AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಸ್ಮಾರ್ಟ್​ಫೋನ್​ಗೆ ವೈರಸ್ ಅಟ್ಯಾಕ್ ಆಗದಂತೆ ಎಚ್ಚರ ವಹಿಸುವುದು ಹೇಗೆ?: ಇಲ್ಲಿದೆ ಮಾಹಿತಿ

Virus Attack: ಕೆಲವು ಬಾರಿ ನಮ್ಮದೇ ಆದ ಕೆಲವು ತಪ್ಪುಗಳಿಂದಾಗಿ ತೊಂದರೆ ಉಂಟಾಗುತ್ತದೆ. ಇದರಲ್ಲಿ ವೈರಸ್‌ ಅಟ್ಯಾಕ್ ಕೂಡ ಒಂದು. ನಾವು ಮಾಡುವ ಕೆಲವು ಸಣ್ಣ ತಪ್ಪುಗಳಿಂದ ನಮ್ಮ ಸ್ಮಾರ್ಟ್​ಫೋನ್​ಗಳಿಗೆ ವೈರಸ್ ಪ್ರವೇಶಿಸುತ್ತವೆ. ಇದು ಯಾವಯಾವ ರೀತಿಯಲ್ಲಿ ಮೊಬೈಲ್ ಅನ್ನು ಪ್ರವೇಶಿಸಬಹುದು ಎಂದು ನೀವು ಯೋಚಿಸಿದ್ದೀರಾ?.

Vinay Bhat
|

Updated on: Feb 01, 2024 | 6:55 AM

Share
ನಾವು ಮಾಡುವ ಕೆಲವು ಸಣ್ಣ ತಪ್ಪುಗಳಿಂದ ನಮ್ಮ ಸ್ಮಾರ್ಟ್​ಫೋನ್​ಗಳಿಗೆ ವೈರಸ್ ಪ್ರವೇಶಿಸುತ್ತವೆ. ನಿಮ್ಮ ಮೊಬೈಲ್‌ನಲ್ಲಿ ವೈರಸ್ ಇದ್ದರೆ, ನೀವು ಆ್ಯಂಟಿ ವೈರಸ್ ಸಹಾಯದಿಂದ ಆ ವೈರಸ್ ಅನ್ನು ತೆಗೆದುಹಾಕಬಹುದು. ಆದರೆ ಅದಕ್ಕೂ ಮುನ್ನ ಈ ಕೆಳಗೆ ತಿಳಿಸಲಾದ ಐದು ತಪ್ಪುಗಳಿಂದ ದೂರವಿದ್ದರೆ ನಿಮ್ಮ ಫೋನ್ ಅನ್ನು ವೈರಸ್‌ಗಳಿಂದ ಕಾಪಾಡಿಕೊಳ್ಳಬಹುದು.

ನಾವು ಮಾಡುವ ಕೆಲವು ಸಣ್ಣ ತಪ್ಪುಗಳಿಂದ ನಮ್ಮ ಸ್ಮಾರ್ಟ್​ಫೋನ್​ಗಳಿಗೆ ವೈರಸ್ ಪ್ರವೇಶಿಸುತ್ತವೆ. ನಿಮ್ಮ ಮೊಬೈಲ್‌ನಲ್ಲಿ ವೈರಸ್ ಇದ್ದರೆ, ನೀವು ಆ್ಯಂಟಿ ವೈರಸ್ ಸಹಾಯದಿಂದ ಆ ವೈರಸ್ ಅನ್ನು ತೆಗೆದುಹಾಕಬಹುದು. ಆದರೆ ಅದಕ್ಕೂ ಮುನ್ನ ಈ ಕೆಳಗೆ ತಿಳಿಸಲಾದ ಐದು ತಪ್ಪುಗಳಿಂದ ದೂರವಿದ್ದರೆ ನಿಮ್ಮ ಫೋನ್ ಅನ್ನು ವೈರಸ್‌ಗಳಿಂದ ಕಾಪಾಡಿಕೊಳ್ಳಬಹುದು.

1 / 6
ಹೆಚ್ಚಿನವರು ಕೆಲವೊಮ್ಮೆ ಅಪರಿಚಿತ ಲಿಂಕ್ ಅನ್ನು ಕ್ಲಿಕ್ ಮಾಡುತ್ತಾರೆ. ಈ ತಪ್ಪು ದೊಡ್ಡ ತೊಂದರೆಗೆ ಕಾರಣವಾಗಬಹುದು. ಇಂತಹ ಕೆಲವು ಲಿಂಕ್ ಅಪಾಯಕಾರಿಯಾಗಿರುತ್ತದೆ. ಈ ಲಿಂಕ್‌ಗಳು ನಿಮ್ಮ ಸ್ಮಾರ್ಟ್​ಫೋನ್​ಗಳ ಒಳಗೆ ವೈರಸ್‌ಗಳನ್ನು ಸ್ಥಾಪಿಸಬಹುದು. ಆದ್ದರಿಂದ ಮುಂದಿನ ಬಾರಿ ತಪ್ಪಿಯೂ ಅಪರಿಚಿತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ.

ಹೆಚ್ಚಿನವರು ಕೆಲವೊಮ್ಮೆ ಅಪರಿಚಿತ ಲಿಂಕ್ ಅನ್ನು ಕ್ಲಿಕ್ ಮಾಡುತ್ತಾರೆ. ಈ ತಪ್ಪು ದೊಡ್ಡ ತೊಂದರೆಗೆ ಕಾರಣವಾಗಬಹುದು. ಇಂತಹ ಕೆಲವು ಲಿಂಕ್ ಅಪಾಯಕಾರಿಯಾಗಿರುತ್ತದೆ. ಈ ಲಿಂಕ್‌ಗಳು ನಿಮ್ಮ ಸ್ಮಾರ್ಟ್​ಫೋನ್​ಗಳ ಒಳಗೆ ವೈರಸ್‌ಗಳನ್ನು ಸ್ಥಾಪಿಸಬಹುದು. ಆದ್ದರಿಂದ ಮುಂದಿನ ಬಾರಿ ತಪ್ಪಿಯೂ ಅಪರಿಚಿತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ.

2 / 6
ಅಂತೆಯೆ ನೀವು ಯಾವುದೇ ಅಪರಿಚಿತ ಇಮೇಲ್, ಮೆಸೇಜ್ ಸ್ವೀಕರಿಸಿದರೆ ಅಥವಾ ಯಾವುದೇ ವ್ಯಕ್ತಿಯು ವಾಟ್ಸ್​ಆ್ಯಪ್​ನಲ್ಲಿ ಲಿಂಕ್ ಅನ್ನು ಹಂಚಿಕೊಂಡರೆ, ಇದೇನು ಎಂದು ನೋಡುವ ಕುತೂಹಲದಲ್ಲಿ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ತೆರೆಯದಿರಿ. ಈಗೀಗ ಈರೀತಿಯ ಫೇಕ್ ಲಿಂಕ್​ಗಳ ಹಾವಳಿ ಹೆಚ್ಚಾಗಿದೆ.

ಅಂತೆಯೆ ನೀವು ಯಾವುದೇ ಅಪರಿಚಿತ ಇಮೇಲ್, ಮೆಸೇಜ್ ಸ್ವೀಕರಿಸಿದರೆ ಅಥವಾ ಯಾವುದೇ ವ್ಯಕ್ತಿಯು ವಾಟ್ಸ್​ಆ್ಯಪ್​ನಲ್ಲಿ ಲಿಂಕ್ ಅನ್ನು ಹಂಚಿಕೊಂಡರೆ, ಇದೇನು ಎಂದು ನೋಡುವ ಕುತೂಹಲದಲ್ಲಿ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ತೆರೆಯದಿರಿ. ಈಗೀಗ ಈರೀತಿಯ ಫೇಕ್ ಲಿಂಕ್​ಗಳ ಹಾವಳಿ ಹೆಚ್ಚಾಗಿದೆ.

3 / 6
ಯಾವುದೇ ಅನುಮಾನಾಸ್ಪದ ವೆಬ್​ಸೈಟ್‌ಗೆ ಭೇಟಿ ನೀಡಬೇಡಿ. ಹಾಗೆ ಮಾಡುವುದರಿಂದ ನಿಮ್ಮ ಫೋನಿಗೆ ವೈರಸ್ ಅಟ್ಯಾಕ್ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಅಂತಹ ಸೈಟ್‌ಗೆ ಭೇಟಿ ನೀಡಿದ ನಂತರ, ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡುವುದರಿಂದ ನಿಮ್ಮ ಮೊಬೈಲ್​ಗೆ ವೈರಸ್ ಬರಬಹುದು.

ಯಾವುದೇ ಅನುಮಾನಾಸ್ಪದ ವೆಬ್​ಸೈಟ್‌ಗೆ ಭೇಟಿ ನೀಡಬೇಡಿ. ಹಾಗೆ ಮಾಡುವುದರಿಂದ ನಿಮ್ಮ ಫೋನಿಗೆ ವೈರಸ್ ಅಟ್ಯಾಕ್ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಅಂತಹ ಸೈಟ್‌ಗೆ ಭೇಟಿ ನೀಡಿದ ನಂತರ, ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡುವುದರಿಂದ ನಿಮ್ಮ ಮೊಬೈಲ್​ಗೆ ವೈರಸ್ ಬರಬಹುದು.

4 / 6
ಆಂಡ್ರಾಯ್ಡ್ ಸ್ಮಾರ್ಟ್​ಫೋನ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಐಫೋನ್​ನಲ್ಲಿ ಆ್ಯಪ್ ಸ್ಟೋರ್ ಇದೆ. ಇವುಗಳಲ್ಲಿ ಕೆಲವು ಫೇಕ್ ಆ್ಯಪ್​ಗಳು ಇರುತ್ತವೆ. ನೀವು ಯಾವುದೇ ಥರ್ಡ್ ಪಾರ್ಟಿ ಅಪ್ಲಿಕೇಷನ್ ಅನ್ನು ಇನ್​ಸ್ಟಾಲ್ ಮಾಡುವ ಮೊದಲು ಎರಡು ಬಾರಿ ಪರಿಶೀಲಿಸಿ. ಆ ಆ್ಯಪ್​ನ ಹಿನ್ನಲೆ ಬಗ್ಗೆ ತಿಳಿದುಕೊಂಡು ಮುಂದುವರೆಯಿರಿ.

ಆಂಡ್ರಾಯ್ಡ್ ಸ್ಮಾರ್ಟ್​ಫೋನ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಐಫೋನ್​ನಲ್ಲಿ ಆ್ಯಪ್ ಸ್ಟೋರ್ ಇದೆ. ಇವುಗಳಲ್ಲಿ ಕೆಲವು ಫೇಕ್ ಆ್ಯಪ್​ಗಳು ಇರುತ್ತವೆ. ನೀವು ಯಾವುದೇ ಥರ್ಡ್ ಪಾರ್ಟಿ ಅಪ್ಲಿಕೇಷನ್ ಅನ್ನು ಇನ್​ಸ್ಟಾಲ್ ಮಾಡುವ ಮೊದಲು ಎರಡು ಬಾರಿ ಪರಿಶೀಲಿಸಿ. ಆ ಆ್ಯಪ್​ನ ಹಿನ್ನಲೆ ಬಗ್ಗೆ ತಿಳಿದುಕೊಂಡು ಮುಂದುವರೆಯಿರಿ.

5 / 6
ಇಂದು ಹೋಟೆಲ್ ಅಥವಾ ರೆಸ್ಟೋರೆಂಟ್‌ ಸೇರಿದಂತೆ ಅನೇಕ ಕಡೆಗಳಲ್ಲಿ ಉಚಿತ ವೈ-ಫೈ ಲಭ್ಯವಿರುತ್ತದೆ. ಹಾಗಂತ ಇದನ್ನು ಬಳಸಿದರೆ ನಿಮಗೆ ದುಬಾರಿಯಾಗಬಹುದು. ನಿಮ್ಮ ಸ್ಮಾರ್ಟ್​ಫೋನ್ ಉಚಿತ ವೈ-ಫೈಗೆ ಸಂಪರ್ಕಿಸಿದ ತಕ್ಷಣ, ವೈರಸ್‌ಗಳು ಪ್ರವೇಶಿಸುವ ಅಪಾಯವು ಹೆಚ್ಚಿರುತ್ತದೆ. ಇವುಗಳ ಬಗ್ಗೆ ಎಚ್ಚರ ವಹಿಸಿ.

ಇಂದು ಹೋಟೆಲ್ ಅಥವಾ ರೆಸ್ಟೋರೆಂಟ್‌ ಸೇರಿದಂತೆ ಅನೇಕ ಕಡೆಗಳಲ್ಲಿ ಉಚಿತ ವೈ-ಫೈ ಲಭ್ಯವಿರುತ್ತದೆ. ಹಾಗಂತ ಇದನ್ನು ಬಳಸಿದರೆ ನಿಮಗೆ ದುಬಾರಿಯಾಗಬಹುದು. ನಿಮ್ಮ ಸ್ಮಾರ್ಟ್​ಫೋನ್ ಉಚಿತ ವೈ-ಫೈಗೆ ಸಂಪರ್ಕಿಸಿದ ತಕ್ಷಣ, ವೈರಸ್‌ಗಳು ಪ್ರವೇಶಿಸುವ ಅಪಾಯವು ಹೆಚ್ಚಿರುತ್ತದೆ. ಇವುಗಳ ಬಗ್ಗೆ ಎಚ್ಚರ ವಹಿಸಿ.

6 / 6
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ