AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024: ಕಡಪದ ಈ ದೇಗುಲಕ್ಕೆ ಯುಗಾದಿಯಂದು ಬರುತ್ತಾರೆ ಸಾಲು ಸಾಲು ಮುಸ್ಲಿಮರು!

ಯುಗಾದಿಯಂದು ತಿರುಮಲದ ಕಡಪ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಮುಸ್ಲಿಮರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಇದು ಈ ದೇಗುಲದ ವಾಡಿಕೆಯಾಗಿದೆ. ಪ್ರತಿ ವರ್ಷ, ವೆಂಕಟೇಶ್ವರನನ್ನು ಪೂಜಿಸಲು ಮತ್ತು ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ವೆಂಕಟೇಶ್ವರ ಸ್ವಾಮಿಯು ಬೀಬಿ ನಾಂಚಾರಮ್ಮರನ್ನು ವಿವಾಹವಾದ ಕಾರಣ, ಇಲ್ಲಿನ ಮುಸ್ಲಿಮರು ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಸಂಬಂಧಿ ಎಂದು ಪರಿಗಣಿಸುತ್ತಾರಂತೆ! ಹೀಗೊಂದು ಪ್ರತೀತಿ ಈ ಬಾಗದಲ್ಲಿದೆ.

ಗಣಪತಿ ಶರ್ಮಾ
|

Updated on: Apr 09, 2024 | 2:09 PM

Share
ಕಡಪ ಜಿಲ್ಲೆಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಂ ಭಕ್ತರಿಂದ ತುಂಬಿರುತ್ತದೆ. ಯುಗಾದಿ ದಿನದಂದು ಮುಸ್ಲಿಮರು ಇಲ್ಲಿಗೆ ಬಂದು ಪೂಜೆ ಸಲ್ಲಿಸುವುದು ವಾಡಿಕೆ.

ಕಡಪ ಜಿಲ್ಲೆಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಂ ಭಕ್ತರಿಂದ ತುಂಬಿರುತ್ತದೆ. ಯುಗಾದಿ ದಿನದಂದು ಮುಸ್ಲಿಮರು ಇಲ್ಲಿಗೆ ಬಂದು ಪೂಜೆ ಸಲ್ಲಿಸುವುದು ವಾಡಿಕೆ.

1 / 6
ಇದಕ್ಕೆ ಪ್ರಮುಖ ಕಾರಣವೆಂದರೆ ವೆಂಕಟೇಶ್ವರ ದೇವರ ಎರಡನೇ ಪತ್ನಿ ಬೀಬಿ ನಾಂಚಾರಮ್ಮ ಮುಸ್ಲಿಂ ಮಹಿಳೆಯಾಗಿರುವುದು ಎನ್ನಲಾಗಿದೆ. ಇದರಿಂದಾಗಿ ಪ್ರತಿ ವರ್ಷ ಯುಗಾದಿಯಂದು ಮುಸ್ಲಿಮರು ದೇಗುಲಕ್ಕೆ ಬಂದು ಪೂಜಿಸುತ್ತಾರೆ.

ಇದಕ್ಕೆ ಪ್ರಮುಖ ಕಾರಣವೆಂದರೆ ವೆಂಕಟೇಶ್ವರ ದೇವರ ಎರಡನೇ ಪತ್ನಿ ಬೀಬಿ ನಾಂಚಾರಮ್ಮ ಮುಸ್ಲಿಂ ಮಹಿಳೆಯಾಗಿರುವುದು ಎನ್ನಲಾಗಿದೆ. ಇದರಿಂದಾಗಿ ಪ್ರತಿ ವರ್ಷ ಯುಗಾದಿಯಂದು ಮುಸ್ಲಿಮರು ದೇಗುಲಕ್ಕೆ ಬಂದು ಪೂಜಿಸುತ್ತಾರೆ.

2 / 6
ಕಡಪ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಯುಗಾದಿಯನ್ನು ಭರ್ಜರಿಯಾಗಿ ಆಚರಿಸಲಾಗುತ್ತದೆ. ಈ ವೇಳೆ, ಮುಸ್ಲಿಂ ಮಹಿಳೆಯರು ಬೀಬಿ ನಾಂಚಾರಮ್ಮ ಅವರನ್ನು ಜನ್ಮದಾತೆ ಎಂದು ಪರಿಗಣಿಸಿ ಸೀರೆಯನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ.

ಕಡಪ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಯುಗಾದಿಯನ್ನು ಭರ್ಜರಿಯಾಗಿ ಆಚರಿಸಲಾಗುತ್ತದೆ. ಈ ವೇಳೆ, ಮುಸ್ಲಿಂ ಮಹಿಳೆಯರು ಬೀಬಿ ನಾಂಚಾರಮ್ಮ ಅವರನ್ನು ಜನ್ಮದಾತೆ ಎಂದು ಪರಿಗಣಿಸಿ ಸೀರೆಯನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ.

3 / 6
ಇಷ್ಟೇ ಅಲ್ಲದೆ, ವೆಂಕಟೇಶ್ವರನನ್ನು ಪೂಜಿಸುತ್ತಾರೆ ಮತ್ತು ಈ ಮೂಲಕ ಭಕ್ತಿಯನ್ನು ಪ್ರದರ್ಶಿಸುತ್ತಾರೆ. ವೆಂಕಟೇಶ್ವರ ದೇವರು ತಮ್ಮ ಸೊಸೆಯನ್ನು ಮದುವೆಯಾದ ಕಾರಣ, ಮುಸ್ಲಿಮರು ಅವರನ್ನು ಸಂಬಂಧಿ ಎಂದು ಪರಿಗಣಿಸುತ್ತಾರೆ.

ಇಷ್ಟೇ ಅಲ್ಲದೆ, ವೆಂಕಟೇಶ್ವರನನ್ನು ಪೂಜಿಸುತ್ತಾರೆ ಮತ್ತು ಈ ಮೂಲಕ ಭಕ್ತಿಯನ್ನು ಪ್ರದರ್ಶಿಸುತ್ತಾರೆ. ವೆಂಕಟೇಶ್ವರ ದೇವರು ತಮ್ಮ ಸೊಸೆಯನ್ನು ಮದುವೆಯಾದ ಕಾರಣ, ಮುಸ್ಲಿಮರು ಅವರನ್ನು ಸಂಬಂಧಿ ಎಂದು ಪರಿಗಣಿಸುತ್ತಾರೆ.

4 / 6
ಯುಗಾದಿಯ ದಿನದಂದು ದೇಗುಲದಲ್ಲಿ ಮೊದಲ ಪೂಜೆಯನ್ನು ಮಾಡಲಾಗುತ್ತದೆ. ಪ್ರತಿ ವರ್ಷ ಈ ಪೂಜೆಯಲ್ಲಿ ಮುಸ್ಲಿಮರು ತಮ್ಮ ಹರಕೆಗಳನ್ನು ಪೂರೈಸುತ್ತಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಯುಗಾದಿಯ ದಿನದಂದು ದೇಗುಲದಲ್ಲಿ ಮೊದಲ ಪೂಜೆಯನ್ನು ಮಾಡಲಾಗುತ್ತದೆ. ಪ್ರತಿ ವರ್ಷ ಈ ಪೂಜೆಯಲ್ಲಿ ಮುಸ್ಲಿಮರು ತಮ್ಮ ಹರಕೆಗಳನ್ನು ಪೂರೈಸುತ್ತಾರೆ ಎಂದು ಸ್ಥಳೀಯರು ಹೇಳಿದ್ದಾರೆ.

5 / 6
ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದರೆ, ಇಷ್ಟಾರ್ಥಗಳು ಖಂಡಿತವಾಗಿಯೂ ನೆರವೇರುತ್ತವೆ ಎಂಬುದು ಮುಸ್ಲಿಮರ ನಂಬಿಕೆಯಾಗಿದೆ. ಅದಕ್ಕಾಗಿಯೇ ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಮರು ದೇಗುಲಕ್ಕೆ ಬಂದು ವೆಂಕಟೇಶ್ವರನನ್ನು ಪೂಜಿಸುತ್ತಾರೆ.

ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದರೆ, ಇಷ್ಟಾರ್ಥಗಳು ಖಂಡಿತವಾಗಿಯೂ ನೆರವೇರುತ್ತವೆ ಎಂಬುದು ಮುಸ್ಲಿಮರ ನಂಬಿಕೆಯಾಗಿದೆ. ಅದಕ್ಕಾಗಿಯೇ ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಮರು ದೇಗುಲಕ್ಕೆ ಬಂದು ವೆಂಕಟೇಶ್ವರನನ್ನು ಪೂಜಿಸುತ್ತಾರೆ.

6 / 6
Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ