AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monte Carlo Masters: ಕ್ಲೇ ಕೋರ್ಟ್​ನಲ್ಲಿ ಇತಿಹಾಸ ನಿರ್ಮಿಸಿದ ಸುಮಿತ್ ನಗಾಲ್..!

Monte Carlo Masters: ಭಾರತದ ನಂಬರ್ 1 ಟೆನಿಸ್ ಸ್ಟಾರ್ ಸುಮಿತ್ ನಗಾಲ್ ಸೋಮವಾರ ಫ್ರಾನ್ಸ್‌ನ ಮಾಂಟೆ ಕಾರ್ಲೊದಲ್ಲಿ ನಡೆದ ಎಟಿಪಿ ಮಾಸ್ಟರ್ಸ್ ಕ್ಲೇಕೋರ್ಟ್ ಪಂದ್ಯಾವಳಿಯಲ್ಲಿ ವಿಶ್ವದ 38ನೇ ಶ್ರೇಯಾಂಕದ ಮ್ಯಾಟಿಯೊ ಅರ್ನಾಲ್ಡಿ ಅವರನ್ನು ಸೋಲಿಸುವ ಮೂಲಕ ಮುಖ್ಯ ಡ್ರಾ ಸಿಂಗಲ್ಸ್ ಪಂದ್ಯವನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸ ನಿರ್ಮಿಸಿದ್ದಾರೆ.

ಪೃಥ್ವಿಶಂಕರ
|

Updated on:Apr 08, 2024 | 10:09 PM

Share
ಭಾರತದ ನಂಬರ್ 1 ಟೆನಿಸ್ ಸ್ಟಾರ್ ಸುಮಿತ್ ನಗಾಲ್ ಸೋಮವಾರ ಫ್ರಾನ್ಸ್‌ನ ಮಾಂಟೆ ಕಾರ್ಲೊದಲ್ಲಿ ನಡೆದ ಎಟಿಪಿ ಮಾಸ್ಟರ್ಸ್ ಕ್ಲೇಕೋರ್ಟ್ ಪಂದ್ಯಾವಳಿಯಲ್ಲಿ ವಿಶ್ವದ 38ನೇ ಶ್ರೇಯಾಂಕದ ಮ್ಯಾಟಿಯೊ ಅರ್ನಾಲ್ಡಿ ಅವರನ್ನು ಸೋಲಿಸುವ ಮೂಲಕ ಮುಖ್ಯ ಡ್ರಾ ಸಿಂಗಲ್ಸ್ ಪಂದ್ಯವನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸ ನಿರ್ಮಿಸಿದ್ದಾರೆ.

ಭಾರತದ ನಂಬರ್ 1 ಟೆನಿಸ್ ಸ್ಟಾರ್ ಸುಮಿತ್ ನಗಾಲ್ ಸೋಮವಾರ ಫ್ರಾನ್ಸ್‌ನ ಮಾಂಟೆ ಕಾರ್ಲೊದಲ್ಲಿ ನಡೆದ ಎಟಿಪಿ ಮಾಸ್ಟರ್ಸ್ ಕ್ಲೇಕೋರ್ಟ್ ಪಂದ್ಯಾವಳಿಯಲ್ಲಿ ವಿಶ್ವದ 38ನೇ ಶ್ರೇಯಾಂಕದ ಮ್ಯಾಟಿಯೊ ಅರ್ನಾಲ್ಡಿ ಅವರನ್ನು ಸೋಲಿಸುವ ಮೂಲಕ ಮುಖ್ಯ ಡ್ರಾ ಸಿಂಗಲ್ಸ್ ಪಂದ್ಯವನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸ ನಿರ್ಮಿಸಿದ್ದಾರೆ.

1 / 8
ಅರ್ಹತಾ ಪಂದ್ಯಾವಳಿಯನ್ನು ಆಡುವ ಮೂಲಕ ಎಟಿಪಿ ಮಾಸ್ಟರ್ಸ್ 1000 ಪಂದ್ಯಾವಳಿಗೆ ಪ್ರವೇಶ ಪಡೆದಿದ್ದ ನಗಾಲ್, ತಮ್ಮ ಇಟಾಲಿಯನ್ ಎದುರಾಳಿ ಮ್ಯಾಟಿಯೊ ಅರ್ನಾಲ್ಡಿ ಅವರನ್ನು 5-7, 6-2, 6-4 ಸೆಟ್​ಗಳಿಂದ ಮಣಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಂಡಿದ್ದಾರೆ.

ಅರ್ಹತಾ ಪಂದ್ಯಾವಳಿಯನ್ನು ಆಡುವ ಮೂಲಕ ಎಟಿಪಿ ಮಾಸ್ಟರ್ಸ್ 1000 ಪಂದ್ಯಾವಳಿಗೆ ಪ್ರವೇಶ ಪಡೆದಿದ್ದ ನಗಾಲ್, ತಮ್ಮ ಇಟಾಲಿಯನ್ ಎದುರಾಳಿ ಮ್ಯಾಟಿಯೊ ಅರ್ನಾಲ್ಡಿ ಅವರನ್ನು 5-7, 6-2, 6-4 ಸೆಟ್​ಗಳಿಂದ ಮಣಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಂಡಿದ್ದಾರೆ.

2 / 8
ಬಹಳ ರೋಚಕತೆಯಿಂದ ಕೂಡಿದ್ದ ಈ ಪಂದ್ಯದ ಮೊದಲ ಸೆಟ್​ ಅನ್ನು 5-7 ಅಂತರದಿಂದ ಮ್ಯಾಟಿಯೊ ಅರ್ನಾಲ್ಡಿ ಗೆದ್ದುಕೊಂಡ್ಡರು. ಆದರೆ ಆ ಬಳಿಕ ಪುಟಿದೆದ್ದ ನಗಾಲ್ ಉಳಿದೆರಡು ಸೆಟ್​ಗಳನ್ನು 6-2, 6-4 ರಿಂದ ಗೆಲ್ಲುವ ಮೂಲಕ ಪಂದ್ಯವನ್ನು ತನ್ನದಾಗಿಸಿಕೊಂಡರು.

ಬಹಳ ರೋಚಕತೆಯಿಂದ ಕೂಡಿದ್ದ ಈ ಪಂದ್ಯದ ಮೊದಲ ಸೆಟ್​ ಅನ್ನು 5-7 ಅಂತರದಿಂದ ಮ್ಯಾಟಿಯೊ ಅರ್ನಾಲ್ಡಿ ಗೆದ್ದುಕೊಂಡ್ಡರು. ಆದರೆ ಆ ಬಳಿಕ ಪುಟಿದೆದ್ದ ನಗಾಲ್ ಉಳಿದೆರಡು ಸೆಟ್​ಗಳನ್ನು 6-2, 6-4 ರಿಂದ ಗೆಲ್ಲುವ ಮೂಲಕ ಪಂದ್ಯವನ್ನು ತನ್ನದಾಗಿಸಿಕೊಂಡರು.

3 / 8
ಇದೀಗ ನಗಾಲ್ ತಮ್ಮ ಮುಂದಿನ ಸುತ್ತಿನಲ್ಲಿ ವಿಶ್ವ ರ್ಯಾಂಕಿಂಗ್​ನಲ್ಲಿ ಏಳನೇ ಸ್ಥಾನದಲ್ಲಿರುವ ಡೆನ್ಮಾರ್ಕ್​ನ ಹೊಲ್ಗರ್ ರೂನ್ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯ ಏಪ್ರಿಲ್ 10 ರಂದು ನಡೆಯಲ್ಲಿದೆ.

ಇದೀಗ ನಗಾಲ್ ತಮ್ಮ ಮುಂದಿನ ಸುತ್ತಿನಲ್ಲಿ ವಿಶ್ವ ರ್ಯಾಂಕಿಂಗ್​ನಲ್ಲಿ ಏಳನೇ ಸ್ಥಾನದಲ್ಲಿರುವ ಡೆನ್ಮಾರ್ಕ್​ನ ಹೊಲ್ಗರ್ ರೂನ್ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯ ಏಪ್ರಿಲ್ 10 ರಂದು ನಡೆಯಲ್ಲಿದೆ.

4 / 8
ಮ್ಯಾಟಿಯೊ ಅರ್ನಾಲ್ಡಿ ಅವರನ್ನು ಮಣಿಸುವುದರೊಂದಿಗೆ ನಗಾಲ್ ಈ ಸೀಸನ್​ನಲ್ಲಿ ದಾಖಲೆಯ ಎರಡನೇ ಬಾರಿಗೆ ಒಟ್ಟಾರೆ ಮೂರನೇ ಬಾರಿಗೆ ಅಗ್ರ 50 ರೊಳಗಿನ ಶ್ರೇಯಾಂಕಿತ ಆಟಗಾರನನ್ನು ಸೋಲಿಸಿದ ದಾಖಲೆ ನಿರ್ಮಿಸಿದ್ದಾರೆ.

ಮ್ಯಾಟಿಯೊ ಅರ್ನಾಲ್ಡಿ ಅವರನ್ನು ಮಣಿಸುವುದರೊಂದಿಗೆ ನಗಾಲ್ ಈ ಸೀಸನ್​ನಲ್ಲಿ ದಾಖಲೆಯ ಎರಡನೇ ಬಾರಿಗೆ ಒಟ್ಟಾರೆ ಮೂರನೇ ಬಾರಿಗೆ ಅಗ್ರ 50 ರೊಳಗಿನ ಶ್ರೇಯಾಂಕಿತ ಆಟಗಾರನನ್ನು ಸೋಲಿಸಿದ ದಾಖಲೆ ನಿರ್ಮಿಸಿದ್ದಾರೆ.

5 / 8
ಇದಕ್ಕೂ ಮೊದಲು ನಗಾಲ್, ಈ ಸೀಸನ್ ಆರಂಭದಲ್ಲಿ ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್‌ನಲ್ಲಿ ವಿಶ್ವದ 27 ನೇ ಶ್ರೇಯಾಂಕದ ಅಲೆಕ್ಸಾಂಡರ್ ಬುಬ್ಲಿಕ್ ಅವರನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದರು.

ಇದಕ್ಕೂ ಮೊದಲು ನಗಾಲ್, ಈ ಸೀಸನ್ ಆರಂಭದಲ್ಲಿ ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್‌ನಲ್ಲಿ ವಿಶ್ವದ 27 ನೇ ಶ್ರೇಯಾಂಕದ ಅಲೆಕ್ಸಾಂಡರ್ ಬುಬ್ಲಿಕ್ ಅವರನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದರು.

6 / 8
ಇದಲ್ಲದೆ, ಮಾರ್ಚ್ 2021 ರಲ್ಲಿ ನಗಾಲ್ ವಿಶ್ವದ 22ನೇ ಶ್ರೇಯಾಂಕದಲ್ಲಿದ್ದ ಚಿಲಿಯ ಕ್ರಿಸ್ಟಿಯನ್ ಗ್ಯಾರಿನ್ ಅವರನ್ನು ಮಣಿಸಿದ್ದರು.

ಇದಲ್ಲದೆ, ಮಾರ್ಚ್ 2021 ರಲ್ಲಿ ನಗಾಲ್ ವಿಶ್ವದ 22ನೇ ಶ್ರೇಯಾಂಕದಲ್ಲಿದ್ದ ಚಿಲಿಯ ಕ್ರಿಸ್ಟಿಯನ್ ಗ್ಯಾರಿನ್ ಅವರನ್ನು ಮಣಿಸಿದ್ದರು.

7 / 8
ಇದಕ್ಕೂ ಮೊದಲು ಎಟಿಪಿ ಮಾಸ್ಟರ್ಸ್ ಕ್ಲೇಕೋರ್ಟ್ ಪಂದ್ಯಾವಳಿಯ ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲಿ ನಾಗಲ್ 63ನೇ ಶ್ರೇಯಾಂಕದ ಇಟಲಿಯ ಫ್ಲಾವಿಯೊ ಕೊಬೊಲಿ ಮತ್ತು ನಂತರ 55ನೇ ಶ್ರೇಯಾಂಕದ ಅರ್ಜೆಂಟೀನಾದ ಡಯಾಜ್ ಅಕೋಸ್ಟಾ ಅವರನ್ನು ಸೋಲಿಸುವ ಮೂಲಕ ಪಂದ್ಯಾವಳಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು.

ಇದಕ್ಕೂ ಮೊದಲು ಎಟಿಪಿ ಮಾಸ್ಟರ್ಸ್ ಕ್ಲೇಕೋರ್ಟ್ ಪಂದ್ಯಾವಳಿಯ ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲಿ ನಾಗಲ್ 63ನೇ ಶ್ರೇಯಾಂಕದ ಇಟಲಿಯ ಫ್ಲಾವಿಯೊ ಕೊಬೊಲಿ ಮತ್ತು ನಂತರ 55ನೇ ಶ್ರೇಯಾಂಕದ ಅರ್ಜೆಂಟೀನಾದ ಡಯಾಜ್ ಅಕೋಸ್ಟಾ ಅವರನ್ನು ಸೋಲಿಸುವ ಮೂಲಕ ಪಂದ್ಯಾವಳಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು.

8 / 8

Published On - 10:07 pm, Mon, 8 April 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ