Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಮಾಡುವ ಈ ತಪ್ಪುಗಳು ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು

ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಕಿಡ್ನಿಯೂ ಒಂದು. ನಮ್ಮ ಶರೀರಕ್ಕೆ ಪೂರಕವಾದ ರಾಸಾಯನಿಕಗಳನ್ನು ಬಳಸಿಕೊಂಡು, ಬೇಡವಾದ ವಸ್ತುಗಳನ್ನು ದೇಹದಿಂದ ಹೊರ ಹಾಕುವ ಮೂಲಕ ಫಿಲ್ಟರ್ ನಂತೆ ಕೆಲಸ ಮಾಡುತ್ತದೆ. ಆದರೆ ಪ್ರತಿನಿತ್ಯ ನಾವು ಮಾಡುವ ತಪ್ಪುಗಳು ಕಿಡ್ನಿಯ ಆರೋಗ್ಯವನ್ನು ಹಾಳು ಮಾಡಬಹುದು. ಇದರಿಂದ ಮೂತ್ರಪಿಂಡ ಕಿರಿಕಿರಿಗೆ ಒಳಗಾಗುವುದಲ್ಲದೆ ಇದಕ್ಕೆ ಸಂಬಂಧಿಸಿದ ಸಮಸ್ಯೆಗಳು ಆರಂಭವಾಗಬಹುದು.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 13, 2025 | 10:26 AM

ಪ್ರತಿನಿತ್ಯ ನಾವು ಮಾಡುವ ತಪ್ಪುಗಳು ಕಿಡ್ನಿಯ ಆರೋಗ್ಯವನ್ನು ಹಾಳು ಮಾಡಬಹುದು. ಇದರಿಂದ ಮೂತ್ರಪಿಂಡ ಕಿರಿಕಿರಿಗೆ ಒಳಗಾಗುವುದಲ್ಲದೆ ಇದಕ್ಕೆ ಸಂಬಂಧಿಸಿದ ಸಮಸ್ಯೆಗಳು ಆರಂಭವಾಗಬಹುದು. ಹಾಗಾಗಿ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ.

ಪ್ರತಿನಿತ್ಯ ನಾವು ಮಾಡುವ ತಪ್ಪುಗಳು ಕಿಡ್ನಿಯ ಆರೋಗ್ಯವನ್ನು ಹಾಳು ಮಾಡಬಹುದು. ಇದರಿಂದ ಮೂತ್ರಪಿಂಡ ಕಿರಿಕಿರಿಗೆ ಒಳಗಾಗುವುದಲ್ಲದೆ ಇದಕ್ಕೆ ಸಂಬಂಧಿಸಿದ ಸಮಸ್ಯೆಗಳು ಆರಂಭವಾಗಬಹುದು. ಹಾಗಾಗಿ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ.

1 / 5
ಮೂತ್ರ ವಿಸರ್ಜನೆ ಮಾಡಬೇಕು ಎನಿಸಿದರೂ ಅದನ್ನು ಒಂದಲ್ಲಾ ಒಂದು ಕಾರಣದಿಂದ ತಡೆಹಿಡಿಯುವ ಅಭ್ಯಾಸ ನಿಮಗಿದ್ದರೆ ಅದನ್ನು ಕೂಡಲೇ ಬಿಟ್ಟುಬಿಡಿ. ಏಕೆಂದರೆ ಇದು ಕಿಡ್ನಿಯಲ್ಲಿ ಕಲ್ಲುಗಳು ಉಂಟಾಗಲು ಮತ್ತು ಕಿಡ್ನಿ ವೈಫಲ್ಯಕ್ಕೆ ಮುಖ್ಯ ಕಾರಣವಾಗುತ್ತದೆ.

ಮೂತ್ರ ವಿಸರ್ಜನೆ ಮಾಡಬೇಕು ಎನಿಸಿದರೂ ಅದನ್ನು ಒಂದಲ್ಲಾ ಒಂದು ಕಾರಣದಿಂದ ತಡೆಹಿಡಿಯುವ ಅಭ್ಯಾಸ ನಿಮಗಿದ್ದರೆ ಅದನ್ನು ಕೂಡಲೇ ಬಿಟ್ಟುಬಿಡಿ. ಏಕೆಂದರೆ ಇದು ಕಿಡ್ನಿಯಲ್ಲಿ ಕಲ್ಲುಗಳು ಉಂಟಾಗಲು ಮತ್ತು ಕಿಡ್ನಿ ವೈಫಲ್ಯಕ್ಕೆ ಮುಖ್ಯ ಕಾರಣವಾಗುತ್ತದೆ.

2 / 5
ಕೆಲವರಿಗೆ ನೀರನ್ನು ಕುಡಿಯುವುದು ದೊಡ್ಡ ಕಿರಿಕಿರಿಯಾಗಿರುತ್ತದೆ. ಆದರೆ ಈ ಅಭ್ಯಾಸದಿಂದ ನಿಮ್ಮ ಕಿಡ್ನಿಗಳಿಗೆ ಕಿರಿಕಿರಿಯಾಗಿ ತೊಂದರೆಯಾಗುತ್ತದೆ. ಅಲ್ಲದೆ, ದೇಹದಲ್ಲಿನ ಕೆಟ್ಟ ಅಂಶಗಳು ಹೊರಹೋಗಲು ತೊಂದರೆಯಾಗುತ್ತದೆ. ಹಾಗಾಗಿ ಕಿಡ್ನಿ ಆರೋಗ್ಯವಾಗಿರಲು ನೀರು ಕುಡಿಯುವುದು ಬಹಳ ಮುಖ್ಯ.

ಕೆಲವರಿಗೆ ನೀರನ್ನು ಕುಡಿಯುವುದು ದೊಡ್ಡ ಕಿರಿಕಿರಿಯಾಗಿರುತ್ತದೆ. ಆದರೆ ಈ ಅಭ್ಯಾಸದಿಂದ ನಿಮ್ಮ ಕಿಡ್ನಿಗಳಿಗೆ ಕಿರಿಕಿರಿಯಾಗಿ ತೊಂದರೆಯಾಗುತ್ತದೆ. ಅಲ್ಲದೆ, ದೇಹದಲ್ಲಿನ ಕೆಟ್ಟ ಅಂಶಗಳು ಹೊರಹೋಗಲು ತೊಂದರೆಯಾಗುತ್ತದೆ. ಹಾಗಾಗಿ ಕಿಡ್ನಿ ಆರೋಗ್ಯವಾಗಿರಲು ನೀರು ಕುಡಿಯುವುದು ಬಹಳ ಮುಖ್ಯ.

3 / 5
ಕೆಲವರಿಗೆ ಹೆಚ್ಚು ಸಕ್ಕರೆ ಅಥವಾ ಇನ್ನಿತರ ಸಿಹಿ ತಿಂಡಿಗಳ ಸೇವನೆ ಮಾಡಲು ಬಹಳ ಇಷ್ಟ. ಆದರೆ ಇಷ್ಟವೆಂದು ಮನಬಂದಂತೆ ತಿಂದರೆ ಅದು ನಿಮ್ಮ ಆರೋಗ್ಯಕ್ಕೆ ಕುತ್ತು ತರುತ್ತದೆ. ಹಾಗಾಗಿ ಸಿಹಿ ತಿಂಡಿಗಳ ಸೇವನೆ ಆದಷ್ಟು ಕಡಿಮೆ ಮಾಡಿ. ಪದೇ ಪದೇ ಸಿಹಿ ತಿನ್ನಬೇಕು ಎನಿಸಿದರೆ ಅದಕ್ಕೆ ಆರೋಗ್ಯಕರ ಪರ್ಯಾಯ ಹುಡುಕಿಕೊಳ್ಳಿ.

ಕೆಲವರಿಗೆ ಹೆಚ್ಚು ಸಕ್ಕರೆ ಅಥವಾ ಇನ್ನಿತರ ಸಿಹಿ ತಿಂಡಿಗಳ ಸೇವನೆ ಮಾಡಲು ಬಹಳ ಇಷ್ಟ. ಆದರೆ ಇಷ್ಟವೆಂದು ಮನಬಂದಂತೆ ತಿಂದರೆ ಅದು ನಿಮ್ಮ ಆರೋಗ್ಯಕ್ಕೆ ಕುತ್ತು ತರುತ್ತದೆ. ಹಾಗಾಗಿ ಸಿಹಿ ತಿಂಡಿಗಳ ಸೇವನೆ ಆದಷ್ಟು ಕಡಿಮೆ ಮಾಡಿ. ಪದೇ ಪದೇ ಸಿಹಿ ತಿನ್ನಬೇಕು ಎನಿಸಿದರೆ ಅದಕ್ಕೆ ಆರೋಗ್ಯಕರ ಪರ್ಯಾಯ ಹುಡುಕಿಕೊಳ್ಳಿ.

4 / 5
ಕೆಂಪು ಮಾಂಸ ಸೇವನೆ ಮಾಡಲು ಕೆಲವರಿಗೆ ತುಂಬಾ ಇಷ್ಟವಿರುತ್ತದೆ. ಕುರಿ, ಮೇಕೆ, ಹೀಗೆ ಮೊದಲಾದ ಪ್ರಾಣಿಗಳ ಮಾಂಸವನ್ನು ಚಪ್ಪರಿಸಿ ತಿನ್ನುತ್ತಾರೆ. ಆದರೆ ಇದನ್ನು ಇಷ್ಟವೆಂದು ಪ್ರತಿನಿತ್ಯ ಸೇವಿಸಲು ಆರಂಭಿಸಿದರೆ ಕಿಡ್ನಿ ಮೇಲಿನ ಒತ್ತಡ ಹೆಚ್ಚಾಗುತ್ತದೆ. ಹಾಗಾಗಿ ಮಾಂಸಾಹಾರ ಸೇವನೆ ಮಿತಿಯಲ್ಲಿದ್ದರೆ ಬಹಳ ಒಳ್ಳೆಯದು. ಅದೇ ರೀತಿ ಅತಿ ಹೆಚ್ಚು ಉಪ್ಪು ಸೇವನೆ ಮತ್ತು ನಿದ್ದೆ ಮಾಡದಿರುವುದು ಕೂಡ ಕಿಡ್ನಿ ಆರೋಗ್ಯವನ್ನು ಹಾಳು ಮಾಡುತ್ತದೆ.

ಕೆಂಪು ಮಾಂಸ ಸೇವನೆ ಮಾಡಲು ಕೆಲವರಿಗೆ ತುಂಬಾ ಇಷ್ಟವಿರುತ್ತದೆ. ಕುರಿ, ಮೇಕೆ, ಹೀಗೆ ಮೊದಲಾದ ಪ್ರಾಣಿಗಳ ಮಾಂಸವನ್ನು ಚಪ್ಪರಿಸಿ ತಿನ್ನುತ್ತಾರೆ. ಆದರೆ ಇದನ್ನು ಇಷ್ಟವೆಂದು ಪ್ರತಿನಿತ್ಯ ಸೇವಿಸಲು ಆರಂಭಿಸಿದರೆ ಕಿಡ್ನಿ ಮೇಲಿನ ಒತ್ತಡ ಹೆಚ್ಚಾಗುತ್ತದೆ. ಹಾಗಾಗಿ ಮಾಂಸಾಹಾರ ಸೇವನೆ ಮಿತಿಯಲ್ಲಿದ್ದರೆ ಬಹಳ ಒಳ್ಳೆಯದು. ಅದೇ ರೀತಿ ಅತಿ ಹೆಚ್ಚು ಉಪ್ಪು ಸೇವನೆ ಮತ್ತು ನಿದ್ದೆ ಮಾಡದಿರುವುದು ಕೂಡ ಕಿಡ್ನಿ ಆರೋಗ್ಯವನ್ನು ಹಾಳು ಮಾಡುತ್ತದೆ.

5 / 5
Follow us
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ