ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು ಮತಗಟ್ಟೆಗಳಿಗೆ ಮತದಾರರು ಬಂದು ತಮ್ಮ ಮತ ಚಲಾಯಿಸುತ್ತಿದ್ದಾರೆ. ಜೊತೆಗೆ ರಾಜ್ಯದ ಗಣ್ಯ ಸ್ವಾಮೀಜಿಗಳು, ಮಠಾಧೀಶರು ಕೂಡ ಮತ ಹಾಕುತ್ತಿದ್ದಾರೆ.
1 / 6
ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು ಸಿದ್ಧಗಂಗಾ ಮಠದ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 116ರಲ್ಲಿ ಮತದಾನ ಮಾಡಿದರು.
2 / 6
ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದ ಮತಗಟ್ಟೆ ಸಂಖ್ಯೆ 8ರಲ್ಲಿ ಬಸವ ಜಯಮೃತ್ಯುಂಜಯ ಶ್ರೀ ಮತದಾನ ಮಾಡಿದರು. ಈ ವೇಳೆ ನಾನು ಮತ ಹಾಕಿದ್ದೇನೆ. ನೀವೂ ತಪ್ಪದೇ, ನಿಮ್ಮ ಮತದ ಹಕ್ಕನ್ನು ಹಾಕಿ. ಎಲ್ಲಾರಿಂದಲೂ ಹಾಕಿಸಿ ಎಂದರು.
3 / 6
ಬೆಂಗಳೂರಿನ ಭೂಪ್ಸಂದ್ರದ ವಿದ್ಯಾಸಾಗರ ಪ್ರಿ ಸ್ಕೂಲ್ ನ 55ನೇ ಮತಗಟ್ಟೆಯಲ್ಲಿ ವಚನಾನಂದ ಸ್ವಾಮೀಜಿ ಮತ ಚಲಾಯಿಸಿದರು. ಈ ವೇಳೆ ನಾನು ನನ್ನ ಮತ ಹಾಕುವುದರ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿದ್ದೇನೆ. ಈ ನಾಡಿನ ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿ ಹಬ್ಬವನ್ನು ಸಂಭ್ರಮಿಸೋಣ ಎಂದರು.
4 / 6
ಹುಬ್ಬಳ್ಳಿಯ ಮೂರುಸಾವಿರ ಮಠದ ಶಾಲೆಯ ಮತಗಟ್ಟೆಯಲ್ಲಿ ಮಠದ ಗುರುಸಿದ್ಧ ರಾಜಯೋಗಿಂದ್ರ ಶ್ರೀಗಳು ಮತದಾನ ಮಾಡಿದರು.
5 / 6
ಉಡುಪಿಯ ನಾರ್ತ್ ಶಾಲೆಯಲ್ಲಿ ಪಲಿಮಾರು ಮಠದ ವಿದ್ಯಾಧೀಶ ತೀರ್ಥರು, ರಾಜರಾಜೇಶ್ವರ ತೀರ್ಥರು ಮತದಾನ ಮಾಡಿದರು.