AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kashinath Naik: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಕಾಶಿನಾಥ್ ನಾಯ್ಕ್; ಇಲ್ಲಿವೆ ಚಿತ್ರಗಳು

ನೇರವಾಗಿ ಮೈದಾನಕ್ಕೆ ಮಕ್ಕಳನ್ನು ಕರೆದೊಯ್ದ ಅವರು ಜಾವೆಲಿನ್ ಕುರಿತು ಪ್ರಾತ್ಯಕ್ಷಿತೆ ನೀಡಿದರು. ಮಕ್ಕಳಿಂದ ಕ್ರಿಕೆಟ್ ಬಾಲ್ ಎಸೆದು ಅಭ್ಯಾಸ ಮಾಡಿಸಿದರು. ನಂತರ ಜಾವೆಲಿನ್ ಎಸೆತ ಮಾಡಿಸಿದರು. ದೂರದಲ್ಲಿರುವ ಮಾವಿನ ಮರಕ್ಕೆ ಕಲ್ಲು ಎಸೆದು ಕಾಯಿ ಕೊಯ್ಯುವ ಸಾಮರ್ಥ್ಯದ ಗ್ರಾಮೀಣ ಮಕ್ಕಳು ಉತ್ತಮ ಕ್ರೀಡಾಪಟುಗಳಾಗಬಲ್ಲರು ಎಂದು ಅವರು ಪ್ರೇರಣೆ ನೀಡಿದರು.

TV9 Web
| Edited By: |

Updated on:Oct 05, 2021 | 4:49 PM

Share
ಟೋಕಿಯೋ ಒಲಿಂಪಿಕ್ಸ್ನಲ್ಲಿ ಜಾವೆಲಿನ್ ಥ್ರೋದಲ್ಲಿ ಸ್ವರ್ಣ ಪದಕ ಗೆದ್ದ ನೀರಜ್ ಚೋಪ್ರಾಗೆ ತರಬೇತಿ ನೀಡಿದ್ದ ಕಾಶಿನಾಥ ನಾಯ್ಕ್ ಅವರಿಂದ ತರಬೇತಿ ಪಡೆಯುವ ಅವಕಾಶ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಶ್ವದರ್ಶನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದೊರೆತಿತ್ತು. ಮಂಗಳವಾರ (ಅಕ್ಟೋಬರ್ 5) ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆಗೆ ಆಗಮಿಸಿದ್ದ ಅವರಿಂದ ತರಬೇತಿ ಪಡೆದ ವಿದ್ಯಾರ್ಥಿಗಳು ಪುಳಕಿತರಾದರು..

Tokyo Olympics 2021 gold medal winner neeraj chopra coach Kashinath Naik trained high school students in Yellapur

1 / 7
ಈವೇಳೆ ಮಾತನಾಡಿದ ಕಾಶಿನಾಥ ನಾಯ್ಕ್ ‘ನನ್ನ ಕ್ರೀಡಾ ಸಾಧನೆಗೆ ಭಾರತೀಯ ಸೈನ್ಯವೇ ಪ್ರೇರಣೆ.  ಕಾರ್ಗಿಲ್ ಯುದ್ದದ ಅಂತ್ಯದ ವೇಳೆ ನಾನು ಸೇನೆ ಸೇರಿದೆ. ಅಲ್ಲಿನ ಕ್ರೀಡಾ ವಿಭಾಗ ಗಮನ ಸೆಳೆಯಿತು. ಅಲ್ಲಿ ಯಾವುದೇ ವಿಶೇಷ ತರಬೇತುದಾರರು ಇರಲಿಲ್ಲ. ಆಗ ಅಲ್ಲಿನ ಸೈನಾಧಿಕಾರಿಗಳೇ ಮಾರ್ಗದರ್ಶನ ನೀಡಿದರು. ಹೀಗಾಗಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು ಎಂದು ವಿವರಿಸಿದರು.

ಈವೇಳೆ ಮಾತನಾಡಿದ ಕಾಶಿನಾಥ ನಾಯ್ಕ್ ‘ನನ್ನ ಕ್ರೀಡಾ ಸಾಧನೆಗೆ ಭಾರತೀಯ ಸೈನ್ಯವೇ ಪ್ರೇರಣೆ. ಕಾರ್ಗಿಲ್ ಯುದ್ದದ ಅಂತ್ಯದ ವೇಳೆ ನಾನು ಸೇನೆ ಸೇರಿದೆ. ಅಲ್ಲಿನ ಕ್ರೀಡಾ ವಿಭಾಗ ಗಮನ ಸೆಳೆಯಿತು. ಅಲ್ಲಿ ಯಾವುದೇ ವಿಶೇಷ ತರಬೇತುದಾರರು ಇರಲಿಲ್ಲ. ಆಗ ಅಲ್ಲಿನ ಸೈನಾಧಿಕಾರಿಗಳೇ ಮಾರ್ಗದರ್ಶನ ನೀಡಿದರು. ಹೀಗಾಗಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು ಎಂದು ವಿವರಿಸಿದರು.

2 / 7
ಸಾಧನೆ ಮಾಡಬೇಕಾದರೆ ಕಷ್ಟಗಳು ಸಹಜ. ಕಷ್ಟಗಳನ್ನು ಮೀರಿ ಬದುಕಿದಾಗ ಮಾತ್ರ ಸಾಧನೆ ಸಾಧ್ಯ. ನನಗೂ ಸಾಕಷ್ಟು ಸಮಸ್ಯೆಗಳಿದ್ದವು. ಅದನ್ನು ಮೀರಿ ಗೆಲ್ಲಬೇಕು ಎಂಬ ಛಲ ಇತ್ತು. ಆ ಛಲವೇ ನನ್ನನ್ನು ಗೆಲ್ಲಿಸಿದೆ ಎಂದು ಹೇಳಿದರು. ಬನವಾಸಿಯಿಂದ 5 ಕಿಮೀ ದೂರದ ಹಳ್ಳಿಯಲ್ಲಿ ಹುಟ್ಟಿದ ನಾನು ಮೊದಲು ಕೂಲಿ ಕೆಲಸ ಮಾಡುತ್ತಿದ್ದೆ. ನಂತರ ಬೇಕರಿಯಲ್ಲಿ ದುಡಿದೆ. ಅನೇಕ ಅಡೆತಡೆಗಳನ್ನು ಎದುರಿಸಿ, ನಿರಂತರವಾಗಿ ಪ್ರಯತ್ನಿಸಿದ ಪರಿಣಾಮ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದೇನೆ ಎಂದು ಅವರು ಪ್ರೇರೇಪಿಸಿದರು.

ಸಾಧನೆ ಮಾಡಬೇಕಾದರೆ ಕಷ್ಟಗಳು ಸಹಜ. ಕಷ್ಟಗಳನ್ನು ಮೀರಿ ಬದುಕಿದಾಗ ಮಾತ್ರ ಸಾಧನೆ ಸಾಧ್ಯ. ನನಗೂ ಸಾಕಷ್ಟು ಸಮಸ್ಯೆಗಳಿದ್ದವು. ಅದನ್ನು ಮೀರಿ ಗೆಲ್ಲಬೇಕು ಎಂಬ ಛಲ ಇತ್ತು. ಆ ಛಲವೇ ನನ್ನನ್ನು ಗೆಲ್ಲಿಸಿದೆ ಎಂದು ಹೇಳಿದರು. ಬನವಾಸಿಯಿಂದ 5 ಕಿಮೀ ದೂರದ ಹಳ್ಳಿಯಲ್ಲಿ ಹುಟ್ಟಿದ ನಾನು ಮೊದಲು ಕೂಲಿ ಕೆಲಸ ಮಾಡುತ್ತಿದ್ದೆ. ನಂತರ ಬೇಕರಿಯಲ್ಲಿ ದುಡಿದೆ. ಅನೇಕ ಅಡೆತಡೆಗಳನ್ನು ಎದುರಿಸಿ, ನಿರಂತರವಾಗಿ ಪ್ರಯತ್ನಿಸಿದ ಪರಿಣಾಮ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದೇನೆ ಎಂದು ಅವರು ಪ್ರೇರೇಪಿಸಿದರು.

3 / 7
ನೇರವಾಗಿ ಮೈದಾನಕ್ಕೆ ಮಕ್ಕಳನ್ನು ಕರೆದೊಯ್ದ ಅವರು ಜಾವೆಲಿನ್ ಕುರಿತು ಪ್ರಾತ್ಯಕ್ಷಿತೆ ನೀಡಿದರು. ಅದಾದ ನಂತರ ಮಕ್ಕಳಿಂದ ಕ್ರಿಕೆಟ್ ಬಾಲ್ ಎಸೆದು ಅಭ್ಯಾಸ ಮಾಡಿಸಿದರು. ನಂತರ ಜಾವೆಲಿನ್ ಎಸೆತ ಮಾಡಿಸಿದರು. ದೂರದಲ್ಲಿರುವ ಮಾವಿನ ಮರಕ್ಕೆ ಕಲ್ಲು ಎಸೆದು ಕಾಯಿ ಕೊಯ್ಯುವ ಸಾಮರ್ಥ್ಯದ ಗ್ರಾಮೀಣ ಮಕ್ಕಳು ಉತ್ತಮ ಕ್ರೀಡಾಪಟುಗಳಾಗಬಲ್ಲರು ಎಂದು ಅವರು ಪ್ರೇರಣೆ ನೀಡಿದರು.

ನೇರವಾಗಿ ಮೈದಾನಕ್ಕೆ ಮಕ್ಕಳನ್ನು ಕರೆದೊಯ್ದ ಅವರು ಜಾವೆಲಿನ್ ಕುರಿತು ಪ್ರಾತ್ಯಕ್ಷಿತೆ ನೀಡಿದರು. ಅದಾದ ನಂತರ ಮಕ್ಕಳಿಂದ ಕ್ರಿಕೆಟ್ ಬಾಲ್ ಎಸೆದು ಅಭ್ಯಾಸ ಮಾಡಿಸಿದರು. ನಂತರ ಜಾವೆಲಿನ್ ಎಸೆತ ಮಾಡಿಸಿದರು. ದೂರದಲ್ಲಿರುವ ಮಾವಿನ ಮರಕ್ಕೆ ಕಲ್ಲು ಎಸೆದು ಕಾಯಿ ಕೊಯ್ಯುವ ಸಾಮರ್ಥ್ಯದ ಗ್ರಾಮೀಣ ಮಕ್ಕಳು ಉತ್ತಮ ಕ್ರೀಡಾಪಟುಗಳಾಗಬಲ್ಲರು ಎಂದು ಅವರು ಪ್ರೇರಣೆ ನೀಡಿದರು.

4 / 7
ಕಾಶಿನಾಥ ನಾಯ್ಕ ಅವರನ್ನು ಸನ್ಮಾನಿಸಿದ ಲೆಕ್ಕ ಪರಿಶೋಧಕರಾದ ವಿಘ್ನೇಶ್ವರ ಗಾಂವ್ಕರ್ ಅವರು ಮಾತನಾಡಿ, ಮಕ್ಕಳು ಮಾನಸಿಕ ಹಾಗೂ ದೈಹಿಕ ಆರೋಗ್ಯ ಹೊಂದಿರಬೇಕು. ಸ್ಪರ್ಧಾತ್ಮಕ ಮನೋಭಾವನೆ ಬೆಳಸಿಕೊಳ್ಳಬೇಕು ಎಂದು ಕರೆ ನೀಡಿದರು. ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಅವರು ಇದ್ದರು. ವಿದ್ಯಾರ್ಥಿನಿ ನೀಕಿತಾ ಜಿ ನಾಯಕ ಪ್ರಾರ್ಥಿಸಿದರು. ರಾಘವೇಂದ್ರ ನಾಯ್ಕ ಸ್ವಾಗತಿಸಿದರು. ಮಹೇಶ ನಾಯ್ಕ ನಿರ್ವಹಿಸಿದರು. ಗುರು ಭಟ್ ವಂದಿಸಿದರು.

ಕಾಶಿನಾಥ ನಾಯ್ಕ ಅವರನ್ನು ಸನ್ಮಾನಿಸಿದ ಲೆಕ್ಕ ಪರಿಶೋಧಕರಾದ ವಿಘ್ನೇಶ್ವರ ಗಾಂವ್ಕರ್ ಅವರು ಮಾತನಾಡಿ, ಮಕ್ಕಳು ಮಾನಸಿಕ ಹಾಗೂ ದೈಹಿಕ ಆರೋಗ್ಯ ಹೊಂದಿರಬೇಕು. ಸ್ಪರ್ಧಾತ್ಮಕ ಮನೋಭಾವನೆ ಬೆಳಸಿಕೊಳ್ಳಬೇಕು ಎಂದು ಕರೆ ನೀಡಿದರು. ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಅವರು ಇದ್ದರು. ವಿದ್ಯಾರ್ಥಿನಿ ನೀಕಿತಾ ಜಿ ನಾಯಕ ಪ್ರಾರ್ಥಿಸಿದರು. ರಾಘವೇಂದ್ರ ನಾಯ್ಕ ಸ್ವಾಗತಿಸಿದರು. ಮಹೇಶ ನಾಯ್ಕ ನಿರ್ವಹಿಸಿದರು. ಗುರು ಭಟ್ ವಂದಿಸಿದರು.

5 / 7
ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಿ ಜನಾಂಗದವರು ಹೆಚ್ಚಿದ್ದಾರೆ. ಅವರನ್ನು ಸೇರಿದಂತೆ ಅನೇಕ ಗ್ರಾಮೀಣ ಕ್ರೀಡಾ ಪ್ರತಿಭೆಗಳು ಇಲ್ಲಿವೆ. ಅವರಿಗೆ ಸೂಕ್ತ ವೇದಿಕೆ ದೊರೆಯದ ಕಾರಣ ಪ್ರತಿಭೆಗಳು ಅನಾವರಣಗೊಂಡಿಲ್ಲ. ಗ್ರಾಮೀಣ ಭಾಗದವರಿಗೆ ತರಬೇತಿ ನೀಡಿ ಅವರನ್ನು ಮುಖ್ಯ ವಾಹಿನಿಗೆ ತರುವ ಕನಸು ನನ್ನದು. ಹೀಗಾಗಿ ಮುಂದಿನ ವರ್ಷ ಕ್ರೀಡಾ ಅಕಾಡೆಮಿ ಸ್ಥಾಪಿಸುವ ಚಿಂತನೆಯಿದೆ ಎಂದು ರಾಷ್ಟ್ರೀಯ ಕ್ರೀಟಾಪಟು ಕಾಶಿನಾಥ ನಾಯ್ಕ ತಮ್ಮ ಕನಸನ್ನು ತೆರೆದಿಟ್ಟರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಿ ಜನಾಂಗದವರು ಹೆಚ್ಚಿದ್ದಾರೆ. ಅವರನ್ನು ಸೇರಿದಂತೆ ಅನೇಕ ಗ್ರಾಮೀಣ ಕ್ರೀಡಾ ಪ್ರತಿಭೆಗಳು ಇಲ್ಲಿವೆ. ಅವರಿಗೆ ಸೂಕ್ತ ವೇದಿಕೆ ದೊರೆಯದ ಕಾರಣ ಪ್ರತಿಭೆಗಳು ಅನಾವರಣಗೊಂಡಿಲ್ಲ. ಗ್ರಾಮೀಣ ಭಾಗದವರಿಗೆ ತರಬೇತಿ ನೀಡಿ ಅವರನ್ನು ಮುಖ್ಯ ವಾಹಿನಿಗೆ ತರುವ ಕನಸು ನನ್ನದು. ಹೀಗಾಗಿ ಮುಂದಿನ ವರ್ಷ ಕ್ರೀಡಾ ಅಕಾಡೆಮಿ ಸ್ಥಾಪಿಸುವ ಚಿಂತನೆಯಿದೆ ಎಂದು ರಾಷ್ಟ್ರೀಯ ಕ್ರೀಟಾಪಟು ಕಾಶಿನಾಥ ನಾಯ್ಕ ತಮ್ಮ ಕನಸನ್ನು ತೆರೆದಿಟ್ಟರು.

6 / 7
ಗ್ರಾಮೀಣ ಭಾಗದವರು ಸಾಧನೆ ಮಾಡಲು ಸಾಧ್ಯವಿಲ್ಲ ಎಂಬುದು ಸುಳ್ಳು. ಸಾಧನೆ ಮಾಡಲು ಮುಖ್ಯವಾಗಿ ಸ್ಪರ್ಧಾತ್ಮಕ ಮನೋಭಾವನೆ ಅಗತ್ಯವಿದೆ. ಮಕ್ಕಳು ಮೊಬೈಲ್‌ನಲ್ಲಿ ಆಟ ಆಡುವ ಬದಲು ಮೈದಾನದಲ್ಲಿ ಆಡಿದರೆ ಆರೋಗ್ಯ ದೊರೆಯುತ್ತದೆ. ಸ್ವಂತಕ್ಕಾಗಿ ಮಾಡಿದರೆ ಸ್ವಾರ್ಥ ಎನಿಸುತ್ತದೆ. ದೇಶಕ್ಕಾಗಿ ಮಾಡಿದಾಗ ದೊರೆಯುವ ಗೆಲುವಿನ ಸಂಭ್ರಮಕ್ಕೆ ಇಡೀ ದೇಶ ಸಾಕ್ಷಿಯಾಗುತ್ತದೆ ಎಂದು ಅವರು ಸ್ಪೂರ್ತಿದಾಯಕ ಮಾತನಾಡಿದರು.

ಗ್ರಾಮೀಣ ಭಾಗದವರು ಸಾಧನೆ ಮಾಡಲು ಸಾಧ್ಯವಿಲ್ಲ ಎಂಬುದು ಸುಳ್ಳು. ಸಾಧನೆ ಮಾಡಲು ಮುಖ್ಯವಾಗಿ ಸ್ಪರ್ಧಾತ್ಮಕ ಮನೋಭಾವನೆ ಅಗತ್ಯವಿದೆ. ಮಕ್ಕಳು ಮೊಬೈಲ್‌ನಲ್ಲಿ ಆಟ ಆಡುವ ಬದಲು ಮೈದಾನದಲ್ಲಿ ಆಡಿದರೆ ಆರೋಗ್ಯ ದೊರೆಯುತ್ತದೆ. ಸ್ವಂತಕ್ಕಾಗಿ ಮಾಡಿದರೆ ಸ್ವಾರ್ಥ ಎನಿಸುತ್ತದೆ. ದೇಶಕ್ಕಾಗಿ ಮಾಡಿದಾಗ ದೊರೆಯುವ ಗೆಲುವಿನ ಸಂಭ್ರಮಕ್ಕೆ ಇಡೀ ದೇಶ ಸಾಕ್ಷಿಯಾಗುತ್ತದೆ ಎಂದು ಅವರು ಸ್ಪೂರ್ತಿದಾಯಕ ಮಾತನಾಡಿದರು.

7 / 7

Published On - 4:24 pm, Tue, 5 October 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ