AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನ, ಬಟ್ಟೆ ಮತ್ತು ಆಶ್ರಯ ನೀಡಿ ಮಕ್ಕಳ ಭವಿಷ್ಯ ಕಟ್ಟಿದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಟಿವಿ9 ನವನಕ್ಷತ್ರ ಸನ್ಮಾನ

Navanakshatra Sanman 2021: ತಮಕೂರಿನ ಸಿದ್ಧಗಂಗಾ ಮಠವನ್ನು ಶಿಕ್ಷಣ ಕಾಶಿಯನ್ನಾಗಿ ಬೆಳೆಸಿದವರು ತ್ರಿವಿಧ ದಾಸೋಹಿ ಅಂತಲೇ ಕನ್ನಡಿಗರ ಹೃದಯದಲ್ಲಿ ಚಿರಸ್ಥಾಯಿಯಾಗಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳು. 1930 ರಲ್ಲಿ ಸಿದ್ಧಗಂಗಾ ಮಠಕ್ಕೆ ಕಾಲಿಟ್ಟ ಸ್ವಾಮೀಜಿ, 1941ರಲ್ಲಿ ಶ್ರೀಮಠದ ಮಠಾಧಿಪತಿಯಾದ್ರು. ಆಗ ಶ್ರೀಗಳ ಕೈಯಲ್ಲಿ ಇದ್ದಿದ್ದು ಕೇವಲ 300 ರೂಪಾಯಿ. ಸ್ವಾಮೀಜಿ, ಆರ್ಥಿಕ ಸಂಕಷ್ಟದಲ್ಲಿದ್ದ ಮಠವನ್ನು ಬೆಳೆಸುವ ಸಂಕಲ್ಪ ತೊಟ್ಟರು. ಹೆಗಲಿಗೆ ಜೋಳಿಗೆ ಹಾಕಿಕೊಂಡು ಹಳ್ಳಿ ಹಳ್ಳಿ ತಿರುಗಿ ಭಕ್ತರದಿಂದ ದೇಣಿಗೆ ಸಂಗ್ರಹಿಸಿದ್ರು. ಅನ್ನ, ಅಕ್ಷರ ದಾಸೋಹದ ಒಂದೊಂದೇ ಮೆಟ್ಟಿಲು ಏರುತ್ತಾ ಶ್ರೀ ಸಿದ್ಧಗಂಗಾ ಎಜುಕೇಷನ್ ಸೊಸೈಟಿ ಸ್ಥಾಪಿಸಿದ್ರು. ಇಂದು ಸಿದ್ಧಗಂಗಾ ಮಠ, 126ಕ್ಕೂ ಅಧಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ. 10ಸಾವಿರಕ್ಕೂ ಅಧಿಕ ಮಕ್ಕಳಿಗೆ ವಿದ್ಯೆ, ಅನ್ನ, ಬಟ್ಟೆ ಮತ್ತು ಆಶ್ರಯ ನೀಡುತ್ತಿದೆ. ಶ್ರೀ ಸಿದ್ಧಗಂಗಾ ಮಠದಲ್ಲಿ ಓದಿದ ಲಕ್ಷ ಲಕ್ಷ ಬಡ ಮಕ್ಕಳು ದೊಡ್ಡ ದೊಡ್ಡ ಅಧಿಕಾರಿಗಳಾಗಿದ್ದಾರೆ. ಉಜ್ವಲ ಭವಿಷ್ಯ ಕಟ್ಟಿಕೊಂಡಿದ್ದಾರೆ. ಸದ್ಯ ಅಕ್ಷರ, ಅನ್ನ ಮತ್ತು ಆಶ್ರಯ.. ಈ ತ್ರಿವಿಧ ದಾಸೋಹದ ಪುಣ್ಯಕಾರ್ಯ ನಡೆಸುತ್ತಿರುವ ಶ್ರೀ ಸಿದ್ಧಗಂಗಾ ಮಠಕ್ಕೆ ಟಿವಿ9, ನವನಕ್ಷತ್ರ ಗೌರವ ನೀಡಿ ವಂದಿಸುತ್ತಿದೆ.

TV9 Web
| Updated By: ಆಯೇಷಾ ಬಾನು

Updated on:Jan 05, 2022 | 7:34 AM

ಈ ತ್ರಿವಿಧ ದಾಸೋಹದ ಪುಣ್ಯಕಾರ್ಯ ನಡೆಸುತ್ತಿರುವ ಶ್ರೀ ಸಿದ್ಧಗಂಗಾ ಮಠಕ್ಕೆ ಟಿವಿ9, ನವನಕ್ಷತ್ರ ಗೌರವ ನೀಡಿ ಸನ್ಮಾನಿಸಿದೆ. ನವನಕ್ಷತ್ರ ಕಾರ್ಯಕ್ರಮದಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ.

Tumkur siddaganga mutt seer siddalinga swamiji won tv9 nava nakshatra sanman 2021

1 / 5
ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಜೊತೆ ಟಿವಿ9 ಆ್ಯಂಕರ್ ಆನಂದ್ ಬುರಲಿ ಚರ್ಚೆ

Tumkur siddaganga mutt seer siddalinga swamiji won tv9 nava nakshatra sanman 2021

2 / 5
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರೊಂದಿಗೆ ಕುಳಿತಿರುವ ಸಿದ್ಧಲಿಂಗ ಸ್ವಾಮೀಜಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರೊಂದಿಗೆ ಕುಳಿತಿರುವ ಸಿದ್ಧಲಿಂಗ ಸ್ವಾಮೀಜಿ

3 / 5
ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ನಟ ಶಿವರಾಜ್ ಕುಮಾರ್

ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ನಟ ಶಿವರಾಜ್ ಕುಮಾರ್

4 / 5
ಟಿವಿ9 ಸಂಸ್ಥೆಯ ಸಿಇಒ, ಸಿಎಂ ಹಾಗೂ ಸಚಿವರೊಂದಿಗೆ ಸಿದ್ಧಲಿಂಗ ಸ್ವಾಮೀಜಿ

ಟಿವಿ9 ಸಂಸ್ಥೆಯ ಸಿಇಒ, ಸಿಎಂ ಹಾಗೂ ಸಚಿವರೊಂದಿಗೆ ಸಿದ್ಧಲಿಂಗ ಸ್ವಾಮೀಜಿ

5 / 5

Published On - 7:30 am, Wed, 5 January 22

Follow us
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ