Ugadi 2024: ಕಡಪದ ಈ ದೇಗುಲಕ್ಕೆ ಯುಗಾದಿಯಂದು ಬರುತ್ತಾರೆ ಸಾಲು ಸಾಲು ಮುಸ್ಲಿಮರು!

Updated on: Apr 09, 2024 | 2:09 PM

ಯುಗಾದಿಯಂದು ತಿರುಮಲದ ಕಡಪ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಮುಸ್ಲಿಮರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಇದು ಈ ದೇಗುಲದ ವಾಡಿಕೆಯಾಗಿದೆ. ಪ್ರತಿ ವರ್ಷ, ವೆಂಕಟೇಶ್ವರನನ್ನು ಪೂಜಿಸಲು ಮತ್ತು ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ವೆಂಕಟೇಶ್ವರ ಸ್ವಾಮಿಯು ಬೀಬಿ ನಾಂಚಾರಮ್ಮರನ್ನು ವಿವಾಹವಾದ ಕಾರಣ, ಇಲ್ಲಿನ ಮುಸ್ಲಿಮರು ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಸಂಬಂಧಿ ಎಂದು ಪರಿಗಣಿಸುತ್ತಾರಂತೆ! ಹೀಗೊಂದು ಪ್ರತೀತಿ ಈ ಬಾಗದಲ್ಲಿದೆ.

1 / 6
ಕಡಪ ಜಿಲ್ಲೆಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಂ ಭಕ್ತರಿಂದ ತುಂಬಿರುತ್ತದೆ. ಯುಗಾದಿ ದಿನದಂದು ಮುಸ್ಲಿಮರು ಇಲ್ಲಿಗೆ ಬಂದು ಪೂಜೆ ಸಲ್ಲಿಸುವುದು ವಾಡಿಕೆ.

ಕಡಪ ಜಿಲ್ಲೆಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಂ ಭಕ್ತರಿಂದ ತುಂಬಿರುತ್ತದೆ. ಯುಗಾದಿ ದಿನದಂದು ಮುಸ್ಲಿಮರು ಇಲ್ಲಿಗೆ ಬಂದು ಪೂಜೆ ಸಲ್ಲಿಸುವುದು ವಾಡಿಕೆ.

2 / 6
ಇದಕ್ಕೆ ಪ್ರಮುಖ ಕಾರಣವೆಂದರೆ ವೆಂಕಟೇಶ್ವರ ದೇವರ ಎರಡನೇ ಪತ್ನಿ ಬೀಬಿ ನಾಂಚಾರಮ್ಮ ಮುಸ್ಲಿಂ ಮಹಿಳೆಯಾಗಿರುವುದು ಎನ್ನಲಾಗಿದೆ. ಇದರಿಂದಾಗಿ ಪ್ರತಿ ವರ್ಷ ಯುಗಾದಿಯಂದು ಮುಸ್ಲಿಮರು ದೇಗುಲಕ್ಕೆ ಬಂದು ಪೂಜಿಸುತ್ತಾರೆ.

ಇದಕ್ಕೆ ಪ್ರಮುಖ ಕಾರಣವೆಂದರೆ ವೆಂಕಟೇಶ್ವರ ದೇವರ ಎರಡನೇ ಪತ್ನಿ ಬೀಬಿ ನಾಂಚಾರಮ್ಮ ಮುಸ್ಲಿಂ ಮಹಿಳೆಯಾಗಿರುವುದು ಎನ್ನಲಾಗಿದೆ. ಇದರಿಂದಾಗಿ ಪ್ರತಿ ವರ್ಷ ಯುಗಾದಿಯಂದು ಮುಸ್ಲಿಮರು ದೇಗುಲಕ್ಕೆ ಬಂದು ಪೂಜಿಸುತ್ತಾರೆ.

3 / 6
ಕಡಪ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಯುಗಾದಿಯನ್ನು ಭರ್ಜರಿಯಾಗಿ ಆಚರಿಸಲಾಗುತ್ತದೆ. ಈ ವೇಳೆ, ಮುಸ್ಲಿಂ ಮಹಿಳೆಯರು ಬೀಬಿ ನಾಂಚಾರಮ್ಮ ಅವರನ್ನು ಜನ್ಮದಾತೆ ಎಂದು ಪರಿಗಣಿಸಿ ಸೀರೆಯನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ.

ಕಡಪ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಯುಗಾದಿಯನ್ನು ಭರ್ಜರಿಯಾಗಿ ಆಚರಿಸಲಾಗುತ್ತದೆ. ಈ ವೇಳೆ, ಮುಸ್ಲಿಂ ಮಹಿಳೆಯರು ಬೀಬಿ ನಾಂಚಾರಮ್ಮ ಅವರನ್ನು ಜನ್ಮದಾತೆ ಎಂದು ಪರಿಗಣಿಸಿ ಸೀರೆಯನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ.

4 / 6
ಇಷ್ಟೇ ಅಲ್ಲದೆ, ವೆಂಕಟೇಶ್ವರನನ್ನು ಪೂಜಿಸುತ್ತಾರೆ ಮತ್ತು ಈ ಮೂಲಕ ಭಕ್ತಿಯನ್ನು ಪ್ರದರ್ಶಿಸುತ್ತಾರೆ. ವೆಂಕಟೇಶ್ವರ ದೇವರು ತಮ್ಮ ಸೊಸೆಯನ್ನು ಮದುವೆಯಾದ ಕಾರಣ, ಮುಸ್ಲಿಮರು ಅವರನ್ನು ಸಂಬಂಧಿ ಎಂದು ಪರಿಗಣಿಸುತ್ತಾರೆ.

ಇಷ್ಟೇ ಅಲ್ಲದೆ, ವೆಂಕಟೇಶ್ವರನನ್ನು ಪೂಜಿಸುತ್ತಾರೆ ಮತ್ತು ಈ ಮೂಲಕ ಭಕ್ತಿಯನ್ನು ಪ್ರದರ್ಶಿಸುತ್ತಾರೆ. ವೆಂಕಟೇಶ್ವರ ದೇವರು ತಮ್ಮ ಸೊಸೆಯನ್ನು ಮದುವೆಯಾದ ಕಾರಣ, ಮುಸ್ಲಿಮರು ಅವರನ್ನು ಸಂಬಂಧಿ ಎಂದು ಪರಿಗಣಿಸುತ್ತಾರೆ.

5 / 6
ಯುಗಾದಿಯ ದಿನದಂದು ದೇಗುಲದಲ್ಲಿ ಮೊದಲ ಪೂಜೆಯನ್ನು ಮಾಡಲಾಗುತ್ತದೆ. ಪ್ರತಿ ವರ್ಷ ಈ ಪೂಜೆಯಲ್ಲಿ ಮುಸ್ಲಿಮರು ತಮ್ಮ ಹರಕೆಗಳನ್ನು ಪೂರೈಸುತ್ತಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಯುಗಾದಿಯ ದಿನದಂದು ದೇಗುಲದಲ್ಲಿ ಮೊದಲ ಪೂಜೆಯನ್ನು ಮಾಡಲಾಗುತ್ತದೆ. ಪ್ರತಿ ವರ್ಷ ಈ ಪೂಜೆಯಲ್ಲಿ ಮುಸ್ಲಿಮರು ತಮ್ಮ ಹರಕೆಗಳನ್ನು ಪೂರೈಸುತ್ತಾರೆ ಎಂದು ಸ್ಥಳೀಯರು ಹೇಳಿದ್ದಾರೆ.

6 / 6
ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದರೆ, ಇಷ್ಟಾರ್ಥಗಳು ಖಂಡಿತವಾಗಿಯೂ ನೆರವೇರುತ್ತವೆ ಎಂಬುದು ಮುಸ್ಲಿಮರ ನಂಬಿಕೆಯಾಗಿದೆ. ಅದಕ್ಕಾಗಿಯೇ ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಮರು ದೇಗುಲಕ್ಕೆ ಬಂದು ವೆಂಕಟೇಶ್ವರನನ್ನು ಪೂಜಿಸುತ್ತಾರೆ.

ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದರೆ, ಇಷ್ಟಾರ್ಥಗಳು ಖಂಡಿತವಾಗಿಯೂ ನೆರವೇರುತ್ತವೆ ಎಂಬುದು ಮುಸ್ಲಿಮರ ನಂಬಿಕೆಯಾಗಿದೆ. ಅದಕ್ಕಾಗಿಯೇ ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಮರು ದೇಗುಲಕ್ಕೆ ಬಂದು ವೆಂಕಟೇಶ್ವರನನ್ನು ಪೂಜಿಸುತ್ತಾರೆ.

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us