AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India strikes Pakistan: ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ

ನವದೆಹಲಿ, ಮೇ 7: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಒಟ್ಟು 9 ಪ್ರದೇಶಗಳಲ್ಲಿ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಭಾರತದ ಮೇಲಿನ ಅನೇಕ ದಾಳಿಗಳ ಹಿಂದೆ ಇದ್ದ ಈ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. 4 ಜೈಶ್-ಎ-ಮೊಹಮ್ಮದ್, 3 ಲಷ್ಕರ್-ಎ-ತೈಬಾ ಮತ್ತು 2 ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

Ganapathi Sharma
|

Updated on: May 07, 2025 | 9:24 AM

Share
ಭಾರತ ಗುರಿಯಾಗಿಸಿಕೊಂಡಿರುವ ಭಯೋತ್ಪಾದಕ ಅಡಗುತಾಣಗಳಲ್ಲಿ ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯೂ ಸೇರಿದೆ. ಇದಲ್ಲದೆ, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಶಿಬಿರಗಳನ್ನು ಸಹ ನಾಶಪಡಿಸಲಾಗಿದೆ. ಅಂತಾರಾಷ್ಟ್ರೀಯ ಗಡಿಯಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಮತ್ತು ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿ ಇರುವ ಬಹವಾಲ್‌ಪುರದಲ್ಲಿ ಅತಿದೊಡ್ಡ ದಾಳಿ ನಡೆಸಲಾಯಿತು.

ಭಾರತ ಗುರಿಯಾಗಿಸಿಕೊಂಡಿರುವ ಭಯೋತ್ಪಾದಕ ಅಡಗುತಾಣಗಳಲ್ಲಿ ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯೂ ಸೇರಿದೆ. ಇದಲ್ಲದೆ, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಶಿಬಿರಗಳನ್ನು ಸಹ ನಾಶಪಡಿಸಲಾಗಿದೆ. ಅಂತಾರಾಷ್ಟ್ರೀಯ ಗಡಿಯಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಮತ್ತು ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿ ಇರುವ ಬಹವಾಲ್‌ಪುರದಲ್ಲಿ ಅತಿದೊಡ್ಡ ದಾಳಿ ನಡೆಸಲಾಯಿತು.

1 / 5
ಭಾರತದ ಆಪರೇಷನ್ ಸಿಂಧೂರ್ ನಂತರ, ಪಾಕಿಸ್ತಾನವು ಆಕ್ರೋಶಗೊಂಡಿದ್ದು ದುಷ್ಟ ಚಟುವಟಿಕೆಗಳನ್ನು ಮುಂದುವರೆಸಿದೆ. ಪಾಕಿಸ್ತಾನ ಸೇನೆಯು ಸಾಮಾನ್ಯ ಭಾರತೀಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಾದ್ಯಂತ ಗುಂಡಿನ ದಾಳಿ ನಡೆಸಿದ್ದು, 3 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಭಾರತದ ಆಪರೇಷನ್ ಸಿಂಧೂರ್ ನಂತರ, ಪಾಕಿಸ್ತಾನವು ಆಕ್ರೋಶಗೊಂಡಿದ್ದು ದುಷ್ಟ ಚಟುವಟಿಕೆಗಳನ್ನು ಮುಂದುವರೆಸಿದೆ. ಪಾಕಿಸ್ತಾನ ಸೇನೆಯು ಸಾಮಾನ್ಯ ಭಾರತೀಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಾದ್ಯಂತ ಗುಂಡಿನ ದಾಳಿ ನಡೆಸಿದ್ದು, 3 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

2 / 5
ಸಾಂಬಾ ಸೆಕ್ಟರ್ ಗಡಿಯಿಂದ 30 ಕಿ.ಮೀ ದೂರದಲ್ಲಿರುವ ಮುರಿಡ್ಕೆ ಎಂಬ ಸ್ಥಳದಲ್ಲಿ ಲಷ್ಕರ್-ಎ-ತಯ್ಬಾ ಶಿಬಿರವಿತ್ತು . ಅದೂ ಕೂಡ ದಾಳಿಯಲ್ಲಿ ಧ್ವಂಸಗೊಂಡಿದೆ. ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ ದಾಳಿಯ ಭಯೋತ್ಪಾದಕರು ಇಲ್ಲಿಂದಲೇ ಬಂದವರು ಎನ್ನಲಾಗಿದೆ.

ಸಾಂಬಾ ಸೆಕ್ಟರ್ ಗಡಿಯಿಂದ 30 ಕಿ.ಮೀ ದೂರದಲ್ಲಿರುವ ಮುರಿಡ್ಕೆ ಎಂಬ ಸ್ಥಳದಲ್ಲಿ ಲಷ್ಕರ್-ಎ-ತಯ್ಬಾ ಶಿಬಿರವಿತ್ತು . ಅದೂ ಕೂಡ ದಾಳಿಯಲ್ಲಿ ಧ್ವಂಸಗೊಂಡಿದೆ. ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ ದಾಳಿಯ ಭಯೋತ್ಪಾದಕರು ಇಲ್ಲಿಂದಲೇ ಬಂದವರು ಎನ್ನಲಾಗಿದೆ.

3 / 5
ಮೂರನೇ ದಾಳಿ ಗುಲ್ಪುರದಲ್ಲಿ ನಡೆಸಲಾಯಿತು. ಇದು ಪೂಂಚ್-ರಾಜೌರಿಯ ಎಲ್‌ಒಸಿಯ ಒಳಗೆ ಸುಮಾರು 35 ಕಿ.ಮೀ ದೂರದಲ್ಲಿದೆ. 2023 ರ ಏಪ್ರಿಲ್ 20 ರಂದು ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಮತ್ತು 2024 ರ ಜೂನ್​​ನಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್ ಮೇಲೆ ನಡೆದ ದಾಳಿಗೆ ಈ ಪ್ರದೇಶಗಳಿಂದಲೇ ಸಂಚು ಹೂಡಲಾಗಿತ್ತು ಮತ್ತು ಉಗ್ರರನ್ನು ಕಳುಹಿಸಲಾಗಿತ್ತು.

ಮೂರನೇ ದಾಳಿ ಗುಲ್ಪುರದಲ್ಲಿ ನಡೆಸಲಾಯಿತು. ಇದು ಪೂಂಚ್-ರಾಜೌರಿಯ ಎಲ್‌ಒಸಿಯ ಒಳಗೆ ಸುಮಾರು 35 ಕಿ.ಮೀ ದೂರದಲ್ಲಿದೆ. 2023 ರ ಏಪ್ರಿಲ್ 20 ರಂದು ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಮತ್ತು 2024 ರ ಜೂನ್​​ನಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್ ಮೇಲೆ ನಡೆದ ದಾಳಿಗೆ ಈ ಪ್ರದೇಶಗಳಿಂದಲೇ ಸಂಚು ಹೂಡಲಾಗಿತ್ತು ಮತ್ತು ಉಗ್ರರನ್ನು ಕಳುಹಿಸಲಾಗಿತ್ತು.

4 / 5
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಫರಾಬಾದ್ ಬಳಿ ಭಾರತೀಯ ಸೇನೆಯ ಕ್ಷಿಪಣಿ ದಾಳಿಯಿಂದ ಹಾನಿಗೊಳಗಾದ ಕಟ್ಟಡವನ್ನು ಪಾಕಿಸ್ತಾನ ಸೇನಾ ಸೈನಿಕರು ಪರಿಶೀಲಿಸಿದರು. ಪಿಒಕೆ ವ್ಯಾಪ್ತಿಯ ಸುಮಾರು 5 ಉಗ್ರರ ತಾಣಗಳ ಮೇಲೆ ಭಾರತ ದಾಳಿ ನಡೆಸಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಫರಾಬಾದ್ ಬಳಿ ಭಾರತೀಯ ಸೇನೆಯ ಕ್ಷಿಪಣಿ ದಾಳಿಯಿಂದ ಹಾನಿಗೊಳಗಾದ ಕಟ್ಟಡವನ್ನು ಪಾಕಿಸ್ತಾನ ಸೇನಾ ಸೈನಿಕರು ಪರಿಶೀಲಿಸಿದರು. ಪಿಒಕೆ ವ್ಯಾಪ್ತಿಯ ಸುಮಾರು 5 ಉಗ್ರರ ತಾಣಗಳ ಮೇಲೆ ಭಾರತ ದಾಳಿ ನಡೆಸಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ