AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೈನಾ’ ಸೀರಿಯಲ್ ವಿಶೇಷ ಸಂಚಿಕೆಗಳು; ಕಬಡ್ಡಿ ಅಖಾಡದಲ್ಲಿ ಧೂಳೆಬ್ಬಿಸಿದ ಧನುಷ್

ಕೌಟುಂಬಿಕ ಧಾರಾವಾಹಿಗಳಿಗೆ ಹೆಸರಾಗಿರುವ ‘ಸನ್ ಉದಯ’ ವಾಹಿನಿಯಲ್ಲಿ ಸೋಮವಾರದಿಂದ ಶನಿವಾರ ರಾತ್ರಿ 9 ಗಂಟೆಗೆ ಪ್ರಸಾರವಾಗುತ್ತಿರುವ ‘ಮೈನಾ’ ಧಾರಾವಾಹಿಯಲ್ಲಿ ಹೊಸ ಪ್ರಯೋಗ ಮಾಡಲಾಗಿದೆ. ನೈಜವೆನಿಸುವ ಕಬಡ್ಡಿ ಪಂದ್ಯಗಳನ್ನು ಚಿತ್ರಿಸಲಾಗಿದೆ. ಈ ವಿಶೇಷ ಸಂಚಿಕೆಗಳ ಕಲಾವಿದರಾಗಿ ಧನುಷ್ ‘ತಾಂಡವ್’ ಪಾತ್ರದ ಮೂಲಕ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಅವರಿಗೆ ಜೋಡಿಯಾಗಿ ದುರ್ಗಾಶ್ರೀ ನಟಿಸಿದ್ದಾರೆ.

ಮದನ್​ ಕುಮಾರ್​
|

Updated on: Jul 10, 2026 | 8:32 PM

Share
ಊರಿನ ದೇವಸ್ಥಾನದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ‘ಮೈನಾ’ ಧಾರಾವಾಹಿಯ ಇಬ್ಬರು ನಾಯಕರ ಕುಟುಂಬಗಳ ಪ್ರತಿಷ್ಠೆಗಾಗಿ ಕಬಡ್ಡಿ ಪಂದ್ಯಾವಳಿ ಜರುಗುತ್ತದೆ. ಅಮ್ಮನವರಿಗೆ ಕಿರೀಟ ತೊಡಿಸುವ ಅರ್ಹತೆ ಗಳಿಸಿಕೊಳ್ಳಲು ಕಬಡ್ಡಿ ಪಂದ್ಯ ಗೆಲ್ಲಬೇಕು ಎಂಬುದು ಷರತ್ತು.

ಊರಿನ ದೇವಸ್ಥಾನದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ‘ಮೈನಾ’ ಧಾರಾವಾಹಿಯ ಇಬ್ಬರು ನಾಯಕರ ಕುಟುಂಬಗಳ ಪ್ರತಿಷ್ಠೆಗಾಗಿ ಕಬಡ್ಡಿ ಪಂದ್ಯಾವಳಿ ಜರುಗುತ್ತದೆ. ಅಮ್ಮನವರಿಗೆ ಕಿರೀಟ ತೊಡಿಸುವ ಅರ್ಹತೆ ಗಳಿಸಿಕೊಳ್ಳಲು ಕಬಡ್ಡಿ ಪಂದ್ಯ ಗೆಲ್ಲಬೇಕು ಎಂಬುದು ಷರತ್ತು.

1 / 5
ಒಂದು ಕುಟುಂಬದ ತಂಡಕ್ಕೆ ತಾಂಡವ್ ನಾಯಕ, ಮತ್ತೊಂದು ಕುಟುಂಬದ ತಂಡಕ್ಕೆ ಪುಷ್ಪಕ್ ನಾಯಕ. ಆತ್ಮೀಯ ಗೆಳೆಯರೇ ಪರಸ್ಪರ ಕಾದಾಡುವ ಪರಿಸ್ಥಿತಿ. ಈ ನಡುವೆ ದೇವಸ್ಥಾನದಲ್ಲಿ ನಡೆದ ಅನಾಹುತವೊಂದಕ್ಕೆ ಧ್ರುವನನ್ನು ಹೊಣೆಗಾರನನ್ನಾಗಿ ಮಾಡಿ ಛಡಿಯೇಟು ಶಿಕ್ಷೆ ನೀಡಲಾಗುತ್ತದೆ.

ಒಂದು ಕುಟುಂಬದ ತಂಡಕ್ಕೆ ತಾಂಡವ್ ನಾಯಕ, ಮತ್ತೊಂದು ಕುಟುಂಬದ ತಂಡಕ್ಕೆ ಪುಷ್ಪಕ್ ನಾಯಕ. ಆತ್ಮೀಯ ಗೆಳೆಯರೇ ಪರಸ್ಪರ ಕಾದಾಡುವ ಪರಿಸ್ಥಿತಿ. ಈ ನಡುವೆ ದೇವಸ್ಥಾನದಲ್ಲಿ ನಡೆದ ಅನಾಹುತವೊಂದಕ್ಕೆ ಧ್ರುವನನ್ನು ಹೊಣೆಗಾರನನ್ನಾಗಿ ಮಾಡಿ ಛಡಿಯೇಟು ಶಿಕ್ಷೆ ನೀಡಲಾಗುತ್ತದೆ.

2 / 5
ಇಷ್ಟಾಗಿಯೂ ಧ್ರುವ ಕಬಡ್ಡಿ ಆಟಕ್ಕೆ ಮಿಂಚಿನ ಪ್ರವೇಶ ಮಾಡುತ್ತಾನೆ. ಅಖಾಡದಲ್ಲಿ ಟ್ವಿಸ್ಟ್ ಎಂಬಂತೆ ಅಂತಿಮವಾಗಿ ಮೈನಾ ಹಾಗೂ ದುರ್ಗಾ ರಣಕಹಳೆ ಊದಿ ಕಬಡ್ಡಿ ಅಖಾಡಕ್ಕೆ ಇಳಿಯುತ್ತಾರೆ. ಇವರು ಏಕೆ ಕಣಕ್ಕಿಳಿದರು? ಪಂದ್ಯಾವಳಿ ಹಿಂದೆ ಏನೇನು ರಾಜಕೀಯ ಕುತಂತ್ರ ನಡೆದವು?

ಇಷ್ಟಾಗಿಯೂ ಧ್ರುವ ಕಬಡ್ಡಿ ಆಟಕ್ಕೆ ಮಿಂಚಿನ ಪ್ರವೇಶ ಮಾಡುತ್ತಾನೆ. ಅಖಾಡದಲ್ಲಿ ಟ್ವಿಸ್ಟ್ ಎಂಬಂತೆ ಅಂತಿಮವಾಗಿ ಮೈನಾ ಹಾಗೂ ದುರ್ಗಾ ರಣಕಹಳೆ ಊದಿ ಕಬಡ್ಡಿ ಅಖಾಡಕ್ಕೆ ಇಳಿಯುತ್ತಾರೆ. ಇವರು ಏಕೆ ಕಣಕ್ಕಿಳಿದರು? ಪಂದ್ಯಾವಳಿ ಹಿಂದೆ ಏನೇನು ರಾಜಕೀಯ ಕುತಂತ್ರ ನಡೆದವು?

3 / 5
ಅಂತಿಮ ಸಮರದಲ್ಲಿ ಗೆಲುವು ಯಾರಿಗೆ? ಗೆಳೆತನ ಹಗೆತನವಾಗದೇ ಹೇಗೆ ಉಳಿಯುತ್ತದೆ? ಇತ್ಯಾದಿ ಪ್ರಶ್ನೆಗಳಿಗೆ ‘ಮೈನಾ- ಧ್ರುವ ತಾಂಡವ’ ವಿಶೇಷ ಸಂಚಿಕೆಗಳಲ್ಲಿ ಉತ್ತರ ಇದೆ. ಸಂತೋಷ್ ಗೌಡ ಹಾಸನ ಅವರು ಈ ಧಾರಾವಾಹಿಗೆ ನಿರ್ದೇಶನ ಮಾಡಿದ್ದಾರೆ.

ಅಂತಿಮ ಸಮರದಲ್ಲಿ ಗೆಲುವು ಯಾರಿಗೆ? ಗೆಳೆತನ ಹಗೆತನವಾಗದೇ ಹೇಗೆ ಉಳಿಯುತ್ತದೆ? ಇತ್ಯಾದಿ ಪ್ರಶ್ನೆಗಳಿಗೆ ‘ಮೈನಾ- ಧ್ರುವ ತಾಂಡವ’ ವಿಶೇಷ ಸಂಚಿಕೆಗಳಲ್ಲಿ ಉತ್ತರ ಇದೆ. ಸಂತೋಷ್ ಗೌಡ ಹಾಸನ ಅವರು ಈ ಧಾರಾವಾಹಿಗೆ ನಿರ್ದೇಶನ ಮಾಡಿದ್ದಾರೆ.

4 / 5
ಈ ಧಾರಾವಾಹಿಯನ್ನು ‘ಕೋಮಲ್ ಎಂಟರ್‌ಪ್ರೈಸಸ್’ ನಿರ್ಮಾಣ ಮಾಡಿದೆ. ವಾಲಿ-ದಯಾಕರ್ ಛಾಯಾಗ್ರಹಣ ಮಾಡಿದ್ದಾರೆ. ‘ಮೈನಾ-ಧ್ರುವ ತಾಂಡವ’ದಲ್ಲಿ ವಿಜಯಲಕ್ಷ್ಮೀ, ಸಿದ್ದಾರ್ಥ, ಅರಾಫತ್ ಷರೀಫ್, ಜೆ.ಎಸ್. ವಾಲಿ, ಕಾರ್ತಿಕ್, ಆಯುಧ್, ಶಿಲ್ಪಾ, ನವ್ಯಾ ಕೂಡ ನಟಿಸಿದ್ದಾರೆ.

ಈ ಧಾರಾವಾಹಿಯನ್ನು ‘ಕೋಮಲ್ ಎಂಟರ್‌ಪ್ರೈಸಸ್’ ನಿರ್ಮಾಣ ಮಾಡಿದೆ. ವಾಲಿ-ದಯಾಕರ್ ಛಾಯಾಗ್ರಹಣ ಮಾಡಿದ್ದಾರೆ. ‘ಮೈನಾ-ಧ್ರುವ ತಾಂಡವ’ದಲ್ಲಿ ವಿಜಯಲಕ್ಷ್ಮೀ, ಸಿದ್ದಾರ್ಥ, ಅರಾಫತ್ ಷರೀಫ್, ಜೆ.ಎಸ್. ವಾಲಿ, ಕಾರ್ತಿಕ್, ಆಯುಧ್, ಶಿಲ್ಪಾ, ನವ್ಯಾ ಕೂಡ ನಟಿಸಿದ್ದಾರೆ.

5 / 5
Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ