AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ದೇಶದಲ್ಲೇ ಅತಿ ಎತ್ತರದ ಸ್ವಾಮಿ ವಿವೇಕಾನಂದ ಪುತ್ಥಳಿ ಅನಾವರಣ!

ಅವರು ಯುವ ಪೀಳಿಗೆಗೆ ಆದರ್ಶವಾದ ಮಹಾನ್ ಚೇತನ. ಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಪರಿಚಯ ಮಾಡಿದ ನಾಡಿನ ಸಂತ, ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ ಮಾಡಲಾಗಿದೆ. ಇಡೀ ದೇಶದಲ್ಲೇ ಅತೀ ಎತ್ತರದ ಕಂಚಿನ ಪುತ್ಥಳಿ ಅನಾವರಣ ಮಾಡಲಾಯಿತು. ಈ ಮೂಲಕ ಮುದ್ರಣ ಕಾಶಿ ಗದಗ ಜಿಲ್ಲೆಗೆ ಮತ್ತೊಂದು ಹೆಮ್ಮೆಯ ಗರಿ ಸೇರಿದಂತಾಗಿದೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Sep 11, 2024 | 8:00 PM

Share
ಗದಗದ ನಾಗಾವಿಯ ಆರ್.ಡಿ.ಪಿ.ಆರ್ ವಿಶ್ವ ವಿದ್ಯಾಲಯದ ಕ್ಯಾಂಪಸ್​ನಲ್ಲಿ 39.5 ಅಡಿ ಎತ್ತರದ ಕಂಚಿನ ಸ್ವಾಮಿ ವಿವೇಕಾನಂದ ಪುತ್ಥಳಿ ಲೋಕಾರ್ಪಣೆ ಮಾಡಲಾಯಿತು. ರಾಮಕೃಷ್ಣ ಆಶ್ರಮದ ಶ್ರೀ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಲೋಕಾರ್ಪಣೆ ಮಾಡಿದ್ದಾರೆ.

ಗದಗದ ನಾಗಾವಿಯ ಆರ್.ಡಿ.ಪಿ.ಆರ್ ವಿಶ್ವ ವಿದ್ಯಾಲಯದ ಕ್ಯಾಂಪಸ್​ನಲ್ಲಿ 39.5 ಅಡಿ ಎತ್ತರದ ಕಂಚಿನ ಸ್ವಾಮಿ ವಿವೇಕಾನಂದ ಪುತ್ಥಳಿ ಲೋಕಾರ್ಪಣೆ ಮಾಡಲಾಯಿತು. ರಾಮಕೃಷ್ಣ ಆಶ್ರಮದ ಶ್ರೀ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಲೋಕಾರ್ಪಣೆ ಮಾಡಿದ್ದಾರೆ.

1 / 6
ಸ್ವಾಮಿ ವಿವೇಕಾನಂದರು ಭಾರತ ಆಧ್ಯಾತ್ಮಿಕ ಶಕ್ತಿಯನ್ನು ವಿಶ್ವದ ಮುಂದೆ ಪರಿಚಯ ಮಾಡಿದ್ದರು. ವಿಶ್ವ ವಿಖ್ಯಾತ ಚಿಕಾಗೋ ಭಾಷಣ ಮಾಡಿದ್ದು, ಇದೇ ಸೆಪ್ಟೆಂಬರ್ 11 ರಂದು, ಅದರ ಸವಿನೆನಪಿಗಾಗಿ ಇಂದು ಲೋಕಾರ್ಪಣೆ ‌ಮಾಡಲಾಯಿತು. ಇನ್ನು ಗದಗನ ವಿವೇಕಾನಂದ ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಮಾರ್ಗದರ್ಶನದಲ್ಲಿ ಕಂಚಿನ ಪುತ್ಥಳಿ ನಿರ್ಮಾಣ ಮಾಡಿ, ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಲೋಕಾರ್ಪಣೆ ಮಾಡಲಾಗಿದೆ. ಸ್ವಾಮಿ ವಿವೇಕಾನಂದ ದರ್ಶನಗಳು ಮೈಗೊಡಿಸಲು ಇದೊಂದು ಪ್ರೇರಣೆ ಆಗುತ್ತದೆ ಎಂದು ಶ್ರೀಗಳು ಹೇಳಿದರು.

ಸ್ವಾಮಿ ವಿವೇಕಾನಂದರು ಭಾರತ ಆಧ್ಯಾತ್ಮಿಕ ಶಕ್ತಿಯನ್ನು ವಿಶ್ವದ ಮುಂದೆ ಪರಿಚಯ ಮಾಡಿದ್ದರು. ವಿಶ್ವ ವಿಖ್ಯಾತ ಚಿಕಾಗೋ ಭಾಷಣ ಮಾಡಿದ್ದು, ಇದೇ ಸೆಪ್ಟೆಂಬರ್ 11 ರಂದು, ಅದರ ಸವಿನೆನಪಿಗಾಗಿ ಇಂದು ಲೋಕಾರ್ಪಣೆ ‌ಮಾಡಲಾಯಿತು. ಇನ್ನು ಗದಗನ ವಿವೇಕಾನಂದ ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಮಾರ್ಗದರ್ಶನದಲ್ಲಿ ಕಂಚಿನ ಪುತ್ಥಳಿ ನಿರ್ಮಾಣ ಮಾಡಿ, ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಲೋಕಾರ್ಪಣೆ ಮಾಡಲಾಗಿದೆ. ಸ್ವಾಮಿ ವಿವೇಕಾನಂದ ದರ್ಶನಗಳು ಮೈಗೊಡಿಸಲು ಇದೊಂದು ಪ್ರೇರಣೆ ಆಗುತ್ತದೆ ಎಂದು ಶ್ರೀಗಳು ಹೇಳಿದರು.

2 / 6
ಇನ್ನು ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಲ್ಕತ್ತಾದ ಸ್ವಾಮಿ ವಿವೇಕಾನಂದ ರಾಮಕೃಷ್ಣ ಮಿಷನ್ ಅವರು ಭವ್ಯವಾದ ಕಂಚಿನ ಪುತ್ಥಳಿಯನ್ನು ದೇಣಿಗೆಯಾಗಿ ನೀಡಿದ್ದಾರೆ. ಕಲ್ಕತ್ತಾದ ಶಿಲ್ಪಿ ಕಾರ್ತಿಕ್ ಕಾರ್ ಎನ್ನುವವರು ಈ ಭವ್ಯವಾದ ಸ್ವಾಮಿ ವಿವೇಕಾನಂದರ ಪುತ್ಥಳಿ ನಿರ್ಮಾಣ ಮಾಡಿದ್ದಾರೆ.

ಇನ್ನು ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಲ್ಕತ್ತಾದ ಸ್ವಾಮಿ ವಿವೇಕಾನಂದ ರಾಮಕೃಷ್ಣ ಮಿಷನ್ ಅವರು ಭವ್ಯವಾದ ಕಂಚಿನ ಪುತ್ಥಳಿಯನ್ನು ದೇಣಿಗೆಯಾಗಿ ನೀಡಿದ್ದಾರೆ. ಕಲ್ಕತ್ತಾದ ಶಿಲ್ಪಿ ಕಾರ್ತಿಕ್ ಕಾರ್ ಎನ್ನುವವರು ಈ ಭವ್ಯವಾದ ಸ್ವಾಮಿ ವಿವೇಕಾನಂದರ ಪುತ್ಥಳಿ ನಿರ್ಮಾಣ ಮಾಡಿದ್ದಾರೆ.

3 / 6
ಹಲವು ವರ್ಷಗಳ ನಿರಂತರ ಪರಿಶ್ರಮದಿಂದ ಇವಾಗ ಕಾಲ‌ ಕೂಡಿಬಂದಿದ್ದು, ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ಸ್ವಾಮಿ ವಿವೇಕಾನಂದರ ಪುತ್ಥಳಿ ಅನಾವರಣವಾಗಿದೆ. ವಿವೇಕಾನಂದರೇ ಇಲ್ಲಿಗೆ ಬಂದು ನಿಂತಿದ್ದಾರೋ ಏನೋ ಎಂದು ಭಾಸವಾಗುತ್ತಿದೆ.

ಹಲವು ವರ್ಷಗಳ ನಿರಂತರ ಪರಿಶ್ರಮದಿಂದ ಇವಾಗ ಕಾಲ‌ ಕೂಡಿಬಂದಿದ್ದು, ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ಸ್ವಾಮಿ ವಿವೇಕಾನಂದರ ಪುತ್ಥಳಿ ಅನಾವರಣವಾಗಿದೆ. ವಿವೇಕಾನಂದರೇ ಇಲ್ಲಿಗೆ ಬಂದು ನಿಂತಿದ್ದಾರೋ ಏನೋ ಎಂದು ಭಾಸವಾಗುತ್ತಿದೆ.

4 / 6
ಸ್ವಾಮಿ ವಿವೇಕಾನಂದ ಪ್ರೇರಣೆ ಇಲ್ಲಿನ ವಿದ್ಯಾರ್ಥಿಗಳಿಗೆ ಆಗಲಿ ಎನ್ನುವ ಉದ್ದೇಶದಿಂದ ನಿರ್ಮಾಣ ಮಾಡಲಾಗಿದೆ ಎಂದು ಸಚಿವ ಎಚ್ ಕೆ ಪಾಟೀಲ್‌ ಹೇಳಿದರು. ಇನ್ನು ದೇಶದಲ್ಲಿಯೇ ಅತೀ ಎತ್ತರದ ಸ್ವಾಮಿ ವಿವೇಕಾನಂದ ಪುತ್ಥಳಿ ಮುಂದೆ ನಿಂತು ಕಾಲೇಜು ಸ್ಟೂಡೆಂಟ್ ಸೆಲ್ಪಿ ಕಿಕ್ಲಿಸಿಕೊಂಡು, ಸಂಭ್ರಮಪಟ್ಟರು.

ಸ್ವಾಮಿ ವಿವೇಕಾನಂದ ಪ್ರೇರಣೆ ಇಲ್ಲಿನ ವಿದ್ಯಾರ್ಥಿಗಳಿಗೆ ಆಗಲಿ ಎನ್ನುವ ಉದ್ದೇಶದಿಂದ ನಿರ್ಮಾಣ ಮಾಡಲಾಗಿದೆ ಎಂದು ಸಚಿವ ಎಚ್ ಕೆ ಪಾಟೀಲ್‌ ಹೇಳಿದರು. ಇನ್ನು ದೇಶದಲ್ಲಿಯೇ ಅತೀ ಎತ್ತರದ ಸ್ವಾಮಿ ವಿವೇಕಾನಂದ ಪುತ್ಥಳಿ ಮುಂದೆ ನಿಂತು ಕಾಲೇಜು ಸ್ಟೂಡೆಂಟ್ ಸೆಲ್ಪಿ ಕಿಕ್ಲಿಸಿಕೊಂಡು, ಸಂಭ್ರಮಪಟ್ಟರು.

5 / 6
ಈಗಾಗಲೇ ಆರ್.ಡಿ.ಪಿ.ಆರ್ ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ಸಾಬರಮತಿ ಆಶ್ರಮ ಕೂಡ ನಿರ್ಮಾಣ ಮಾಡಲಾಗಿದೆ.‌ ಈವಾಗ ಇದೆ ಕ್ಯಾಂಪಸ್​ನಲ್ಲಿ ಸ್ವಾಮಿ ವಿವೇಕಾನಂದ ಪುತ್ಥಳಿ ಅನಾವರಣಗೊಳಿಸಲಾಯಿತು. ಹೀಗಾಗಿ ಇಡೀ ದೇಶದಲ್ಲಿ ಅತಿ ಎತ್ತರದ ಸ್ವಾಮಿ ವಿವೇಕಾನಂದ ಪುತ್ಥಳಿ ಮುದ್ರಣ ಕಾಶಿ ಗದಗನಲ್ಲಿರೋದು ಹೆಮ್ಮೆಯ ವಿಷಯವಾಗಿದೆ.

ಈಗಾಗಲೇ ಆರ್.ಡಿ.ಪಿ.ಆರ್ ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ಸಾಬರಮತಿ ಆಶ್ರಮ ಕೂಡ ನಿರ್ಮಾಣ ಮಾಡಲಾಗಿದೆ.‌ ಈವಾಗ ಇದೆ ಕ್ಯಾಂಪಸ್​ನಲ್ಲಿ ಸ್ವಾಮಿ ವಿವೇಕಾನಂದ ಪುತ್ಥಳಿ ಅನಾವರಣಗೊಳಿಸಲಾಯಿತು. ಹೀಗಾಗಿ ಇಡೀ ದೇಶದಲ್ಲಿ ಅತಿ ಎತ್ತರದ ಸ್ವಾಮಿ ವಿವೇಕಾನಂದ ಪುತ್ಥಳಿ ಮುದ್ರಣ ಕಾಶಿ ಗದಗನಲ್ಲಿರೋದು ಹೆಮ್ಮೆಯ ವಿಷಯವಾಗಿದೆ.

6 / 6
Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ