AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024: ಕಡಪದ ಈ ದೇಗುಲಕ್ಕೆ ಯುಗಾದಿಯಂದು ಬರುತ್ತಾರೆ ಸಾಲು ಸಾಲು ಮುಸ್ಲಿಮರು!

ಯುಗಾದಿಯಂದು ತಿರುಮಲದ ಕಡಪ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಮುಸ್ಲಿಮರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಇದು ಈ ದೇಗುಲದ ವಾಡಿಕೆಯಾಗಿದೆ. ಪ್ರತಿ ವರ್ಷ, ವೆಂಕಟೇಶ್ವರನನ್ನು ಪೂಜಿಸಲು ಮತ್ತು ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ವೆಂಕಟೇಶ್ವರ ಸ್ವಾಮಿಯು ಬೀಬಿ ನಾಂಚಾರಮ್ಮರನ್ನು ವಿವಾಹವಾದ ಕಾರಣ, ಇಲ್ಲಿನ ಮುಸ್ಲಿಮರು ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಸಂಬಂಧಿ ಎಂದು ಪರಿಗಣಿಸುತ್ತಾರಂತೆ! ಹೀಗೊಂದು ಪ್ರತೀತಿ ಈ ಬಾಗದಲ್ಲಿದೆ.

ಗಣಪತಿ ಶರ್ಮಾ
|

Updated on: Apr 09, 2024 | 2:09 PM

Share
ಕಡಪ ಜಿಲ್ಲೆಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಂ ಭಕ್ತರಿಂದ ತುಂಬಿರುತ್ತದೆ. ಯುಗಾದಿ ದಿನದಂದು ಮುಸ್ಲಿಮರು ಇಲ್ಲಿಗೆ ಬಂದು ಪೂಜೆ ಸಲ್ಲಿಸುವುದು ವಾಡಿಕೆ.

ಕಡಪ ಜಿಲ್ಲೆಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಂ ಭಕ್ತರಿಂದ ತುಂಬಿರುತ್ತದೆ. ಯುಗಾದಿ ದಿನದಂದು ಮುಸ್ಲಿಮರು ಇಲ್ಲಿಗೆ ಬಂದು ಪೂಜೆ ಸಲ್ಲಿಸುವುದು ವಾಡಿಕೆ.

1 / 6
ಇದಕ್ಕೆ ಪ್ರಮುಖ ಕಾರಣವೆಂದರೆ ವೆಂಕಟೇಶ್ವರ ದೇವರ ಎರಡನೇ ಪತ್ನಿ ಬೀಬಿ ನಾಂಚಾರಮ್ಮ ಮುಸ್ಲಿಂ ಮಹಿಳೆಯಾಗಿರುವುದು ಎನ್ನಲಾಗಿದೆ. ಇದರಿಂದಾಗಿ ಪ್ರತಿ ವರ್ಷ ಯುಗಾದಿಯಂದು ಮುಸ್ಲಿಮರು ದೇಗುಲಕ್ಕೆ ಬಂದು ಪೂಜಿಸುತ್ತಾರೆ.

ಇದಕ್ಕೆ ಪ್ರಮುಖ ಕಾರಣವೆಂದರೆ ವೆಂಕಟೇಶ್ವರ ದೇವರ ಎರಡನೇ ಪತ್ನಿ ಬೀಬಿ ನಾಂಚಾರಮ್ಮ ಮುಸ್ಲಿಂ ಮಹಿಳೆಯಾಗಿರುವುದು ಎನ್ನಲಾಗಿದೆ. ಇದರಿಂದಾಗಿ ಪ್ರತಿ ವರ್ಷ ಯುಗಾದಿಯಂದು ಮುಸ್ಲಿಮರು ದೇಗುಲಕ್ಕೆ ಬಂದು ಪೂಜಿಸುತ್ತಾರೆ.

2 / 6
ಕಡಪ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಯುಗಾದಿಯನ್ನು ಭರ್ಜರಿಯಾಗಿ ಆಚರಿಸಲಾಗುತ್ತದೆ. ಈ ವೇಳೆ, ಮುಸ್ಲಿಂ ಮಹಿಳೆಯರು ಬೀಬಿ ನಾಂಚಾರಮ್ಮ ಅವರನ್ನು ಜನ್ಮದಾತೆ ಎಂದು ಪರಿಗಣಿಸಿ ಸೀರೆಯನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ.

ಕಡಪ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಯುಗಾದಿಯನ್ನು ಭರ್ಜರಿಯಾಗಿ ಆಚರಿಸಲಾಗುತ್ತದೆ. ಈ ವೇಳೆ, ಮುಸ್ಲಿಂ ಮಹಿಳೆಯರು ಬೀಬಿ ನಾಂಚಾರಮ್ಮ ಅವರನ್ನು ಜನ್ಮದಾತೆ ಎಂದು ಪರಿಗಣಿಸಿ ಸೀರೆಯನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ.

3 / 6
ಇಷ್ಟೇ ಅಲ್ಲದೆ, ವೆಂಕಟೇಶ್ವರನನ್ನು ಪೂಜಿಸುತ್ತಾರೆ ಮತ್ತು ಈ ಮೂಲಕ ಭಕ್ತಿಯನ್ನು ಪ್ರದರ್ಶಿಸುತ್ತಾರೆ. ವೆಂಕಟೇಶ್ವರ ದೇವರು ತಮ್ಮ ಸೊಸೆಯನ್ನು ಮದುವೆಯಾದ ಕಾರಣ, ಮುಸ್ಲಿಮರು ಅವರನ್ನು ಸಂಬಂಧಿ ಎಂದು ಪರಿಗಣಿಸುತ್ತಾರೆ.

ಇಷ್ಟೇ ಅಲ್ಲದೆ, ವೆಂಕಟೇಶ್ವರನನ್ನು ಪೂಜಿಸುತ್ತಾರೆ ಮತ್ತು ಈ ಮೂಲಕ ಭಕ್ತಿಯನ್ನು ಪ್ರದರ್ಶಿಸುತ್ತಾರೆ. ವೆಂಕಟೇಶ್ವರ ದೇವರು ತಮ್ಮ ಸೊಸೆಯನ್ನು ಮದುವೆಯಾದ ಕಾರಣ, ಮುಸ್ಲಿಮರು ಅವರನ್ನು ಸಂಬಂಧಿ ಎಂದು ಪರಿಗಣಿಸುತ್ತಾರೆ.

4 / 6
ಯುಗಾದಿಯ ದಿನದಂದು ದೇಗುಲದಲ್ಲಿ ಮೊದಲ ಪೂಜೆಯನ್ನು ಮಾಡಲಾಗುತ್ತದೆ. ಪ್ರತಿ ವರ್ಷ ಈ ಪೂಜೆಯಲ್ಲಿ ಮುಸ್ಲಿಮರು ತಮ್ಮ ಹರಕೆಗಳನ್ನು ಪೂರೈಸುತ್ತಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಯುಗಾದಿಯ ದಿನದಂದು ದೇಗುಲದಲ್ಲಿ ಮೊದಲ ಪೂಜೆಯನ್ನು ಮಾಡಲಾಗುತ್ತದೆ. ಪ್ರತಿ ವರ್ಷ ಈ ಪೂಜೆಯಲ್ಲಿ ಮುಸ್ಲಿಮರು ತಮ್ಮ ಹರಕೆಗಳನ್ನು ಪೂರೈಸುತ್ತಾರೆ ಎಂದು ಸ್ಥಳೀಯರು ಹೇಳಿದ್ದಾರೆ.

5 / 6
ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದರೆ, ಇಷ್ಟಾರ್ಥಗಳು ಖಂಡಿತವಾಗಿಯೂ ನೆರವೇರುತ್ತವೆ ಎಂಬುದು ಮುಸ್ಲಿಮರ ನಂಬಿಕೆಯಾಗಿದೆ. ಅದಕ್ಕಾಗಿಯೇ ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಮರು ದೇಗುಲಕ್ಕೆ ಬಂದು ವೆಂಕಟೇಶ್ವರನನ್ನು ಪೂಜಿಸುತ್ತಾರೆ.

ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದರೆ, ಇಷ್ಟಾರ್ಥಗಳು ಖಂಡಿತವಾಗಿಯೂ ನೆರವೇರುತ್ತವೆ ಎಂಬುದು ಮುಸ್ಲಿಮರ ನಂಬಿಕೆಯಾಗಿದೆ. ಅದಕ್ಕಾಗಿಯೇ ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಮರು ದೇಗುಲಕ್ಕೆ ಬಂದು ವೆಂಕಟೇಶ್ವರನನ್ನು ಪೂಜಿಸುತ್ತಾರೆ.

6 / 6
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್