Gadag News: ನಿರಂತರ ಮಳೆಗೆ ಹೂವಿನ ತೋಟಗಳು ಸಂಪೂರ್ಣ‌ ಹಾಳು; ಬಾಡಿದ ರೈತನ ಬದುಕು

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 29, 2023 | 8:33 AM

ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ರೈತರು ಹೈರಾಣಾಗಿದ್ದಾರೆ. ಅದರಂತೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಕಷ್ಟಪಟ್ಟು ಬೆಳೆದ ಹೂವುಗಳು ಮಳೆಗೆ ಹಾಳಾಗುತ್ತಿದೆ.

1 / 8
ರಾಜ್ಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜೊತೆಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗೆ ಸಂಕಷ್ಟ ಬಂದೊದಗಿದೆ.

ರಾಜ್ಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜೊತೆಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗೆ ಸಂಕಷ್ಟ ಬಂದೊದಗಿದೆ.

2 / 8
ಹೌದು ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಹೂವುಗಳು ಮಳೆಗೆ ಹಾಳಾಗುತ್ತಿದೆ.

ಹೌದು ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಹೂವುಗಳು ಮಳೆಗೆ ಹಾಳಾಗುತ್ತಿದೆ.

3 / 8
ನಾಗರ ಪಂಚಮಿ ಹಬ್ಬ, ಶ್ರಾವಣ ಮಾಸದಲ್ಲಿ ಭರ್ಜರಿ ಲಾಭದ ನಿರೀಕ್ಷೆಯಲ್ಲಿದ್ದ ಹೂವು ಬೆಳೆಗಾರರು‌ ಸತತ ಮಳೆಯಿಂದ ಕಂಗಾಲಾಗಿದ್ದಾರೆ.

ನಾಗರ ಪಂಚಮಿ ಹಬ್ಬ, ಶ್ರಾವಣ ಮಾಸದಲ್ಲಿ ಭರ್ಜರಿ ಲಾಭದ ನಿರೀಕ್ಷೆಯಲ್ಲಿದ್ದ ಹೂವು ಬೆಳೆಗಾರರು‌ ಸತತ ಮಳೆಯಿಂದ ಕಂಗಾಲಾಗಿದ್ದಾರೆ.

4 / 8
ನೂರಾರು ಎಕರೆಯಲ್ಲಿ ಬೆಳೆದ ಸೇವಂತಿ ಸೇರಿ ವಿವಿಧ ನಮೂನೆಯ‌ ಹೂವುಗಳು ನಿರಂತರ ಮಳೆಗೆ‌ ತೋಟದಲ್ಲೇ ಕೊಳೆಯುತ್ತಿರುವುದು ರೈತನಿಗೆ ಸಂಕಷ್ಟ ತಂದೊದಗಿದೆ.

ನೂರಾರು ಎಕರೆಯಲ್ಲಿ ಬೆಳೆದ ಸೇವಂತಿ ಸೇರಿ ವಿವಿಧ ನಮೂನೆಯ‌ ಹೂವುಗಳು ನಿರಂತರ ಮಳೆಗೆ‌ ತೋಟದಲ್ಲೇ ಕೊಳೆಯುತ್ತಿರುವುದು ರೈತನಿಗೆ ಸಂಕಷ್ಟ ತಂದೊದಗಿದೆ.

5 / 8
ಹುಬ್ಬಳ್ಳಿ, ಧಾರವಾಡ, ಬೆಂಗಳೂರು, ಬಾಂಬೆಗೆ ಪೂರೈಕೆ ಆಗುತ್ತಿದ್ದ ಹೂವುಗಳು ಇದೀಗ ಮಳೆಯಲ್ಲಿಯೇ ಕೊಳೆತು ಹೋಗುತ್ತಿದೆ. ಇದರಿಂದ ಎಕರೆಗೆ 1 ಲಕ್ಷದಿಂದ ಒಂದೂವರೆ ಲಕ್ಷ ಖರ್ಚು ಮಾಡಿದ ರೈತರ ಗೋಳಾಟ ಹೇಳತೀರದು.

ಹುಬ್ಬಳ್ಳಿ, ಧಾರವಾಡ, ಬೆಂಗಳೂರು, ಬಾಂಬೆಗೆ ಪೂರೈಕೆ ಆಗುತ್ತಿದ್ದ ಹೂವುಗಳು ಇದೀಗ ಮಳೆಯಲ್ಲಿಯೇ ಕೊಳೆತು ಹೋಗುತ್ತಿದೆ. ಇದರಿಂದ ಎಕರೆಗೆ 1 ಲಕ್ಷದಿಂದ ಒಂದೂವರೆ ಲಕ್ಷ ಖರ್ಚು ಮಾಡಿದ ರೈತರ ಗೋಳಾಟ ಹೇಳತೀರದು.

6 / 8
ಈ ಬಾರಿ ಉತ್ತಮವಾಗಿ ಹೂವು ಬಂದಿದ್ದು, ರೈತ ಭರ್ಜರಿ ಲಾಭದ ಕನಸು ಕಂಡಿದ್ದರು. ಆದರೆ, ರೈತರ ಕನಸನ್ನು ಮಳೆರಾಯ ನುಚ್ಚುನೂರು ಮಾಡಿದ್ದಾನೆ.

ಈ ಬಾರಿ ಉತ್ತಮವಾಗಿ ಹೂವು ಬಂದಿದ್ದು, ರೈತ ಭರ್ಜರಿ ಲಾಭದ ಕನಸು ಕಂಡಿದ್ದರು. ಆದರೆ, ರೈತರ ಕನಸನ್ನು ಮಳೆರಾಯ ನುಚ್ಚುನೂರು ಮಾಡಿದ್ದಾನೆ.

7 / 8
ಇನ್ನು ಕಷ್ಟಪಟ್ಟು ಬೆಳೆದ ಹೂವುಗಳು ತೋಟದಲ್ಲೇ ಕೊಳೆಯುತ್ತಿರುವುದನ್ನ ನೋಡಿದ ರೈತರು ಕಣ್ಣೀರು ಹಾಕುತ್ತಿದ್ದಾರೆ. ರೈತನಿಗೆ ಯಾವಾಗಲಾದರೂ ಒಮ್ಮೆ ಲಾಭ ಬರುತ್ತದೆ. ಅದರಂತೆ ಈ ಬಾರಿ ಉತ್ತಮ ಬೆಳೆ ಬಂದಿದ್ದು, ಲಾಭದ ಕನಸಿನಲ್ಲಿದ್ದ ರೈತನಿಗೆ ಮಳೆಯಿಂದ ಸಿಡಿಲು ಬಡಿದಂತಾಗಿದೆ.

ಇನ್ನು ಕಷ್ಟಪಟ್ಟು ಬೆಳೆದ ಹೂವುಗಳು ತೋಟದಲ್ಲೇ ಕೊಳೆಯುತ್ತಿರುವುದನ್ನ ನೋಡಿದ ರೈತರು ಕಣ್ಣೀರು ಹಾಕುತ್ತಿದ್ದಾರೆ. ರೈತನಿಗೆ ಯಾವಾಗಲಾದರೂ ಒಮ್ಮೆ ಲಾಭ ಬರುತ್ತದೆ. ಅದರಂತೆ ಈ ಬಾರಿ ಉತ್ತಮ ಬೆಳೆ ಬಂದಿದ್ದು, ಲಾಭದ ಕನಸಿನಲ್ಲಿದ್ದ ರೈತನಿಗೆ ಮಳೆಯಿಂದ ಸಿಡಿಲು ಬಡಿದಂತಾಗಿದೆ.

8 / 8
ಸರ್ಕಾರ ಹೂವು ಬೆಳೆಗಾರರ ನೆರವಿಗೆ ಧಾವಿಸಿ, ಹೂವು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಇಲ್ಲವಾದರೇ ರೈತರು ಬದುಕೋದು ಕಷ್ಟವಾಗಿದೆ ಎಂದು ಮನವಿ ಮಾಡಿದ್ದಾರೆ.

ಸರ್ಕಾರ ಹೂವು ಬೆಳೆಗಾರರ ನೆರವಿಗೆ ಧಾವಿಸಿ, ಹೂವು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಇಲ್ಲವಾದರೇ ರೈತರು ಬದುಕೋದು ಕಷ್ಟವಾಗಿದೆ ಎಂದು ಮನವಿ ಮಾಡಿದ್ದಾರೆ.

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us