AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer foods: ನೆಲ್ಲಿಕಾಯಿಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ? ಬೇಸಿಗೆಯಲ್ಲಿ ಹೀಗೆ ಬಳಸಿ

Amla for summer: ಬೇಸಿಗೆಯಲ್ಲಿ ದೇಹಕ್ಕೆ ನೀರಿನ ಅಗತ್ಯ ಹೆಚ್ಚು. ಇದರೊಂದಿಗೆ ವಿಟಮಿನ್ ಸಿ ಇರುವ ಆಹಾರಗಳನ್ನು ಸೇವಿಸುವುದು ಸೂಕ್ತ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ನೆಲ್ಲಿಕಾಯಿಯನ್ನು ನೀವು ಚಟ್ನಿ, ಕ್ಯಾಂಡಿ, ಉಪ್ಪಿನಕಾಯಿ, ಜಾಮ್ ಮೊದಲಾದ ಮಾದರಿಯಲ್ಲಿ ತಯಾರಿಸಿ ಸೇವಿಸಬಹುದು.

shivaprasad.hs
|

Updated on: Apr 23, 2022 | 6:50 AM

Share
ನೆಲ್ಲಿಕಾಯಿಯು ತನ್ನ ರೋಗ ನಿರೋಧಕ, ಕ್ಯಾನ್ಸರ್ ವಿರೋಧಿ ಮತ್ತು ಉರಿಯೂತವನ್ನು ಕಡಿಮೆಗೊಳಿಸುವ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಹೀಗಾಗಿಯೇ ಇದನ್ನು ಆರೋಗ್ಯಕರ ಎಂದು ಪರಿಗಣಿಸಲಾಗಿದೆ. ಈ ಬೇಸಿಗೆ ಕಾಲದಲ್ಲಿ ನೀವು ನೆಲ್ಲಿಕಾಯಿಯನ್ನು ಅನೇಕ ರೀತಿಯಲ್ಲಿ ಆಹಾರವಾಗಿ ಸೇವಿಸಬಹುದು. ಆ ವಿಧಾನಗಳ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಉಪ್ಪಿನಕಾಯಿ: ನೆಲ್ಲಿಕಾಯಿಯ ಉಪ್ಪಿನಕಾಯಿ ಬಹಳಷ್ಟು ಜನರಿಗೆ ಪ್ರಾಣ. ಇದು ಆರೋಗ್ಯದ ದೃಷ್ಟಿಯಿಂದಲೂ ಉತ್ತಮ. ಇದರಲ್ಲಿರುವ ನಾರಿನಂಶವು ಮಲಬದ್ಧತೆ, ಅತಿಸಾರ ಮುಂತಾದ ಕಾಯಿಲೆಗಳಿಂದ ಪರಿಹಾರ ನೀಡುತ್ತದೆ.

2 / 5
ಕ್ಯಾಂಡಿ: ನೆಲ್ಲಿಕಾಯಿಯು ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೀವು ನೆಲ್ಲಿಕಾಯಿ ಕ್ಯಾಂಡಿ ರೂಪದಲ್ಲಿ ಸೇವಿಸಬಹುದು.

3 / 5
ಚಟ್ನಿ: ಬೇಸಿಗೆ ಕಾಲದಲ್ಲಿ ನಿಮ್ಮನ್ನು ಆರೋಗ್ಯವಾಗಿರಿಸಿಕೊಳ್ಳಲು ನೆಲ್ಲಿಕಾಯಿ ಚಟ್ನಿಯನ್ನೂ ಸೇವಿಸಬಹುದು. ಇದರಿಂದ ಮಾಡಿದ ಚಟ್ನಿಯನ್ನು ಸರಿಯಾಗಿ ಕಾಪಿಟ್ಟುಕೊಂಡರೆ ಬೇಗ ಕೆಡುವುದಿಲ್ಲ. ಈ ಚಟ್ನಿಯಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು.

4 / 5
ಮುರಬ್ಬ: ನೆಲ್ಲಿಕಾಯಿಯನ್ನು ಜಾಮ್ ರೀತಿ ಮಾಡಿ ಅದನ್ನು ಸೇವಿಸಬಹುದು. ಇದು ಬೇಸಿಗೆಯಲ್ಲಿ ಉತ್ತಮವಾಗಿದೆ. ಇದರಲ್ಲಿರುವ ಅಂಶಗಳು ದೇಹವನ್ನು ತಂಪಾಗಿಸಲು ಕೆಲಸ ಮಾಡುತ್ತದೆ. ವಿಶೇಷತೆ ಏನೆಂದರೆ, ಇದರಲ್ಲಿರುವ ಫೈಟೊನ್ಯೂಟ್ರಿಯೆಂಟ್‌ಗಳು ಮೆದುಳಿನ ಕೋಶಗಳಿಗೆ ಹಾನಿ ಮಾಡುವ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್