AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ತಪ್ಪು ಕಲ್ಪನೆಗಳನ್ನು ಅಳಿಸಿಹಾಕಿದೆ ‘ದಿ ಕಾಶ್ಮೀರ್​ ಫೈಲ್ಸ್​’; ಪರಿಪರಿಯಾಗಿ ವಿಶ್ಲೇಷಣೆ ಮಾಡಿದ ಆರ್​ಜಿವಿ

The Kashmir Files: ಅನುಭವಿ ನಿರ್ದೇಶಕ ರಾಮ್​ ಗೋಪಾಲ್ ವರ್ಮಾ ಅವರು ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾವನ್ನು ನೋಡಿ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈ ಚಿತ್ರದ ಕುರಿತು ಕೆಲವು ವಿಷಯಗಳನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Mar 22, 2022 | 6:56 AM

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಕೆಲವು ಸೆಲೆಬ್ರಿಟಿಗಳು ಮೌನ ತಾಳಿದ್ದಾರೆ. ಹಲವರು ಮನಸಾರೆ ಮಾತನಾಡುತ್ತಿದ್ದಾರೆ. ನಿರ್ದೇಶಕ ರಾಮ್​ ಗೋಪಾಲ್​​ ವರ್ಮಾ ಅವರಿಗೆ ಈ ಚಿತ್ರ ಸಖತ್​ ಇಷ್ಟ ಆಗಿದೆ. ತಮ್ಮದೇ ಶೈಲಿಯಲ್ಲಿ ಅವರು ಸಿನಿಮಾ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ. 4 ತಪ್ಪು ಕಲ್ಪನೆಗಳನ್ನು ಈ ಚಿತ್ರ ಅಳಿಸಿ ಹಾಕಿದೆ ಎಂದು ಅವರು ಹೇಳಿದ್ದಾರೆ.

The Kashmir Files movie proved Four myths wrong says Ram Gopal Varma

1 / 5
ಮೊದಲ ತಪ್ಪು ಕಲ್ಪನೆ: ದೊಡ್ಡ ಸ್ಟಾರ್​ ನಟರು ಮಾತ್ರ ಜನರನ್ನು ಚಿತ್ರಮಂದಿರಕ್ಕೆ ಕರೆಸಲು ಸಾಧ್ಯ. ಈ ಮಾತನ್ನು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಸುಳ್ಳು ಮಾಡಿದೆ. ಸ್ಟಾರ್​ ಹೀರೋಗಳು ಇಲ್ಲದೇ ಇದ್ದರೂ ಕೂಡ ಜನರು ಈ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಅದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

The Kashmir Files movie proved Four myths wrong says Ram Gopal Varma

2 / 5
ಎರಡನೇ ತಪ್ಪು ಕಲ್ಪನೆ: ದೊಡ್ಡ ಬಜೆಟ್​ನ ಸಿನಿಮಾಗಳನ್ನು ನೋಡಲು ಮಾತ್ರ ಜನರು ಚಿತ್ರಮಂದಿರಕ್ಕೆ ಬರುತ್ತಾರೆ. ಈ ಮಾತು ಕೂಡ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಿಂದ ಸುಳ್ಳು ಎಂಬುದು ಸಾಬೀತಾಗಿದೆ. ಕಡಿಮೆ ಬಜೆಟ್​ನಲ್ಲಿ ತಯಾರಾದ ಈ ಸಿನಿಮಾ ಇಂದು 200 ಕೋಟಿ ರೂ. ಕಲೆಕ್ಷನ್​ ಮಾಡುವಷ್ಟು ಗೆಲುವು ಪಡೆದುಕೊಂಡಿದೆ.

ಎರಡನೇ ತಪ್ಪು ಕಲ್ಪನೆ: ದೊಡ್ಡ ಬಜೆಟ್​ನ ಸಿನಿಮಾಗಳನ್ನು ನೋಡಲು ಮಾತ್ರ ಜನರು ಚಿತ್ರಮಂದಿರಕ್ಕೆ ಬರುತ್ತಾರೆ. ಈ ಮಾತು ಕೂಡ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಿಂದ ಸುಳ್ಳು ಎಂಬುದು ಸಾಬೀತಾಗಿದೆ. ಕಡಿಮೆ ಬಜೆಟ್​ನಲ್ಲಿ ತಯಾರಾದ ಈ ಸಿನಿಮಾ ಇಂದು 200 ಕೋಟಿ ರೂ. ಕಲೆಕ್ಷನ್​ ಮಾಡುವಷ್ಟು ಗೆಲುವು ಪಡೆದುಕೊಂಡಿದೆ.

3 / 5
4 ತಪ್ಪು ಕಲ್ಪನೆಗಳನ್ನು ಅಳಿಸಿಹಾಕಿದೆ ‘ದಿ ಕಾಶ್ಮೀರ್​ ಫೈಲ್ಸ್​’; ಪರಿಪರಿಯಾಗಿ ವಿಶ್ಲೇಷಣೆ ಮಾಡಿದ ಆರ್​ಜಿವಿ

ಮೂರನೇ ತಪ್ಪು ಕಲ್ಪನೆ: ‘ದಿ ಕಪಿಲ್​ ಶರ್ಮಾ ಶೋ’ನಲ್ಲಿ ಸಿನಿಮಾದ ಪ್ರಚಾರ ಮಾಡಿದರೆ ಜನರು ಚಿತ್ರಮಂದಿರಕ್ಕೆ ಬರುತ್ತಾರೆ. ಬಾಲಿವುಡ್​ನ ಅನೇಕ ಚಿತ್ರತಂಡಗಳು ಪ್ರಚಾರಕ್ಕಾಗಿ ‘ದಿ ಕಪಿಲ್​ ಶರ್ಮಾ ಶೋ’ ಅನ್ನು ಅವಲಂಬಿಸಿವೆ. ಆದರೆ ‘ದಿ ಕಾಶ್ಮೀರ್​ ಫೈಲ್ಸ್’ ಸಿನಿಮಾತಂಡ ಈ ವೇದಿಕೆಯಲ್ಲಿ ಪ್ರಚಾರ ಮಾಡಿರಲಿಲ್ಲ. ಹಾಗಿದ್ದರೂ ಕೂಡ ಚಿತ್ರಕ್ಕೆ ಭರ್ಜರಿ ಯಶಸ್ಸು ಸಿಕ್ಕಿದೆ.

4 / 5
4 ತಪ್ಪು ಕಲ್ಪನೆಗಳನ್ನು ಅಳಿಸಿಹಾಕಿದೆ ‘ದಿ ಕಾಶ್ಮೀರ್​ ಫೈಲ್ಸ್​’; ಪರಿಪರಿಯಾಗಿ ವಿಶ್ಲೇಷಣೆ ಮಾಡಿದ ಆರ್​ಜಿವಿ

ನಾಲ್ಕನೇ ತಪ್ಪು ಕಲ್ಪನೆ: ಸೂಪರ್​ ಹಿಟ್​ ಹಾಡುಗಳಿದ್ದರೆ ಜನರು ಚಿತ್ರಮಂದಿರಕ್ಕೆ ಬರುತ್ತಾರೆ. ಹಾಡುಗಳಿಗೆ ಬಾಲಿವುಡ್​ ಮಂದಿ ಹೆಚ್ಚು ಮಹತ್ವ ನೀಡುತ್ತಾರೆ. ಹಾಡು ಹಿಟ್​ ಆದರೆ ಸಿನಿಮಾ ಕೂಡ ಹಿಟ್​ ಎಂಬ ನಂಬಿಕೆ ಇದೆ. ಆದರೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ವಿಚಾರದಲ್ಲಿ ಈ ಸೂತ್ರ ವರ್ಕ್​ ಆಗಿಲ್ಲ. ಹಾಗಾಗಿ ಒಂದು ಸಿನಿಮಾದ ಗೆಲುವಿಗೆ ಸೂಪರ್​ ಹಿಟ್​ ಹಾಡು ಬೇಕು ಎಂಬ ಮಾತು ಕೂಡ ಸುಳ್ಳಾಗಿದೆ ಎಂದು ರಾಮ್​ ಗೋಪಾಲ್​ ವರ್ಮಾ ವಿಶ್ಲೇಷಣೆ ಮಾಡಿದ್ದಾರೆ.

5 / 5

Published On - 6:30 am, Tue, 22 March 22

Follow us
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ