AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thomas Cup 2022: 73 ವರ್ಷಗಳಲ್ಲಿ ಮೊದಲ ಬಾರಿಗೆ ಥಾಮಸ್ ಕಪ್​ನಲ್ಲಿ ಭಾರತ ಚಾಂಪಿಯನ್!

Thomas Cup 2022: 73 ವರ್ಷಗಳ ಟೂರ್ನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಈ ಟೂರ್ನಿಯಲ್ಲಿ ಫೈನಲ್‌ಗೆ ತಲುಪಿತ್ತು. ಈ ಹಿಂದೆ ಭಾರತ ಒಮ್ಮೆ ಮಾತ್ರ ಸೆಮಿಫೈನಲ್ ತಲುಪಿತ್ತು.

ಪೃಥ್ವಿಶಂಕರ
|

Updated on:May 15, 2022 | 4:04 PM

Share
ಭಾರತ ಪುರುಷರ ತಂಡ ಥಾಮಸ್ ಕಪ್​ನಲ್ಲಿ ಐತಿಹಾಸಿಕ ಸಾಧನೆ ಮಾಡಿ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿದೆ. 73 ವರ್ಷಗಳ ಟೂರ್ನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಈ ಟೂರ್ನಿಯಲ್ಲಿ ಫೈನಲ್‌ಗೆ ತಲುಪಿತ್ತು. ಈ ಹಿಂದೆ ಭಾರತ ಒಮ್ಮೆ ಮಾತ್ರ ಸೆಮಿಫೈನಲ್ ತಲುಪಿತ್ತು.

1 / 5
1952 ರಲ್ಲಿ ಭಾರತ ಈ ಪಂದ್ಯಾವಳಿಯಲ್ಲಿ ಬಾಗವಹಿಸಿ, ಅಂತಿಮ ಸುತ್ತಿನ ಅಂತರ-ವಲಯದಲ್ಲಿ ಮೂರನೇ ಸ್ಥಾನ ಗಳಿಸಿತು. ಇದಾದ ನಂತರ 1955ರಲ್ಲಿಯೂ ಅದೇ ಜಾಗದಲ್ಲಿ ಉಳಿಯಿತು. 1973 ರಲ್ಲಿ, ಭಾರತದ ಪ್ರದರ್ಶನ ಕುಂಠಿತಗೊಂಡು ಐದನೇ ಸ್ಥಾನವನ್ನು ತಲುಪಿತು.

2 / 5
Thomas Cup 2022: 73 ವರ್ಷಗಳಲ್ಲಿ ಮೊದಲ ಬಾರಿಗೆ ಥಾಮಸ್ ಕಪ್​ನಲ್ಲಿ ಭಾರತ ಚಾಂಪಿಯನ್!

ಈ ವರ್ಷಕ್ಕಿಂತ ಮೊದಲು 1979ರಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನವಾಗಿತ್ತು. ಅನುಭವಿ ಆಟಗಾರ ಪ್ರಕಾಶ್ ಪಡುಕೋಣೆ ನಾಯಕತ್ವದಲ್ಲಿ ತಂಡವು ಮೊದಲ ಬಾರಿಗೆ ಸೆಮಿಫೈನಲ್ ತಲುಪಿತ್ತು. ಈ ತಂಡವು ಸೈಯದ್ ಮೋದಿ ಮತ್ತು ಪಾರ್ಥೋ ಅವರಂತಹ ಆಟಗಾರರನ್ನು ಒಳಗೊಂಡಿತ್ತು. ಆದರೆ, ಸೆಮಿಫೈನಲ್‌ನಲ್ಲಿ ಡೆನ್ಮಾರ್ಕ್ ವಿರುದ್ಧ 2-7 ಅಂತರದಿಂದ ಸೋತಿತ್ತು.

3 / 5
Thomas Cup 2022: 73 ವರ್ಷಗಳಲ್ಲಿ ಮೊದಲ ಬಾರಿಗೆ ಥಾಮಸ್ ಕಪ್​ನಲ್ಲಿ ಭಾರತ ಚಾಂಪಿಯನ್!

ಭಾರತ ಕೂಡ 3 ಬಾರಿ ಕ್ವಾರ್ಟರ್ ಫೈನಲ್ ತಲುಪಿತ್ತು. 2006ರಲ್ಲಿ ಚೇತನ್ ಆನಂದ್, ಅರವಿಂದ್ ಭಟ್ ಅವರಂತಹ ಸ್ಟಾರ್ ಗಳಿಂದ ಕಂಗೊಳಿಸುತ್ತಿದ್ದ ತಂಡ ಕ್ವಾರ್ಟರ್ ಫೈನಲ್ ತಲುಪಿತ್ತು. ಇದಾದ ನಂತರ 2010ರಲ್ಲೂ ಭಾರತ ಕ್ವಾರ್ಟರ್ ಫೈನಲ್ ತಲುಪಿತ್ತು. ಆ ತಂಡದಲ್ಲಿ ಕಾಮನ್‌ವೆಲ್ತ್ ಚಿನ್ನದ ಪದಕ ವಿಜೇತ ಪಿ ಕಶ್ಯಪ್ ಕೂಡ ಸೇರಿದ್ದರು. 2020ರಲ್ಲೂ ತಂಡ ಕ್ವಾರ್ಟರ್ ಫೈನಲ್‌ಗೆ ತಲುಪಿತ್ತು.

4 / 5
Thomas Cup 2022: 73 ವರ್ಷಗಳಲ್ಲಿ ಮೊದಲ ಬಾರಿಗೆ ಥಾಮಸ್ ಕಪ್​ನಲ್ಲಿ ಭಾರತ ಚಾಂಪಿಯನ್!

ಇದಲ್ಲದೇ ಹೆಚ್ಚಿನ ಬಾರಿ ಪುರುಷರ ತಂಡ ಗುಂಪು ಹಂತದಿಂದಲೇ ಹೊರಬಿದ್ದಿತ್ತು. ಅವರು 1988 ರಲ್ಲಿ 8 ನೇ ಸ್ಥಾನ, 2000 ರಲ್ಲಿ 7 ನೇ, 2014 ರಲ್ಲಿ 11 ನೇ ಮತ್ತು 2016 ರಲ್ಲಿ 13 ನೇ ಸ್ಥಾನದಲ್ಲಿದ್ದರು. 2018 ರಲ್ಲಿ, ಅವರು 10 ನೇ ಸ್ಥಾನದಲ್ಲಿ ಉಳಿಯುವ ಮೂಲಕ ಪ್ರಯಾಣವನ್ನು ಮುಗಿಸಿದರು.

5 / 5

Published On - 3:45 pm, Sun, 15 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ