
ಸ್ಯಾಂಡಲ್ವುಡ್ನಲ್ಲಿ ನಿರ್ದೇಶಕ ತರುಣ್ ಸುಧೀರ್ ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಹಿಟ್ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ತರುಣ್ ಸುಧೀರ್ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ.

‘ಕಾಟೇರ’, ‘ರಾಬರ್ಟ್’ ಸಿನಿಮಾಗಳ ಮೂಲಕ ತರುಣ್ ಸುಧೀರ್ ದೊಡ್ಡ ಯಶಸ್ಸು ಪಡೆದರು. ಬಹುಬೇಡಿಕೆಯ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಶ್ರೀಮುರಳಿ ಅವರನ್ನು ತರುಣ್ ಆಹ್ವಾನಿಸಿದ್ದಾರೆ.

ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ಅವರನ್ನು ಲಾಂಚ್ ಮಾಡಿದ್ದೇ ತರುಣ್ ಸುಧೀರ್. ‘ಕಾಟೇರ’ ಸಿನಿಮಾಗೆ ಆರಾಧನಾ ನಾಯಕಿಯಾಗಿ ನಟಿಸಿದರು. ಅವರಿಗೂ ವಿವಾಹದ ಆಮಂತ್ರಣ ನೀಡಲಾಗಿದೆ. ಈ ವೇಳೆ ಮಾಲಾಶ್ರೀ ಕೂಡ ಜೊತೆಗಿದ್ದರು.

ರಚಿತಾ ರಾಮ್, ಉಪೇಂದ್ರ, ರಾಘವೇಂದ್ರ ರಾಜ್ಕುಮಾರ್ ಅವರಿಗೂ ತರುಣ್ ಸುಧೀರ್ ಆಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಅದ್ದೂರಿ ಮದುವೆಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ.


ಅಶ್ವಿನಿ ಪುನೀತ್ ರಾಜ್ಕುಮಾರ್ ಅವರನ್ನು ತರುಣ್ ಸುಧೀರ್ ಅವರು ಮದುವೆಗೆ ಆಹ್ವಾನಿಸಿದ ಕ್ಷಣ ಇದು. ಪರಿಸರ ಸ್ನೇಹಿಯಾಗಿ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ. ಇದನ್ನು ನೋಡಿ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಮದುವೆ ಸಲುವಾಗಿ ತರುಣ್ ಸುಧೀರ್ ಅವರು ಬ್ರೇಕ್ ಪಡೆದಿದ್ದಾರೆ. ಹಿಟ್ ಸಿನಿಮಾಗಳನ್ನು ನೀಡಿದ ಅವರಿಗೆ ಚಂದನವನದಲ್ಲಿ ತುಂಬಾ ಬೇಡಿಕೆ ಇದೆ. ಶಿವರಾಜ್ಕುಮಾರ್, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್ ಆಹ್ವಾನ ಪತ್ರಿಕೆ ನೀಡಿದ್ದಾರೆ.

ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್ ಸುಧೀರ್ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್ ಸುಧೀರ್ ಅವರು ಆಹ್ವಾನಿಸಿ ಬಂದಿದ್ದಾರೆ. ಆ ಸಂದರ್ಭದ ಫೋಟೋ ಲಭ್ಯವಾಗಿದೆ. ‘ರಾಬರ್ಟ್’ ಸಿನಿಮಾದಲ್ಲಿ ತರುಣ್ ಸುಧೀರ್ ಮತ್ತು ಸೋನಲ್ ಅವರು ಜೊತೆಯಾಗಿ ಕೆಲಸ ಮಾಡಿದ್ದರು.