Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಡ್ರೈ ಫ್ರೂಟ್ಸ್ ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

ಡ್ರೈ ಫ್ರೂಟ್ಸ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇವುಗಳನ್ನು ನೆನೆಸಿದರೆ ಇದರ ಶಕ್ತಿಯು ಮತ್ತಷ್ಟು ಹೆಚ್ಚಾಗುತ್ತದೆ. ನೀವು ಹೆಚ್ಚಾಗಿ ಆಯಾಸಗೊಂಡಿದ್ದರೆ, ನಿಯಮಿತವಾಗಿ ನೆನೆಸಿದ ಡ್ರೈ ಫ್ರೂಟ್ಸ್ ಸೇವಿಸಬಹುದು.

TV9 Web
| Updated By: preethi shettigar

Updated on: Oct 03, 2021 | 12:02 PM

ಅಂಜೂರದಲ್ಲಿ ಸತು, ಮ್ಯಾಂಗನೀಸ್, ಮೆಗ್ನೀಶಿಯಂ, ಕಬ್ಬಿಣದಂತಹ ಅನೇಕ ಪೋಷಕಾಂಶಗಳಿದ್ದು, ದೇಹಕ್ಕೆ ಬಲ ನೀಡುತ್ತದೆ. ನೀರಿನಲ್ಲಿ ನೆನಸಿದ ಅಂಜೂರದ ಪ್ರಯೋಜನಗಳು ಹೆಚ್ಚಾಗಿರುತ್ತದೆ. ಅಂಜೂರವು ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆಯನ್ನು ತ್ವರಿತವಾಗಿ ಪೂರೈಸುತ್ತದೆ. ಮೂಳೆಗಳು ಮತ್ತು ಹೃದಯಕ್ಕೆ ಕೂಡ ಇದು ಪ್ರಯೋಜನಕಾರಿ.

These nuts give lot of energy know their benefits

1 / 6
ಒಮೆಗಾ -3 ಕೊಬ್ಬಿನಾಮ್ಲಗಳು ನೆನೆಸಿದ ವಾಲ್​ನಟ್​ನಲ್ಲಿ​ (ಅಖ್ರೋಟ್​) ಕಂಡುಬರುತ್ತವೆ. ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಇದು ಮೆದುಳಿಗೆ ಶಕ್ತಿಯನ್ನು ನೀಡುತ್ತದೆ ಮತ್ತು ದೈಹಿಕ ಆಯಾಸವನ್ನು ತೆಗೆದುಹಾಕುತ್ತದೆ.

ಒಮೆಗಾ -3 ಕೊಬ್ಬಿನಾಮ್ಲಗಳು ನೆನೆಸಿದ ವಾಲ್​ನಟ್​ನಲ್ಲಿ​ (ಅಖ್ರೋಟ್​) ಕಂಡುಬರುತ್ತವೆ. ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಇದು ಮೆದುಳಿಗೆ ಶಕ್ತಿಯನ್ನು ನೀಡುತ್ತದೆ ಮತ್ತು ದೈಹಿಕ ಆಯಾಸವನ್ನು ತೆಗೆದುಹಾಕುತ್ತದೆ.

2 / 6
ನೆನೆಸಿದ ಬಾದಾಮಿ ಆಂಟಿಆಕ್ಸಿಡೆಂಟ್‌ಗಳ ನಿಧಿ. ದೇಹಕ್ಕೆ ಬಲ ನೀಡುವುದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ ಹೃದಯವನ್ನು ಆರೋಗ್ಯವಾಗಿರಿಸುತ್ತದೆ. ಬಾದಾಮಿಯಲ್ಲಿ ವಿಟಮಿನ್ ಬಿ 17 ಮತ್ತು ಫೋಲಿಕ್ ಆಸಿಡ್ ಇದ್ದು, ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

ನೆನೆಸಿದ ಬಾದಾಮಿ ಆಂಟಿಆಕ್ಸಿಡೆಂಟ್‌ಗಳ ನಿಧಿ. ದೇಹಕ್ಕೆ ಬಲ ನೀಡುವುದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ ಹೃದಯವನ್ನು ಆರೋಗ್ಯವಾಗಿರಿಸುತ್ತದೆ. ಬಾದಾಮಿಯಲ್ಲಿ ವಿಟಮಿನ್ ಬಿ 17 ಮತ್ತು ಫೋಲಿಕ್ ಆಸಿಡ್ ಇದ್ದು, ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

3 / 6
ಖರ್ಜೂರವು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಖರ್ಜೂರದಲ್ಲಿ ಸಾಕಷ್ಟು ಕ್ಯಾಲ್ಸಿಯಂ ಇದ್ದು, ಇದು ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಖರ್ಜೂರವು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ಖರ್ಜೂರವು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಖರ್ಜೂರದಲ್ಲಿ ಸಾಕಷ್ಟು ಕ್ಯಾಲ್ಸಿಯಂ ಇದ್ದು, ಇದು ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಖರ್ಜೂರವು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

4 / 6
ಪಿಸ್ತಾ ದೇಹವನ್ನು ಸೋಂಕಿನಿಂದ ರಕ್ಷಿಸುವುದರ ಜೊತೆಗೆ ನಮ್ಮ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಪಿಸ್ತಾ ಫೈಬರ್, ಕಾರ್ಬೋಹೈಡ್ರೇಟ್, ಅಮೈನೋ ಆಸಿಡ್, ವಿಟಮಿನ್ ಎ, ಕೆ, ಸಿ, ಬಿ -6, ಡಿ, ಇ, ಪ್ರೋಟೀನ್, ಕ್ಯಾಲ್ಸಿಯಂ, ಮ್ಯಾಂಗನೀಸ್, ಫೋಲೇಟ್ ಅಂಶಗಳನ್ನು ಒಳಗೊಂಡಿದೆ. ಆಹಾರದಲ್ಲಿ ಇದನ್ನು ಸೇರಿಸುವುದರಿಂದ ದೇಹವು ಅನೇಕ ಪ್ರಯೋಜನಗಳನ್ನು ಪಡೆಯಬಹುದು.

ಪಿಸ್ತಾ ದೇಹವನ್ನು ಸೋಂಕಿನಿಂದ ರಕ್ಷಿಸುವುದರ ಜೊತೆಗೆ ನಮ್ಮ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಪಿಸ್ತಾ ಫೈಬರ್, ಕಾರ್ಬೋಹೈಡ್ರೇಟ್, ಅಮೈನೋ ಆಸಿಡ್, ವಿಟಮಿನ್ ಎ, ಕೆ, ಸಿ, ಬಿ -6, ಡಿ, ಇ, ಪ್ರೋಟೀನ್, ಕ್ಯಾಲ್ಸಿಯಂ, ಮ್ಯಾಂಗನೀಸ್, ಫೋಲೇಟ್ ಅಂಶಗಳನ್ನು ಒಳಗೊಂಡಿದೆ. ಆಹಾರದಲ್ಲಿ ಇದನ್ನು ಸೇರಿಸುವುದರಿಂದ ದೇಹವು ಅನೇಕ ಪ್ರಯೋಜನಗಳನ್ನು ಪಡೆಯಬಹುದು.

5 / 6
ಗೋಡಂಬಿಯಲ್ಲಿ ತಾಮ್ರ, ಸತು, ಮೆಗ್ನೀಶಿಯಂ, ಕಬ್ಬಿಣ ಮತ್ತು ರಂಜಕದಂತಹ ಖನಿಜಾಂಶಗಳಿಂದ ಸಮೃದ್ಧವಾಗಿರುತ್ತದೆ. ಇದರ ಜೊತೆಯಲ್ಲಿ ಇದು ಪ್ರೋಟೀನ್, ಫೈಬರ್ ಮತ್ತು ಆರೋಗ್ಯಕರ ಕೊಬ್ಬುಗಳಿಂದ ಸಮೃದ್ಧವಾಗಿದೆ. ಜತೆಗೆ ಗೋಡಂಬಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ. ಅಧಿಕ ಪ್ರೋಟೀನ್, ಫೈಬರ್ ಮತ್ತು ಕೊಬ್ಬುಗಳಿರುವುದರಿಂದ ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.

ಗೋಡಂಬಿಯಲ್ಲಿ ತಾಮ್ರ, ಸತು, ಮೆಗ್ನೀಶಿಯಂ, ಕಬ್ಬಿಣ ಮತ್ತು ರಂಜಕದಂತಹ ಖನಿಜಾಂಶಗಳಿಂದ ಸಮೃದ್ಧವಾಗಿರುತ್ತದೆ. ಇದರ ಜೊತೆಯಲ್ಲಿ ಇದು ಪ್ರೋಟೀನ್, ಫೈಬರ್ ಮತ್ತು ಆರೋಗ್ಯಕರ ಕೊಬ್ಬುಗಳಿಂದ ಸಮೃದ್ಧವಾಗಿದೆ. ಜತೆಗೆ ಗೋಡಂಬಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ. ಅಧಿಕ ಪ್ರೋಟೀನ್, ಫೈಬರ್ ಮತ್ತು ಕೊಬ್ಬುಗಳಿರುವುದರಿಂದ ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.

6 / 6
Follow us
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್