AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ್​​ಶ್ರೀ​ಗಳ ಜನ್ಮದಿನ: ಸಿದ್ದಗಂಗಾ ಮಠಕ್ಕೆ ಗಣ್ಯರ ಭೇಟಿ, ಫೋಟೋಸ್​ ಇಲ್ಲಿವೆ

ಇಂದು (ಏಪ್ರಿಲ್​​ 01) ತ್ರಿವಿಧ ದಾಸೋಹಿ ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ್​​​ಶ್ರೀ​ಗಳ 117 ನೇ ಜಯಂತಿ. ಬೆಳಿಗ್ಗೆ 11 ಗಂಟೆಯಿಂದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಜಿ, ಸುತ್ತೂರು ಶ್ರೀಗಳ ಸಾನಿಧ್ಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಗಳು ನೆರವೇರುತ್ತಿವೆ.

ವಿವೇಕ ಬಿರಾದಾರ
|

Updated on:Apr 01, 2024 | 1:03 PM

Share
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ಇಂದು (ಏಪ್ರಿಲ್​​ 01) ತ್ರಿವಿಧ ದಾಸೋಹಿ ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ್​​​ಶ್ರೀ​ಗಳ 117 ನೇ ಜಯಂತಿ. ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಮಹಾಮಂಗಳಾರತಿ ನೆರವೇರಿತು. ಬೆಳಿಗ್ಗೆ 11 ಗಂಟೆಯಿಂದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಜಿ, ಸುತ್ತೂರು ಶ್ರೀಗಳ ಸಾನಿಧ್ಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಗಳು ನೆರವೇರುತ್ತಿವೆ.

1 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ಸಿದ್ದಗಂಗಾ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪತಂಜಲಿ ರಾಮದೇವ್ ಬಾಬಾ, ಮುಂಡರಗಿಯ ಅನ್ನದಾನೇಶ್ವರ ಶ್ರೀಗಳು. ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಶ್ರೀಗಳು, ಗದಗಿನ ವೀರಶೈವ ಪುಣ್ಯಶ್ರಮದ ಕಲ್ಲಯ್ಯ ಅಜ್ಜರವರು ಸೇರಿದಂತೆ ಅನೇಕ ಪೂಜ್ಯರು ಭಾಗಿಯಾಗಲಿದ್ದಾರೆ.

2 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ಬೆಳಿಗ್ಗೆ ರುದ್ರಾಕ್ಷಿ ಮಂಟಪದಲ್ಲಿ ಶಿವಕುಮಾರಶ್ರೀಗಳ ಪ್ರತಿಮೆ ಮೆರವಣಿಗೆ ಗದ್ದುಗೆ ಬಳಿಯಿಂದ ವಸ್ತು ಪ್ರದರ್ಶನ ಆವರಣದವರೆಗೆ ನಡೆಯಿತು. ಮೆರವಣಿಗೆಯಲ್ಲಿ ಸಿದ್ಧಗಂಗಾ ಮಠದ ಭಕ್ತರು, ಮಕ್ಕಳು ಭಾಗಿಯಾಗಿದ್ದರು.

3 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿ ಶುಭಾಶಯ ಕೋರಿದ್ದಾರೆ.

4 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ಶ್ರೀಗಳ 117ನೇ ಜನ್ಮದಿನ ಹಿನ್ನೆಲೆಯಲ್ಲಿ ಶ್ರೀಮಠಕ್ಕೆ ರಾಜಕೀಯ ನಾಯಕರು ಭೇಟಿ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ್​ ಶ್ರೀಗಳ ಗದ್ದುಗೆಗೆ ನಮಸ್ಕರಿಸಿ ದರ್ಶನ ಪಡೆದರು. ಬಳಿಕ ಸಿದ್ದಲಿಂಗ ಶ್ರೀಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದರು.

5 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಸಿದ್ದಗಂಗಾ ಮಠಕ್ಕೆ ಆಗಮಿಸಿ ಶಿವಕುಮಾರ್ ಶ್ರೀಗಳ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದರು. ವಿ. ಸೋಮಣ್ಣ ಇಂದು (ಏ.01) ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

6 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಕೂಡ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

7 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ಗೃಹ ಸಚಿವ ಡಾ. ಜಿ ಪರಮೇಶ್ವರ್​​ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಬಳಿಕ ಸಿದ್ದಲಿಂಗ ಶ್ರೀಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದರು.

8 / 8

Published On - 12:53 pm, Mon, 1 April 24

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್