ಅನ್ನ, ಬಟ್ಟೆ ಮತ್ತು ಆಶ್ರಯ ನೀಡಿ ಮಕ್ಕಳ ಭವಿಷ್ಯ ಕಟ್ಟಿದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಟಿವಿ9 ನವನಕ್ಷತ್ರ ಸನ್ಮಾನ

Navanakshatra Sanman 2021: ತಮಕೂರಿನ ಸಿದ್ಧಗಂಗಾ ಮಠವನ್ನು ಶಿಕ್ಷಣ ಕಾಶಿಯನ್ನಾಗಿ ಬೆಳೆಸಿದವರು ತ್ರಿವಿಧ ದಾಸೋಹಿ ಅಂತಲೇ ಕನ್ನಡಿಗರ ಹೃದಯದಲ್ಲಿ ಚಿರಸ್ಥಾಯಿಯಾಗಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳು. 1930 ರಲ್ಲಿ ಸಿದ್ಧಗಂಗಾ ಮಠಕ್ಕೆ ಕಾಲಿಟ್ಟ ಸ್ವಾಮೀಜಿ, 1941ರಲ್ಲಿ ಶ್ರೀಮಠದ ಮಠಾಧಿಪತಿಯಾದ್ರು. ಆಗ ಶ್ರೀಗಳ ಕೈಯಲ್ಲಿ ಇದ್ದಿದ್ದು ಕೇವಲ 300 ರೂಪಾಯಿ. ಸ್ವಾಮೀಜಿ, ಆರ್ಥಿಕ ಸಂಕಷ್ಟದಲ್ಲಿದ್ದ ಮಠವನ್ನು ಬೆಳೆಸುವ ಸಂಕಲ್ಪ ತೊಟ್ಟರು. ಹೆಗಲಿಗೆ ಜೋಳಿಗೆ ಹಾಕಿಕೊಂಡು ಹಳ್ಳಿ ಹಳ್ಳಿ ತಿರುಗಿ ಭಕ್ತರದಿಂದ ದೇಣಿಗೆ ಸಂಗ್ರಹಿಸಿದ್ರು. ಅನ್ನ, ಅಕ್ಷರ ದಾಸೋಹದ ಒಂದೊಂದೇ ಮೆಟ್ಟಿಲು ಏರುತ್ತಾ ಶ್ರೀ ಸಿದ್ಧಗಂಗಾ ಎಜುಕೇಷನ್ ಸೊಸೈಟಿ ಸ್ಥಾಪಿಸಿದ್ರು. ಇಂದು ಸಿದ್ಧಗಂಗಾ ಮಠ, 126ಕ್ಕೂ ಅಧಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ. 10ಸಾವಿರಕ್ಕೂ ಅಧಿಕ ಮಕ್ಕಳಿಗೆ ವಿದ್ಯೆ, ಅನ್ನ, ಬಟ್ಟೆ ಮತ್ತು ಆಶ್ರಯ ನೀಡುತ್ತಿದೆ. ಶ್ರೀ ಸಿದ್ಧಗಂಗಾ ಮಠದಲ್ಲಿ ಓದಿದ ಲಕ್ಷ ಲಕ್ಷ ಬಡ ಮಕ್ಕಳು ದೊಡ್ಡ ದೊಡ್ಡ ಅಧಿಕಾರಿಗಳಾಗಿದ್ದಾರೆ. ಉಜ್ವಲ ಭವಿಷ್ಯ ಕಟ್ಟಿಕೊಂಡಿದ್ದಾರೆ. ಸದ್ಯ ಅಕ್ಷರ, ಅನ್ನ ಮತ್ತು ಆಶ್ರಯ.. ಈ ತ್ರಿವಿಧ ದಾಸೋಹದ ಪುಣ್ಯಕಾರ್ಯ ನಡೆಸುತ್ತಿರುವ ಶ್ರೀ ಸಿದ್ಧಗಂಗಾ ಮಠಕ್ಕೆ ಟಿವಿ9, ನವನಕ್ಷತ್ರ ಗೌರವ ನೀಡಿ ವಂದಿಸುತ್ತಿದೆ.

| Updated By: ಆಯೇಷಾ ಬಾನು

Updated on:Jan 05, 2022 | 7:34 AM

ಈ ತ್ರಿವಿಧ ದಾಸೋಹದ ಪುಣ್ಯಕಾರ್ಯ ನಡೆಸುತ್ತಿರುವ ಶ್ರೀ ಸಿದ್ಧಗಂಗಾ ಮಠಕ್ಕೆ ಟಿವಿ9, ನವನಕ್ಷತ್ರ ಗೌರವ ನೀಡಿ ಸನ್ಮಾನಿಸಿದೆ. ನವನಕ್ಷತ್ರ ಕಾರ್ಯಕ್ರಮದಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ.

Tumkur siddaganga mutt seer siddalinga swamiji won tv9 nava nakshatra sanman 2021

1 / 5
ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಜೊತೆ ಟಿವಿ9 ಆ್ಯಂಕರ್ ಆನಂದ್ ಬುರಲಿ ಚರ್ಚೆ

Tumkur siddaganga mutt seer siddalinga swamiji won tv9 nava nakshatra sanman 2021

2 / 5
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರೊಂದಿಗೆ ಕುಳಿತಿರುವ ಸಿದ್ಧಲಿಂಗ ಸ್ವಾಮೀಜಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರೊಂದಿಗೆ ಕುಳಿತಿರುವ ಸಿದ್ಧಲಿಂಗ ಸ್ವಾಮೀಜಿ

3 / 5
ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ನಟ ಶಿವರಾಜ್ ಕುಮಾರ್

ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ನಟ ಶಿವರಾಜ್ ಕುಮಾರ್

4 / 5
ಟಿವಿ9 ಸಂಸ್ಥೆಯ ಸಿಇಒ, ಸಿಎಂ ಹಾಗೂ ಸಚಿವರೊಂದಿಗೆ ಸಿದ್ಧಲಿಂಗ ಸ್ವಾಮೀಜಿ

ಟಿವಿ9 ಸಂಸ್ಥೆಯ ಸಿಇಒ, ಸಿಎಂ ಹಾಗೂ ಸಚಿವರೊಂದಿಗೆ ಸಿದ್ಧಲಿಂಗ ಸ್ವಾಮೀಜಿ

5 / 5

Published On - 7:30 am, Wed, 5 January 22

Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್