AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಸೂರ್ಯ ಮದುವೆ: ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಜತೆ ದಾಂಪತ್ಯಕ್ಕೆ ಕಾಲಿಟ್ಟ ಸೂರ್ಯ, ಇಲ್ಲಿವೆ ಫೊಟೋಸ್

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವಿವಾಹ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್​ನಲ್ಲಿ ನೆರವೇರಿತು. ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ನಡೆಯಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ವಿ ಸೋಮಣ್ಣ ಸೇರಿದಂತೆ ಅನೇಕ ಬಿಜೆಪಿ ನಾಯಕರು ವಿವಾಹ ಸಮಾರಂಭಕ್ಕೆ ಹಾಜರಾಗಿ ವಧೂವರರಿಗೆ ಶುಭ ಹಾರೈಸಿದರು.

Ganapathi Sharma
|

Updated on: Mar 06, 2025 | 12:55 PM

Share
ಶಿವಶ್ರೀ ಸ್ಕಂದಪ್ರಸಾದ್ ಮತ್ತು ತೇಜಸ್ವಿ ಸೂರ್ಯ ಸರಳ ಮತ್ತು ಸಾಂಪ್ರದಾಯಿಕ ಉಡುಪುಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆದರು. ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಭವ್ಯವಾದ ಆರತಕ್ಷತೆ ನಡೆಯಲಿದೆ ಎಂದು ತೇಜಸ್ವಿ ಸೂರ್ಯ ಕುಟುಂಬದ ಮೂಲಗಳು ತಿಳಿಸಿವೆ.

ಶಿವಶ್ರೀ ಸ್ಕಂದಪ್ರಸಾದ್ ಮತ್ತು ತೇಜಸ್ವಿ ಸೂರ್ಯ ಸರಳ ಮತ್ತು ಸಾಂಪ್ರದಾಯಿಕ ಉಡುಪುಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆದರು. ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಭವ್ಯವಾದ ಆರತಕ್ಷತೆ ನಡೆಯಲಿದೆ ಎಂದು ತೇಜಸ್ವಿ ಸೂರ್ಯ ಕುಟುಂಬದ ಮೂಲಗಳು ತಿಳಿಸಿವೆ.

1 / 5
ಶಿವಶ್ರೀ ಸ್ಕಂದಪ್ರಸಾದ್ ಪ್ರಸಿದ್ಧ ಕರ್ನಾಟಕ ಸಂಗೀತ ಗಾಯಕಿ ಮತ್ತು ಚೆನ್ನೈನ ಭರತನಾಟ್ಯಂ ಕಲಾವಿದೆ. 1996 ರ ಆಗಸ್ಟ್ 1 ರಂದು ಜನಿಸಿದ ಅವರು, ಮೃದಂಗ ಕಲಾವಿದ ಸೀರ್ಕಾಳಿ ಶ್ರೀ ಜೆ ಸ್ಕಂದಪ್ರಸಾದ್ ಅವರ ಪುತ್ರಿ.

ಶಿವಶ್ರೀ ಸ್ಕಂದಪ್ರಸಾದ್ ಪ್ರಸಿದ್ಧ ಕರ್ನಾಟಕ ಸಂಗೀತ ಗಾಯಕಿ ಮತ್ತು ಚೆನ್ನೈನ ಭರತನಾಟ್ಯಂ ಕಲಾವಿದೆ. 1996 ರ ಆಗಸ್ಟ್ 1 ರಂದು ಜನಿಸಿದ ಅವರು, ಮೃದಂಗ ಕಲಾವಿದ ಸೀರ್ಕಾಳಿ ಶ್ರೀ ಜೆ ಸ್ಕಂದಪ್ರಸಾದ್ ಅವರ ಪುತ್ರಿ.

2 / 5
ಅವರು SASTRA ವಿಶ್ವವಿದ್ಯಾಲಯದಿಂದ ಬಯೋ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಭ್ರೂಣದ ದೋಷಗಳ ಬಗ್ಗೆಯೂ ಅಧ್ಯಯನ ಮಾಡಿದ್ದಾರೆ. ಅಲ್ಲದೆ, PVA ಆಯುರ್ವೇದ ಆಸ್ಪತ್ರೆಯಿಂದ ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ ಪಡೆದಿದ್ದಾರೆ. ಅವರು ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದಾರೆ.

ಅವರು SASTRA ವಿಶ್ವವಿದ್ಯಾಲಯದಿಂದ ಬಯೋ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಭ್ರೂಣದ ದೋಷಗಳ ಬಗ್ಗೆಯೂ ಅಧ್ಯಯನ ಮಾಡಿದ್ದಾರೆ. ಅಲ್ಲದೆ, PVA ಆಯುರ್ವೇದ ಆಸ್ಪತ್ರೆಯಿಂದ ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ ಪಡೆದಿದ್ದಾರೆ. ಅವರು ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದಾರೆ.

3 / 5
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಗಣ್ಯರು ವಿವಾಹ ಸಮಾರಂಭಕ್ಕೆ ಸಾಕ್ಷಿಯಾದರು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಗಣ್ಯರು ವಿವಾಹ ಸಮಾರಂಭಕ್ಕೆ ಸಾಕ್ಷಿಯಾದರು.

4 / 5
ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ಗಿರಿನಗರದಲ್ಲಿರುವ ನಿವಾಸದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ನಂತರ ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಆರತಕ್ಷತೆ ನಡೆಯಲಿದೆ.

ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ಗಿರಿನಗರದಲ್ಲಿರುವ ನಿವಾಸದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ನಂತರ ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಆರತಕ್ಷತೆ ನಡೆಯಲಿದೆ.

5 / 5
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!