Spandana Death Anniversary: ಸ್ಪಂದನಾ ನಗು ಮರೆಯಾಗಿ ಒಂದು ವರ್ಷ; ವಿಜಯ್ ರಾಘವೇಂದ್ರ ಭಾವುಕ ಪೋಸ್ಟ್

Updated on: Aug 06, 2024 | 10:36 AM

ಸ್ಪಂದನಾ ಪುಣ್ಯತಿಥಿ: ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ನಿಧನ ಹೊಂದಿ ಒಂದು ವರ್ಷ ಕಳೆದಿದೆ. ಕಳೆದ ವರ್ಷ ಆಗಸ್ಟ್ 6ರಂದು ಅವರು ಬ್ಯಾಂಕಾಕ್​ನಲ್ಲಿ ನಿಧನ ಹೊಂದಿದರು. ಅವರನ್ನು ಕಳೆದುಕೊಂಡ ಕುಟುಂಬ ಈಗಲೂ ನೋವಿನಲ್ಲೇ ಇದೆ.

1 / 5
ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್​ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.

ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್​ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.

2 / 5
ವಿಜಯ್ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಪತ್ನಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಮೂಲಕ ಅವರು ಪತ್ನಿ ಬಗ್ಗೆ ಇರುವ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.

ವಿಜಯ್ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಪತ್ನಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಮೂಲಕ ಅವರು ಪತ್ನಿ ಬಗ್ಗೆ ಇರುವ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.

3 / 5
ಇಂದು ಸ್ಪಂದನಾ ಪುಣ್ಯತಿಥಿ. ಹೀಗಾಗಿ ಸ್ಪಂದನಾ ಅವರ ಫೋಟೋನ ವಿಜಯ್ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಚಿನ್ನ, ಮೌನದಲ್ಲಿ ಅರಳಿದ ನಗು ನಿನ್ನದು. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದು’ ಎಂದು ಬರೆದುಕೊಂಡಿದ್ದಾರೆ.

ಇಂದು ಸ್ಪಂದನಾ ಪುಣ್ಯತಿಥಿ. ಹೀಗಾಗಿ ಸ್ಪಂದನಾ ಅವರ ಫೋಟೋನ ವಿಜಯ್ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಚಿನ್ನ, ಮೌನದಲ್ಲಿ ಅರಳಿದ ನಗು ನಿನ್ನದು. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದು’ ಎಂದು ಬರೆದುಕೊಂಡಿದ್ದಾರೆ.

4 / 5
ಸ್ಪಂದನಾ ಹಾಗೂ ವಿಜಯ್ ಅವರದ್ದು ಲವ್ ಮ್ಯಾರೇಜ್. ಅನೇಕ ವರ್ಷಗಳ ಕಾಲ ಪ್ರೀತಿಸಿ, ಆ ಬಳಿಕ ಮನೆಯವರ ಒಪ್ಪಿಗೆ ಪಡೆದು ಇವರು ಮದುವೆ ಆದರು.

ಸ್ಪಂದನಾ ಹಾಗೂ ವಿಜಯ್ ಅವರದ್ದು ಲವ್ ಮ್ಯಾರೇಜ್. ಅನೇಕ ವರ್ಷಗಳ ಕಾಲ ಪ್ರೀತಿಸಿ, ಆ ಬಳಿಕ ಮನೆಯವರ ಒಪ್ಪಿಗೆ ಪಡೆದು ಇವರು ಮದುವೆ ಆದರು.

5 / 5
ಸ್ಪಂದನಾ ಅವರು ಬ್ಯಾಂಕಾಕ್​ಗೆ ತೆರಳಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದರು. ಕಡಿಮೆ ರಕ್ತದೊತ್ತಡದಿಂದ ಅವರು ಸತ್ತಿದ್ದಾರೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುತ್ತಾರೆ.

ಸ್ಪಂದನಾ ಅವರು ಬ್ಯಾಂಕಾಕ್​ಗೆ ತೆರಳಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದರು. ಕಡಿಮೆ ರಕ್ತದೊತ್ತಡದಿಂದ ಅವರು ಸತ್ತಿದ್ದಾರೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುತ್ತಾರೆ.

Published On - 10:29 am, Tue, 6 August 24

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us