AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp New Feature: ಒಂದೇ ವಾಟ್ಸ್​ಆ್ಯಪ್​ನಲ್ಲಿ 4-5 ಅಕೌಂಟ್: ಅರೇ, ಇದು ಹೇಗೆ ಸಾಧ್ಯ ಗೊತ್ತೇ?

WhatsApp New Switch Feature: ವಾಟ್ಸ್​ಆ್ಯಪ್​ನ ಈ ಹೊಸ ವೈಶಿಷ್ಟ್ಯದ ಮೂಲಕ ಒಂದು ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ. ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ.

Vinay Bhat
|

Updated on: Oct 11, 2023 | 6:55 AM

Share
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp) ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಿದೆ. ಈಗಾಗಲೇ ಅನೇಕ ನೂತನ ಆಯ್ಕೆಗಳು ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಇದುಕೂಡ ಬಳಕೆದಾರರಿಗೆ ಸಿಗಲಿದೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp) ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಿದೆ. ಈಗಾಗಲೇ ಅನೇಕ ನೂತನ ಆಯ್ಕೆಗಳು ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಇದುಕೂಡ ಬಳಕೆದಾರರಿಗೆ ಸಿಗಲಿದೆ.

1 / 6
ಇದರ ನಡುವೆ ವಾಟ್ಸ್​ಆ್ಯಪ್ ಮತ್ತೊಂದು ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಇನ್ನುಂದೆ ನಿಮಗೆ ಈ ಹೊಸ ವೈಶಿಷ್ಟ್ಯದ ಮೂಲಕ ಒಂದೇ ವಾಟ್ಸ್​ಆ್ಯಪ್​ನಲ್ಲಿ ವಿಭಿನ್ನ ಖಾತೆಗಳನ್ನು ಬಳಸಬಹುದಾಗಿದೆ. ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ ಎಂದು ವರದಿ ಆಗಿದೆ.

ಇದರ ನಡುವೆ ವಾಟ್ಸ್​ಆ್ಯಪ್ ಮತ್ತೊಂದು ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಇನ್ನುಂದೆ ನಿಮಗೆ ಈ ಹೊಸ ವೈಶಿಷ್ಟ್ಯದ ಮೂಲಕ ಒಂದೇ ವಾಟ್ಸ್​ಆ್ಯಪ್​ನಲ್ಲಿ ವಿಭಿನ್ನ ಖಾತೆಗಳನ್ನು ಬಳಸಬಹುದಾಗಿದೆ. ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ ಎಂದು ವರದಿ ಆಗಿದೆ.

2 / 6
ಸುಲಭವಾಗಿ ಹೇಳಬೇಕೆಂದರೆ, ಈ ಹೊಸ ವೈಶಿಷ್ಟ್ಯದ ಮೂಲಕ ಒಂದು ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ.

ಸುಲಭವಾಗಿ ಹೇಳಬೇಕೆಂದರೆ, ಈ ಹೊಸ ವೈಶಿಷ್ಟ್ಯದ ಮೂಲಕ ಒಂದು ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ.

3 / 6
ಪ್ರಸ್ತುತ, ವಾಟ್ಸ್​ಆ್ಯಪ್​ ಬಳಕೆದಾರರಿಗೆ ಒಂದು ಮೊಬೈಲ್​ನಲ್ಲಿ ಒಂದು ಖಾತೆಯೊಂದಿಗೆ ಲಾಗ್ ಇನ್ ಮಾಡಲು ಮಾತ್ರ ಅನುಮತಿಸುತ್ತದೆ. ಆದ್ದರಿಂದ, ವಿಭಿನ್ನ ಫೋನ್ ಸಂಖ್ಯೆಗಳೊಂದಿಗೆ ಎರಡು ವಾಟ್ಸ್​ಆ್ಯಪ್​ ಖಾತೆಗಳನ್ನು ಬಳಸುವ ಬಳಕೆದಾರರು ಎರಡು ಮೊಬೈಲ್​ಗಳನ್ನು ಬಳಸಬೇಕಾಗುತ್ತದೆ.

ಪ್ರಸ್ತುತ, ವಾಟ್ಸ್​ಆ್ಯಪ್​ ಬಳಕೆದಾರರಿಗೆ ಒಂದು ಮೊಬೈಲ್​ನಲ್ಲಿ ಒಂದು ಖಾತೆಯೊಂದಿಗೆ ಲಾಗ್ ಇನ್ ಮಾಡಲು ಮಾತ್ರ ಅನುಮತಿಸುತ್ತದೆ. ಆದ್ದರಿಂದ, ವಿಭಿನ್ನ ಫೋನ್ ಸಂಖ್ಯೆಗಳೊಂದಿಗೆ ಎರಡು ವಾಟ್ಸ್​ಆ್ಯಪ್​ ಖಾತೆಗಳನ್ನು ಬಳಸುವ ಬಳಕೆದಾರರು ಎರಡು ಮೊಬೈಲ್​ಗಳನ್ನು ಬಳಸಬೇಕಾಗುತ್ತದೆ.

4 / 6
ಈ ವೈಶಿಷ್ಟ್ಯವು ಪ್ರಸ್ತುತ ಕೆಲವು ಬೀಟಾ ಪರೀಕ್ಷಕರಿಗೆ ಲಭ್ಯವಿದೆ ಮತ್ತು ಮುಂಬರುವ ವಾರಗಳಲ್ಲಿ ಹೆಚ್ಚಿನ ಬಳಕೆದಾರರಿಗೆ ಹೊರತರಲಾಗುವುದು ಎಂದು ವರದಿಗಳು ಹೇಳಿದೆ. ಆಂಡ್ರಾಯ್ಡ್ ಆವೃತ್ತಿ 2.23.17.8 ಗಾಗಿ ವಾಟ್ಸ್​ಆ್ಯಪ್​ ಬೀಟಾವನ್ನು ಅಪ್‌ಡೇಟ್ ಮಾಡಿದರೆ ಈ ಆಯ್ಕೆ ಸಿಗಲಿದೆ. ಆದಾಗ್ಯೂ ಕೆಲವು ಬಳಕೆದಾರರಿಗೆ ಹಿಂದಿನ 2.23.17.7 ಆವೃತ್ತಿಯಲ್ಲಿ ಈ ವೈಶಿಷ್ಟ್ಯವನ್ನು ಉಪಯೋಗಿಸಲು ಸಾಧ್ಯವಾಗುತ್ತಿದೆ.

ಈ ವೈಶಿಷ್ಟ್ಯವು ಪ್ರಸ್ತುತ ಕೆಲವು ಬೀಟಾ ಪರೀಕ್ಷಕರಿಗೆ ಲಭ್ಯವಿದೆ ಮತ್ತು ಮುಂಬರುವ ವಾರಗಳಲ್ಲಿ ಹೆಚ್ಚಿನ ಬಳಕೆದಾರರಿಗೆ ಹೊರತರಲಾಗುವುದು ಎಂದು ವರದಿಗಳು ಹೇಳಿದೆ. ಆಂಡ್ರಾಯ್ಡ್ ಆವೃತ್ತಿ 2.23.17.8 ಗಾಗಿ ವಾಟ್ಸ್​ಆ್ಯಪ್​ ಬೀಟಾವನ್ನು ಅಪ್‌ಡೇಟ್ ಮಾಡಿದರೆ ಈ ಆಯ್ಕೆ ಸಿಗಲಿದೆ. ಆದಾಗ್ಯೂ ಕೆಲವು ಬಳಕೆದಾರರಿಗೆ ಹಿಂದಿನ 2.23.17.7 ಆವೃತ್ತಿಯಲ್ಲಿ ಈ ವೈಶಿಷ್ಟ್ಯವನ್ನು ಉಪಯೋಗಿಸಲು ಸಾಧ್ಯವಾಗುತ್ತಿದೆ.

5 / 6
ಈ ವೈಶಿಷ್ಟ್ಯ ಬಳಸಲು, ಬಳಕೆದಾರರು QR ಕೋಡ್ ಬಟನ್ ಬಳಿ ಇರುವ ಬಾಣದ ಐಕಾನ್ ಅನ್ನು ಟ್ಯಾಪ್ ಮಾಡುವ ಮೂಲಕ ಹೊಸ ವಾಟ್ಸ್​ಆ್ಯಪ್​ ಖಾತೆಯನ್ನು ಸೇರಿಸಲು ಸಾಧ್ಯವಾಗುತ್ತದೆ. ಅದೇ ಮೆನುವಿನಲ್ಲಿ ಬೇರೆ ಖಾತೆಗೆ ಬದಲಾಯಿಸುವ ಆಯ್ಕೆ ಇದೆ. ಹೊಸದಾಗಿ ಸೇರಿಸಲಾದ ಖಾತೆಯನ್ನು ಲಾಗ್ ಔಟ್ ಮಾಡಲು ಆಯ್ಕೆ ಕೂಡ ನೀಡಲಾಗಿದೆ.

ಈ ವೈಶಿಷ್ಟ್ಯ ಬಳಸಲು, ಬಳಕೆದಾರರು QR ಕೋಡ್ ಬಟನ್ ಬಳಿ ಇರುವ ಬಾಣದ ಐಕಾನ್ ಅನ್ನು ಟ್ಯಾಪ್ ಮಾಡುವ ಮೂಲಕ ಹೊಸ ವಾಟ್ಸ್​ಆ್ಯಪ್​ ಖಾತೆಯನ್ನು ಸೇರಿಸಲು ಸಾಧ್ಯವಾಗುತ್ತದೆ. ಅದೇ ಮೆನುವಿನಲ್ಲಿ ಬೇರೆ ಖಾತೆಗೆ ಬದಲಾಯಿಸುವ ಆಯ್ಕೆ ಇದೆ. ಹೊಸದಾಗಿ ಸೇರಿಸಲಾದ ಖಾತೆಯನ್ನು ಲಾಗ್ ಔಟ್ ಮಾಡಲು ಆಯ್ಕೆ ಕೂಡ ನೀಡಲಾಗಿದೆ.

6 / 6
Follow Us
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!