AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer foods: ನೆಲ್ಲಿಕಾಯಿಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ? ಬೇಸಿಗೆಯಲ್ಲಿ ಹೀಗೆ ಬಳಸಿ

Amla for summer: ಬೇಸಿಗೆಯಲ್ಲಿ ದೇಹಕ್ಕೆ ನೀರಿನ ಅಗತ್ಯ ಹೆಚ್ಚು. ಇದರೊಂದಿಗೆ ವಿಟಮಿನ್ ಸಿ ಇರುವ ಆಹಾರಗಳನ್ನು ಸೇವಿಸುವುದು ಸೂಕ್ತ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ನೆಲ್ಲಿಕಾಯಿಯನ್ನು ನೀವು ಚಟ್ನಿ, ಕ್ಯಾಂಡಿ, ಉಪ್ಪಿನಕಾಯಿ, ಜಾಮ್ ಮೊದಲಾದ ಮಾದರಿಯಲ್ಲಿ ತಯಾರಿಸಿ ಸೇವಿಸಬಹುದು.

shivaprasad.hs
|

Updated on: Apr 23, 2022 | 6:50 AM

Share
ನೆಲ್ಲಿಕಾಯಿಯು ತನ್ನ ರೋಗ ನಿರೋಧಕ, ಕ್ಯಾನ್ಸರ್ ವಿರೋಧಿ ಮತ್ತು ಉರಿಯೂತವನ್ನು ಕಡಿಮೆಗೊಳಿಸುವ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಹೀಗಾಗಿಯೇ ಇದನ್ನು ಆರೋಗ್ಯಕರ ಎಂದು ಪರಿಗಣಿಸಲಾಗಿದೆ. ಈ ಬೇಸಿಗೆ ಕಾಲದಲ್ಲಿ ನೀವು ನೆಲ್ಲಿಕಾಯಿಯನ್ನು ಅನೇಕ ರೀತಿಯಲ್ಲಿ ಆಹಾರವಾಗಿ ಸೇವಿಸಬಹುದು. ಆ ವಿಧಾನಗಳ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಉಪ್ಪಿನಕಾಯಿ: ನೆಲ್ಲಿಕಾಯಿಯ ಉಪ್ಪಿನಕಾಯಿ ಬಹಳಷ್ಟು ಜನರಿಗೆ ಪ್ರಾಣ. ಇದು ಆರೋಗ್ಯದ ದೃಷ್ಟಿಯಿಂದಲೂ ಉತ್ತಮ. ಇದರಲ್ಲಿರುವ ನಾರಿನಂಶವು ಮಲಬದ್ಧತೆ, ಅತಿಸಾರ ಮುಂತಾದ ಕಾಯಿಲೆಗಳಿಂದ ಪರಿಹಾರ ನೀಡುತ್ತದೆ.

2 / 5
ಕ್ಯಾಂಡಿ: ನೆಲ್ಲಿಕಾಯಿಯು ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೀವು ನೆಲ್ಲಿಕಾಯಿ ಕ್ಯಾಂಡಿ ರೂಪದಲ್ಲಿ ಸೇವಿಸಬಹುದು.

3 / 5
ಚಟ್ನಿ: ಬೇಸಿಗೆ ಕಾಲದಲ್ಲಿ ನಿಮ್ಮನ್ನು ಆರೋಗ್ಯವಾಗಿರಿಸಿಕೊಳ್ಳಲು ನೆಲ್ಲಿಕಾಯಿ ಚಟ್ನಿಯನ್ನೂ ಸೇವಿಸಬಹುದು. ಇದರಿಂದ ಮಾಡಿದ ಚಟ್ನಿಯನ್ನು ಸರಿಯಾಗಿ ಕಾಪಿಟ್ಟುಕೊಂಡರೆ ಬೇಗ ಕೆಡುವುದಿಲ್ಲ. ಈ ಚಟ್ನಿಯಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು.

4 / 5
ಮುರಬ್ಬ: ನೆಲ್ಲಿಕಾಯಿಯನ್ನು ಜಾಮ್ ರೀತಿ ಮಾಡಿ ಅದನ್ನು ಸೇವಿಸಬಹುದು. ಇದು ಬೇಸಿಗೆಯಲ್ಲಿ ಉತ್ತಮವಾಗಿದೆ. ಇದರಲ್ಲಿರುವ ಅಂಶಗಳು ದೇಹವನ್ನು ತಂಪಾಗಿಸಲು ಕೆಲಸ ಮಾಡುತ್ತದೆ. ವಿಶೇಷತೆ ಏನೆಂದರೆ, ಇದರಲ್ಲಿರುವ ಫೈಟೊನ್ಯೂಟ್ರಿಯೆಂಟ್‌ಗಳು ಮೆದುಳಿನ ಕೋಶಗಳಿಗೆ ಹಾನಿ ಮಾಡುವ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ