AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ತರುಣ್ ಸುಧೀರ್​-ಸೋನಲ್​ ಮದುವೆಗೆ ಸಾಕ್ಷಿಯಾದ ಸ್ಯಾಂಡಲ್​ವುಡ್​

ಸೋನಲ್​ ಮಾಂತೆರೋ ಹಾಗೂ ತರುಣ್​ ಸುಧೀರ್ ಅವರ ಮದುವೆ ಹಿಂದೂ ಸಂಪ್ರದಾಯದಂತೆ ನಡೆದಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಜರುಗಿದ ವಿವಾಹ ಸಮಾರಂಭದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆದರು. ನವಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಗಣ್ಯರು ಬಂದು ಸೋನಲ್​ ಮತ್ತು ತರುಣ್​ಗೆ ಹಾರೈಸಿದ್ದಾರೆ.

ಮದನ್​ ಕುಮಾರ್​
|

Updated on: Aug 11, 2024 | 6:04 PM

Share
ಸ್ಯಾಂಡಲ್​ವುಡ್​ನಲ್ಲಿ ತರುಣ್​ ಸುಧೀರ್​ ಅವರು ಯಶಸ್ವಿ ನಿರ್ದೇಶಕನಾಗಿದ್ದಾರೆ. ‘ಕಾಟೇರ’ ಸಿನಿಮಾದ ಬಿಗ್​ ಸಕ್ಸಸ್​ ಬಳಿಕ ಅವರು ವೈವಾಹಿಕ ಜೀವನಕ್ಕೆ ಕಾಲಿಡುವ ಬಗ್ಗೆ ಆಲೋಚಿಸಿದರು. ಇಂದು (ಆಗಸ್ಟ್​ 11) ನಟಿ ಸೋನಲ್​ ಜೊತೆ ತರುಣ್​ ಮದುವೆ ನೆರವೇರಿದೆ.

ಸ್ಯಾಂಡಲ್​ವುಡ್​ನಲ್ಲಿ ತರುಣ್​ ಸುಧೀರ್​ ಅವರು ಯಶಸ್ವಿ ನಿರ್ದೇಶಕನಾಗಿದ್ದಾರೆ. ‘ಕಾಟೇರ’ ಸಿನಿಮಾದ ಬಿಗ್​ ಸಕ್ಸಸ್​ ಬಳಿಕ ಅವರು ವೈವಾಹಿಕ ಜೀವನಕ್ಕೆ ಕಾಲಿಡುವ ಬಗ್ಗೆ ಆಲೋಚಿಸಿದರು. ಇಂದು (ಆಗಸ್ಟ್​ 11) ನಟಿ ಸೋನಲ್​ ಜೊತೆ ತರುಣ್​ ಮದುವೆ ನೆರವೇರಿದೆ.

1 / 7
ಸೋನಲ್​ ಮಾಂತೆರೋ ಅವರು ಕನ್ನಡ ಚಿತ್ರರಂಗದಲ್ಲಿ ಉದಯೋನ್ಮುಖ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ರಾಬರ್ಟ್​’ ಚಿತ್ರದಲ್ಲಿ ತರುಣ್​ ಸುಧೀರ್​ ಜೊತೆ ಕೆಲಸ ಮಾಡಿದ ಸೋನಲ್​ ಅವರು ಈಗ ದಾಂಪತ್ಯ ಜೀವನ ಆರಂಭಿಸಿದ್ದಾರೆ.

ಸೋನಲ್​ ಮಾಂತೆರೋ ಅವರು ಕನ್ನಡ ಚಿತ್ರರಂಗದಲ್ಲಿ ಉದಯೋನ್ಮುಖ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ರಾಬರ್ಟ್​’ ಚಿತ್ರದಲ್ಲಿ ತರುಣ್​ ಸುಧೀರ್​ ಜೊತೆ ಕೆಲಸ ಮಾಡಿದ ಸೋನಲ್​ ಅವರು ಈಗ ದಾಂಪತ್ಯ ಜೀವನ ಆರಂಭಿಸಿದ್ದಾರೆ.

2 / 7
ಬೆಂಗಳೂರಿನಲ್ಲಿ ಸಖತ್​ ಗ್ರ್ಯಾಂಡ್​ ಆಗಿ ತರುಣ್​ ಸುಧೀರ್​ ಮತ್ತು ಸೋನಲ್​ ಮಾಂತೆರೋ ಅವರು ಮದುವೆ ಆಗಿದ್ದಾರೆ. ಆಗಸ್ಟ್​ 10ರ ಸಂಜೆ ರಿಸೆಪ್ಷನ್​ ನಡೆದಿತ್ತು. ಆ.11ರಂದು ವಿವಾಹ ಸಮಾರಂಭ ಜರುಗಿತು. ಮದುವೆಯ ಫೋಟೋಗಳು ಲಭ್ಯವಾಗಿವೆ.

ಬೆಂಗಳೂರಿನಲ್ಲಿ ಸಖತ್​ ಗ್ರ್ಯಾಂಡ್​ ಆಗಿ ತರುಣ್​ ಸುಧೀರ್​ ಮತ್ತು ಸೋನಲ್​ ಮಾಂತೆರೋ ಅವರು ಮದುವೆ ಆಗಿದ್ದಾರೆ. ಆಗಸ್ಟ್​ 10ರ ಸಂಜೆ ರಿಸೆಪ್ಷನ್​ ನಡೆದಿತ್ತು. ಆ.11ರಂದು ವಿವಾಹ ಸಮಾರಂಭ ಜರುಗಿತು. ಮದುವೆಯ ಫೋಟೋಗಳು ಲಭ್ಯವಾಗಿವೆ.

3 / 7
ಹಿರಿಯ ನಟಿಯರಾದ ಶ್ರುತಿ, ಸುಧಾರಾಣಿ, ಮಾಳವಿಕಾ ಅವಿನಾಶ್​, ನಟ ನೆನಪಿರಲಿ ಪ್ರೇಮ್​ ಸೇರಿದಂತೆ ಅನೇಕ ಕಲಾವಿದರು ಈ ಮದುವೆಗೆ ಸಾಕ್ಷಿಯಾದರು. ಚಿತ್ರರಂಗದ ಬಹುತೇಕ ಎಲ್ಲರ ಜೊತೆಗೂ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ.

ಹಿರಿಯ ನಟಿಯರಾದ ಶ್ರುತಿ, ಸುಧಾರಾಣಿ, ಮಾಳವಿಕಾ ಅವಿನಾಶ್​, ನಟ ನೆನಪಿರಲಿ ಪ್ರೇಮ್​ ಸೇರಿದಂತೆ ಅನೇಕ ಕಲಾವಿದರು ಈ ಮದುವೆಗೆ ಸಾಕ್ಷಿಯಾದರು. ಚಿತ್ರರಂಗದ ಬಹುತೇಕ ಎಲ್ಲರ ಜೊತೆಗೂ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ.

4 / 7
ತರುಣ್​ ಸುಧೀರ್​ ಹಾಗೂ ಸೋನಲ್​ ಮಾಂತೆರೋ ಅವರ ಬಾಳಿನಲ್ಲಿ ಈಗ ಹೊಸ ಅಧ್ಯಾಯ ಆರಂಭ ಆಗಿದೆ. ಸಂಗೀತ ನಿರ್ದೇಶಕ ಹರಿಕೃಷ್ಣ, ಜನಪ್ರಿಯ ಗಾಯಕ ವಿಜಯ್​ ಪ್ರಕಾಶ್​ ಮುಂತಾದವರು ಕೂಡ ವಿವಾಹಕ್ಕೆ ಹಾಜರಿ ಹಾಕಿದರು.

ತರುಣ್​ ಸುಧೀರ್​ ಹಾಗೂ ಸೋನಲ್​ ಮಾಂತೆರೋ ಅವರ ಬಾಳಿನಲ್ಲಿ ಈಗ ಹೊಸ ಅಧ್ಯಾಯ ಆರಂಭ ಆಗಿದೆ. ಸಂಗೀತ ನಿರ್ದೇಶಕ ಹರಿಕೃಷ್ಣ, ಜನಪ್ರಿಯ ಗಾಯಕ ವಿಜಯ್​ ಪ್ರಕಾಶ್​ ಮುಂತಾದವರು ಕೂಡ ವಿವಾಹಕ್ಕೆ ಹಾಜರಿ ಹಾಕಿದರು.

5 / 7
ಬಹುಭಾಷಾ ನಟ ಜಗಪತಿ ಬಾಬು ಅವರು ಬೆಂಗಳೂರಿಗೆ ಬಂದು ಈ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ತರುಣ್​ ಸುಧೀರ್​ ನಿರ್ದೇಶನ ಮಾಡಿದ ‘ರಾಬರ್ಟ್​’, ‘ಕಾಟೇರ’ ಸಿನಿಮಾಗಳಲ್ಲಿ ಜಗಪತಿ ಅವರು ನಟಿಸಿದ್ದಾರೆ. ಇಬ್ಬರ ನಡುವೆ ಬಾಂಧವ್ಯ ಇದೆ.

ಬಹುಭಾಷಾ ನಟ ಜಗಪತಿ ಬಾಬು ಅವರು ಬೆಂಗಳೂರಿಗೆ ಬಂದು ಈ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ತರುಣ್​ ಸುಧೀರ್​ ನಿರ್ದೇಶನ ಮಾಡಿದ ‘ರಾಬರ್ಟ್​’, ‘ಕಾಟೇರ’ ಸಿನಿಮಾಗಳಲ್ಲಿ ಜಗಪತಿ ಅವರು ನಟಿಸಿದ್ದಾರೆ. ಇಬ್ಬರ ನಡುವೆ ಬಾಂಧವ್ಯ ಇದೆ.

6 / 7
ನಿರೂಪಕಿ ಅನುಶ್ರೀ, ನಟಿ ನಿಶ್ವಿಕಾ ನಾಯ್ಡು, ರಚಿತಾ ರಾಮ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ ಮದುವೆಗೆ ಬಂದು ಶುಭ ಕೋರಿದ್ದಾರೆ. ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

ನಿರೂಪಕಿ ಅನುಶ್ರೀ, ನಟಿ ನಿಶ್ವಿಕಾ ನಾಯ್ಡು, ರಚಿತಾ ರಾಮ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ ಮದುವೆಗೆ ಬಂದು ಶುಭ ಕೋರಿದ್ದಾರೆ. ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

7 / 7
Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು