AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ನದಿಯ ಒಡಲು ಖಾಲಿ! ಗದಗ-ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಜಲಕ್ಷಾಮ ಆವರಿಸಿದೆ. ಕಳೆದ ಒಂದು ವಾರದಿಂದ ಹನಿ ನೀರು ಪೂರೈಕೆಯಾಗಿಲ್ಲ. ಜೀವಜಲಕ್ಕಾಗಿ ಜನರು ಗೋಳಾಟ ನಡೆಸಿದ್ದಾರೆ. ಹೌದು, ಅವಳಿ ನಗರಕ್ಕೆ ನೀರು ಸರಬರಾಜು ಮಾಡುತ್ತಿದ್ದ ಸಿಂಗಟಾಲೂರ ಬ್ಯಾರೇಜ್ ಸಂಪೂರ್ಣ ಖಾಲಿಯಾಗಿದ್ದು, ಡೆಡ್ ಸ್ಟೋರೇಜ್ ಮುಟ್ಟಿದೆ. ಪಂಪ್ ಹೌಸ್​ಗೆ ನೀರು ಹೋಗುತ್ತಿಲ್ಲ. ಹೀಗಾಗಿ ಒಂದು ವಾರದಿಂದ ನೀರು ಪೂರೈಕೆ ಬಂದ ಆಗಿದ್ದು, ರಣ ಬಿಸಿಲಿನಲ್ಲಿ ಅವಳಿ ನಗರದ ಜನರು ನೀರು ನೀರು ಅಂತಿದ್ದಾರೆ. ಬ್ಯಾರೇಜ್ ಖಾಲಿಯಾಗುವ ಮುನ್ನ ಭದ್ರಾ ಡ್ಯಾಂನಿಂದ ನೀರು ಬಿಡಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಅವಳಿ ನಗರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Apr 06, 2024 | 7:00 PM

Share
ಸೂರ್ಯನ ಪ್ರತಾಪಕ್ಕೆ ಬತ್ತಿರುವ ತುಂಗೆಯ ಒಡಲು. ಅವಳಿ ನಗರಕ್ಕೆ ಪೂರೈಕೆ ಆಗುವ ಹಮ್ಮಿಗಿ ಬ್ಯಾರೇಜ್ ಸಂಪೂರ್ಣ ಖಾಲಿ. ಡೆಡ್ ಸ್ಟೋರೇಜ್ ಮುಟ್ಟುವ ಮುನ್ಸೂಚನೆ ಇದ್ದರೂ ಸಕಾಲಕ್ಕೆ ನೀರು ಹರಿಸುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ. ಹೌದು, ಈ ದೃಶ್ಯಗಳು ಕಂಡಿದ್ದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಬಳಿಯ ಸಿಂಗಟಾಲೂರ ಬ್ಯಾರೇಜ್​ನಲ್ಲಿ. 

ಸೂರ್ಯನ ಪ್ರತಾಪಕ್ಕೆ ಬತ್ತಿರುವ ತುಂಗೆಯ ಒಡಲು. ಅವಳಿ ನಗರಕ್ಕೆ ಪೂರೈಕೆ ಆಗುವ ಹಮ್ಮಿಗಿ ಬ್ಯಾರೇಜ್ ಸಂಪೂರ್ಣ ಖಾಲಿ. ಡೆಡ್ ಸ್ಟೋರೇಜ್ ಮುಟ್ಟುವ ಮುನ್ಸೂಚನೆ ಇದ್ದರೂ ಸಕಾಲಕ್ಕೆ ನೀರು ಹರಿಸುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ. ಹೌದು, ಈ ದೃಶ್ಯಗಳು ಕಂಡಿದ್ದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಬಳಿಯ ಸಿಂಗಟಾಲೂರ ಬ್ಯಾರೇಜ್​ನಲ್ಲಿ. 

1 / 7
ನದಿ ಬತ್ತಿರುವುದರಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿ ಜಲಕ್ಷಾಮ ತಲೆದೂರಿದೆ. ಅವಳಿ ನಗರದ ಜನರು ಹನಿ ನೀರಿಗಾಗಿ ಒದ್ದಾಡುತ್ತಿದ್ದಾರೆ. ಕಳೆದ 15 ದಿನಗಳಿಂದ ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಕೆಯಾಗಿಲ್ಲ. ಹೀಗಾಗಿ ಅವಳಿ ನಗರದ ಗಲ್ಲಿ ಗಲ್ಲಿಯಲ್ಲಿ ಜನರು ನೀರಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ.

ನದಿ ಬತ್ತಿರುವುದರಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿ ಜಲಕ್ಷಾಮ ತಲೆದೂರಿದೆ. ಅವಳಿ ನಗರದ ಜನರು ಹನಿ ನೀರಿಗಾಗಿ ಒದ್ದಾಡುತ್ತಿದ್ದಾರೆ. ಕಳೆದ 15 ದಿನಗಳಿಂದ ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಕೆಯಾಗಿಲ್ಲ. ಹೀಗಾಗಿ ಅವಳಿ ನಗರದ ಗಲ್ಲಿ ಗಲ್ಲಿಯಲ್ಲಿ ಜನರು ನೀರಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ.

2 / 7
ಮೊದಲೇ ರಣ ಬಿಸಲಿನಿಂದ ಜನರು ಹೈರಾಣಾಗಿದ್ದಾರೆ. ಈ ನಡುವೆ ಕುಡಿಯುವ ನೀರು ಕೂಡ ಸಿಗುತ್ತಿಲ್ಲ. ಅವಳಿ ನಗರದ 28 ವಾರ್ಡ್‌ಗಳಿಗೆ ಒಂದು ವಾರದಿಂದ ನೀರು ಬಂದಿಲ್ಲ. ಹನಿ ನೀರಿಗಾಗಿ ಜನರು ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಮ್ಮಿಗಿ ಬ್ಯಾರೇಜ್ ಸಂಪೂರ್ಣವಾಗಿ ಖಾಲಿಯಾಗುವವರೆಗೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದ್ದು, ಗದಗ-ಬೆಟಗೇರಿ ನಗರಸಭೆ ಹಾಗೂ ಜಿಲ್ಲಾಡಳಿತ ಜನರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮೊದಲೇ ರಣ ಬಿಸಲಿನಿಂದ ಜನರು ಹೈರಾಣಾಗಿದ್ದಾರೆ. ಈ ನಡುವೆ ಕುಡಿಯುವ ನೀರು ಕೂಡ ಸಿಗುತ್ತಿಲ್ಲ. ಅವಳಿ ನಗರದ 28 ವಾರ್ಡ್‌ಗಳಿಗೆ ಒಂದು ವಾರದಿಂದ ನೀರು ಬಂದಿಲ್ಲ. ಹನಿ ನೀರಿಗಾಗಿ ಜನರು ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಮ್ಮಿಗಿ ಬ್ಯಾರೇಜ್ ಸಂಪೂರ್ಣವಾಗಿ ಖಾಲಿಯಾಗುವವರೆಗೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದ್ದು, ಗದಗ-ಬೆಟಗೇರಿ ನಗರಸಭೆ ಹಾಗೂ ಜಿಲ್ಲಾಡಳಿತ ಜನರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

3 / 7
ನೀರಿನ ಪ್ರಮಾಣವನ್ನು ನೋಡಿಕೊಂಡು ಅಧಿಕಾರಿಗಳು ತುಂಗಾ ಡ್ಯಾಂನಿಂದ ನೀರು ಬಿಡುಗಡೆ ಮಾಡಿಸಬೇಕಾಗಿತ್ತು. ಆದ್ರೆ, ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿಸಿದ್ದಾರೆ ಎಂದು ಅವಳಿ ನಗರದ ಜನರು ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ.

ನೀರಿನ ಪ್ರಮಾಣವನ್ನು ನೋಡಿಕೊಂಡು ಅಧಿಕಾರಿಗಳು ತುಂಗಾ ಡ್ಯಾಂನಿಂದ ನೀರು ಬಿಡುಗಡೆ ಮಾಡಿಸಬೇಕಾಗಿತ್ತು. ಆದ್ರೆ, ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿಸಿದ್ದಾರೆ ಎಂದು ಅವಳಿ ನಗರದ ಜನರು ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ.

4 / 7
 ಇನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಬಳಿ, ಸಿಂಗಟಾಲೂರು ಬ್ಯಾರೇಜ್ ನಿರ್ಮಾಣ ಮಾಡಲಾಗಿದೆ. ಈ ಬ್ಯಾರೇಜ್ ಮೂಲಕ ಗದಗ-ಬೆಟಗೇರಿ ನಗರ ಸೇರಿದಂತೆ ಗ್ರಾಮೀಣ ಭಾಗಕ್ಕೆ ತುಂಗಭದ್ರಾ ನದಿ ನೀರು ಸರಬರಾಜು ಆಗುತ್ತದೆ. ಈ ಬ್ಯಾರೇಜ್​ 3 ಎಟಿಎಂ ನೀರು ಶೇಖರಣೆ ಸಾಮರ್ಥ್ಯವನ್ನು ಹೊಂದಿದೆ. ಆದ್ರೆ, ಕೇವಲ 2 ಎಟಿಎಂ ಮಾತ್ರ ನೀರು ಶೇಖರಣೆ ಮಾಡಲಾಗುತ್ತಿದೆ. ಇದು ಕೂಡ ಜಿಲ್ಲಾಡಳಿತ ನಿರ್ಲಕ್ಷ್ಯ ಎಂದು ಜಿಲ್ಲೆಯ ಜನರು ಕೆಂಡಕಾರಿದ್ದಾರೆ.

ಇನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಬಳಿ, ಸಿಂಗಟಾಲೂರು ಬ್ಯಾರೇಜ್ ನಿರ್ಮಾಣ ಮಾಡಲಾಗಿದೆ. ಈ ಬ್ಯಾರೇಜ್ ಮೂಲಕ ಗದಗ-ಬೆಟಗೇರಿ ನಗರ ಸೇರಿದಂತೆ ಗ್ರಾಮೀಣ ಭಾಗಕ್ಕೆ ತುಂಗಭದ್ರಾ ನದಿ ನೀರು ಸರಬರಾಜು ಆಗುತ್ತದೆ. ಈ ಬ್ಯಾರೇಜ್​ 3 ಎಟಿಎಂ ನೀರು ಶೇಖರಣೆ ಸಾಮರ್ಥ್ಯವನ್ನು ಹೊಂದಿದೆ. ಆದ್ರೆ, ಕೇವಲ 2 ಎಟಿಎಂ ಮಾತ್ರ ನೀರು ಶೇಖರಣೆ ಮಾಡಲಾಗುತ್ತಿದೆ. ಇದು ಕೂಡ ಜಿಲ್ಲಾಡಳಿತ ನಿರ್ಲಕ್ಷ್ಯ ಎಂದು ಜಿಲ್ಲೆಯ ಜನರು ಕೆಂಡಕಾರಿದ್ದಾರೆ.

5 / 7
ಬಿಸಿಲಿನಲ್ಲಿ ಗದಗ-ಬೆಟಗೇರಿ ಅವಳಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಆಗುತ್ತೇ ಎನ್ನುವ ಉದ್ದೇಶದಿಂದ ಭದ್ರಾ ಡ್ಯಾಂನಲ್ಲಿ ಸಾಕಷ್ಟು ನೀರು ಸ್ಟಾಕ್ ಮಾಡಲಾಗಿದೆ. ಅವಳಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರುತ್ತೆ ಎನ್ನುವ ಕುರಿತು ನಗರಸಭೆ, ಜಿಲ್ಲಾಡಳಿತದ ಗಮನಕ್ಕೆ ಇದ್ರೂ ಯಾಕೇ ಖಾಲಿಯಾಗುವ ಮುನ್ನವೇ ನೀರು ಬಿಡಿಸುವ ವ್ಯವಸ್ಥೆ ಮಾಡಿಲ್ಲ ಎಂದು ಜನ್ರು ಜಿಲ್ಲಾಡಳಿತಕ್ಕೆ ಪ್ರಶ್ನೆ ಮಾಡಿದ್ದಾರೆ.

ಬಿಸಿಲಿನಲ್ಲಿ ಗದಗ-ಬೆಟಗೇರಿ ಅವಳಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಆಗುತ್ತೇ ಎನ್ನುವ ಉದ್ದೇಶದಿಂದ ಭದ್ರಾ ಡ್ಯಾಂನಲ್ಲಿ ಸಾಕಷ್ಟು ನೀರು ಸ್ಟಾಕ್ ಮಾಡಲಾಗಿದೆ. ಅವಳಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರುತ್ತೆ ಎನ್ನುವ ಕುರಿತು ನಗರಸಭೆ, ಜಿಲ್ಲಾಡಳಿತದ ಗಮನಕ್ಕೆ ಇದ್ರೂ ಯಾಕೇ ಖಾಲಿಯಾಗುವ ಮುನ್ನವೇ ನೀರು ಬಿಡಿಸುವ ವ್ಯವಸ್ಥೆ ಮಾಡಿಲ್ಲ ಎಂದು ಜನ್ರು ಜಿಲ್ಲಾಡಳಿತಕ್ಕೆ ಪ್ರಶ್ನೆ ಮಾಡಿದ್ದಾರೆ.

6 / 7
ಈ ಅವಳಿ ನಗರಕ್ಕೆ 15 ರಿಂದ 20 ದಿನಕ್ಕೆ ಒಂದು ಸಾರಿ ನೀರು ಬಿಡುತ್ತಾರೆ. ಇವಾಗ ಅವಳಿ ನಗರಕ್ಕೆ ಬ್ಯಾರೇಜ್ ಮೂಲಕ ಒಂದು ವಾರದಿಂದ ನೀರು ಸರಬರಾಜು ಆಗಿಲ್ಲ. ಮುಂದೆ ನೀರು ಬ್ಯಾರೇಜ್ ಮುಟ್ಟಿ ಜನರ ಮನೆಗೆ ಬರಬೇಕು ಅಂದರೆ 20 ರಿಂದ 30 ದಿನ ಕಳೆಯುತ್ತದೆ ಎನ್ನಲಾಗಿದೆ. ಅಲ್ಲಿವರೆಗೂ ಅವಳಿ ನಗರದ ಜನರು ಉರಿ ಬಿಸಿಲಿನಲ್ಲಿ ನೀರು ಎಂದು ಪರಿತಪಿಸಬೇಕಾಗುತ್ತದೆ. ಈ ಹಿನ್ನಲೆ ಜನರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಅವಳಿ ನಗರಕ್ಕೆ 15 ರಿಂದ 20 ದಿನಕ್ಕೆ ಒಂದು ಸಾರಿ ನೀರು ಬಿಡುತ್ತಾರೆ. ಇವಾಗ ಅವಳಿ ನಗರಕ್ಕೆ ಬ್ಯಾರೇಜ್ ಮೂಲಕ ಒಂದು ವಾರದಿಂದ ನೀರು ಸರಬರಾಜು ಆಗಿಲ್ಲ. ಮುಂದೆ ನೀರು ಬ್ಯಾರೇಜ್ ಮುಟ್ಟಿ ಜನರ ಮನೆಗೆ ಬರಬೇಕು ಅಂದರೆ 20 ರಿಂದ 30 ದಿನ ಕಳೆಯುತ್ತದೆ ಎನ್ನಲಾಗಿದೆ. ಅಲ್ಲಿವರೆಗೂ ಅವಳಿ ನಗರದ ಜನರು ಉರಿ ಬಿಸಿಲಿನಲ್ಲಿ ನೀರು ಎಂದು ಪರಿತಪಿಸಬೇಕಾಗುತ್ತದೆ. ಈ ಹಿನ್ನಲೆ ಜನರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

7 / 7

Published On - 2:41 pm, Sat, 6 April 24

Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ