ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್; ವಿವಿಧ ಕಾಮಗಾರಿ ಪರಿಶೀಲನೆ
ಬೆಂಗಳೂರು ಸಿಟಿ ರೌಂಡ್ಸ್ನ ಅಂಗವಾಗಿ ಇಂದು(ಸೆ.12) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ವಿವಿಧೆಡೆ ಬಸ್ನಲ್ಲಿ ಸಂಚರಿಸಿ, ರಸ್ತೆ, ಸೇತುವೆ, ಮೆಟ್ರೋ ಮುಂತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಇದೇ ವೇಳೆ ಕೆಲವೆಡೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ಸರಿಪಡಿಸಬೇಕು ಹಾಗೂ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

1 / 6

2 / 6

3 / 6

4 / 6

5 / 6

6 / 6




