AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel India: ಸಿಕ್ಕಿಂನ ಈ ಮನೋಹರ ತಾಣಗಳ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಸಚಿತ್ರ ಮಾಹಿತಿ

Sikkim tourist places: ಈಶಾನ್ಯ ಭಾರತದ ರಾಜ್ಯವಾಗಿರುವ ಸಿಕ್ಕಿಂ ಸುಂದರವಾದ ಪ್ರೇಕ್ಷಣೀಯ ಸ್ಥಳಗಳನ್ನು ಹೊಂದಿದೆ. ಒಂದುವೇಳೆ ನೀವು ಅಲ್ಲಿಗೆ ಪ್ರವಾಸದ ಯೋಜನೆ ಮಾಡಿದ್ದಲ್ಲಿ ಈ ಸ್ಥಳಗಳನ್ನು ಮಿಸ್ ಮಾಡಲೇಬೇಡಿ. ಗ್ಯಾಂಗ್ಟಾಕ್, ಬುದ್ಧ ಪಾರ್ಕ್, ಜುಲುಕ್ ಹಾಗೂ ಪೆಲ್ಲಿಂಗ್ ಸಿಕ್ಕಿಂನಲ್ಲಿ ಬಹುಪ್ರಸಿದ್ಧವಾದ ಸ್ಥಳಗಳಾಗಿವೆ. ಅವುಗಳ ಸಚಿತ್ರ ವಿವರಣೆ ಇಲ್ಲಿದೆ.

shivaprasad.hs
|

Updated on: Apr 24, 2022 | 9:33 AM

Share
ಸಿಕ್ಕಿಂ ತನ್ನ ನೈಸರ್ಗಿಕ ಸೌಂದರ್ಯದಿಂದಾಗಿ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಪರ್ವತಗಳು ಮತ್ತು ಹಸಿರಿನ ನಡುವೆ ನೆಲೆಗೊಂಡಿರುವ ಈ ರಾಜ್ಯದಲ್ಲಿ ಅನೇಕ ಪ್ರವಾಸಿ ತಾಣಗಳಿವೆ. ನೀವು ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರವಾಸವನ್ನು ಆನಂದಿಸಲು ಯೋಜಿಸಿದ್ದರೆ, ಅದಕ್ಕೆ ಪೂರಕವಾಗುವ ಮಾಹಿತಿ ಇಲ್ಲಿದೆ. ನೀವು ಯಾವೆಲ್ಲಾ ತಾಣಗಳನ್ನು ಮಿಸ್ ಮಾಡಲೇಬಾರದು ಎಂಬುದರ ಬಗ್ಗೆ ಇಲ್ಲಿದೆ ಡಿಟೇಲ್ಸ್.

1 / 5
ಪೆಲ್ಲಿಂಗ್: ಇದು ಸಿಕ್ಕಿಂನ ಒಂದು ಸುಂದರ ತಾಣ. ಸುಮಾರು 7200 ಅಡಿ ಎತ್ತರದಲ್ಲಿರುವ ಈ ನಗರದಲ್ಲಿ ನೀವು ಸಾಹಸ ಕ್ರೀಡೆಗಳನ್ನು ಆಡಬಹುದು, ಚಾರಣ ಮಾಡಬಹುದು. ಪ್ರಶಾಂತವಾಗಿರುವ ಪೆಲ್ಲಿಂಗ್​ನ ವಾತಾವರಣಕ್ಕೆ ನೀವು ಮನಸೋಲೋದು ಗ್ಯಾರಂಟಿ.

2 / 5
ಜುಲುಕ್: ಈ ನಗರಕ್ಕೆ ಭೇಟಿ ನೀಡಿದರೆ ನಿಮ್ಮ ಸಿಕ್ಕಿಂ ಪ್ರವಾಸಕ್ಕೆ ಮತ್ತಷ್ಟು ಮೆರುಗು ತುಂಬುತ್ತದೆ ಎಂದೇ ಹೇಳಬಹುದು. ಇದು ಪೂರ್ವ ಹಿಮಾಲಯದ ಮಡಿಲಲ್ಲಿರುವ ಸುಂದರ ನಗರ. ಇಲ್ಲಿನ ನೈಸರ್ಗಿಕ ಸೌಂದರ್ಯ ಪ್ರಖ್ಯಾತವಾಗಿದ್ದು, ಪ್ರವಾಸಿಗರು ಭೇಟಿ ನೀಡಲು ಹಾತೊರೆಯುತ್ತಾರೆ.

3 / 5
ಗ್ಯಾಂಗ್ಟಾಕ್: ಸಿಕ್ಕಿಂನ ರಾಜಧಾನಿಯಾಗಿರುವ ಗ್ಯಾಂಗ್ಟಾಕ್​ನ ಹೆಸರು ಕೇಳದವರು ವಿರಳ. ಈ ನಗರಕ್ಕೆ ಭೇಟಿ ನೀಡಿದರೆ ನೀವು ರಾಜ್ಯದ ಸಂಸ್ಕೃತಿಯನ್ನು ಹತ್ತಿರದಿಂದ ತಿಳಿಯಬಹುದು. ಮೋಡಗಳಿಂದ ಆವೃತವಾಗಿರುವ ಈ ನಗರ ಹಾಗೂ ಸುತ್ತಮುತ್ತಲಿನ ಪ್ರಕೃತಿ ಸೌಂದರ್ಯಕ್ಕೆ ನೀವು ಫಿದಾ ಆಗೋದು ಪಕ್ಕಾ.

4 / 5
ಬುದ್ಧ ಪಾರ್ಕ್: ಸಿಕ್ಕಿಂನಲ್ಲಿ ಬುದ್ಧನ ಚಿಂತನೆಗಳನ್ನು ಅನುಸರಿಸುವ ಜನರು ಹೆಚ್ಚಿದ್ದಾರೆ. ಸಿಕ್ಕಿಂನಲ್ಲಿ ಬುದ್ಧನ ಪ್ರತಿಮೆಯನ್ನು ಒಳಗೊಂಡ ‘ಬುದ್ಧ ಪಾರ್ಕ್’ ಬಹುಪ್ರಸಿದ್ಧವಾಗಿದೆ. ನಿಮ್ಮ ಸಿಕ್ಕಿಂ ಭೇಟಿಯಲ್ಲಿ ಇದನ್ನು ಮಿಸ್ ಮಾಡಲೇಬೇಡಿ.

5 / 5
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ