AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶ ಬಂಡಿಪುರಕ್ಕೆ ಪ್ರವಾಸಿಗರು ಲಗ್ಗೆ; ಪ್ರತಿದಿನ 2 ಸಾವಿರದವರೆಗೆ ಜನರ ಭೇಟಿ, ಇಲ್ಲಿದೆ ಫೋಟೋಸ್​

ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶ ಬಂಡಿಪುರಕ್ಕೆ ಪ್ರವಾಸಿಗರು ಲಗ್ಗೆ ಇಡ್ತಿದ್ದಾರೆ. ಬೇಸಿಗೆ ರಜೆ ಮುಗಿದು ಇನ್ನೇನು ಶಾಲೆಗಳು ಪ್ರಾರಂಭವಾಗುತ್ತಿದ್ದು ಮಕ್ಕಳು ಬಂಡಿಪುರ ಸಫಾರಿ ಮೂಲಕ ಶಾಲೆಯತ್ತ ಹೆಜ್ಜೆ ಹಾಕಲು ನಿರ್ಧರಿಸಿದ್ದಾರೆ. ಪ್ರವಾಸಿಗರ ಆಗಮನದಿಂದ ಅರಣ್ಯ ಇಲಾಖೆಗೆ ಆದಾಯವೂ ಹೆಚ್ಚಿದ್ದು ಸಂಪೂರ್ಣ ಡೀಟೈಲ್ ಇಲ್ಲಿದೆ ನೋಡಿ.

ಕಿರಣ್ ಹನುಮಂತ್​ ಮಾದಾರ್
|

Updated on:May 28, 2023 | 8:16 AM

ಬಂಡಿಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶವಾಗಿ 50 ವರ್ಷ ಪೂರೈಸಿದ್ದು ಒಂದು ತಿಂಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಇಲ್ಲಿಗೆ ಭೇಟಿ ನೀಡಿದ್ದರು. ಇದಷ್ಟೇ ಮಾತ್ರವಲ್ಲದೆ ಹುಲಿ ವಾಸಕ್ಕೆ ದೇಶದ ಎರಡನೇ ಅತ್ಯುತ್ತಮ ಪ್ರದೇಶವೆಂಬ ಹೆಮ್ಮೆಯೂ ಬಂಡಿಪುರಕ್ಕೆ ಸೇರಿದೆ.

ಬಂಡಿಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶವಾಗಿ 50 ವರ್ಷ ಪೂರೈಸಿದ್ದು ಒಂದು ತಿಂಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಇಲ್ಲಿಗೆ ಭೇಟಿ ನೀಡಿದ್ದರು. ಇದಷ್ಟೇ ಮಾತ್ರವಲ್ಲದೆ ಹುಲಿ ವಾಸಕ್ಕೆ ದೇಶದ ಎರಡನೇ ಅತ್ಯುತ್ತಮ ಪ್ರದೇಶವೆಂಬ ಹೆಮ್ಮೆಯೂ ಬಂಡಿಪುರಕ್ಕೆ ಸೇರಿದೆ.

1 / 7
ಈ ಎಲ್ಲ ಕಾರಣಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಪ್ರತಿದಿನ ಒಂದೂವರೆಯಿಂದ ಎರಡು ಸಾವಿರ ಜನ ಭೇಟಿ ನೀಡುತ್ತಿದ್ದು, ವಾರಾಂತ್ಯದಲ್ಲಿ ಸಫಾರಿಗಾಗಿ ಬರುವವರ ಸಂಖ್ಯೆ ಇನ್ನೂ ಹೆಚ್ಚಿದೆ.

ಈ ಎಲ್ಲ ಕಾರಣಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಪ್ರತಿದಿನ ಒಂದೂವರೆಯಿಂದ ಎರಡು ಸಾವಿರ ಜನ ಭೇಟಿ ನೀಡುತ್ತಿದ್ದು, ವಾರಾಂತ್ಯದಲ್ಲಿ ಸಫಾರಿಗಾಗಿ ಬರುವವರ ಸಂಖ್ಯೆ ಇನ್ನೂ ಹೆಚ್ಚಿದೆ.

2 / 7
ಇದರಿಂದ ಪ್ರತಿದಿನ 7ರಿಂದ 8 ಲಕ್ಷ ರೂಪಾಯಿ ಅರಣ್ಯ ಇಲಾಖೆಗೆ ಲಾಭ ಬರುತ್ತಿದೆ. ಬಂಡಿಪುರದಲ್ಲಿ 31 ಸಫಾರಿ ಜೀಪ್ ಓಡಿಸಲು ಅವಕಾಶವಿದೆ.

ಇದರಿಂದ ಪ್ರತಿದಿನ 7ರಿಂದ 8 ಲಕ್ಷ ರೂಪಾಯಿ ಅರಣ್ಯ ಇಲಾಖೆಗೆ ಲಾಭ ಬರುತ್ತಿದೆ. ಬಂಡಿಪುರದಲ್ಲಿ 31 ಸಫಾರಿ ಜೀಪ್ ಓಡಿಸಲು ಅವಕಾಶವಿದೆ.

3 / 7
ಇದುವರೆಗೆ ಅರಣ್ಯ ಇಲಾಖೆ 26 ಜೀಪ್​ಗಳನ್ನು ಮಾತ್ರ ಬಳಸುತ್ತಿತ್ತು. ಇತ್ತೀಚೆಗಷ್ಟೇ 2 ಜೀಪ್, 2 ಬಸ್ ಹೊಸದಾಗಿ ಬಂದಿದ್ದು ಪ್ರವಾಸಿಗರಿಗೆ ಸಾಕಷ್ಟು ಅನುಕೂಲವಾಗಿದೆ.

ಇದುವರೆಗೆ ಅರಣ್ಯ ಇಲಾಖೆ 26 ಜೀಪ್​ಗಳನ್ನು ಮಾತ್ರ ಬಳಸುತ್ತಿತ್ತು. ಇತ್ತೀಚೆಗಷ್ಟೇ 2 ಜೀಪ್, 2 ಬಸ್ ಹೊಸದಾಗಿ ಬಂದಿದ್ದು ಪ್ರವಾಸಿಗರಿಗೆ ಸಾಕಷ್ಟು ಅನುಕೂಲವಾಗಿದೆ.

4 / 7
ಜೀವನದಲ್ಲಿ ಒಮ್ಮೆಯಾದರೂ ಹುಲಿ ನೋಡಬೇಕೆಂಬುದು ಪರಿಸರ ಪ್ರಿಯರ ಆಸೆಯಾಗಿದೆ. ಅದಕ್ಕಾಗೇ ತಮಿಳುನಾಡು, ಕೇರಳ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಜನರು ಬರ್ತಾರೆ.

ಜೀವನದಲ್ಲಿ ಒಮ್ಮೆಯಾದರೂ ಹುಲಿ ನೋಡಬೇಕೆಂಬುದು ಪರಿಸರ ಪ್ರಿಯರ ಆಸೆಯಾಗಿದೆ. ಅದಕ್ಕಾಗೇ ತಮಿಳುನಾಡು, ಕೇರಳ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಜನರು ಬರ್ತಾರೆ.

5 / 7
ಬಂಡಿಪುರದಲ್ಲಿ ಹುಲಿ ಮಾತ್ರವಲ್ಲದೆ ಆನೆ, ಚಿರತೆ, ಜಿಂಕೆ, ಕರಡಿ, ಉಡ ಸೇರಿದಂತೆ ಅನೇಕ ಬಗೆಯ ಪಕ್ಷಿಗಳನ್ನು ಕಾಣಬಹುದು. ಭಾರಿ ಆಸೆಯಿಂದ ಬರುವವರಿಗೆ ಅದೆಷ್ಟೋ ಸಲ ಸಫಾರಿ ಟಿಕೆಟ್ ಸಿಗದೆ ವಾಪಸ್ಸಾಗುವ ಪ್ರಸಂಗವೂ ನಡೀತಿದೆ.

ಬಂಡಿಪುರದಲ್ಲಿ ಹುಲಿ ಮಾತ್ರವಲ್ಲದೆ ಆನೆ, ಚಿರತೆ, ಜಿಂಕೆ, ಕರಡಿ, ಉಡ ಸೇರಿದಂತೆ ಅನೇಕ ಬಗೆಯ ಪಕ್ಷಿಗಳನ್ನು ಕಾಣಬಹುದು. ಭಾರಿ ಆಸೆಯಿಂದ ಬರುವವರಿಗೆ ಅದೆಷ್ಟೋ ಸಲ ಸಫಾರಿ ಟಿಕೆಟ್ ಸಿಗದೆ ವಾಪಸ್ಸಾಗುವ ಪ್ರಸಂಗವೂ ನಡೀತಿದೆ.

6 / 7
ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿರೋದ್ರಿಂದ ಅದು ಗೊತ್ತಿಲ್ಲದೆ ಕೌಂಟರ್​ಗೆ ಬರೋರು ವಾಪಸ್ಸಾಗುವ ಸ್ಥಿತಿ ಇದೆ‌. ಬಾಗಲಕೋಟೆ ಜಿಲ್ಲೆ ಇಳಕಲ್ ನಿಂದ ಬಂದಿದ್ದ ಕುಟುಂಬವೊಂದು ಸಫಾರಿ ಟಿಕೆಟ್ ಸಿಗದೆ ವಾಪಸ್ಸಾಗಿದ್ದಾರೆ.
ಒಟ್ಟಿನಲ್ಲಿ ಬಂಡಿಪುರಕ್ಕೆ ಬರುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ವಿಪರೀತ ಏರಿಕೆಯಾಗಿರುವುದು ಅರಣ್ಯ ಇಲಾಖೆಗೆ ಖುಷಿ ತಂದಿದೆ. ಇದರಿಂದ ಪ್ರವಾಸೋದ್ಯಮ ವೃದ್ಧಿಯಾಗುತ್ತಿದ್ದು ಸ್ಥಳೀಯರಿಗೆ ಉದ್ಯೋಗವು ಸಿಗುತ್ತಿದೆ.

ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿರೋದ್ರಿಂದ ಅದು ಗೊತ್ತಿಲ್ಲದೆ ಕೌಂಟರ್​ಗೆ ಬರೋರು ವಾಪಸ್ಸಾಗುವ ಸ್ಥಿತಿ ಇದೆ‌. ಬಾಗಲಕೋಟೆ ಜಿಲ್ಲೆ ಇಳಕಲ್ ನಿಂದ ಬಂದಿದ್ದ ಕುಟುಂಬವೊಂದು ಸಫಾರಿ ಟಿಕೆಟ್ ಸಿಗದೆ ವಾಪಸ್ಸಾಗಿದ್ದಾರೆ. ಒಟ್ಟಿನಲ್ಲಿ ಬಂಡಿಪುರಕ್ಕೆ ಬರುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ವಿಪರೀತ ಏರಿಕೆಯಾಗಿರುವುದು ಅರಣ್ಯ ಇಲಾಖೆಗೆ ಖುಷಿ ತಂದಿದೆ. ಇದರಿಂದ ಪ್ರವಾಸೋದ್ಯಮ ವೃದ್ಧಿಯಾಗುತ್ತಿದ್ದು ಸ್ಥಳೀಯರಿಗೆ ಉದ್ಯೋಗವು ಸಿಗುತ್ತಿದೆ.

7 / 7

Published On - 8:14 am, Sun, 28 May 23

Follow us
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ