AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ನೀವು ಯೂಟ್ಯೂಬ್ ಚಾನೆಲ್ ತೆರೆಯುವ ಪ್ಲಾನ್​ನಲ್ಲಿದ್ದೀರಾ?: ಈ ವಿಷಯ ನೆನಪಿನಲ್ಲಿಡಿ

YouTube Subscribers : ಯಶಸ್ಸಿಗೆ ಪರಿಶ್ರಮ ಅತ್ಯಗತ್ಯ. ಅದೇ ರೀತಿ, ಯೂಟ್ಯೂಬ್​ನಲ್ಲಿ ಚಂದಾದಾರರನ್ನು ಹೆಚ್ಚಿಸಲು, ನೀವು ನಿರಂತರವಾಗಿ ನಿಮ್ಮ ಚಾನಲ್‌ಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿರಬೇಕು. ಯೂಟ್ಯೂಬ್​ನಲ್ಲಿ ಯಾವ ವಿಷಯದ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದೀರೊ, ಅದರಲ್ಲಿ ಕ್ರಿಯಾಶೀಲರಾಗಿರಬೇಕು.

Vinay Bhat
|

Updated on: Mar 18, 2024 | 6:55 AM

Share
ಭಾರತದಲ್ಲಿ ಯೂಟ್ಯೂಬ್‌ ಜನಪ್ರಿಯತೆ ಗಮನಾರ್ಹ ಏರಿಕೆ ಕಂಡಿವೆ. ನಿಮ್ಮ ಕೌಶಲ್ಯದಿಂದ ಮನೆಯಲ್ಲೇ ಕುಳಿತು ಹಣವನ್ನು ಗಳಿಸಲು ಇದು ಉತ್ತಮ ಮಾರ್ಗವಾಗಿದೆ. ಹೀಗಾಗಿ ಯೂಟ್ಯೂಬ್‌ ಚಾನೆಲ್​ಗಳ ಸಂಖ್ಯೆ ಕೂಡ ಲೆಕ್ಕಕ್ಕೆ ಸಿಗದಷ್ಟಿದೆ. ಆದರೆ, ಯೂಟ್ಯೂಬ್ ಖಾತೆ ತೆರೆದು ಕೇವಲ ವಿಡಿಯೋ ಹಂಚಿಕೊಳ್ಳುತ್ತಿದ್ದರೆ ಸಾಲದು.

ಭಾರತದಲ್ಲಿ ಯೂಟ್ಯೂಬ್‌ ಜನಪ್ರಿಯತೆ ಗಮನಾರ್ಹ ಏರಿಕೆ ಕಂಡಿವೆ. ನಿಮ್ಮ ಕೌಶಲ್ಯದಿಂದ ಮನೆಯಲ್ಲೇ ಕುಳಿತು ಹಣವನ್ನು ಗಳಿಸಲು ಇದು ಉತ್ತಮ ಮಾರ್ಗವಾಗಿದೆ. ಹೀಗಾಗಿ ಯೂಟ್ಯೂಬ್‌ ಚಾನೆಲ್​ಗಳ ಸಂಖ್ಯೆ ಕೂಡ ಲೆಕ್ಕಕ್ಕೆ ಸಿಗದಷ್ಟಿದೆ. ಆದರೆ, ಯೂಟ್ಯೂಬ್ ಖಾತೆ ತೆರೆದು ಕೇವಲ ವಿಡಿಯೋ ಹಂಚಿಕೊಳ್ಳುತ್ತಿದ್ದರೆ ಸಾಲದು.

1 / 6
ಯೂಟ್ಯೂಬ್ ಖಾತೆ ತೆರೆದು ಹಣ ಗಳಿಸಬೇಕು ಎಂದರೆ ಅದಕ್ಕೆ ಒಂದಿಟ್ಟು ಮಾನದಂಡಗಳಿವೆ. ಒಂದು ಸಾವಿರ ಚಂದಾದಾರರು, ನಾಲ್ಕು ಸಾವಿರ ವೀಕ್ಷಣೆ ಹೀಗೆ ಕೆಲವೊಂದು ನಿಯಮಗಳಿವೆ. ಈ ಪೈಕಿ ಬಳಕೆದಾರರಿಗೆ ಚಂದಾದಾರರನ್ನು ಗಳಿಸುವುದೇ ದೊಡ್ಡ ಸವಾಲಾಗಿದೆ. ಹಾಗಾದರೆ, ನಿಮ್ಮ ಚಾನಲ್​ಗೆ ಚಂದಾದಾರರ ಸಂಖ್ಯೆಯನ್ನು ತ್ವರಿತವಾಗಿ ಹೆಚ್ಚಿಸಲು ಬಯಸಿದರೆ ಈ ಟ್ರಿಕ್ ಅನ್ನು ಪ್ರಯೋಗಿಸಬಹುದು.

ಯೂಟ್ಯೂಬ್ ಖಾತೆ ತೆರೆದು ಹಣ ಗಳಿಸಬೇಕು ಎಂದರೆ ಅದಕ್ಕೆ ಒಂದಿಟ್ಟು ಮಾನದಂಡಗಳಿವೆ. ಒಂದು ಸಾವಿರ ಚಂದಾದಾರರು, ನಾಲ್ಕು ಸಾವಿರ ವೀಕ್ಷಣೆ ಹೀಗೆ ಕೆಲವೊಂದು ನಿಯಮಗಳಿವೆ. ಈ ಪೈಕಿ ಬಳಕೆದಾರರಿಗೆ ಚಂದಾದಾರರನ್ನು ಗಳಿಸುವುದೇ ದೊಡ್ಡ ಸವಾಲಾಗಿದೆ. ಹಾಗಾದರೆ, ನಿಮ್ಮ ಚಾನಲ್​ಗೆ ಚಂದಾದಾರರ ಸಂಖ್ಯೆಯನ್ನು ತ್ವರಿತವಾಗಿ ಹೆಚ್ಚಿಸಲು ಬಯಸಿದರೆ ಈ ಟ್ರಿಕ್ ಅನ್ನು ಪ್ರಯೋಗಿಸಬಹುದು.

2 / 6
ನೀವೆಲ್ಲರೂ ಕೇಳಿರುವಂತೆ, ಯಶಸ್ಸಿಗೆ ಪರಿಶ್ರಮ ಅತ್ಯಗತ್ಯ. ಅದೇ ರೀತಿ, ಯೂಟ್ಯೂಬ್​ನಲ್ಲಿ ಚಂದಾದಾರರನ್ನು ಹೆಚ್ಚಿಸಲು, ನೀವು ನಿರಂತರವಾಗಿ ನಿಮ್ಮ ಚಾನಲ್‌ಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿರಬೇಕು. ಯೂಟ್ಯೂಬ್​ನಲ್ಲಿ ಯಾವ ವಿಷಯದ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದೀರೊ, ಅದರಲ್ಲಿ ಕ್ರಿಯಾಶೀಲರಾಗಿರಬೇಕು. ವಾರದಲ್ಲಿ ಕನಿಷ್ಠ 3 ವಿಡಿಯೋಗಳನ್ನು ಯೂಟ್ಯೂಬ್​ಗೆ ಅಪ್‌ಲೋಡ್ ಮಾಡಲೇಬೇಕು.

ನೀವೆಲ್ಲರೂ ಕೇಳಿರುವಂತೆ, ಯಶಸ್ಸಿಗೆ ಪರಿಶ್ರಮ ಅತ್ಯಗತ್ಯ. ಅದೇ ರೀತಿ, ಯೂಟ್ಯೂಬ್​ನಲ್ಲಿ ಚಂದಾದಾರರನ್ನು ಹೆಚ್ಚಿಸಲು, ನೀವು ನಿರಂತರವಾಗಿ ನಿಮ್ಮ ಚಾನಲ್‌ಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿರಬೇಕು. ಯೂಟ್ಯೂಬ್​ನಲ್ಲಿ ಯಾವ ವಿಷಯದ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದೀರೊ, ಅದರಲ್ಲಿ ಕ್ರಿಯಾಶೀಲರಾಗಿರಬೇಕು. ವಾರದಲ್ಲಿ ಕನಿಷ್ಠ 3 ವಿಡಿಯೋಗಳನ್ನು ಯೂಟ್ಯೂಬ್​ಗೆ ಅಪ್‌ಲೋಡ್ ಮಾಡಲೇಬೇಕು.

3 / 6
ನಿಮ್ಮ ಯೂಟ್ಯೂಬ್​ ಚಾನಲ್‌ನಲ್ಲಿ ಉತ್ತಮ ಗುಣಮಟ್ಟದ ಮಾಹಿತಿಯನ್ನು ಒದಗಿಸಬೇಕು. ನೀವು ವಿಡಿಯೋವನ್ನು ಪೋಸ್ಟ್ ಮಾಡಿದಾಗ ಅದರ ಗುಣಮಟ್ಟಕ್ಕೆ ವಿಶೇಷ ಗಮನ ನೀಡಿ. ಅದು ನಿಮ್ಮ ಚಾನಲ್ ಅನ್ನು ಇತರರಿಗಿಂತ ಭಿನ್ನವಾಗಿಸುತ್ತದೆ. ಹಾಗಾಯೆ ಹೈ ಕ್ವಾಲಿಟಿಯಲ್ಲಿ ಹಂಚಿಕೊಳ್ಳಿ.

ನಿಮ್ಮ ಯೂಟ್ಯೂಬ್​ ಚಾನಲ್‌ನಲ್ಲಿ ಉತ್ತಮ ಗುಣಮಟ್ಟದ ಮಾಹಿತಿಯನ್ನು ಒದಗಿಸಬೇಕು. ನೀವು ವಿಡಿಯೋವನ್ನು ಪೋಸ್ಟ್ ಮಾಡಿದಾಗ ಅದರ ಗುಣಮಟ್ಟಕ್ಕೆ ವಿಶೇಷ ಗಮನ ನೀಡಿ. ಅದು ನಿಮ್ಮ ಚಾನಲ್ ಅನ್ನು ಇತರರಿಗಿಂತ ಭಿನ್ನವಾಗಿಸುತ್ತದೆ. ಹಾಗಾಯೆ ಹೈ ಕ್ವಾಲಿಟಿಯಲ್ಲಿ ಹಂಚಿಕೊಳ್ಳಿ.

4 / 6
ನೀವು ಯೂಟ್ಯೂಬ್​ ಚಾನಲ್ ಅನ್ನು ಪ್ರಾರಂಭಿಸಿ ಅದರಲ್ಲಿ ವಿಡಿಯೋಗಳನ್ನು ಅಪ್ಲೋಡ್ ಮಾಡಿಬಿಟ್ಟರೆ ಸಾಲದು. ನಿಮ್ಮ ನೆಟ್‌ವರ್ಕಿಂಗ್ ವಿಸ್ತಾರವಾಗಿರಬೇಕು. ಇದಕ್ಕಾಗಿ ನೀವು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಆ ವಿಡಿಯೋವನ್ನು ಶೇರ್ ಮಾಡಬೇಕು. ನೀವು ಎಷ್ಟು ಜನರಿಗೆ ಹತ್ತಿರವಾಗುತ್ತೀರೊ ಅಷ್ಟು ಚಂದಾದಾರರನ್ನು ಪಡೆಯುತ್ತೀರಿ.

ನೀವು ಯೂಟ್ಯೂಬ್​ ಚಾನಲ್ ಅನ್ನು ಪ್ರಾರಂಭಿಸಿ ಅದರಲ್ಲಿ ವಿಡಿಯೋಗಳನ್ನು ಅಪ್ಲೋಡ್ ಮಾಡಿಬಿಟ್ಟರೆ ಸಾಲದು. ನಿಮ್ಮ ನೆಟ್‌ವರ್ಕಿಂಗ್ ವಿಸ್ತಾರವಾಗಿರಬೇಕು. ಇದಕ್ಕಾಗಿ ನೀವು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಆ ವಿಡಿಯೋವನ್ನು ಶೇರ್ ಮಾಡಬೇಕು. ನೀವು ಎಷ್ಟು ಜನರಿಗೆ ಹತ್ತಿರವಾಗುತ್ತೀರೊ ಅಷ್ಟು ಚಂದಾದಾರರನ್ನು ಪಡೆಯುತ್ತೀರಿ.

5 / 6
ನಿಮ್ಮ ಯೂಟ್ಯೂಬ್​ ಚಾನಲ್ ಅನ್ನು ಶೈಕ್ಷಣಿಕ ಉದ್ದೇಶಗಳಿಗಾಗಿ ರಚಿಸಿದ್ದರೆ, ನೀವು ಅಧ್ಯಯನ ಮಾಡಬೇಕು. ಅಲ್ಲದೆ ಇತರರಿಗಿಂತ ಭಿನ್ನವಾದ ಮಾಹಿತಿ ನೀಡಬೇಕು. ಹಾಗಾದಾಗ ಜನರು ನೋಡಲು ಇಷ್ಟಪಟ್ಟು ಸಬ್​ಸ್ರೈಬ್ ಆಗುತ್ತಾರೆ. ನೀವು ಅಡುಗೆ ಚಾನೆಲ್ ಅನ್ನು ಪ್ರಾರಂಭಿಸಿದ್ದರೆ, ಅಲ್ಲಿ ಕೇವಲ ಅಡುಗೆ ಮಾಡುವ ವಿಡಿಯೋ ಮಾತ್ರವಲ್ಲ ಅದರ ಜೊತೆಗೆ ವಿಭಿನ್ನ ಸಲಹೆಗಳನ್ನು ನೀಡಬೇಕು. ಹೀಗಾದಾಗ ನಿಮ್ಮ ಯೂಟ್ಯೂಬ್​ ಚಾನೆಲ್ ಕ್ಲಿಕ್ ಆಗುತ್ತದೆ.

ನಿಮ್ಮ ಯೂಟ್ಯೂಬ್​ ಚಾನಲ್ ಅನ್ನು ಶೈಕ್ಷಣಿಕ ಉದ್ದೇಶಗಳಿಗಾಗಿ ರಚಿಸಿದ್ದರೆ, ನೀವು ಅಧ್ಯಯನ ಮಾಡಬೇಕು. ಅಲ್ಲದೆ ಇತರರಿಗಿಂತ ಭಿನ್ನವಾದ ಮಾಹಿತಿ ನೀಡಬೇಕು. ಹಾಗಾದಾಗ ಜನರು ನೋಡಲು ಇಷ್ಟಪಟ್ಟು ಸಬ್​ಸ್ರೈಬ್ ಆಗುತ್ತಾರೆ. ನೀವು ಅಡುಗೆ ಚಾನೆಲ್ ಅನ್ನು ಪ್ರಾರಂಭಿಸಿದ್ದರೆ, ಅಲ್ಲಿ ಕೇವಲ ಅಡುಗೆ ಮಾಡುವ ವಿಡಿಯೋ ಮಾತ್ರವಲ್ಲ ಅದರ ಜೊತೆಗೆ ವಿಭಿನ್ನ ಸಲಹೆಗಳನ್ನು ನೀಡಬೇಕು. ಹೀಗಾದಾಗ ನಿಮ್ಮ ಯೂಟ್ಯೂಬ್​ ಚಾನೆಲ್ ಕ್ಲಿಕ್ ಆಗುತ್ತದೆ.

6 / 6
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು