‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಹೊಸ ಧಾರಾವಾಹಿ ‘ನೀ ಇರಲು ಜೊತೆಯಲ್ಲಿ’

Updated on: Aug 06, 2025 | 8:50 PM

‘ನೀ ಇರಲು ಜೊತೆಯಲ್ಲಿ’ ಧಾರಾವಾಹಿಯಲ್ಲಿ ಪವನ್ ರವೀಂದ್ರ, ಸಲೋಮಿ ಡಿಸೋಜಾ ಮುಂತಾದವರು ನಟಿಸುತ್ತಿದ್ದಾರೆ. ಆಗಸ್ಟ್ 11ರಿಂದ ಪ್ರತಿ ದಿನ ರಾತ್ರಿ 7 ಗಂಟೆಗೆ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಈ ಸೀರಿಯಲ್ ಪ್ರಸಾರ ಆಗಲಿದೆ. ಫ್ಯಾಮಿಲಿ ಕಹಾನಿ ಈ ಸೀರಿಯಲ್​ನಲ್ಲಿದೆ. ಹೊಸ ಧಾರಾವಾಹಿ ನೋಡಲು ಪ್ರೇಕ್ಷಕರು ಕಾದಿದ್ದಾರೆ.

1 / 5
ಪ್ರೇಕ್ಷಕರನ್ನು ರಂಜಿಸಲು ಹೊಸ ಹೊಸ ಧಾರಾವಾಹಿಗಳು ಬರುತ್ತಲೇ ಇವೆ. ಈಗ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಹೊಸ ಸೀರಿಯಲ್ ‘ನೀ ಇರಲು ಜೊತೆಯಲ್ಲಿ’ ಪ್ರಸಾರಕ್ಕೆ ಸಕಲ ತಯಾರಿ ನಡೆದಿದೆ.

ಪ್ರೇಕ್ಷಕರನ್ನು ರಂಜಿಸಲು ಹೊಸ ಹೊಸ ಧಾರಾವಾಹಿಗಳು ಬರುತ್ತಲೇ ಇವೆ. ಈಗ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಹೊಸ ಸೀರಿಯಲ್ ‘ನೀ ಇರಲು ಜೊತೆಯಲ್ಲಿ’ ಪ್ರಸಾರಕ್ಕೆ ಸಕಲ ತಯಾರಿ ನಡೆದಿದೆ.

2 / 5
‘ಮುದ್ದುಲಕ್ಷೀ’, ‘ಮರಳಿ ಮನಸಾಗಿದೆ’, ‘ಮರಳಿ ಬಂದಳು ಸೀತೆ’ ಧಾರಾವಾಹಿಗಳನ್ನು ನಿರ್ದೇಶಿಸಿರುವ ಧರಣಿ ಜಿ. ರಮೇಶ್ ಅವರು ‘ನೀ ಇರಲು ಜೊತೆಯಲ್ಲಿ’ ಸೀರಿಯಲ್ ನಿರ್ಮಿಸಿ, ನಿರ್ದೇಶನ ಮಾಡುತ್ತಿದ್ದಾರೆ.

‘ಮುದ್ದುಲಕ್ಷೀ’, ‘ಮರಳಿ ಮನಸಾಗಿದೆ’, ‘ಮರಳಿ ಬಂದಳು ಸೀತೆ’ ಧಾರಾವಾಹಿಗಳನ್ನು ನಿರ್ದೇಶಿಸಿರುವ ಧರಣಿ ಜಿ. ರಮೇಶ್ ಅವರು ‘ನೀ ಇರಲು ಜೊತೆಯಲ್ಲಿ’ ಸೀರಿಯಲ್ ನಿರ್ಮಿಸಿ, ನಿರ್ದೇಶನ ಮಾಡುತ್ತಿದ್ದಾರೆ.

3 / 5
ಈ ಧಾರಾವಾಹಿಯಲ್ಲಿ ನಾಯಕನಾಗಿ ಪವನ್ ರವೀಂದ್ರ ಅವರು ನಟಿಸುತ್ತಿದ್ದಾರೆ. ನಾಯಕಿಯ ಪಾತ್ರದಲ್ಲಿ ಸಲೋಮಿ ಡಿಸೋಜ ಅವರು ಅಭಿನಯಿಸುತ್ತಿದ್ದಾರೆ. ಫ್ಯಾಮಿಲಿ ಕಹಾನಿ ಈ ಧಾರಾವಾಹಿಯಲ್ಲಿ ಇದೆ.

ಈ ಧಾರಾವಾಹಿಯಲ್ಲಿ ನಾಯಕನಾಗಿ ಪವನ್ ರವೀಂದ್ರ ಅವರು ನಟಿಸುತ್ತಿದ್ದಾರೆ. ನಾಯಕಿಯ ಪಾತ್ರದಲ್ಲಿ ಸಲೋಮಿ ಡಿಸೋಜ ಅವರು ಅಭಿನಯಿಸುತ್ತಿದ್ದಾರೆ. ಫ್ಯಾಮಿಲಿ ಕಹಾನಿ ಈ ಧಾರಾವಾಹಿಯಲ್ಲಿ ಇದೆ.

4 / 5
‘ಅಮೃತವರ್ಷಿಣಿ’ ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿದ್ದ ರಜಿನಿ ಅವರು ಈಗ ಊರ್ಮಿಳಾ ದಿವಾನ್ ಹೆಸರಿನಲ್ಲಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಮೋಹನ್ ಸೇರಿದಂತೆ ಅನೇಕ ನಟ-ನಟಿಯರು ಪಾತ್ರವರ್ಗದಲ್ಲಿ ಇದ್ದಾರೆ.

‘ಅಮೃತವರ್ಷಿಣಿ’ ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿದ್ದ ರಜಿನಿ ಅವರು ಈಗ ಊರ್ಮಿಳಾ ದಿವಾನ್ ಹೆಸರಿನಲ್ಲಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಮೋಹನ್ ಸೇರಿದಂತೆ ಅನೇಕ ನಟ-ನಟಿಯರು ಪಾತ್ರವರ್ಗದಲ್ಲಿ ಇದ್ದಾರೆ.

5 / 5
ಸ್ವಾತಂತ್ರ ಹೋರಾಟಗಾರನ ಕುಟುಂಬದಲ್ಲಿ ಬೆಳೆದ ನಾಯಕ ಕೃಷ್ಣ. ಮನೆ ಮಂದಿಯರನ್ನೆಲ್ಲಾ ತನ್ನ ಕೈಗೊಂಬೆ ಆಗಿಸಿಕೊಂಡ ಅತ್ತಿಗೆ. ಯಾರನ್ನು ನೋಯಿಸದ ಮಾತೃ ಹೃದಯಿ ರಚನಾ ಈ ಧಾರಾವಾಹಿಯ ಮುಖ್ಯ ಪಾತ್ರಗಳು.

ಸ್ವಾತಂತ್ರ ಹೋರಾಟಗಾರನ ಕುಟುಂಬದಲ್ಲಿ ಬೆಳೆದ ನಾಯಕ ಕೃಷ್ಣ. ಮನೆ ಮಂದಿಯರನ್ನೆಲ್ಲಾ ತನ್ನ ಕೈಗೊಂಬೆ ಆಗಿಸಿಕೊಂಡ ಅತ್ತಿಗೆ. ಯಾರನ್ನು ನೋಯಿಸದ ಮಾತೃ ಹೃದಯಿ ರಚನಾ ಈ ಧಾರಾವಾಹಿಯ ಮುಖ್ಯ ಪಾತ್ರಗಳು.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us