AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಬಿಸಿಲ ಬೇಗೆಗೆ ಬಾಂಬ್​ನಂತೆ ಸಿಡಿಯುತ್ತೆ ಮೊಬೈಲ್: ನಿರ್ಲಕ್ಷಿಸದಿರಿ

Mobile Blast: ಕಾರನ್ನು ನಿಲ್ಲಿಸುವಾಗ ಮತ್ತು ಲಾಕ್ ಮಾಡುವಾಗ ಅನೇಕ ಜನರು ತಮ್ಮ ಸ್ಮಾರ್ಟ್‌ಫೋನ್ ಅನ್ನು ಕಾರಿನಲ್ಲಿ ಇಡುತ್ತಾರೆ. ಬೇಸಿಗೆಯಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗುತ್ತದೆ. ಇಂತಹ ಬಿಸಿ ವಾತಾವರಣದಲ್ಲಿ ಸೆಲ್ ಫೋನ್ ಬ್ಯಾಟರಿ ಹಾಳಾಗುವ ಸಾಧ್ಯತೆ ಇರುತ್ತದೆ.

Vinay Bhat
|

Updated on: Feb 26, 2024 | 6:55 AM

Share
ಭಾರತದಲ್ಲಿ ಬೇಸಿಗೆ ಬಿಸಿಲು ಶುರುವಾಗಿದೆ. ಈ ಬಿಸಿಲ ಬಿಸಿ ಸ್ಮಾರ್ಟ್​ಫೋನ್​ಗಳಿಗೂ ತಟ್ಟುತ್ತಿವೆ. ಮೊಬೈಲ್​ಗಳು ಸಿಕ್ಕಾಪಟ್ಟೆ ಹೀಟ್ ಆಗುತ್ತಿದೆ. ಇದರಿಂದ ಮೊಬೈಲ್ ಹ್ಯಾಂಗ್ ಆಗುವುದು, ಸ್ವಿಚ್ ಆಫ್ ಆಗುವುದು ಕೊನೆಗೆ ಬ್ಲಾಸ್ಟ್ ಆಗುವಂತಹ ತೊಂದರೆಗಳು ಕೂಡ ಎದುರಾಗುತ್ತದೆ. ಈಗಿರುವ ಫಾಸ್ಟ್ ಚಾರ್ಜರ್​ಗಳಿಂದ ಬೇಗನೆ ಬಿಸಿ ಆಗುವ ಮೊಬೈಲ್​ಗಳು ಬಿಸಿಲಿನಿಂದ ಇನ್ನಷ್ಟು ಹೆಚ್ಚಾಗಿ ಹೀಟ್ ಆಗುತ್ತಿದೆ.

ಭಾರತದಲ್ಲಿ ಬೇಸಿಗೆ ಬಿಸಿಲು ಶುರುವಾಗಿದೆ. ಈ ಬಿಸಿಲ ಬಿಸಿ ಸ್ಮಾರ್ಟ್​ಫೋನ್​ಗಳಿಗೂ ತಟ್ಟುತ್ತಿವೆ. ಮೊಬೈಲ್​ಗಳು ಸಿಕ್ಕಾಪಟ್ಟೆ ಹೀಟ್ ಆಗುತ್ತಿದೆ. ಇದರಿಂದ ಮೊಬೈಲ್ ಹ್ಯಾಂಗ್ ಆಗುವುದು, ಸ್ವಿಚ್ ಆಫ್ ಆಗುವುದು ಕೊನೆಗೆ ಬ್ಲಾಸ್ಟ್ ಆಗುವಂತಹ ತೊಂದರೆಗಳು ಕೂಡ ಎದುರಾಗುತ್ತದೆ. ಈಗಿರುವ ಫಾಸ್ಟ್ ಚಾರ್ಜರ್​ಗಳಿಂದ ಬೇಗನೆ ಬಿಸಿ ಆಗುವ ಮೊಬೈಲ್​ಗಳು ಬಿಸಿಲಿನಿಂದ ಇನ್ನಷ್ಟು ಹೆಚ್ಚಾಗಿ ಹೀಟ್ ಆಗುತ್ತಿದೆ.

1 / 5
ಮೊಬೈಲ್​ ಅತೀಯಾಗಿ ಬಿಸಿಯಾಗಲು ಅಥವಾ ಬ್ಲಾಸ್ಟ್​​ ಆಗಲು ಮುಖ್ಯ ಕಾರಣದಲ್ಲಿ ಚಾರ್ಜ್​ ಆಗುತ್ತಿರುವಾಗಲೇ ಮೊಬೈಲ್​ ಬಳಕೆ ಮಾಡುವುದು ಒಂದು ಕಾರಣ. ಚಾರ್ಜ್​ಗೆ ಹಾಕಿ ಮೊಬೈಲ್ ಉಪಯೋಗಿಸಿದಾಗ RAM ಸೇರಿದಂತೆ ಪ್ರೊಸೆಸರ್​ಗಳು ಎಲ್ಲವೂ ಕಾರ್ಯ ನಿರ್ವಹಿಸುತ್ತಲೇ ಇರುತ್ತದೆ. ಹೀಗಾಗಿ ಮೊಬೈಲ್​ ಬೇಗನೇ ಬಿಸಿಯಾಗುತ್ತದೆ.

ಮೊಬೈಲ್​ ಅತೀಯಾಗಿ ಬಿಸಿಯಾಗಲು ಅಥವಾ ಬ್ಲಾಸ್ಟ್​​ ಆಗಲು ಮುಖ್ಯ ಕಾರಣದಲ್ಲಿ ಚಾರ್ಜ್​ ಆಗುತ್ತಿರುವಾಗಲೇ ಮೊಬೈಲ್​ ಬಳಕೆ ಮಾಡುವುದು ಒಂದು ಕಾರಣ. ಚಾರ್ಜ್​ಗೆ ಹಾಕಿ ಮೊಬೈಲ್ ಉಪಯೋಗಿಸಿದಾಗ RAM ಸೇರಿದಂತೆ ಪ್ರೊಸೆಸರ್​ಗಳು ಎಲ್ಲವೂ ಕಾರ್ಯ ನಿರ್ವಹಿಸುತ್ತಲೇ ಇರುತ್ತದೆ. ಹೀಗಾಗಿ ಮೊಬೈಲ್​ ಬೇಗನೇ ಬಿಸಿಯಾಗುತ್ತದೆ.

2 / 5
ಹಾಗೆಯೆ ಕಾರನ್ನು ನಿಲ್ಲಿಸುವಾಗ ಮತ್ತು ಲಾಕ್ ಮಾಡುವಾಗ ಅನೇಕ ಜನರು ತಮ್ಮ ಸ್ಮಾರ್ಟ್‌ಫೋನ್ ಅನ್ನು ಕಾರಿನಲ್ಲಿ ಇಡುತ್ತಾರೆ. ಬೇಸಿಗೆಯಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗುತ್ತದೆ. ಇಂತಹ ಬಿಸಿ ವಾತಾವರಣದಲ್ಲಿ ಸೆಲ್ ಫೋನ್ ಬ್ಯಾಟರಿ ಹಾಳಾಗುವ ಸಾಧ್ಯತೆ ಇರುತ್ತದೆ. ಕೆಲವುಬಾರಿ ತಡೆದುಕೊಳ್ಳುವ ಸಾಮರ್ಥ್ಯಕ್ಕಿಂತ ಹೆಚ್ಚು ಬಿಸಿ ಆದರೆ ಸ್ಮಾರ್ಟ್​ಫೋನ್​ಗಳು ಸ್ಪೋಟಗೊಳ್ಳಬಹುದು.

ಹಾಗೆಯೆ ಕಾರನ್ನು ನಿಲ್ಲಿಸುವಾಗ ಮತ್ತು ಲಾಕ್ ಮಾಡುವಾಗ ಅನೇಕ ಜನರು ತಮ್ಮ ಸ್ಮಾರ್ಟ್‌ಫೋನ್ ಅನ್ನು ಕಾರಿನಲ್ಲಿ ಇಡುತ್ತಾರೆ. ಬೇಸಿಗೆಯಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗುತ್ತದೆ. ಇಂತಹ ಬಿಸಿ ವಾತಾವರಣದಲ್ಲಿ ಸೆಲ್ ಫೋನ್ ಬ್ಯಾಟರಿ ಹಾಳಾಗುವ ಸಾಧ್ಯತೆ ಇರುತ್ತದೆ. ಕೆಲವುಬಾರಿ ತಡೆದುಕೊಳ್ಳುವ ಸಾಮರ್ಥ್ಯಕ್ಕಿಂತ ಹೆಚ್ಚು ಬಿಸಿ ಆದರೆ ಸ್ಮಾರ್ಟ್​ಫೋನ್​ಗಳು ಸ್ಪೋಟಗೊಳ್ಳಬಹುದು.

3 / 5
ಸ್ಮಾರ್ಟ್‌ಫೋನ್‌ಗಳು ಇತರೆ ವಸ್ತುವಿನಂತೆ ಸೂರ್ಯನ ಬೆಳಕನ್ನು ಹೀರಿಕೊಳ್ಳುವ ಪ್ರವೃತ್ತಿಯನ್ನು ಹೊಂದಿವೆ. ಸಾಧ್ಯವಾದಷ್ಟು ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಸೂರ್ಯನ ಬೆಳಕಿಗೆ ಒಡ್ಡುವುದನ್ನು ತಪ್ಪಿಸಿ. ಸ್ಮಾರ್ಟ್‌ಫೋನ್ ಅನ್ನು ತಂಪಾದ, ಶುಷ್ಕ ಸ್ಥಳದಲ್ಲಿರಿಸಿ ಚಾರ್ಜ್ ಮಾಡಿ. ಅಂತೆಯೆ ನಿಮ್ಮ ಮೊಬೈಲ್​​ನೊಂದಿಗೆ ನೀಡಿರುವ ಚಾರ್ಜರ್ ನಿಂದಲೇ ಫೋನ್ ಅನ್ನು ಚಾರ್ಜ್ ಮಾಡಿರಿ.

ಸ್ಮಾರ್ಟ್‌ಫೋನ್‌ಗಳು ಇತರೆ ವಸ್ತುವಿನಂತೆ ಸೂರ್ಯನ ಬೆಳಕನ್ನು ಹೀರಿಕೊಳ್ಳುವ ಪ್ರವೃತ್ತಿಯನ್ನು ಹೊಂದಿವೆ. ಸಾಧ್ಯವಾದಷ್ಟು ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಸೂರ್ಯನ ಬೆಳಕಿಗೆ ಒಡ್ಡುವುದನ್ನು ತಪ್ಪಿಸಿ. ಸ್ಮಾರ್ಟ್‌ಫೋನ್ ಅನ್ನು ತಂಪಾದ, ಶುಷ್ಕ ಸ್ಥಳದಲ್ಲಿರಿಸಿ ಚಾರ್ಜ್ ಮಾಡಿ. ಅಂತೆಯೆ ನಿಮ್ಮ ಮೊಬೈಲ್​​ನೊಂದಿಗೆ ನೀಡಿರುವ ಚಾರ್ಜರ್ ನಿಂದಲೇ ಫೋನ್ ಅನ್ನು ಚಾರ್ಜ್ ಮಾಡಿರಿ.

4 / 5
ನಾವು ನಮ್ಮ ಫೋನಿನ ಬ್ಯಾಕ್ ಗ್ರೌಂಡ್ ರನ್ನಿಂಗ್ ಅಪ್ಲಿಕೇಶನ್​ಗಳನ್ನು ತೆಗೆಯದೆ ಇದ್ದಾಗ, ಫೋನಿನ ವೇಗ ಕಡಿಮೆಯಗುವುದಲ್ಲದೆ ನಮ್ಮ ಮೊಬೈಲ್ ಬಿಸಿ ಆಗಬಹುದು. ಇದಕ್ಕಾಗಿ ಯಾವುದೇ ಅಪ್ಲಿಕೇಶನ್ ಬಳಸಿದ ಮೇಲೆ ಅದನ್ನು ಪೂರ್ಣವಾಗಿ ಕ್ಲೀನ್ ಮಾಡಿ, ಇಲ್ಲದಿದ್ದಲ್ಲಿ ಅದು ಸ್ವಯಂ ಚಾಲನೆಯಲ್ಲಿ ಇರುತ್ತದೆ.

ನಾವು ನಮ್ಮ ಫೋನಿನ ಬ್ಯಾಕ್ ಗ್ರೌಂಡ್ ರನ್ನಿಂಗ್ ಅಪ್ಲಿಕೇಶನ್​ಗಳನ್ನು ತೆಗೆಯದೆ ಇದ್ದಾಗ, ಫೋನಿನ ವೇಗ ಕಡಿಮೆಯಗುವುದಲ್ಲದೆ ನಮ್ಮ ಮೊಬೈಲ್ ಬಿಸಿ ಆಗಬಹುದು. ಇದಕ್ಕಾಗಿ ಯಾವುದೇ ಅಪ್ಲಿಕೇಶನ್ ಬಳಸಿದ ಮೇಲೆ ಅದನ್ನು ಪೂರ್ಣವಾಗಿ ಕ್ಲೀನ್ ಮಾಡಿ, ಇಲ್ಲದಿದ್ದಲ್ಲಿ ಅದು ಸ್ವಯಂ ಚಾಲನೆಯಲ್ಲಿ ಇರುತ್ತದೆ.

5 / 5
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?