ಎರಡು ಸಿನಿಮಾ ಮುಗಿಸಿ ಕುಂಬಳಕಾಯಿ ಹೊಡೆದ ರಕ್ಷಿತ್ ಶೆಟ್ಟಿ
Rakshit Shetty: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು ಬಿಡುಗಡೆ ಆಗುತ್ತಿದೆ. ಅದರ ನಡುವೆ ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದ್ದಾರೆ.
Updated on: Nov 11, 2023 | 10:35 PM
Share

ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

ರಕ್ಷಿತ್ ಶೆಟ್ಟಿ ನಿರ್ಮಾಣದ “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

'ಕಥಾಸಂಗಮ' ಚಿತ್ರದ 'ರೇನ್ಬೋ ಲ್ಯಾಂಡ್' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರ ನೋವನ್ನು ಹಂಚಿಕೊಳ್ಳುವವರು ಸಿಗರು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 13ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 13ರ ದಿನಭವಿಷ್ಯ
ಚಿಲ್ಲರೆ ಹೂಡಿಕೆದಾರರೇ ಷೇರು ಮಾರುಕಟ್ಟೆಯ ಬೆನ್ನೆಲುಬು; ಬರುಣ್ ದಾಸ್
ಕಾಂಗ್ರೆಸ್ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ




