ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ದರ್ಶನ್​ ಸಲುವಾಗಿ ಪೂಜೆ ಮಾಡಿಸಿದ ಸುಮಲತಾ ಅಂಬರೀಷ್​?

Updated on: Aug 02, 2024 | 9:11 PM

ಸುಮಲತಾ ಅಂಬರೀಷ್​ ಹಾಗೂ ದರ್ಶನ್​ ನಡುವೆ ಆತ್ಮೀಯತೆ ಇದೆ. ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ದರ್ಶನ್​ ಅವರಿಗೆ ಈಗ ಕಷ್ಟದ ಕಾಲ. ಆದ್ದರಿಂದ ಅವರ ಆಪ್ತರು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೊಜೆ ಸಲ್ಲಿಸುತ್ತಿದ್ದಾರೆ. ಸುಮಲತಾ ಅಂಬರೀಷ್​ ಅವರು ಶಿರಡಿ ಸಾಯಿ ಬಾಬಾ ಮಂದಿರಕ್ಕೆ ಭೇಟಿ ನೀಡಿದ ಫೋಟೋಗಳು ವೈರಲ್​ ಆಗುತ್ತಿವೆ.

1 / 7
ಹಿರಿಯ ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಷ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ದರ್ಶನ್​ ಸಲುವಾಗಿಯೇ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹಿರಿಯ ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಷ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ದರ್ಶನ್​ ಸಲುವಾಗಿಯೇ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

2 / 7
ಶಿರಡಿ ಶ್ರೀ ಸಾಯಿ ಬಾಬಾ ದೇವಸ್ಥಾನದ ಎದುರು ಸುಮಲತಾ ಅಂಬರೀಷ್​ ಅವರು ಫೋಟೋ ತೆಗೆಸಿಕೊಂಡಿದ್ದಾರೆ. ಅದನ್ನು ನೋಡಿದ ಅಭಿಮಾನಿಗಳಿಗೆ ದರ್ಶನ್​ ವಿಚಾರ ನೆನಪಾಗಿದೆ. ಫೋಟೋಗಳು ವೈರಲ್​ ಆಗಿವೆ.

ಶಿರಡಿ ಶ್ರೀ ಸಾಯಿ ಬಾಬಾ ದೇವಸ್ಥಾನದ ಎದುರು ಸುಮಲತಾ ಅಂಬರೀಷ್​ ಅವರು ಫೋಟೋ ತೆಗೆಸಿಕೊಂಡಿದ್ದಾರೆ. ಅದನ್ನು ನೋಡಿದ ಅಭಿಮಾನಿಗಳಿಗೆ ದರ್ಶನ್​ ವಿಚಾರ ನೆನಪಾಗಿದೆ. ಫೋಟೋಗಳು ವೈರಲ್​ ಆಗಿವೆ.

3 / 7
ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಪಡೆದ ಪ್ರಸಾದದ ಫೋಟೋವನ್ನು ಕೂಡ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಸುಮಲತಾ ಅಂಬರೀಷ್​ ಅವರು ಹಂಚಿಕೊಂಡಿದ್ದಾರೆ. ಕೆಲಸದ ನಡುವೆ ಬಿಡುವು ಮಾಡಿಕೊಂಡು ಅವರು ದೇವರ ದರ್ಶನ ಪಡೆದಿದ್ದಾರೆ.

ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಪಡೆದ ಪ್ರಸಾದದ ಫೋಟೋವನ್ನು ಕೂಡ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಸುಮಲತಾ ಅಂಬರೀಷ್​ ಅವರು ಹಂಚಿಕೊಂಡಿದ್ದಾರೆ. ಕೆಲಸದ ನಡುವೆ ಬಿಡುವು ಮಾಡಿಕೊಂಡು ಅವರು ದೇವರ ದರ್ಶನ ಪಡೆದಿದ್ದಾರೆ.

4 / 7
ಅಂಬರೀಷ್​ ಕುಟುಂಬದ ಜೊತೆ ದರ್ಶನ್​ ಅವರಿಗೆ ವಿಶೇಷ ನಂಟು ಇದೆ. ಅಂಬರೀಷ್​ ಅವರಿಗೆ ದರ್ಶನ್​ ತುಂಬ ಗೌರವ ನೀಡುತ್ತಿದ್ದರು. ಅನೇಕ ಸಂದರ್ಭಗಳಲ್ಲಿ ದರ್ಶನ್​ ಅವರು ಅಂಬಿ ಫ್ಯಾಮಿಲಿ ಜೊತೆ ಕಾಣಿಸಿಕೊಂಡಿದ್ದುಂಟು.

ಅಂಬರೀಷ್​ ಕುಟುಂಬದ ಜೊತೆ ದರ್ಶನ್​ ಅವರಿಗೆ ವಿಶೇಷ ನಂಟು ಇದೆ. ಅಂಬರೀಷ್​ ಅವರಿಗೆ ದರ್ಶನ್​ ತುಂಬ ಗೌರವ ನೀಡುತ್ತಿದ್ದರು. ಅನೇಕ ಸಂದರ್ಭಗಳಲ್ಲಿ ದರ್ಶನ್​ ಅವರು ಅಂಬಿ ಫ್ಯಾಮಿಲಿ ಜೊತೆ ಕಾಣಿಸಿಕೊಂಡಿದ್ದುಂಟು.

5 / 7
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಅವರು ಜೈಲು ಸೇರುವಂತಾಯಿತು. ಆಗಸ್ಟ್​ 14ರವರೆಗೂ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣುತ್ತಿಲ್ಲ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಅವರು ಜೈಲು ಸೇರುವಂತಾಯಿತು. ಆಗಸ್ಟ್​ 14ರವರೆಗೂ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣುತ್ತಿಲ್ಲ.

6 / 7
ಈ ಕೇಸ್​ ಬಗ್ಗೆ ಸುಮಲತಾ ಅಂಬರೀಷ್​ ಅವರು ಮೌನವಾಗಿದ್ದರು. ಸಾಕಷ್ಟು ದಿನಗಳು ಕಳೆದ ಬಳಿಕ ಅವರು ಮೌನ ಮುರಿದಿದ್ದರು. ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಅವರು ಸುದೀರ್ಘ ಪತ್ರವನ್ನು ಹಂಚಿಕೊಂಡಿದ್ದರು.

ಈ ಕೇಸ್​ ಬಗ್ಗೆ ಸುಮಲತಾ ಅಂಬರೀಷ್​ ಅವರು ಮೌನವಾಗಿದ್ದರು. ಸಾಕಷ್ಟು ದಿನಗಳು ಕಳೆದ ಬಳಿಕ ಅವರು ಮೌನ ಮುರಿದಿದ್ದರು. ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಅವರು ಸುದೀರ್ಘ ಪತ್ರವನ್ನು ಹಂಚಿಕೊಂಡಿದ್ದರು.

7 / 7
ಕೊಲೆ ಆರೋಪದಲ್ಲಿ ದರ್ಶನ್​ಗೆ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಬೆಂಗಳೂರು ಪೊಲೀಸರು ದರ್ಶನ್ ಹಾಗೂ ಗ್ಯಾಂಗ್​ ವಿರುದ್ಧ ಅನೇಕ ಸಾಕ್ಷಿಗಳನ್ನು ಕಲೆಹಾಕಿದ್ದಾರೆ. ದಿನದಿಂದ ದಿನಕ್ಕೆ ಹೊಸ ಹೊಸ ಸಾಕ್ಷಿಗಳು ಸಿಗುತ್ತಿವೆ.

ಕೊಲೆ ಆರೋಪದಲ್ಲಿ ದರ್ಶನ್​ಗೆ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಬೆಂಗಳೂರು ಪೊಲೀಸರು ದರ್ಶನ್ ಹಾಗೂ ಗ್ಯಾಂಗ್​ ವಿರುದ್ಧ ಅನೇಕ ಸಾಕ್ಷಿಗಳನ್ನು ಕಲೆಹಾಕಿದ್ದಾರೆ. ದಿನದಿಂದ ದಿನಕ್ಕೆ ಹೊಸ ಹೊಸ ಸಾಕ್ಷಿಗಳು ಸಿಗುತ್ತಿವೆ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us