AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸ ಪ್ರಸಿದ್ದ ಚಿಕ್ಕ ಮಧುರೆ ಶನಿಮಹಾತ್ಮನಿಗೆ ವಿಶೇಷ ಪೂಜೆ; ಶ್ರಾವಣ ಮಾಸದ ಮೊದಲ ಶನಿವಾರಕ್ಕೆ ಹರಿದು ಬಂದ ಭಕ್ತರು

ಶನಿವಾರ ಬಂತೆಂದರೆ ಬೆಳ್ಳಂ ಬೆಳಗ್ಗೆ ಭಕ್ತರು ದೇವಾಲಯಗಳತ್ತ ಬರುವುದು ಸಹಜ. ಇನ್ನು ಶ್ರಾವಣ ಮಾಸದ ಮೊದಲ ಶನಿವಾರ ಅಂದರೆ ಹೇಳಬೇಕಾ, ವಿಶೇಷ ಪೂಜೆ ಜೊತೆಗೆ ಅಲಂಕಾರ ಕಾಮನ್. ಹೀಗಾಗೆ ಇಂದು ಸಹ ಶ್ರಾವಣ ಮಾಸದ ಮೊದಲ ಶನಿವಾರದ ಪ್ರಯುಕ್ತ ಭಕ್ತರ ದಂಡೆ ಹರಿದು ಬಂದಿದ್ದು, ಸರತಿ ಸಾಲಿನಲ್ಲಿ ಗಂಟೆ ಗಟ್ಟಲೆ ನಿಂತು ದರ್ಶನ ಪಡೆದು ಬೂಂದಿ ಪಾಯಸ ಸವಿದು ಪುನೀತರಾದರು.

ಕಿರಣ್ ಹನುಮಂತ್​ ಮಾದಾರ್
|

Updated on: Aug 10, 2024 | 7:00 PM

Share
ದೇವಾಲಯದ ಆವರಣದಲ್ಲಿ ದರ್ಶನಕ್ಕಾಗಿ ಉದ್ದುದ್ದ ಕ್ಯೂ ನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಸಾವಿರಾರು ಜನ ಭಕ್ತರು. ವಿಶೇಷ ಹೂವಿನ ಅಲಂಕಾರದ ಜೊತೆಗೆ ಪೂಜೆ ಅಭಿಷೇಕದಿಂದ ಭಕ್ತರಿಗೆ ದರ್ಶನ ನೀಡುತ್ತಿರುವ ಶನಿಮಹಾತ್ಮ. ಮತ್ತೊಂದೆಡೆ ಶ್ರಾವಣ ಮಾಸದ ಮೊದಲ ಶನಿವಾರ ಬೂಂದಿ ಪಾಯಸ ಸವಿದು ಉಘೇ ಉಘೇ ಅಂತಿರುವ ಭಕ್ತಾಧಿಗಳು.

ದೇವಾಲಯದ ಆವರಣದಲ್ಲಿ ದರ್ಶನಕ್ಕಾಗಿ ಉದ್ದುದ್ದ ಕ್ಯೂ ನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಸಾವಿರಾರು ಜನ ಭಕ್ತರು. ವಿಶೇಷ ಹೂವಿನ ಅಲಂಕಾರದ ಜೊತೆಗೆ ಪೂಜೆ ಅಭಿಷೇಕದಿಂದ ಭಕ್ತರಿಗೆ ದರ್ಶನ ನೀಡುತ್ತಿರುವ ಶನಿಮಹಾತ್ಮ. ಮತ್ತೊಂದೆಡೆ ಶ್ರಾವಣ ಮಾಸದ ಮೊದಲ ಶನಿವಾರ ಬೂಂದಿ ಪಾಯಸ ಸವಿದು ಉಘೇ ಉಘೇ ಅಂತಿರುವ ಭಕ್ತಾಧಿಗಳು.

1 / 7
ಹೌದು, ಅಂದಹಾಗೆ ಇಂದು ಶ್ರಾವಣ ಮಾಸದ ಮೊದಲ ಶನಿವಾರದ ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀಕ್ಷೇತ್ರ ಚಿಕ್ಕ ಮಧುರೆ ಶನಿಮಹಾತ್ಮನ ಸನ್ನಿಧಿಗೆ ಭಕ್ತರ ದಂಡೆ ಹರಿದು ಬಂದಿತ್ತು.

ಹೌದು, ಅಂದಹಾಗೆ ಇಂದು ಶ್ರಾವಣ ಮಾಸದ ಮೊದಲ ಶನಿವಾರದ ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀಕ್ಷೇತ್ರ ಚಿಕ್ಕ ಮಧುರೆ ಶನಿಮಹಾತ್ಮನ ಸನ್ನಿಧಿಗೆ ಭಕ್ತರ ದಂಡೆ ಹರಿದು ಬಂದಿತ್ತು.

2 / 7
ಶ್ರಾವಣ ಮಾಸದ ಮೊದಲ ಶನಿವಾರ ಶನಿಮಹಾತ್ಮನ ದರ್ಶನ ಪಡೆದರೆ ಒಳ್ಳೆಯದು ಎಂದು ಅನಾಧಿಕಾಲದಿಂದಲೂ ಚಿಕ್ಕ ಮಧುರೆ ಶನಿಮಹಾತ್ಮನ ಸನ್ನಿಧಿಗೆ ಸಾವಿರಾರು ಜನ ಭಕ್ತರು ಬರುತ್ತಿದ್ದು, ಇಂದು ಸಹ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರು.

ಶ್ರಾವಣ ಮಾಸದ ಮೊದಲ ಶನಿವಾರ ಶನಿಮಹಾತ್ಮನ ದರ್ಶನ ಪಡೆದರೆ ಒಳ್ಳೆಯದು ಎಂದು ಅನಾಧಿಕಾಲದಿಂದಲೂ ಚಿಕ್ಕ ಮಧುರೆ ಶನಿಮಹಾತ್ಮನ ಸನ್ನಿಧಿಗೆ ಸಾವಿರಾರು ಜನ ಭಕ್ತರು ಬರುತ್ತಿದ್ದು, ಇಂದು ಸಹ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರು.

3 / 7
ಜೊತೆಗೆ ಶ್ರಾವಣ ಶನಿವಾರವಾದ ಕಾರಣ ಬೆಳಗ್ಗೆಯಿಂದಲೆ ದೇವಾಲಯದಲ್ಲಿ ವಿಶೇಷ ಪೂಜೆಯನ್ನ ಹಮ್ಮಿಕೊಂಡಿದ್ದು, ದೇವಾಲಯದ ಆರವಣದಲ್ಲಿ ವಿಶೇಷ ಹೂ ಮತ್ತು ಹಣ್ಣುಗಳಿಂದ ಮಾಡಿದ್ದ ಅಲಂಕಾರ ಭಕ್ತರನ್ನ ಸೆಳೆಯಿತು.

ಜೊತೆಗೆ ಶ್ರಾವಣ ಶನಿವಾರವಾದ ಕಾರಣ ಬೆಳಗ್ಗೆಯಿಂದಲೆ ದೇವಾಲಯದಲ್ಲಿ ವಿಶೇಷ ಪೂಜೆಯನ್ನ ಹಮ್ಮಿಕೊಂಡಿದ್ದು, ದೇವಾಲಯದ ಆರವಣದಲ್ಲಿ ವಿಶೇಷ ಹೂ ಮತ್ತು ಹಣ್ಣುಗಳಿಂದ ಮಾಡಿದ್ದ ಅಲಂಕಾರ ಭಕ್ತರನ್ನ ಸೆಳೆಯಿತು.

4 / 7
ಶ್ರಾವಣ ಮಾಸದಲ್ಲಿ ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಗ್ರಾಮಾಂತರ ಮತ್ತು ಮಾಗಡಿ ಕಡೆಯಿಂದಲು ಶನಿಮಹಾತ್ಮನ ಸನ್ನಿಧಿಗೆ ಭಕ್ತರು ಬರುವ ಕಾರಣ ದೇವಾಲಯದಲ್ಲಿ ಮಳೆ ಮತ್ತು ಬಿಸಿಲಿಂದ ಅಡ್ಡಿಯಾಗದಂತೆ ಶೀಟ್​ಗಳನ್ನ ಹಾಕಿ ಸರತಿ ಸಾಲಿಗೆ ಮೂಲ ಸೌಕರ್ಯಗಳನ್ನ ಮಾಡಿದರು.

ಶ್ರಾವಣ ಮಾಸದಲ್ಲಿ ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಗ್ರಾಮಾಂತರ ಮತ್ತು ಮಾಗಡಿ ಕಡೆಯಿಂದಲು ಶನಿಮಹಾತ್ಮನ ಸನ್ನಿಧಿಗೆ ಭಕ್ತರು ಬರುವ ಕಾರಣ ದೇವಾಲಯದಲ್ಲಿ ಮಳೆ ಮತ್ತು ಬಿಸಿಲಿಂದ ಅಡ್ಡಿಯಾಗದಂತೆ ಶೀಟ್​ಗಳನ್ನ ಹಾಕಿ ಸರತಿ ಸಾಲಿಗೆ ಮೂಲ ಸೌಕರ್ಯಗಳನ್ನ ಮಾಡಿದರು.

5 / 7
ಜೊತೆಗೆ ಶನಿವಾರ ಭಕ್ತರು ಉಪವಾಸದಲ್ಲಿ ದೇವಸ್ಥಾನಕ್ಕೆ ಬರ್ತಾರೆ ಎಂದು ದೇವಾಲಯದ ಬಳಿ ಅನ್ನಸಂತರ್ಪಣೆಯನ್ನು ಮಾಡಿದ್ದು, ಬೂಂದಿ ಪಾಯಸ, ಮಜ್ಜಿಗೆ, ಅನ್ನ ಸಾಂಬಾರ್​ನ್ನು ಭಕ್ತರು ಸವಿದರು. ಇನ್ನು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಕಾರಣ ಕೆಲ ಕಾಲ ನೆಲಮಂಗಲ-ದೊಡ್ಡಬಳ್ಳಾಪುರ ರಸ್ತೆಯಲ್ಲೂ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳನ್ನ ಕಳಿಸಲು ಪೊಲೀಸರು ಹರಸಾಹಸ ಪಟ್ಟರು.

ಜೊತೆಗೆ ಶನಿವಾರ ಭಕ್ತರು ಉಪವಾಸದಲ್ಲಿ ದೇವಸ್ಥಾನಕ್ಕೆ ಬರ್ತಾರೆ ಎಂದು ದೇವಾಲಯದ ಬಳಿ ಅನ್ನಸಂತರ್ಪಣೆಯನ್ನು ಮಾಡಿದ್ದು, ಬೂಂದಿ ಪಾಯಸ, ಮಜ್ಜಿಗೆ, ಅನ್ನ ಸಾಂಬಾರ್​ನ್ನು ಭಕ್ತರು ಸವಿದರು. ಇನ್ನು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಕಾರಣ ಕೆಲ ಕಾಲ ನೆಲಮಂಗಲ-ದೊಡ್ಡಬಳ್ಳಾಪುರ ರಸ್ತೆಯಲ್ಲೂ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳನ್ನ ಕಳಿಸಲು ಪೊಲೀಸರು ಹರಸಾಹಸ ಪಟ್ಟರು.

6 / 7
ಒಟ್ಟಾರೆ ಶ್ರಾವಣ ಮಾಸದ ಮೊದಲ ಶನಿವಾರ ವಿವಿಧ ಮೂಲೆಗಳಿಂದ ಭಕ್ತರ ದಂಡೆ ದೇವಸ್ಥಾನದತ್ತ ಆಗಮಿಸಿ ದೇವರ ದರ್ಶನ ಪಡೆಯುವ ಮೂಲಕ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥಿಸುವ ಮೂಲಕ ಭಕ್ತಿ ಬಾವವನ್ನ ಮೆರೆದಿದಂತೂ ಸುಳ್ಳಲ್ಲ.

ಒಟ್ಟಾರೆ ಶ್ರಾವಣ ಮಾಸದ ಮೊದಲ ಶನಿವಾರ ವಿವಿಧ ಮೂಲೆಗಳಿಂದ ಭಕ್ತರ ದಂಡೆ ದೇವಸ್ಥಾನದತ್ತ ಆಗಮಿಸಿ ದೇವರ ದರ್ಶನ ಪಡೆಯುವ ಮೂಲಕ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥಿಸುವ ಮೂಲಕ ಭಕ್ತಿ ಬಾವವನ್ನ ಮೆರೆದಿದಂತೂ ಸುಳ್ಳಲ್ಲ.

7 / 7
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ