AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ದಿನಾಚರಣೆಗೆ ರಂಗೋಲಿ ಸ್ಪರ್ಧೆ! ಮಹಿಳಾ ಪೊಲೀಸರ ಕೈಯಿಂದ ಮೂಡಿದ ಚಿತ್ತಾರ ನೋಡಿ!

ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯು ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಿತು. ಒತ್ತಡದ ಕರ್ತವ್ಯಗಳಿಂದ ವಿರಾಮ ಪಡೆದ ಮಹಿಳಾ ಪೊಲೀಸ್ ಸಿಬ್ಬಂದಿ, ತಮ್ಮ ಕಲಾ ಪ್ರತಿಭೆ ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು. ರಂಗೋಲಿಗಳ ಮೂಲಕ ಮಹಿಳೆಯರ ಪಾತ್ರ, ಸವಾಲುಗಳು ಹಾಗೂ ಸಮಾನತೆಯ ಬಗ್ಗೆ ಸಾಮಾಜಿಕ ಸಂದೇಶಗಳನ್ನು ನೀಡಿದರು. ಇದು ಮಹಿಳಾ ಪೊಲೀಸರ ಸೃಜನಶೀಲತೆ ಮತ್ತು ಸಮುದಾಯ ಪ್ರಜ್ಞೆಯನ್ನು ಪ್ರತಿಬಿಂಬಿಸಿತು.

ಜಗದೀಶ ಬಿ.
| Edited By: |

Updated on: Mar 08, 2026 | 11:39 AM

Share
ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ರಂಗೋಲಿ ಸ್ಪರ್ಧೆ ಆಯೋಜಿಸಲಾಯಿತು. ತುಮಕೂರು ಜಿಲ್ಲಾ ಎಸ್ಪಿ ಕಚೇರಿ ಹಿಂಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಭಾಗವಹಿಸಿದರು.

ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ರಂಗೋಲಿ ಸ್ಪರ್ಧೆ ಆಯೋಜಿಸಲಾಯಿತು. ತುಮಕೂರು ಜಿಲ್ಲಾ ಎಸ್ಪಿ ಕಚೇರಿ ಹಿಂಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಭಾಗವಹಿಸಿದರು.

1 / 6
ದಿನನಿತ್ಯ ಒತ್ತಡದ ಪೊಲೀಸ್ ಕರ್ತವ್ಯಗಳಲ್ಲಿ ತೊಡಗಿಕೊಂಡಿರುವ ಮಹಿಳಾ ಪೊಲೀಸರು, ಕೇಸ್ ತನಿಖೆ ಹಾಗೂ ಇಲಾಖೆಯ ಕೆಲಸಗಳಿಂದ ವಿರಾಮ ಪಡೆದು ರಂಗೋಲಿ ಬಿಡಿಸುವ ಮೂಲಕ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು.

ದಿನನಿತ್ಯ ಒತ್ತಡದ ಪೊಲೀಸ್ ಕರ್ತವ್ಯಗಳಲ್ಲಿ ತೊಡಗಿಕೊಂಡಿರುವ ಮಹಿಳಾ ಪೊಲೀಸರು, ಕೇಸ್ ತನಿಖೆ ಹಾಗೂ ಇಲಾಖೆಯ ಕೆಲಸಗಳಿಂದ ವಿರಾಮ ಪಡೆದು ರಂಗೋಲಿ ಬಿಡಿಸುವ ಮೂಲಕ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು.

2 / 6
ಮನೆ ಹಾಗೂ ಪೊಲೀಸ್ ಇಲಾಖೆಯ ಜವಾಬ್ದಾರಿಗಳನ್ನು ಸಮನ್ವಯಗೊಳಿಸುವ ಮಹಿಳಾ ಪೊಲೀಸ್ ಸಿಬ್ಬಂದಿ, ಮಹಿಳಾ ದಿನಾಚರಣೆಯ ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹೋದ್ಯೋಗಿಗಳೊಂದಿಗೆ ಹರ್ಷಭರಿತ ಕ್ಷಣಗಳನ್ನು ಕಳೆಯುವ ಅವಕಾಶ ಪಡೆದರು.

ಮನೆ ಹಾಗೂ ಪೊಲೀಸ್ ಇಲಾಖೆಯ ಜವಾಬ್ದಾರಿಗಳನ್ನು ಸಮನ್ವಯಗೊಳಿಸುವ ಮಹಿಳಾ ಪೊಲೀಸ್ ಸಿಬ್ಬಂದಿ, ಮಹಿಳಾ ದಿನಾಚರಣೆಯ ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹೋದ್ಯೋಗಿಗಳೊಂದಿಗೆ ಹರ್ಷಭರಿತ ಕ್ಷಣಗಳನ್ನು ಕಳೆಯುವ ಅವಕಾಶ ಪಡೆದರು.

3 / 6
ಬಾಲ್ಯದಲ್ಲಿ ಕಲಿತಿದ್ದ ರಂಗೋಲಿ ಕಲೆಯನ್ನು ಮತ್ತೆ ಪ್ರದರ್ಶಿಸುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ ಎಂದು ಮಹಿಳಾ ಪೊಲೀಸರು ಹೇಳಿದರು. ಸ್ಪರ್ಧೆಯಲ್ಲಿ ವಿವಿಧ ಬಣ್ಣಗಳ ರಂಗೋಲಿಗಳ ಮೂಲಕ ತಮ್ಮ ಸೃಜನಶೀಲತೆಯನ್ನು ತೋರಿಸಿದರು.

ಬಾಲ್ಯದಲ್ಲಿ ಕಲಿತಿದ್ದ ರಂಗೋಲಿ ಕಲೆಯನ್ನು ಮತ್ತೆ ಪ್ರದರ್ಶಿಸುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ ಎಂದು ಮಹಿಳಾ ಪೊಲೀಸರು ಹೇಳಿದರು. ಸ್ಪರ್ಧೆಯಲ್ಲಿ ವಿವಿಧ ಬಣ್ಣಗಳ ರಂಗೋಲಿಗಳ ಮೂಲಕ ತಮ್ಮ ಸೃಜನಶೀಲತೆಯನ್ನು ತೋರಿಸಿದರು.

4 / 6
ಸ್ಪರ್ಧೆಯಲ್ಲಿ ಮಹಿಳೆಯರ ಬದುಕಿನ ಪಾತ್ರ, ಎದುರಿಸುವ ಸವಾಲುಗಳು ಹಾಗೂ ಸಮಾಜದಲ್ಲಿ ಸಮಾನತೆ ಕುರಿತು ಸಂದೇಶ ನೀಡುವಂತಹ ರಂಗೋಲಿ ಚಿತ್ತಾರಗಳನ್ನು ಬಿಡಿಸಲಾಯಿತು. ಇದರಿಂದ ಕಾರ್ಯಕ್ರಮಕ್ಕೆ ವಿಶೇಷ ಅರ್ಥಪೂರ್ಣತೆ ಮೂಡಿತು.

ಸ್ಪರ್ಧೆಯಲ್ಲಿ ಮಹಿಳೆಯರ ಬದುಕಿನ ಪಾತ್ರ, ಎದುರಿಸುವ ಸವಾಲುಗಳು ಹಾಗೂ ಸಮಾಜದಲ್ಲಿ ಸಮಾನತೆ ಕುರಿತು ಸಂದೇಶ ನೀಡುವಂತಹ ರಂಗೋಲಿ ಚಿತ್ತಾರಗಳನ್ನು ಬಿಡಿಸಲಾಯಿತು. ಇದರಿಂದ ಕಾರ್ಯಕ್ರಮಕ್ಕೆ ವಿಶೇಷ ಅರ್ಥಪೂರ್ಣತೆ ಮೂಡಿತು.

5 / 6
ಹೆಣ್ಣು ಮಕ್ಕಳಿಗೆ ಜನನದಿಂದಲೇ ಸಮಾನ ಅವಕಾಶ ನೀಡಬೇಕು, ತಾರತಮ್ಯವನ್ನು ತೊರೆಯಬೇಕು ಎಂಬ ಸಾಮಾಜಿಕ ಸಂದೇಶವನ್ನು ಮಹಿಳಾ ಪೊಲೀಸರು ತಮ್ಮ ರಂಗೋಲಿ ವಿನ್ಯಾಸಗಳ ಮೂಲಕ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸಂತೋಷ ವ್ಯಕ್ತಪಡಿಸಿದರು.

ಹೆಣ್ಣು ಮಕ್ಕಳಿಗೆ ಜನನದಿಂದಲೇ ಸಮಾನ ಅವಕಾಶ ನೀಡಬೇಕು, ತಾರತಮ್ಯವನ್ನು ತೊರೆಯಬೇಕು ಎಂಬ ಸಾಮಾಜಿಕ ಸಂದೇಶವನ್ನು ಮಹಿಳಾ ಪೊಲೀಸರು ತಮ್ಮ ರಂಗೋಲಿ ವಿನ್ಯಾಸಗಳ ಮೂಲಕ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸಂತೋಷ ವ್ಯಕ್ತಪಡಿಸಿದರು.

6 / 6
Follow Us
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ