AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India strikes Pakistan: ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ

ನವದೆಹಲಿ, ಮೇ 7: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಒಟ್ಟು 9 ಪ್ರದೇಶಗಳಲ್ಲಿ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಭಾರತದ ಮೇಲಿನ ಅನೇಕ ದಾಳಿಗಳ ಹಿಂದೆ ಇದ್ದ ಈ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. 4 ಜೈಶ್-ಎ-ಮೊಹಮ್ಮದ್, 3 ಲಷ್ಕರ್-ಎ-ತೈಬಾ ಮತ್ತು 2 ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

Ganapathi Sharma
|

Updated on: May 07, 2025 | 9:24 AM

Share
ಭಾರತ ಗುರಿಯಾಗಿಸಿಕೊಂಡಿರುವ ಭಯೋತ್ಪಾದಕ ಅಡಗುತಾಣಗಳಲ್ಲಿ ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯೂ ಸೇರಿದೆ. ಇದಲ್ಲದೆ, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಶಿಬಿರಗಳನ್ನು ಸಹ ನಾಶಪಡಿಸಲಾಗಿದೆ. ಅಂತಾರಾಷ್ಟ್ರೀಯ ಗಡಿಯಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಮತ್ತು ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿ ಇರುವ ಬಹವಾಲ್‌ಪುರದಲ್ಲಿ ಅತಿದೊಡ್ಡ ದಾಳಿ ನಡೆಸಲಾಯಿತು.

ಭಾರತ ಗುರಿಯಾಗಿಸಿಕೊಂಡಿರುವ ಭಯೋತ್ಪಾದಕ ಅಡಗುತಾಣಗಳಲ್ಲಿ ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯೂ ಸೇರಿದೆ. ಇದಲ್ಲದೆ, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಶಿಬಿರಗಳನ್ನು ಸಹ ನಾಶಪಡಿಸಲಾಗಿದೆ. ಅಂತಾರಾಷ್ಟ್ರೀಯ ಗಡಿಯಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಮತ್ತು ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿ ಇರುವ ಬಹವಾಲ್‌ಪುರದಲ್ಲಿ ಅತಿದೊಡ್ಡ ದಾಳಿ ನಡೆಸಲಾಯಿತು.

1 / 5
ಭಾರತದ ಆಪರೇಷನ್ ಸಿಂಧೂರ್ ನಂತರ, ಪಾಕಿಸ್ತಾನವು ಆಕ್ರೋಶಗೊಂಡಿದ್ದು ದುಷ್ಟ ಚಟುವಟಿಕೆಗಳನ್ನು ಮುಂದುವರೆಸಿದೆ. ಪಾಕಿಸ್ತಾನ ಸೇನೆಯು ಸಾಮಾನ್ಯ ಭಾರತೀಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಾದ್ಯಂತ ಗುಂಡಿನ ದಾಳಿ ನಡೆಸಿದ್ದು, 3 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಭಾರತದ ಆಪರೇಷನ್ ಸಿಂಧೂರ್ ನಂತರ, ಪಾಕಿಸ್ತಾನವು ಆಕ್ರೋಶಗೊಂಡಿದ್ದು ದುಷ್ಟ ಚಟುವಟಿಕೆಗಳನ್ನು ಮುಂದುವರೆಸಿದೆ. ಪಾಕಿಸ್ತಾನ ಸೇನೆಯು ಸಾಮಾನ್ಯ ಭಾರತೀಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಾದ್ಯಂತ ಗುಂಡಿನ ದಾಳಿ ನಡೆಸಿದ್ದು, 3 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

2 / 5
ಸಾಂಬಾ ಸೆಕ್ಟರ್ ಗಡಿಯಿಂದ 30 ಕಿ.ಮೀ ದೂರದಲ್ಲಿರುವ ಮುರಿಡ್ಕೆ ಎಂಬ ಸ್ಥಳದಲ್ಲಿ ಲಷ್ಕರ್-ಎ-ತಯ್ಬಾ ಶಿಬಿರವಿತ್ತು . ಅದೂ ಕೂಡ ದಾಳಿಯಲ್ಲಿ ಧ್ವಂಸಗೊಂಡಿದೆ. ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ ದಾಳಿಯ ಭಯೋತ್ಪಾದಕರು ಇಲ್ಲಿಂದಲೇ ಬಂದವರು ಎನ್ನಲಾಗಿದೆ.

ಸಾಂಬಾ ಸೆಕ್ಟರ್ ಗಡಿಯಿಂದ 30 ಕಿ.ಮೀ ದೂರದಲ್ಲಿರುವ ಮುರಿಡ್ಕೆ ಎಂಬ ಸ್ಥಳದಲ್ಲಿ ಲಷ್ಕರ್-ಎ-ತಯ್ಬಾ ಶಿಬಿರವಿತ್ತು . ಅದೂ ಕೂಡ ದಾಳಿಯಲ್ಲಿ ಧ್ವಂಸಗೊಂಡಿದೆ. ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ ದಾಳಿಯ ಭಯೋತ್ಪಾದಕರು ಇಲ್ಲಿಂದಲೇ ಬಂದವರು ಎನ್ನಲಾಗಿದೆ.

3 / 5
ಮೂರನೇ ದಾಳಿ ಗುಲ್ಪುರದಲ್ಲಿ ನಡೆಸಲಾಯಿತು. ಇದು ಪೂಂಚ್-ರಾಜೌರಿಯ ಎಲ್‌ಒಸಿಯ ಒಳಗೆ ಸುಮಾರು 35 ಕಿ.ಮೀ ದೂರದಲ್ಲಿದೆ. 2023 ರ ಏಪ್ರಿಲ್ 20 ರಂದು ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಮತ್ತು 2024 ರ ಜೂನ್​​ನಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್ ಮೇಲೆ ನಡೆದ ದಾಳಿಗೆ ಈ ಪ್ರದೇಶಗಳಿಂದಲೇ ಸಂಚು ಹೂಡಲಾಗಿತ್ತು ಮತ್ತು ಉಗ್ರರನ್ನು ಕಳುಹಿಸಲಾಗಿತ್ತು.

ಮೂರನೇ ದಾಳಿ ಗುಲ್ಪುರದಲ್ಲಿ ನಡೆಸಲಾಯಿತು. ಇದು ಪೂಂಚ್-ರಾಜೌರಿಯ ಎಲ್‌ಒಸಿಯ ಒಳಗೆ ಸುಮಾರು 35 ಕಿ.ಮೀ ದೂರದಲ್ಲಿದೆ. 2023 ರ ಏಪ್ರಿಲ್ 20 ರಂದು ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಮತ್ತು 2024 ರ ಜೂನ್​​ನಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್ ಮೇಲೆ ನಡೆದ ದಾಳಿಗೆ ಈ ಪ್ರದೇಶಗಳಿಂದಲೇ ಸಂಚು ಹೂಡಲಾಗಿತ್ತು ಮತ್ತು ಉಗ್ರರನ್ನು ಕಳುಹಿಸಲಾಗಿತ್ತು.

4 / 5
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಫರಾಬಾದ್ ಬಳಿ ಭಾರತೀಯ ಸೇನೆಯ ಕ್ಷಿಪಣಿ ದಾಳಿಯಿಂದ ಹಾನಿಗೊಳಗಾದ ಕಟ್ಟಡವನ್ನು ಪಾಕಿಸ್ತಾನ ಸೇನಾ ಸೈನಿಕರು ಪರಿಶೀಲಿಸಿದರು. ಪಿಒಕೆ ವ್ಯಾಪ್ತಿಯ ಸುಮಾರು 5 ಉಗ್ರರ ತಾಣಗಳ ಮೇಲೆ ಭಾರತ ದಾಳಿ ನಡೆಸಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಫರಾಬಾದ್ ಬಳಿ ಭಾರತೀಯ ಸೇನೆಯ ಕ್ಷಿಪಣಿ ದಾಳಿಯಿಂದ ಹಾನಿಗೊಳಗಾದ ಕಟ್ಟಡವನ್ನು ಪಾಕಿಸ್ತಾನ ಸೇನಾ ಸೈನಿಕರು ಪರಿಶೀಲಿಸಿದರು. ಪಿಒಕೆ ವ್ಯಾಪ್ತಿಯ ಸುಮಾರು 5 ಉಗ್ರರ ತಾಣಗಳ ಮೇಲೆ ಭಾರತ ದಾಳಿ ನಡೆಸಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ