AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಇಂದಿರಾ ಕ್ಯಾಂಟೀನ್‌ನಲ್ಲಿ ವಿಶೇಷ ಅಡುಗೆ: ಹೋಳಿಗೆ ಊಟ ಸವಿದ ವಿದ್ಯಾರ್ಥಿನಿಯರು, ಇಲ್ಲಿದೆ ಫೋಟೋಸ್​

ಅದು ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಬಡವರು, ನಿರ್ಗತಿಕರು ಸೇರಿ ಎಲ್ಲರ ಹಸಿವು ನೀಗಿಸಿದ್ದ, ಜೊತೆಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಮೈಲೇಜ್ ಕೊಟ್ಟಿದ್ದ ಇಂದಿರಾ ಕ್ಯಾಂಟೀನ್ ಮತ್ತೆ ಇದೀಗ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿದ್ದಕ್ಕೆ ಸ್ಪೇಷಲ್ ಸಿಹಿ ಊಟ ಬಡಿಸಲಾಯ್ತು. ಆ ಬಗ್ಗೆ ಸ್ಟೋರಿ ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
|

Updated on: May 21, 2023 | 10:45 AM

Share
ಘಮಘಮಿಸುವ ಹೋಳಿಗೆ, ಸಾಲಾಗಿ ನಿಂತು ಊಟ ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು. ಸುಚಿ-ರುಚಿಯಾಗಿ ಅಡುಗೆ ತಯಾರಿಸಿ, ಜನತೆಗೆ ಬಡಿಸೋಕೆ ಸಿದ್ದತೆ ನಡೆಸಿರುವ ಬಾಣಸಿಗರು. ಅಂದ ಹಾಗೆ ಈ ದೃಶ್ಯಗಳು ಕಂಡುಬಂದಿದ್ದು ಬಾಗಲಕೋಟೆ ನಗರದ ಇಂದಿರಾ ಕ್ಯಾಂಟೀನ್‌ನಲ್ಲಿ.

ಘಮಘಮಿಸುವ ಹೋಳಿಗೆ, ಸಾಲಾಗಿ ನಿಂತು ಊಟ ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು. ಸುಚಿ-ರುಚಿಯಾಗಿ ಅಡುಗೆ ತಯಾರಿಸಿ, ಜನತೆಗೆ ಬಡಿಸೋಕೆ ಸಿದ್ದತೆ ನಡೆಸಿರುವ ಬಾಣಸಿಗರು. ಅಂದ ಹಾಗೆ ಈ ದೃಶ್ಯಗಳು ಕಂಡುಬಂದಿದ್ದು ಬಾಗಲಕೋಟೆ ನಗರದ ಇಂದಿರಾ ಕ್ಯಾಂಟೀನ್‌ನಲ್ಲಿ.

1 / 8
ಹೌದು, ನಿನ್ನೆ(ಮೇ.20) ರಾಜ್ಯದದಲ್ಲಿ  ಸಿಎಂ ಆಗಿ ಸಿದ್ದರಾಮಯ್ಯ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆ ಹಿನ್ನೆಲೆ ಇಂದಿರಾ ಕ್ಯಾಂಟೀನ್‌ನಲ್ಲಿ ಇವತ್ತು ನಿತ್ಯದ ಊಟದ ಸ್ಪೇಷಲ್ ಆಗಿ ಹೋಳಿಗೆ ಕೊಡಲಾಯಿತು.

ಹೌದು, ನಿನ್ನೆ(ಮೇ.20) ರಾಜ್ಯದದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆ ಹಿನ್ನೆಲೆ ಇಂದಿರಾ ಕ್ಯಾಂಟೀನ್‌ನಲ್ಲಿ ಇವತ್ತು ನಿತ್ಯದ ಊಟದ ಸ್ಪೇಷಲ್ ಆಗಿ ಹೋಳಿಗೆ ಕೊಡಲಾಯಿತು.

2 / 8
ಬೆಳಿಗ್ಗೆ ಉಪಹಾರಕ್ಕೆ 5 ರೂ ಗೆ ಮೂರು ಇಡ್ಲಿ, ಮಧ್ಯಾಹ್ನ ಊಟಕ್ಕೆ ಅನ್ನ ಸಾಂಬಾರ್​ ಜೊತೆಗೆ ಮೊಸರನ್ನ ಕೊಡಲಾಗುತ್ತೆ. ಆದರೆ ಇವತ್ತು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಅಲ್ಲದೇ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ. ಹಾಗಾಗಿ, ಇಂದಿರಾ ಕ್ಯಾಂಟೀನ್‌ನಲ್ಲಿ ಹೋಳಿಗೆ ನೀಡಿ ಬರುವ ಜನತೆಗೆ ಸಿಹಿ ಊಟ ಕೊಡಲಾಯ್ತು.

ಬೆಳಿಗ್ಗೆ ಉಪಹಾರಕ್ಕೆ 5 ರೂ ಗೆ ಮೂರು ಇಡ್ಲಿ, ಮಧ್ಯಾಹ್ನ ಊಟಕ್ಕೆ ಅನ್ನ ಸಾಂಬಾರ್​ ಜೊತೆಗೆ ಮೊಸರನ್ನ ಕೊಡಲಾಗುತ್ತೆ. ಆದರೆ ಇವತ್ತು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಅಲ್ಲದೇ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ. ಹಾಗಾಗಿ, ಇಂದಿರಾ ಕ್ಯಾಂಟೀನ್‌ನಲ್ಲಿ ಹೋಳಿಗೆ ನೀಡಿ ಬರುವ ಜನತೆಗೆ ಸಿಹಿ ಊಟ ಕೊಡಲಾಯ್ತು.

3 / 8
2013 ರಲ್ಲಿ ಸಿದ್ದರಾಮಯ್ಯ ಮೊದಲ ಬಾರಿಗೆ ಸಿಎಂ ಆದಾಗ ಕೊಟ್ಟ 168 ಭರವಸೆಗಳಲ್ಲಿ ಅತೀ ಹೆಚ್ಚು ಮಹತ್ವ ಪಡೆದುಕೊಂಡಿದ್ದು, ಬಡವರು, ನಿರ್ಗತಿಕರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್ ನಿರೀಕ್ಷೆಯಂತೆ ಎಲ್ಲ ವರ್ಗದ ಜನರ ಹಸಿವು ನೀಗಿಸಿತ್ತು.

2013 ರಲ್ಲಿ ಸಿದ್ದರಾಮಯ್ಯ ಮೊದಲ ಬಾರಿಗೆ ಸಿಎಂ ಆದಾಗ ಕೊಟ್ಟ 168 ಭರವಸೆಗಳಲ್ಲಿ ಅತೀ ಹೆಚ್ಚು ಮಹತ್ವ ಪಡೆದುಕೊಂಡಿದ್ದು, ಬಡವರು, ನಿರ್ಗತಿಕರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್ ನಿರೀಕ್ಷೆಯಂತೆ ಎಲ್ಲ ವರ್ಗದ ಜನರ ಹಸಿವು ನೀಗಿಸಿತ್ತು.

4 / 8
ಆ ನಂತರ ಸಮ್ಮಿಶ್ರ ಸರ್ಕಾರದಲ್ಲಿ ಈ ಯೋಜನೆ ಮುಂದುವರೆಸಲಾಗಿತ್ತಾದ್ರೂ, ಬಿಜೆಪಿ ಆಡಳಿತದಲ್ಲಿ ಕೆಲವು ಕಡೆಗಳಲ್ಲಿ ಬಂದ್ ಮಾಡಿಸಲಾಗಿತ್ತು. ಸದ್ಯ ಸಿದ್ದರಾಮಯ್ಯ ಘೋಷಿಸಿದ್ದ ಯೋಜನೆ ಮತ್ತೆ ಮುನ್ನೆಲೆಗೆ ಬಂದಿದೆ. 5ರೂಗೆ ಉಪಹಾರ, 10 ರೂ ಗೆ ಊಟ, ಎಂತಹ ಬಡವರಾದ್ರೂ ಸಹ ಇಷ್ಟು ಹಣದಲ್ಲಿ ಮೂರು ಹೊತ್ತು ಹೊಟ್ಟೆ ತುಂಬಿಸಿಕೊಳ್ಳಬಹುದಾಗಿದೆ.

ಆ ನಂತರ ಸಮ್ಮಿಶ್ರ ಸರ್ಕಾರದಲ್ಲಿ ಈ ಯೋಜನೆ ಮುಂದುವರೆಸಲಾಗಿತ್ತಾದ್ರೂ, ಬಿಜೆಪಿ ಆಡಳಿತದಲ್ಲಿ ಕೆಲವು ಕಡೆಗಳಲ್ಲಿ ಬಂದ್ ಮಾಡಿಸಲಾಗಿತ್ತು. ಸದ್ಯ ಸಿದ್ದರಾಮಯ್ಯ ಘೋಷಿಸಿದ್ದ ಯೋಜನೆ ಮತ್ತೆ ಮುನ್ನೆಲೆಗೆ ಬಂದಿದೆ. 5ರೂಗೆ ಉಪಹಾರ, 10 ರೂ ಗೆ ಊಟ, ಎಂತಹ ಬಡವರಾದ್ರೂ ಸಹ ಇಷ್ಟು ಹಣದಲ್ಲಿ ಮೂರು ಹೊತ್ತು ಹೊಟ್ಟೆ ತುಂಬಿಸಿಕೊಳ್ಳಬಹುದಾಗಿದೆ.

5 / 8
ಇದು ಕಾಲೇಜು ಬಡ ವಿದ್ಯಾರ್ಥಿಗಳಿಗಂತೂ ಬಾರಿ ಆಸರೆಯಾಗಿತ್ತು. ಇದೀಗ ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ದೊರೆಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಆ ಹಿನ್ನೆಲೆ ಇಂದಿರಾ ಕ್ಯಾಂಟೀನ್ ಗುತ್ತಿಗೆದಾರ ಧಾರವಾಡ  ಮೂಲದ ಮಯೂರ ಮೋರೆ ಇವತ್ತು ಸಿದ್ದರಾಮಯ್ಯ ಮತ್ತೆ ಸಿಎಂ ಆಗಿದ್ದಕ್ಕೆ ಇಂದಿರಾ ಕ್ಯಾಂಟೀನ್ ನಲ್ಲಿ ಹೋಳಿಗೆ ಊಟ ಮಾಡಿಸಿದ್ದಾರೆ.

ಇದು ಕಾಲೇಜು ಬಡ ವಿದ್ಯಾರ್ಥಿಗಳಿಗಂತೂ ಬಾರಿ ಆಸರೆಯಾಗಿತ್ತು. ಇದೀಗ ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ದೊರೆಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಆ ಹಿನ್ನೆಲೆ ಇಂದಿರಾ ಕ್ಯಾಂಟೀನ್ ಗುತ್ತಿಗೆದಾರ ಧಾರವಾಡ ಮೂಲದ ಮಯೂರ ಮೋರೆ ಇವತ್ತು ಸಿದ್ದರಾಮಯ್ಯ ಮತ್ತೆ ಸಿಎಂ ಆಗಿದ್ದಕ್ಕೆ ಇಂದಿರಾ ಕ್ಯಾಂಟೀನ್ ನಲ್ಲಿ ಹೋಳಿಗೆ ಊಟ ಮಾಡಿಸಿದ್ದಾರೆ.

6 / 8
ಸಿದ್ದರಾಮಯ್ಯನವರ ಯೋಜನೆ ಬಡವರು, ಅದ್ರಲ್ಲೂ ಬಡ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಿದೆ. ಮತ್ತೆ ಸಿದ್ದು ಸಿಎಂ ಆಗಿದ್ದು ಖುಷಿಯಾಗಿದೆ. ಐದು ವರ್ಷ ಉತ್ತಮ ಆಡಳಿತ ಜೊತೆಗೆ ಬಡವರ ಪರ ಆಡಳಿತ ಕೊಡಲಿ ಎಂದು ಆಶಯ ವ್ಯಕ್ತಪಡಿಸಿದ್ರು.

ಸಿದ್ದರಾಮಯ್ಯನವರ ಯೋಜನೆ ಬಡವರು, ಅದ್ರಲ್ಲೂ ಬಡ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಿದೆ. ಮತ್ತೆ ಸಿದ್ದು ಸಿಎಂ ಆಗಿದ್ದು ಖುಷಿಯಾಗಿದೆ. ಐದು ವರ್ಷ ಉತ್ತಮ ಆಡಳಿತ ಜೊತೆಗೆ ಬಡವರ ಪರ ಆಡಳಿತ ಕೊಡಲಿ ಎಂದು ಆಶಯ ವ್ಯಕ್ತಪಡಿಸಿದ್ರು.

7 / 8
ಒಟ್ಟಿನಲ್ಲಿ, ಸಿದ್ದರಾಮಯ್ಯ ಎರಡನೆ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇತ್ತ ಸಿದ್ದು ಘೋಷಿಸಿದ್ದ ಇಂದಿರಾ ಕ್ಯಾಂಟೀನ್‌ನಲ್ಲಿ ಹೋಳಿಗೆ ಕೊಡುವ ಮೂಲಕ ಸಿದ್ದು ಮತ್ತೆ ಸಿಎಂ ಆಗಿದ್ದಕ್ಕೆ  ಸಾರ್ವಜನಿಕರಿಗೆ ಸಿಹಿ ಕೊಟ್ಟಿದ್ದು ವಿಶೇಷವಾಗಿತ್ತು.

ಒಟ್ಟಿನಲ್ಲಿ, ಸಿದ್ದರಾಮಯ್ಯ ಎರಡನೆ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇತ್ತ ಸಿದ್ದು ಘೋಷಿಸಿದ್ದ ಇಂದಿರಾ ಕ್ಯಾಂಟೀನ್‌ನಲ್ಲಿ ಹೋಳಿಗೆ ಕೊಡುವ ಮೂಲಕ ಸಿದ್ದು ಮತ್ತೆ ಸಿಎಂ ಆಗಿದ್ದಕ್ಕೆ ಸಾರ್ವಜನಿಕರಿಗೆ ಸಿಹಿ ಕೊಟ್ಟಿದ್ದು ವಿಶೇಷವಾಗಿತ್ತು.

8 / 8
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ