಾರ್ಥ ಪ್ರತಿದಿನ ನೂರಾರು ಜನರಿಗೆ ಅನ್ನಸಂತರ್ಪಣೆ ಮಾಡುವ ಬಹದ್ದೂರ್ ದೇಸಾಯಿ ಅವರಿಗೆ ಧನ್ಯವಾದ ಹೇಳಲೇಬೇಕು.

ಪ್ರತಿದಿನ ನೂರಾರು ಜನ ಅನ್ನಸಂತರ್ಪಣೆ ಮಾಡುವವರಿಗೆ ಹರಸಿ ಹೋಗುತ್ತಾರೆ. ಇದರ ಜೊತೆಗೆ ಆಸ್ಪತ್ರೆ ಸಿಬ್ಬಂದಿಯೆ ಮೇಲ್ವಿಚಾರಣೆ ಮಾಡಿ ವ್ಯವಸ್ಥಿತವಾಗಿ ಊಟ ನೀಡುವುದರಿಂದ ಹಸಿದವರು ಹಾಗು ದುರುಪಯೋಗ ಆಗದೆ ಇರುವ ರೀತಿ ಅನ್ನಸಂತರ್ಪಣೆ ನಡೆಯುತ್ತಿದೆ. ಜಿಲ್ಲಾ ಆಸ್ಪತ್ರೆ ಸಹಯೋಗ ಹಾಗು ಬಹದ್ದೂರ್ ದೇಸಾಯಿ, ಅದಮ್ಯ ಚೇತನ ಫೌಂಡೆಶನ್ ಸಹಕಾರದ ಜೊತೆಗೆ ತಂದೆಯ ಸ್ಮರಣಾರ್ಥ ಪ್ರತಿದಿನ ನೂರಾರು ಜನರಿಗೆ ಅನ್ನಸಂತರ್ಪಣೆ ಮಾಡುವ ಬಹದ್ದೂರ್ ದೇಸಾಯಿ ಅವರಿಗೆ ಧನ್ಯವಾದ ಹೇಳಲೇಬೇಕು.

6 / 6
Follow us
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್