AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel India: ಸಿಕ್ಕಿಂನ ಈ ಮನೋಹರ ತಾಣಗಳ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಸಚಿತ್ರ ಮಾಹಿತಿ

Sikkim tourist places: ಈಶಾನ್ಯ ಭಾರತದ ರಾಜ್ಯವಾಗಿರುವ ಸಿಕ್ಕಿಂ ಸುಂದರವಾದ ಪ್ರೇಕ್ಷಣೀಯ ಸ್ಥಳಗಳನ್ನು ಹೊಂದಿದೆ. ಒಂದುವೇಳೆ ನೀವು ಅಲ್ಲಿಗೆ ಪ್ರವಾಸದ ಯೋಜನೆ ಮಾಡಿದ್ದಲ್ಲಿ ಈ ಸ್ಥಳಗಳನ್ನು ಮಿಸ್ ಮಾಡಲೇಬೇಡಿ. ಗ್ಯಾಂಗ್ಟಾಕ್, ಬುದ್ಧ ಪಾರ್ಕ್, ಜುಲುಕ್ ಹಾಗೂ ಪೆಲ್ಲಿಂಗ್ ಸಿಕ್ಕಿಂನಲ್ಲಿ ಬಹುಪ್ರಸಿದ್ಧವಾದ ಸ್ಥಳಗಳಾಗಿವೆ. ಅವುಗಳ ಸಚಿತ್ರ ವಿವರಣೆ ಇಲ್ಲಿದೆ.

shivaprasad.hs
|

Updated on: Apr 24, 2022 | 9:33 AM

Share
ಸಿಕ್ಕಿಂ ತನ್ನ ನೈಸರ್ಗಿಕ ಸೌಂದರ್ಯದಿಂದಾಗಿ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಪರ್ವತಗಳು ಮತ್ತು ಹಸಿರಿನ ನಡುವೆ ನೆಲೆಗೊಂಡಿರುವ ಈ ರಾಜ್ಯದಲ್ಲಿ ಅನೇಕ ಪ್ರವಾಸಿ ತಾಣಗಳಿವೆ. ನೀವು ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರವಾಸವನ್ನು ಆನಂದಿಸಲು ಯೋಜಿಸಿದ್ದರೆ, ಅದಕ್ಕೆ ಪೂರಕವಾಗುವ ಮಾಹಿತಿ ಇಲ್ಲಿದೆ. ನೀವು ಯಾವೆಲ್ಲಾ ತಾಣಗಳನ್ನು ಮಿಸ್ ಮಾಡಲೇಬಾರದು ಎಂಬುದರ ಬಗ್ಗೆ ಇಲ್ಲಿದೆ ಡಿಟೇಲ್ಸ್.

1 / 5
ಪೆಲ್ಲಿಂಗ್: ಇದು ಸಿಕ್ಕಿಂನ ಒಂದು ಸುಂದರ ತಾಣ. ಸುಮಾರು 7200 ಅಡಿ ಎತ್ತರದಲ್ಲಿರುವ ಈ ನಗರದಲ್ಲಿ ನೀವು ಸಾಹಸ ಕ್ರೀಡೆಗಳನ್ನು ಆಡಬಹುದು, ಚಾರಣ ಮಾಡಬಹುದು. ಪ್ರಶಾಂತವಾಗಿರುವ ಪೆಲ್ಲಿಂಗ್​ನ ವಾತಾವರಣಕ್ಕೆ ನೀವು ಮನಸೋಲೋದು ಗ್ಯಾರಂಟಿ.

2 / 5
ಜುಲುಕ್: ಈ ನಗರಕ್ಕೆ ಭೇಟಿ ನೀಡಿದರೆ ನಿಮ್ಮ ಸಿಕ್ಕಿಂ ಪ್ರವಾಸಕ್ಕೆ ಮತ್ತಷ್ಟು ಮೆರುಗು ತುಂಬುತ್ತದೆ ಎಂದೇ ಹೇಳಬಹುದು. ಇದು ಪೂರ್ವ ಹಿಮಾಲಯದ ಮಡಿಲಲ್ಲಿರುವ ಸುಂದರ ನಗರ. ಇಲ್ಲಿನ ನೈಸರ್ಗಿಕ ಸೌಂದರ್ಯ ಪ್ರಖ್ಯಾತವಾಗಿದ್ದು, ಪ್ರವಾಸಿಗರು ಭೇಟಿ ನೀಡಲು ಹಾತೊರೆಯುತ್ತಾರೆ.

3 / 5
ಗ್ಯಾಂಗ್ಟಾಕ್: ಸಿಕ್ಕಿಂನ ರಾಜಧಾನಿಯಾಗಿರುವ ಗ್ಯಾಂಗ್ಟಾಕ್​ನ ಹೆಸರು ಕೇಳದವರು ವಿರಳ. ಈ ನಗರಕ್ಕೆ ಭೇಟಿ ನೀಡಿದರೆ ನೀವು ರಾಜ್ಯದ ಸಂಸ್ಕೃತಿಯನ್ನು ಹತ್ತಿರದಿಂದ ತಿಳಿಯಬಹುದು. ಮೋಡಗಳಿಂದ ಆವೃತವಾಗಿರುವ ಈ ನಗರ ಹಾಗೂ ಸುತ್ತಮುತ್ತಲಿನ ಪ್ರಕೃತಿ ಸೌಂದರ್ಯಕ್ಕೆ ನೀವು ಫಿದಾ ಆಗೋದು ಪಕ್ಕಾ.

4 / 5
ಬುದ್ಧ ಪಾರ್ಕ್: ಸಿಕ್ಕಿಂನಲ್ಲಿ ಬುದ್ಧನ ಚಿಂತನೆಗಳನ್ನು ಅನುಸರಿಸುವ ಜನರು ಹೆಚ್ಚಿದ್ದಾರೆ. ಸಿಕ್ಕಿಂನಲ್ಲಿ ಬುದ್ಧನ ಪ್ರತಿಮೆಯನ್ನು ಒಳಗೊಂಡ ‘ಬುದ್ಧ ಪಾರ್ಕ್’ ಬಹುಪ್ರಸಿದ್ಧವಾಗಿದೆ. ನಿಮ್ಮ ಸಿಕ್ಕಿಂ ಭೇಟಿಯಲ್ಲಿ ಇದನ್ನು ಮಿಸ್ ಮಾಡಲೇಬೇಡಿ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ