ಬೆಂಗಳೂರಿನಲ್ಲಿ ಟ್ರಾಫಿಕ್​ ತಲೆಬಿಸಿ ಮಧ್ಯೆ ಬೀದಿ ದನಗಳ ಉಪಟಳ: ಬಿಬಿಎಂಪಿ ನಿರ್ಲಕ್ಷ್ಯ

Vinayak Hanamant Gurav Edited By:

Updated on: Aug 21, 2024 | 9:48 PM

ಬೆಂಗಳೂರಿನಲ್ಲಿ ಬೀದಿ ದನಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಬಗ್ಗೆ ಟಿವಿ9 ನಿರಂತರ ವರದಿ ಪ್ರಸಾರ ಮಾಡುವ ಮೂಲಕ ಬಿಬಿಎಂಪಿ ಗಮನಕ್ಕೆ ತರುವ ಕೆಲಸ ಮಾಡಲಾಗಿದೆ. ಆದರೂ ಎಚ್ಚೆತ್ತುಕೊಳ್ಳದ ಪಾಲಿಕೆ ಬೀದಿ ದನಗಳ ಕಂಟ್ರೊಲ್‌ಗೆ ನಿರ್ಲಕ್ಷ ವಹಿಸಿದಂತ್ತಿದೆ. ಇದು ಟ್ರಾಫಿಕ್​ಗೂ ಸಮಸ್ಯೆ ಉಂಟಾಗುತ್ತಿದೆ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

1 / 6
ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಒಂದಡೆಯಾದರೆ, ಈ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪಘಾತ ಹೆಚ್ಚಾಗಲು ಕಾರಣವಾಗುತ್ತಿರುವ ಬೀದಿ ದನಗಳ ಕುರಿತಂತೆ ಟಿವಿ9 ನಿರಂತರ ವರದಿ ಮಾಡಿ ಪಾಲಿಕೆ ಅಧಿಕಾರಿಗಳ ಎಚ್ಚರಿಸುವ ಕೆಲಸ ಮಾಡುತ್ತಿದೆ. ಆದರು ಕೂಡ ಅಧಿಕಾರಿಗಳು ಎಚ್ಚತ್ತುಕೊಂಡಂತೆ ಕಾಣುತ್ತಿಲ್ಲ.

ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಒಂದಡೆಯಾದರೆ, ಈ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪಘಾತ ಹೆಚ್ಚಾಗಲು ಕಾರಣವಾಗುತ್ತಿರುವ ಬೀದಿ ದನಗಳ ಕುರಿತಂತೆ ಟಿವಿ9 ನಿರಂತರ ವರದಿ ಮಾಡಿ ಪಾಲಿಕೆ ಅಧಿಕಾರಿಗಳ ಎಚ್ಚರಿಸುವ ಕೆಲಸ ಮಾಡುತ್ತಿದೆ. ಆದರು ಕೂಡ ಅಧಿಕಾರಿಗಳು ಎಚ್ಚತ್ತುಕೊಂಡಂತೆ ಕಾಣುತ್ತಿಲ್ಲ.

2 / 6

ಬೀದಿ ದನಗಳ ಕುರಿತಂತೆ ಟಿವಿ9 ನಿರಂತರವಾಗಿ ಸುದ್ದಿ ಮಾಡಿ ಎಚ್ಚರಿಸಿದರು ಕೂಡ ಪಾಲಿಕೆ ಮಾತ್ರ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಬೀದಿದನಗಳ ಹಾವಳಿಯಿಂದಾಗಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪಘಾತಗಳ ಸಂಖ್ಯೆ ಹೆಚ್ಚಳ ಆಗುತ್ತಿದೆ.

3 / 6

ಕೋರಮಂಗಲದ ಸರ್ಜಾಪುರ ಮುಖ್ಯ ರಸ್ತೆಯ ಮಧ್ಯದಲ್ಲೆ ಬೀದಾಡಿ ದನಗಳು ಕುಳಿತುಕೊಂಡಿರುತ್ತವೆ. ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಹೀಗಿದ್ದರು. ಕೂಡ ಪಾಲಿಕೆ ಅಧಿಕಾರಿಗಳು ಬೀದಿ ದನಗಳ ಕಂಟ್ರೊಲ್ ಮಾಡುತ್ತಿಲ್ಲ ಎಂದು ಆಟೋ ಚಾಲಕ ಸೋಮಶೇಖರ್​ ಎಂಬುವವರು ಆಕ್ರೋಶ ಹೊರ ಹಾಕಿದ್ದಾರೆ.

4 / 6

ಪಿಕ್ ಅವರ್ ಸಂದರ್ಭದಲ್ಲಿ ದಾರಿಗೆ ಅಡ್ಡಲಾಗಿ ಬರುವ ದನಗಳಿಂದ ಟ್ರಾಫಿಕ್ ಜಾಮ್ ಉಂಟಾದರೆ ಮತ್ತೊಂದೆಡೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು ರಸ್ತೆಯಲ್ಲಿ ಓಡಾಡಬೇಕೆಂದರು ದನಗಳ ಭಯ‌ ಪಡುತ್ತಾರೆ ಯಾವಾಗ ಬಂದು ಗುದ್ದುತ್ತವೆ, ಏನು ಮಾಡ್ತವೆ ಅಂತ ಗೊತ್ತಾಗಲ್ಲ.

5 / 6

ಬೀದಿ ದನಗಳನ್ನ ಗೋಶಾಲೆಗೆ ಬಿಡಬೇಕು. ಈ ಕೆಲಸ ಪಾಲಿಕೆ ಅಧಿಕಾರಿಗಳು ಮಾಡಬೇಕು ಆದರೆ ಅವರು ಮಾಡ್ತಿಲ್ಲ. ಇದರಿಂದಾಗಿ ವಾಹನ ಸವಾರರ ಓಡಾಟಕ್ಕೆ ತುಂಬಾ ತೊಂದರೆ ಆಗುತ್ತೆ ಹೀಗಾಗಿ ಬೀದಿ ದನಗಳ ನಿಯಂತ್ರಣ ಮಾಡಲೆಬೇಕು ಎನ್ನುತ್ತಾರೆ ವಾಹನ ಸವಾರರು.

6 / 6

ಇನ್ನಾದರು ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ಬೀದಿ ದನಗಳ ಉಪಟಳಕ್ಕೆ ಬ್ರೇಕ್ ಹಾಕಲು ಮುಂದಾಗುತ್ತಾರಾ ಇಲ್ವಾ ಕಾದು ನೋಡಬೇಕಿದೆ. 

Loading...
Unable to load recommendations.
Follow Us