AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ವರ್ಷದ ಹಳೆಯ ವಾಹನದಲ್ಲಿ ತಂದೆಯನ್ನು ಕೂರಿಸಿಕೊಂಡು ದೇಶ ಸುತ್ತಿದ ಮಗನಿಗೆ ಕಂಪನಿಯಿಂದ 14 ಲಕ್ಷದ ಬೈಕ್​ ಗಿಫ್ಟ್

ಉಡುಪಿಯ ಪ್ರಜ್ವಲ್ ಶೆಣೈ ಅವರು ತಮ್ಮ 25 ವರ್ಷದ ಹಳೆಯ ಹೀರೋ ಹೊಂಡಾ ಬೈಕ್‌ನಲ್ಲಿ ತಂದೆಯೊಂದಿಗೆ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದರು. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಅವರು ಈ ಬೈಕ್‌ನಲ್ಲಿ ಅನೇಕ ಪ್ರಯಾಣಗಳನ್ನು ಮಾಡಿದ್ದಾರೆ. ಈ ಲಾಂಗ್ ಡ್ರೈವ್ ನಂತರ ಹೀರೋ ಕಂಪನಿಯಿಂದ ಹೊಸ ಬೈಕ್‌ನ್ನು ಬಹುಮಾನವಾಗಿ ಪಡೆದರು. ಅವರ ಕನ್ನಡಾಭಿಮಾನ ಹಾಗೂ ಸಾಹಸ ಪ್ರವೃತ್ತಿಯನ್ನು ಹೀರೋ ಕಂಪನಿ ಗೌರವಿಸಿದೆ.

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Jun 28, 2025 | 6:21 PM

Share
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ದೇಗುಲ ನಿರ್ಮಾಣವಾಗಿದ್ದು, ಕೋಟಿ ಕೋಟಿ ಹಿಂದುಗಳ ಕನಸು ನನಸಾಗಿದೆ. ಬಾಲರಾಮನ ದರ್ಶನ ಪಡೆದು ಭಕ್ತರು ಸಂತಸದಲ್ಲಿದ್ದಾರೆ. 25 ವರ್ಷದ ಹಿಂದಿನ ಹಳೆಯದಾದ ಬೈಕ್​ನಲ್ಲಿ ಉಡುಪಿಯಿಂದ ​2110 ಕಿಲೋಮೀಟರ್ ದೂರವಿರುವ ಅಯೋಧ್ಯೆಯ ಶ್ರೀರಾಮನ ದರ್ಶನ ಮಾಡಿದ ಅಪ್ಪ-ಮಗನಿಗೆ ಹದಿನಾಲ್ಕುವರೆ ಲಕ್ಷದ ಬೈಕ್ ಒಲಿದಿದೆ.

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ದೇಗುಲ ನಿರ್ಮಾಣವಾಗಿದ್ದು, ಕೋಟಿ ಕೋಟಿ ಹಿಂದುಗಳ ಕನಸು ನನಸಾಗಿದೆ. ಬಾಲರಾಮನ ದರ್ಶನ ಪಡೆದು ಭಕ್ತರು ಸಂತಸದಲ್ಲಿದ್ದಾರೆ. 25 ವರ್ಷದ ಹಿಂದಿನ ಹಳೆಯದಾದ ಬೈಕ್​ನಲ್ಲಿ ಉಡುಪಿಯಿಂದ ​2110 ಕಿಲೋಮೀಟರ್ ದೂರವಿರುವ ಅಯೋಧ್ಯೆಯ ಶ್ರೀರಾಮನ ದರ್ಶನ ಮಾಡಿದ ಅಪ್ಪ-ಮಗನಿಗೆ ಹದಿನಾಲ್ಕುವರೆ ಲಕ್ಷದ ಬೈಕ್ ಒಲಿದಿದೆ.

1 / 6
ಉಡುಪಿಯ ಕಾಪು ತಾಲೂಕಿನ ಶಿರ್ವ ನಿವಾಸಿ ಪ್ರಜ್ವಲ್ ಶೆಣೈ ಅವರು 25 ವರ್ಷದ ಹಳೆಯ ಬೈಕ್​ನಲ್ಲಿ ಅಪ್ಪನನ್ನು ಕೂರಿಸಿಕೊಂಡು ದೇಶಾದ್ಯಂತ 50 ಸಾವಿರ ಕಿಮೀ ಸುತ್ತಾಡಿದ್ದಾರೆ. ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್‌ನಲ್ಲಿ ಸುಮಾರು 17,982 ಅಡಿ ಎತ್ತರವಿರುವ ವಿಶ್ವದ ಎರಡನೇ ಅತೀ ಎತ್ತರದ ಪ್ರದೇಶವಾದ ಜಮ್ಮು ಕಾಶ್ಮೀರದ ಖರ್ದುಂಗ್ಲಾದಲ್ಲಿ ಕನ್ನಡ ಬಾವುಟ ಹಾರಿಸಿ ಕನ್ನಡಾಭಿಮಾನ ಮೆರೆದಿದ್ದ ಇವರಿಗೆ ಹೀರೋ ಕಂಪನಿ ಭರ್ಜರಿ ಗಿಫ್ಟ್ ನೀಡಿದೆ.

ಉಡುಪಿಯ ಕಾಪು ತಾಲೂಕಿನ ಶಿರ್ವ ನಿವಾಸಿ ಪ್ರಜ್ವಲ್ ಶೆಣೈ ಅವರು 25 ವರ್ಷದ ಹಳೆಯ ಬೈಕ್​ನಲ್ಲಿ ಅಪ್ಪನನ್ನು ಕೂರಿಸಿಕೊಂಡು ದೇಶಾದ್ಯಂತ 50 ಸಾವಿರ ಕಿಮೀ ಸುತ್ತಾಡಿದ್ದಾರೆ. ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್‌ನಲ್ಲಿ ಸುಮಾರು 17,982 ಅಡಿ ಎತ್ತರವಿರುವ ವಿಶ್ವದ ಎರಡನೇ ಅತೀ ಎತ್ತರದ ಪ್ರದೇಶವಾದ ಜಮ್ಮು ಕಾಶ್ಮೀರದ ಖರ್ದುಂಗ್ಲಾದಲ್ಲಿ ಕನ್ನಡ ಬಾವುಟ ಹಾರಿಸಿ ಕನ್ನಡಾಭಿಮಾನ ಮೆರೆದಿದ್ದ ಇವರಿಗೆ ಹೀರೋ ಕಂಪನಿ ಭರ್ಜರಿ ಗಿಫ್ಟ್ ನೀಡಿದೆ.

2 / 6
ಹೀರೋ ಮೋಟೋ ಕಾರ್ಪ್ ಸಂಸ್ಥೆಯು ಪ್ರಜ್ವಲ್ ಶೆಣೈ ಅವರಿಗೆ ಹೀರೋ ಸೆಂಟೆನ್ನಿಯಲ್ ಬೈಕ್‌ ನೀಡಿ ಗೌರವಿಸಿದೆ. ಹೀರೋ ಹೊಂಡಾ  ಸ್ಪ್ಲೆಂಡರ್ ಆ ಕಾಲದ ಸೂಪರ್ ಬೈಕ್. ಮಧ್ಯಮ ವರ್ಗದ ಜನರ ಕನಸಿನ ಬೈಕಾಗಿತ್ತು. ಮೈಲೇಜ್, ಪರ್ಫಾಮೆನ್ಸ್​ಗೆ ಸಾಟಿಯಿರಲಿಲ್ಲ. ಇದೇ ಬೈಕ್​ ಏರಿ ತಂದೆ-ಮಕ್ಕಳು ದೇಶದ 17 ರಾಜ್ಯ ಪ್ರವಾಸ ಮಾಡಿದ್ದಾರೆ.

ಹೀರೋ ಮೋಟೋ ಕಾರ್ಪ್ ಸಂಸ್ಥೆಯು ಪ್ರಜ್ವಲ್ ಶೆಣೈ ಅವರಿಗೆ ಹೀರೋ ಸೆಂಟೆನ್ನಿಯಲ್ ಬೈಕ್‌ ನೀಡಿ ಗೌರವಿಸಿದೆ. ಹೀರೋ ಹೊಂಡಾ ಸ್ಪ್ಲೆಂಡರ್ ಆ ಕಾಲದ ಸೂಪರ್ ಬೈಕ್. ಮಧ್ಯಮ ವರ್ಗದ ಜನರ ಕನಸಿನ ಬೈಕಾಗಿತ್ತು. ಮೈಲೇಜ್, ಪರ್ಫಾಮೆನ್ಸ್​ಗೆ ಸಾಟಿಯಿರಲಿಲ್ಲ. ಇದೇ ಬೈಕ್​ ಏರಿ ತಂದೆ-ಮಕ್ಕಳು ದೇಶದ 17 ರಾಜ್ಯ ಪ್ರವಾಸ ಮಾಡಿದ್ದಾರೆ.

3 / 6
ಉಡುಪಿಯ ಶಕ್ತಿ ಶೋ ರೂಮ್​ನಲ್ಲಿ ಅದ್ಧೂರಿ ಕಾರ್ಯಕ್ರಮ ಮಾಡಿ, ಪ್ರಜ್ವಲ್ ಶೆಣೈ ಅವರಿಗೆ ಬೈಕ್ ಕೀ ಹಸ್ತಾಂತರಿಸಲಾಯಿತು. ಕೇಕ್ ಕಟ್ಟಿಂಗ್ ಮಾಡಿ ತಂದೆ ತಾಯಿಗೆ ಸಿಹಿ ಕೊಟ್ಟಾಗ ಬೈಕರ್ ಪ್ರಜ್ವಲ್ ಶೆಣೈ ಭಾವುಕರಾದರು.

ಉಡುಪಿಯ ಶಕ್ತಿ ಶೋ ರೂಮ್​ನಲ್ಲಿ ಅದ್ಧೂರಿ ಕಾರ್ಯಕ್ರಮ ಮಾಡಿ, ಪ್ರಜ್ವಲ್ ಶೆಣೈ ಅವರಿಗೆ ಬೈಕ್ ಕೀ ಹಸ್ತಾಂತರಿಸಲಾಯಿತು. ಕೇಕ್ ಕಟ್ಟಿಂಗ್ ಮಾಡಿ ತಂದೆ ತಾಯಿಗೆ ಸಿಹಿ ಕೊಟ್ಟಾಗ ಬೈಕರ್ ಪ್ರಜ್ವಲ್ ಶೆಣೈ ಭಾವುಕರಾದರು.

4 / 6
ಅಯೋಧ್ಯೆಯ ಶ್ರೀರಾಮ ಮಂದಿರ, 9 ದಿನಗಳ ಅವಧಿಯಲ್ಲಿ ಸುಮಾರು 4 ಸಾವಿರ ಕಿ.ಮೀ. ಕ್ರಮಿಸಿ ಪ್ರಯಾಗ್‌ರಾಜ್ ತಲುಪಿ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಸ್ಥಳಕ್ಕೆ ಬೈಕ್​ನಲ್ಲಿ ತಂದೆ-ಮಗ ಹೋಗಿದ್ದರು. ಹೀರೋ ಮೋಟೋ ಕಾರ್ಪ್ ಸಂಸ್ಥಾಪಕ ಡಾ. ಬ್ರಿಜ್ ಮೋಹನ್‌ಲಾಲ್ ಮುಂಜಾಲ್ ಅವರ 101ನೇ ಜನ್ಮ ದಿನದ ಸವಿ ನೆನಪಿಗಾಗಿ ಈ ಸೆಂಟಿನಲ್ ಬೈಕ್ ತಯಾರಿಸಲಾಗಿದೆ. ಶೊರೂಮ್ ಮಾಲೀಕರಿಂದ 30 ಲಕ್ಷದವರೆಗೆ ಡಿಮಾಂಡ್ ಇರುವ 100 ಬೈಕ್‌ಗಳಲ್ಲಿ ಒಂದು ಬೈಕ್ ಉಚಿತವಾಗಿ ಪ್ರಜ್ವಲ್ ಪಾಲಾಗಿದೆ.

ಅಯೋಧ್ಯೆಯ ಶ್ರೀರಾಮ ಮಂದಿರ, 9 ದಿನಗಳ ಅವಧಿಯಲ್ಲಿ ಸುಮಾರು 4 ಸಾವಿರ ಕಿ.ಮೀ. ಕ್ರಮಿಸಿ ಪ್ರಯಾಗ್‌ರಾಜ್ ತಲುಪಿ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಸ್ಥಳಕ್ಕೆ ಬೈಕ್​ನಲ್ಲಿ ತಂದೆ-ಮಗ ಹೋಗಿದ್ದರು. ಹೀರೋ ಮೋಟೋ ಕಾರ್ಪ್ ಸಂಸ್ಥಾಪಕ ಡಾ. ಬ್ರಿಜ್ ಮೋಹನ್‌ಲಾಲ್ ಮುಂಜಾಲ್ ಅವರ 101ನೇ ಜನ್ಮ ದಿನದ ಸವಿ ನೆನಪಿಗಾಗಿ ಈ ಸೆಂಟಿನಲ್ ಬೈಕ್ ತಯಾರಿಸಲಾಗಿದೆ. ಶೊರೂಮ್ ಮಾಲೀಕರಿಂದ 30 ಲಕ್ಷದವರೆಗೆ ಡಿಮಾಂಡ್ ಇರುವ 100 ಬೈಕ್‌ಗಳಲ್ಲಿ ಒಂದು ಬೈಕ್ ಉಚಿತವಾಗಿ ಪ್ರಜ್ವಲ್ ಪಾಲಾಗಿದೆ.

5 / 6
ಕಾಶ್ಮೀರ, ತಿರುಪತಿ, ಮಧುರೈ, ಕನ್ಯಾಕುಮಾರಿ, ಗೋವಾದ ಮಾರ್ದೋಳ್ ದೇಗುಲ, ಪುರಿಯ ಜಗನ್ನಾಥ ದೇವಾಲಯ, ಶಿರಡಿ, ನಾಸಿಕ್ ಪಂಡರಾಪುರಕ್ಕೆ ಸಕ್ಸಸ್ ರೈಡ್ ಮಾಡಿದ ಹಿನ್ನೆಲೆಯಲ್ಲಿ ಬೆಸ್ಟ್ ಕಸ್ಟಮರ್ ಅರ್ಹತೆಯ ರೂಪದಲ್ಲಿ ಗಿಫ್ಟ್ ಕೊಡಲಾಗಿದೆ.

ಕಾಶ್ಮೀರ, ತಿರುಪತಿ, ಮಧುರೈ, ಕನ್ಯಾಕುಮಾರಿ, ಗೋವಾದ ಮಾರ್ದೋಳ್ ದೇಗುಲ, ಪುರಿಯ ಜಗನ್ನಾಥ ದೇವಾಲಯ, ಶಿರಡಿ, ನಾಸಿಕ್ ಪಂಡರಾಪುರಕ್ಕೆ ಸಕ್ಸಸ್ ರೈಡ್ ಮಾಡಿದ ಹಿನ್ನೆಲೆಯಲ್ಲಿ ಬೆಸ್ಟ್ ಕಸ್ಟಮರ್ ಅರ್ಹತೆಯ ರೂಪದಲ್ಲಿ ಗಿಫ್ಟ್ ಕೊಡಲಾಗಿದೆ.

6 / 6

Published On - 6:21 pm, Sat, 28 June 25

ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ