AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ನೀವು ಯೂಟ್ಯೂಬ್ ಚಾನೆಲ್ ತೆರೆಯುವ ಪ್ಲಾನ್​ನಲ್ಲಿದ್ದೀರಾ?: ಈ ವಿಷಯ ನೆನಪಿನಲ್ಲಿಡಿ

YouTube Subscribers : ಯಶಸ್ಸಿಗೆ ಪರಿಶ್ರಮ ಅತ್ಯಗತ್ಯ. ಅದೇ ರೀತಿ, ಯೂಟ್ಯೂಬ್​ನಲ್ಲಿ ಚಂದಾದಾರರನ್ನು ಹೆಚ್ಚಿಸಲು, ನೀವು ನಿರಂತರವಾಗಿ ನಿಮ್ಮ ಚಾನಲ್‌ಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿರಬೇಕು. ಯೂಟ್ಯೂಬ್​ನಲ್ಲಿ ಯಾವ ವಿಷಯದ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದೀರೊ, ಅದರಲ್ಲಿ ಕ್ರಿಯಾಶೀಲರಾಗಿರಬೇಕು.

Vinay Bhat
|

Updated on: Mar 18, 2024 | 6:55 AM

Share
ಭಾರತದಲ್ಲಿ ಯೂಟ್ಯೂಬ್‌ ಜನಪ್ರಿಯತೆ ಗಮನಾರ್ಹ ಏರಿಕೆ ಕಂಡಿವೆ. ನಿಮ್ಮ ಕೌಶಲ್ಯದಿಂದ ಮನೆಯಲ್ಲೇ ಕುಳಿತು ಹಣವನ್ನು ಗಳಿಸಲು ಇದು ಉತ್ತಮ ಮಾರ್ಗವಾಗಿದೆ. ಹೀಗಾಗಿ ಯೂಟ್ಯೂಬ್‌ ಚಾನೆಲ್​ಗಳ ಸಂಖ್ಯೆ ಕೂಡ ಲೆಕ್ಕಕ್ಕೆ ಸಿಗದಷ್ಟಿದೆ. ಆದರೆ, ಯೂಟ್ಯೂಬ್ ಖಾತೆ ತೆರೆದು ಕೇವಲ ವಿಡಿಯೋ ಹಂಚಿಕೊಳ್ಳುತ್ತಿದ್ದರೆ ಸಾಲದು.

ಭಾರತದಲ್ಲಿ ಯೂಟ್ಯೂಬ್‌ ಜನಪ್ರಿಯತೆ ಗಮನಾರ್ಹ ಏರಿಕೆ ಕಂಡಿವೆ. ನಿಮ್ಮ ಕೌಶಲ್ಯದಿಂದ ಮನೆಯಲ್ಲೇ ಕುಳಿತು ಹಣವನ್ನು ಗಳಿಸಲು ಇದು ಉತ್ತಮ ಮಾರ್ಗವಾಗಿದೆ. ಹೀಗಾಗಿ ಯೂಟ್ಯೂಬ್‌ ಚಾನೆಲ್​ಗಳ ಸಂಖ್ಯೆ ಕೂಡ ಲೆಕ್ಕಕ್ಕೆ ಸಿಗದಷ್ಟಿದೆ. ಆದರೆ, ಯೂಟ್ಯೂಬ್ ಖಾತೆ ತೆರೆದು ಕೇವಲ ವಿಡಿಯೋ ಹಂಚಿಕೊಳ್ಳುತ್ತಿದ್ದರೆ ಸಾಲದು.

1 / 6
ಯೂಟ್ಯೂಬ್ ಖಾತೆ ತೆರೆದು ಹಣ ಗಳಿಸಬೇಕು ಎಂದರೆ ಅದಕ್ಕೆ ಒಂದಿಟ್ಟು ಮಾನದಂಡಗಳಿವೆ. ಒಂದು ಸಾವಿರ ಚಂದಾದಾರರು, ನಾಲ್ಕು ಸಾವಿರ ವೀಕ್ಷಣೆ ಹೀಗೆ ಕೆಲವೊಂದು ನಿಯಮಗಳಿವೆ. ಈ ಪೈಕಿ ಬಳಕೆದಾರರಿಗೆ ಚಂದಾದಾರರನ್ನು ಗಳಿಸುವುದೇ ದೊಡ್ಡ ಸವಾಲಾಗಿದೆ. ಹಾಗಾದರೆ, ನಿಮ್ಮ ಚಾನಲ್​ಗೆ ಚಂದಾದಾರರ ಸಂಖ್ಯೆಯನ್ನು ತ್ವರಿತವಾಗಿ ಹೆಚ್ಚಿಸಲು ಬಯಸಿದರೆ ಈ ಟ್ರಿಕ್ ಅನ್ನು ಪ್ರಯೋಗಿಸಬಹುದು.

ಯೂಟ್ಯೂಬ್ ಖಾತೆ ತೆರೆದು ಹಣ ಗಳಿಸಬೇಕು ಎಂದರೆ ಅದಕ್ಕೆ ಒಂದಿಟ್ಟು ಮಾನದಂಡಗಳಿವೆ. ಒಂದು ಸಾವಿರ ಚಂದಾದಾರರು, ನಾಲ್ಕು ಸಾವಿರ ವೀಕ್ಷಣೆ ಹೀಗೆ ಕೆಲವೊಂದು ನಿಯಮಗಳಿವೆ. ಈ ಪೈಕಿ ಬಳಕೆದಾರರಿಗೆ ಚಂದಾದಾರರನ್ನು ಗಳಿಸುವುದೇ ದೊಡ್ಡ ಸವಾಲಾಗಿದೆ. ಹಾಗಾದರೆ, ನಿಮ್ಮ ಚಾನಲ್​ಗೆ ಚಂದಾದಾರರ ಸಂಖ್ಯೆಯನ್ನು ತ್ವರಿತವಾಗಿ ಹೆಚ್ಚಿಸಲು ಬಯಸಿದರೆ ಈ ಟ್ರಿಕ್ ಅನ್ನು ಪ್ರಯೋಗಿಸಬಹುದು.

2 / 6
ನೀವೆಲ್ಲರೂ ಕೇಳಿರುವಂತೆ, ಯಶಸ್ಸಿಗೆ ಪರಿಶ್ರಮ ಅತ್ಯಗತ್ಯ. ಅದೇ ರೀತಿ, ಯೂಟ್ಯೂಬ್​ನಲ್ಲಿ ಚಂದಾದಾರರನ್ನು ಹೆಚ್ಚಿಸಲು, ನೀವು ನಿರಂತರವಾಗಿ ನಿಮ್ಮ ಚಾನಲ್‌ಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿರಬೇಕು. ಯೂಟ್ಯೂಬ್​ನಲ್ಲಿ ಯಾವ ವಿಷಯದ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದೀರೊ, ಅದರಲ್ಲಿ ಕ್ರಿಯಾಶೀಲರಾಗಿರಬೇಕು. ವಾರದಲ್ಲಿ ಕನಿಷ್ಠ 3 ವಿಡಿಯೋಗಳನ್ನು ಯೂಟ್ಯೂಬ್​ಗೆ ಅಪ್‌ಲೋಡ್ ಮಾಡಲೇಬೇಕು.

ನೀವೆಲ್ಲರೂ ಕೇಳಿರುವಂತೆ, ಯಶಸ್ಸಿಗೆ ಪರಿಶ್ರಮ ಅತ್ಯಗತ್ಯ. ಅದೇ ರೀತಿ, ಯೂಟ್ಯೂಬ್​ನಲ್ಲಿ ಚಂದಾದಾರರನ್ನು ಹೆಚ್ಚಿಸಲು, ನೀವು ನಿರಂತರವಾಗಿ ನಿಮ್ಮ ಚಾನಲ್‌ಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿರಬೇಕು. ಯೂಟ್ಯೂಬ್​ನಲ್ಲಿ ಯಾವ ವಿಷಯದ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದೀರೊ, ಅದರಲ್ಲಿ ಕ್ರಿಯಾಶೀಲರಾಗಿರಬೇಕು. ವಾರದಲ್ಲಿ ಕನಿಷ್ಠ 3 ವಿಡಿಯೋಗಳನ್ನು ಯೂಟ್ಯೂಬ್​ಗೆ ಅಪ್‌ಲೋಡ್ ಮಾಡಲೇಬೇಕು.

3 / 6
ನಿಮ್ಮ ಯೂಟ್ಯೂಬ್​ ಚಾನಲ್‌ನಲ್ಲಿ ಉತ್ತಮ ಗುಣಮಟ್ಟದ ಮಾಹಿತಿಯನ್ನು ಒದಗಿಸಬೇಕು. ನೀವು ವಿಡಿಯೋವನ್ನು ಪೋಸ್ಟ್ ಮಾಡಿದಾಗ ಅದರ ಗುಣಮಟ್ಟಕ್ಕೆ ವಿಶೇಷ ಗಮನ ನೀಡಿ. ಅದು ನಿಮ್ಮ ಚಾನಲ್ ಅನ್ನು ಇತರರಿಗಿಂತ ಭಿನ್ನವಾಗಿಸುತ್ತದೆ. ಹಾಗಾಯೆ ಹೈ ಕ್ವಾಲಿಟಿಯಲ್ಲಿ ಹಂಚಿಕೊಳ್ಳಿ.

ನಿಮ್ಮ ಯೂಟ್ಯೂಬ್​ ಚಾನಲ್‌ನಲ್ಲಿ ಉತ್ತಮ ಗುಣಮಟ್ಟದ ಮಾಹಿತಿಯನ್ನು ಒದಗಿಸಬೇಕು. ನೀವು ವಿಡಿಯೋವನ್ನು ಪೋಸ್ಟ್ ಮಾಡಿದಾಗ ಅದರ ಗುಣಮಟ್ಟಕ್ಕೆ ವಿಶೇಷ ಗಮನ ನೀಡಿ. ಅದು ನಿಮ್ಮ ಚಾನಲ್ ಅನ್ನು ಇತರರಿಗಿಂತ ಭಿನ್ನವಾಗಿಸುತ್ತದೆ. ಹಾಗಾಯೆ ಹೈ ಕ್ವಾಲಿಟಿಯಲ್ಲಿ ಹಂಚಿಕೊಳ್ಳಿ.

4 / 6
ನೀವು ಯೂಟ್ಯೂಬ್​ ಚಾನಲ್ ಅನ್ನು ಪ್ರಾರಂಭಿಸಿ ಅದರಲ್ಲಿ ವಿಡಿಯೋಗಳನ್ನು ಅಪ್ಲೋಡ್ ಮಾಡಿಬಿಟ್ಟರೆ ಸಾಲದು. ನಿಮ್ಮ ನೆಟ್‌ವರ್ಕಿಂಗ್ ವಿಸ್ತಾರವಾಗಿರಬೇಕು. ಇದಕ್ಕಾಗಿ ನೀವು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಆ ವಿಡಿಯೋವನ್ನು ಶೇರ್ ಮಾಡಬೇಕು. ನೀವು ಎಷ್ಟು ಜನರಿಗೆ ಹತ್ತಿರವಾಗುತ್ತೀರೊ ಅಷ್ಟು ಚಂದಾದಾರರನ್ನು ಪಡೆಯುತ್ತೀರಿ.

ನೀವು ಯೂಟ್ಯೂಬ್​ ಚಾನಲ್ ಅನ್ನು ಪ್ರಾರಂಭಿಸಿ ಅದರಲ್ಲಿ ವಿಡಿಯೋಗಳನ್ನು ಅಪ್ಲೋಡ್ ಮಾಡಿಬಿಟ್ಟರೆ ಸಾಲದು. ನಿಮ್ಮ ನೆಟ್‌ವರ್ಕಿಂಗ್ ವಿಸ್ತಾರವಾಗಿರಬೇಕು. ಇದಕ್ಕಾಗಿ ನೀವು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಆ ವಿಡಿಯೋವನ್ನು ಶೇರ್ ಮಾಡಬೇಕು. ನೀವು ಎಷ್ಟು ಜನರಿಗೆ ಹತ್ತಿರವಾಗುತ್ತೀರೊ ಅಷ್ಟು ಚಂದಾದಾರರನ್ನು ಪಡೆಯುತ್ತೀರಿ.

5 / 6
ನಿಮ್ಮ ಯೂಟ್ಯೂಬ್​ ಚಾನಲ್ ಅನ್ನು ಶೈಕ್ಷಣಿಕ ಉದ್ದೇಶಗಳಿಗಾಗಿ ರಚಿಸಿದ್ದರೆ, ನೀವು ಅಧ್ಯಯನ ಮಾಡಬೇಕು. ಅಲ್ಲದೆ ಇತರರಿಗಿಂತ ಭಿನ್ನವಾದ ಮಾಹಿತಿ ನೀಡಬೇಕು. ಹಾಗಾದಾಗ ಜನರು ನೋಡಲು ಇಷ್ಟಪಟ್ಟು ಸಬ್​ಸ್ರೈಬ್ ಆಗುತ್ತಾರೆ. ನೀವು ಅಡುಗೆ ಚಾನೆಲ್ ಅನ್ನು ಪ್ರಾರಂಭಿಸಿದ್ದರೆ, ಅಲ್ಲಿ ಕೇವಲ ಅಡುಗೆ ಮಾಡುವ ವಿಡಿಯೋ ಮಾತ್ರವಲ್ಲ ಅದರ ಜೊತೆಗೆ ವಿಭಿನ್ನ ಸಲಹೆಗಳನ್ನು ನೀಡಬೇಕು. ಹೀಗಾದಾಗ ನಿಮ್ಮ ಯೂಟ್ಯೂಬ್​ ಚಾನೆಲ್ ಕ್ಲಿಕ್ ಆಗುತ್ತದೆ.

ನಿಮ್ಮ ಯೂಟ್ಯೂಬ್​ ಚಾನಲ್ ಅನ್ನು ಶೈಕ್ಷಣಿಕ ಉದ್ದೇಶಗಳಿಗಾಗಿ ರಚಿಸಿದ್ದರೆ, ನೀವು ಅಧ್ಯಯನ ಮಾಡಬೇಕು. ಅಲ್ಲದೆ ಇತರರಿಗಿಂತ ಭಿನ್ನವಾದ ಮಾಹಿತಿ ನೀಡಬೇಕು. ಹಾಗಾದಾಗ ಜನರು ನೋಡಲು ಇಷ್ಟಪಟ್ಟು ಸಬ್​ಸ್ರೈಬ್ ಆಗುತ್ತಾರೆ. ನೀವು ಅಡುಗೆ ಚಾನೆಲ್ ಅನ್ನು ಪ್ರಾರಂಭಿಸಿದ್ದರೆ, ಅಲ್ಲಿ ಕೇವಲ ಅಡುಗೆ ಮಾಡುವ ವಿಡಿಯೋ ಮಾತ್ರವಲ್ಲ ಅದರ ಜೊತೆಗೆ ವಿಭಿನ್ನ ಸಲಹೆಗಳನ್ನು ನೀಡಬೇಕು. ಹೀಗಾದಾಗ ನಿಮ್ಮ ಯೂಟ್ಯೂಬ್​ ಚಾನೆಲ್ ಕ್ಲಿಕ್ ಆಗುತ್ತದೆ.

6 / 6
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?